Homeಚಳವಳಿಮಂಗಳೂರು: ಪಿಎಫ್‌ಐ ಕಾರ್ಯಕರ್ತರ ಮೇಲಿನ ಲಾಠೀಚಾರ್ಜ್‌ಗೆ ತೀವ್ರ ಖಂಡನೆ- SP ಕಛೇರಿಗೆ ಮುತ್ತಿಗೆ

ಮಂಗಳೂರು: ಪಿಎಫ್‌ಐ ಕಾರ್ಯಕರ್ತರ ಮೇಲಿನ ಲಾಠೀಚಾರ್ಜ್‌ಗೆ ತೀವ್ರ ಖಂಡನೆ- SP ಕಛೇರಿಗೆ ಮುತ್ತಿಗೆ

ಇನ್ನೊಂದೆಡೆ ಇಂದು ಪಿಎಫ್‌ಐ ಕಾರ್ಯಕರ್ತರು ಪೊಲೀಸ್ ದೌರ್ಜನ್ಯ ಖಂಡಿಸಿ ಮಂಗಳೂರು ಎಸ್‌ಪಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.

- Advertisement -
- Advertisement -

ಉಪ್ಪಿನಂಗಡಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಪಿಎಫ್‌ಐ ಕಾರ್ಯಕರ್ತರ ಮೇಲೆ ಕ್ರೂರ ಲಾಠೀಚಾರ್ಜ್‌ ಅನ್ನು ಹಲವಾರು ಸಂಘಟನೆಗಳು ತೀವ್ರವಾಗಿ ಖಂಡಿಸಿವೆ. ಅದೇ ರೀತಿ ದೌರ್ಜನ್ಯವೆಸಗಿದ ಪೊಲೀಸರ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಇಂದು ಮಂಗಳೂರು ಎಸ್‌ಪಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗಿದೆ.

ಅಕ್ರಮವಾಗಿ ಬಂಧಿಸಿದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ನಾಯಕರನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ 14 ಡಿಸೆಂಬರ್ 2021ರ ರಾತ್ರಿ ಮಂಗಳೂರಿನ ಉಪ್ಪಿನಂಗಡಿ ಪೊಲೀಸ್ ಠಾಣೆಯ ಹೊರಗೆ ಹಲವಾರು ಜನರು ಪ್ರತಿಭಟನೆ ನಡೆಸುತ್ತಿದ್ದಾಗ ಪೊಲೀಸರು ಅಮಾನವೀಯ ಲಾಠೀಚಾರ್ಜ್ ಮಾಡಿ, ಹಿಂಸಾಚಾರ ನಡೆಸಿರುವುದು ಕಾನೂನಿನ ಸಂಪೂರ್ಣ ಉಲ್ಲಂಘನೆಯಾಗಿದೆ ಎಂದು ಸಂಘಟನೆಗಳು ಕಿಡಿಕಾರಿವೆ.

ಮಂಗಳೂರು ಅಭಿವೃದ್ಧಿಗಾಗಿ ನಾಗರಿಕರ ವೇದಿಕೆ, ನಾವು ಮಹಿಳೆಯರು ಮಂಗಳೂರು, ಬಹುತ್ವ ಕರ್ನಾಟಕ, Hate Speech ಬೇಡ, ಡಿಫೆಂಡ್ ಡೆಮಾಕ್ರಸಿ ಕರ್ನಾಟಕ, ನ್ಯಾಯಕ್ಕಾಗಿ ಅಖಿಲ ಭಾರತ ವಕೀಲರ ಸಂಘ, ಅಖಿಲ ಭಾರತ ವಿದ್ಯಾರ್ಥಿಗಳ ಸಂಘ (AISA) ಫಾರ್ವರ್ಡ್ ಟ್ರಸ್ಟ್, Health for ALL ಮತ್ತು ಲೇಖಕಿ ಪುಷ್ಪಾ ಅಕಾ ರಿತಾಶ್ ರವರು ಈ ಕುರಿತು ನೀಡಲಾದ ಜಂಟಿ ಪತ್ರಿಕೆ ಹೇಳಿಕೆಗೆ ಸಹಿ ಹಾಕಿದ್ದಾರೆ.

ಪೊಲೀಸರು ನಡೆಸಿದ ಲಾರಿ ಚಾರ್ಜ್ ಕ್ರೂರವಾಗಿತ್ತು ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ ಎಂಬ ಸಂಗತಿಯು ವೀಡಿಯೊಗಳಿಂದ ತಿಳಿದು ಬರುತ್ತದೆ. ಹಲವಾರು ಜನರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಮತ್ತು ಇಬ್ಬರಿಗೆ ಐಸಿಯು ನಲ್ಲಿ ದಾಖಲಾಗುವ ತುರ್ತು ಪರಿಸ್ಥಿತಿ ಎದುರಾಗಿದೆ ಎಂದು ವರದಿಯಾಗಿದೆ. ಆಂಬುಲೆನ್ಸ್ ನಲ್ಲಿದ್ದ ಜನರನ್ನು ಸಹ ಬಿಡದೆ ಅಟ್ಟಾಡಿಸಿಕೊಂಡು ಹೊಡೆಯಲು ಪೊಲೀಸರು ಪ್ರಯತ್ನ ಪಟ್ಟಿದ್ದಾರೆ ಎಂಬ ಸಂಗತಿಯು ವಿಡಿಯೋಗಳ ಮೂಲಕ ತಿಳಿದು ಬರುತ್ತದೆ. ಇದು ಅಧಿಕಾರದ ದುರಪಯೋಗವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ಪ್ರತಿಭಟನಾಕಾರರನ್ನು ಚದುರಿಸಲು ಯಾವುದೇ ಸಮಗ್ರವಾದ ಮತ್ತು ಪರಿಣಾಮಕಾರಿಯಾದ ಯೋಜನೆಯನ್ನು ಸಿದ್ಧಪಡಿಸಿಕೊಳ್ಳದೆ ಪೊಲೀಸರು ಹಿಂಸಾಚಾರದ ಮಾರ್ಗವನ್ನು ಅನುಸರಿಸಿದ್ದಾರೆ ಎಂಬುವುದು ಗಮನಿಸಬೇಕಾದ ಸಂಗತಿ. ಅನಿತಾ ಠಾಕೂರ್ ವಿರುದ್ಧ ಸ್ಟೇಟ್ ಆಫ್ ಜೆ & ಕೆ ((2016) 15 ಎನ್‌ಸಿಪಿ 525) ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯವು ಜನರ ಗುಂಪನ್ನು ಚದುರಿಸಲು ಪೊಲೀಸರು ಅತಿಯಾದ ಬಲಪ್ರಯೋಗ ಮಾಡುವುದು ವ್ಯಕ್ತಿಗಳ ಘನತೆಯ ಮೇಲಿನ ಆಕ್ರಮಣವೆಂದು ಹೇಳಿದೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ.

ಲಾಠಿ ಚಾರ್ಜ್ ನಂತಹ ಅತಿಯಾದ ಬಲಪ್ರಯೋಗಕ್ಕೆ ಪೊಲೀಸರನ್ನು ತಕ್ಷಣವೇ ಹೊಣೆಗಾರರನ್ನಾಗಿ ಮಾಡಬೇಕೆಂದು ನಾವು ಒತ್ತಾಯಿಸುತ್ತೇವೆ. ಪ್ರತಿಭಟನಾಕಾರರ ವಿರುದ್ಧ ಹಿಂಸಾಚಾರದ ಬಳಕೆಯ ಬಗ್ಗೆ ನ್ಯಾಯಾಂಗ ತನಿಖೆಗೆ ನಾವು ಒತ್ತಾಯಿಸುತ್ತೇವೆ. ಎಫ್‌ಐಆರ್ ದಾಖಲಿಸಬೇಕು ಮತ್ತು ಪೊಲೀಸ್ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕೆಂದು ನಾವು ಒತ್ತಾಯಿಸುತ್ತೇವೆ. ಕರ್ನಾಟಕ ಸರ್ಕಾರವು ಸಂತ್ರಸ್ತ ಪರಿಹಾರ ಯೋಜನೆಯ ಮೂಲಕ ಗಾಯಗೊಂಡ ಪ್ರತಿಭಟನಾಕಾರರ ಚಿಕಿತ್ಸೆಗೆ ಆರ್ಥಿಕ ನೆರವನ್ನು ನೀಡಬೇಕೆಂದು ಮತ್ತು ಆ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕೆಂದು ನಾವು ಒತ್ತಾಯಿಸುತ್ತೇವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಕೋಮುವಾದ ಪ್ರಚೋದಿತ ಗಲಭೆಗಳನ್ನು ಗಂಭೀರವಾಗಿ ಗಮನಿಸಬೇಕಾಗಿದೆ ಮತ್ತು ಆ ಘಟನೆಗಳಲ್ಲಿ ಪೊಲೀಸರ ಸಹಭಾಗಿತ್ವದ ಪಾತ್ರವನ್ನು ನಿರ್ಲಕ್ಷಿಸಬಾರದು. ಈ ಜಿಲ್ಲೆಯಲ್ಲಿ ಪೊಲೀಸರು ಪ್ರದರ್ಶಿಸುತ್ತಿರುವ ಅತಿರೇಕಗಳನ್ನು ತಡೆಯುವುದಕ್ಕಾಗಿ ಸಾಂವಿಧಾನಿಕ ಮತ್ತು ಕರ್ನಾಟಕದ ಬಹುತ್ವದ ಮೌಲ್ಯಗಳನ್ನು ಪುನಶ್ಚತನಗೊಳಿಸಲು ರಾಜ್ಯ ಸರ್ಕಾರವು ದಕ್ಷಿಣ ಕನ್ನಡ ಪೊಲೀಸರಿಗೆ ತರಬೇತಿಯನ್ನು ಪ್ರಾರಂಭಿಸಬೇಕು ಎಂದು ಒತ್ತಾಯಿಸಲಾಗಿದೆ.

ಇನ್ನೊಂದೆಡೆ ಇಂದು ಪಿಎಫ್‌ಐ ಕಾರ್ಯಕರ್ತರು ಪೊಲೀಸ್ ದೌರ್ಜನ್ಯ ಖಂಡಿಸಿ ಮಂಗಳೂರು ಎಸ್‌ಪಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ.


ಇದನ್ನೂ ಓದಿ: ಉಪ್ಪಿನಂಗಡಿ ಲಾಠಿಚಾರ್ಜ್‌: ಪಾಪ್ಯುಲರ್ ಫ್ರಂಟ್‌‌ ಆಫ್‌ ಇಂಡಿಯಾ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. You change title as Red langoti Gauri, twisting news, Police done correct at Uppinangady against goondas hence peace is not disturbed in Mangalore. There they used only lathi here only fire if they have gone out of path

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...