Homeಕರ್ನಾಟಕಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ವಕೀಲ ನ್ಯಾಯಾಲಯಕ್ಕೆ ಶರಣು

ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ವಕೀಲ ನ್ಯಾಯಾಲಯಕ್ಕೆ ಶರಣು

- Advertisement -
- Advertisement -

ಮಂಗಳೂರಿನಲ್ಲಿ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ, ಪ್ರಕರಣ ದಾಖಲಾದ ಬಂತರ ನಾಪತ್ತೆಯಾಗಿದ್ದ ಆರೋಪಿ ವಕೀಲ ಕೆ.ಎಸ್.ಎನ್. ರಾಜೇಶ್ ಭಟ್‌ ಎರಡು ತಿಂಗಳ ಬಳಿಕ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. 

ಕಾನೂನು ಪದವಿ ಪಡೆಯುತ್ತಿದ್ದ ವಿದ್ಯಾರ್ಥಿನಿ ಇಂಟರ್ನ್‌ಶಿಪ್‌ಗಾಗಿ ವಕೀಲ ರಾಜೇಶ್‌ ಕಚೇರಿಗೆ ಬಂದಿದ್ದರು. ಈ ವೇಳೆ ಆಕೆಗೆ ವಕೀಲ ಲೈಂಗಿಕ ಕಿರುಕುಳ ನೀಡಿದ್ದು, ದೂರು ನೀಡದಂತೆ ಬೆದರಿಕೆ ಹಾಕಿದ್ದರು ಎಂದು ವಿದ್ಯಾರ್ಥಿನಿ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಅಕ್ಟೋಬರ್ 19 ರಂದು ದೂರು ದಾಖಲಿಸಿದ್ದರು.

ಸಂತ್ರಸ್ತೆ ದೂರು ನೀಡಿದ ಬೆನ್ನಲ್ಲೇ ವಕೀಲ ರಾಜೇಶ್ ನಾಪತ್ತೆಯಾಗಿದ್ದರು. ಹೀಗಾಗಿ, ಆತನ ಬಂಧನಕ್ಕೆ ಬಲೆ ಬೀಸಿದ್ದ ಪೊಲೀಸರು, ನ್ಯಾಯಾಲಯದ ಮೂಲಕ ಆತನ ಬ್ಯಾಂಕ್ ಖಾತೆ ಸ್ಥಗಿತಗೊಳಿಸಿ, ಲುಕ್​​ಔಟ್ ನೋಟಿಸ್ ಜಾರಿಗೊಳಿಸಿದ್ದರು.

ಇದನ್ನೂ ಓದಿ: ಓಟರ್‌ ಐಡಿಯೊಂದಿಗೆ ಆಧಾರ್ ಲಿಂಕ್ ಮಾಡುವ ಮಸೂದೆ ಅಂಗೀಕರಿಸಿದ ಒಕ್ಕೂಟ ಸರ್ಕಾರ

ಲುಕ್​​ಔಟ್ ನೋಟಿಸ್ ಬಳಿಕ ಆರೋಪಿ ವಕೀಲ ಅನಾರೋಗ್ಯದ ಕಾರಣ ನೀಡಿ ಆತ ಮಧ್ಯಂತರ ಜಾಮೀನು ಪಡೆಯಲು ಅರ್ಜಿಯನ್ನೂ ಸಲ್ಲಿಸಿದ್ದರು. ಆದರೆ, ಕೋರ್ಟ್‌ ಅರ್ಜಿಯನ್ನು ತಿರಸ್ಕರಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಸಹಾಯ ಮಾಡಿದ್ದ ಆರೋಪಿಯ ಪತ್ನಿ ಸೇರಿದಂತೆ ಹಲವರನ್ನು ಬಂಧಿಸಲಾಗಿತ್ತು.

ಪತ್ನಿಯ ಬಂಧನವಾದರೂ ಆರೋಪಿಯ ಸುಳಿವಿರಲಿಲ್ಲ. ಇದೀಗ ಎರಡು ತಿಂಗಳ ಬಳಿಕ ಆಂಬ್ಯಲೆನ್ಸ್‌ನಲ್ಲಿ ಮಂಗಳೂರು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಬಂದ ಅವರು ಕೋರ್ಟ್‌ನಲ್ಲಿ ಶರಣಾಗಿದ್ದಾರೆ. 

ಆರೋಪಿ ವಕೀಲರಿಗೆ ನ್ಯಾಯಾಂಗ ಬಂಧನ ವಿಧಿಸಿರುವ ಕೋರ್ಟ್‌ ಆತನಿಗೆ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಜೈಲಿನ ಅಧಿಕಾರಿಗಳಿಗೆ ಸೂಚಿಸಿದೆ. ಇಂದು ಆರೋಪಿಯ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದ್ದು, ಪೊಲೀಸರು ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ಕೇಳುವ ಸಾಧ್ಯತೆ ಇದೆ. 


ಇದನ್ನೂ ಓದಿ: ಚೆನ್ನೈ: ’ಹೆಣ್ಣು ತಾಯಿಯ ಗರ್ಭ ಮತ್ತು ಸಮಾಧಿಯಲ್ಲಿ ಮಾತ್ರ ಸುರಕ್ಷಿತವಾಗಿರುತ್ತಾಳೆ’ ಎಂದು ಬರೆದು ಆತ್ಮಹತ್ಯೆ ಮಾಡಿಕೊಂಡ ಅಪ್ರಾಪ್ತೆ, ಯುವಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...