Homeಕರ್ನಾಟಕಬೀದಿಬದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸುವ ಮಂಗಳೂರು ಮನಪಾ ವಿರುದ್ಧ ಪ್ರತಿಭಟನೆ

ಬೀದಿಬದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸುವ ಮಂಗಳೂರು ಮನಪಾ ವಿರುದ್ಧ ಪ್ರತಿಭಟನೆ

- Advertisement -
- Advertisement -

ಬೀದಿ ಬದಿ ವ್ಯಾಪಾರಿಗಳು ವ್ಯಾಪಾರ ಮಾಡುವ ಸ್ಥಳದಲ್ಲಿ ಮಂಗಳೂರು ಮಹಾನಗರ ಪಾಲಿಕೆ ತರಕಾರಿ ಮಾರುಕಟ್ಟೆಗೆ ಅಂಗಡಿ ನಿರ್ಮಿಸುತ್ತಿದೆ ಎಂದು ಆರೋಪಿಸಿ ನಗರದ ಲೇಡಿಗೋಷನ್ ಆಸ್ಪತ್ರೆಯ ಬಳಿ ಬೀದಿಬದಿ ವ್ಯಾಪಾರಿಗಳು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಮಂಗಳೂರು ನಗರದ ಲೇಡಿಗೋಷನ್ ಬಳಿ ಘಟನೆ ನಡೆದಿದ್ದು, ರಸ್ತೆಯ ಮೇಲೆಯೆ ತಾತ್ಕಾಲಿಕ ಮಾರುಕಟ್ಟೆ ಮಾಡಲು ಮಂಗಳೂರು ಮಹಾನಗರ ಪಾಲಿಕೆ ಮುಂದಾಗಿದೆ ಎಂದು ತಿಳಿದು ಬಂದಿದೆ. ಆಸ್ಪತ್ರೆ ಪಕ್ಕದಲ್ಲಿರುವ ರಸ್ತೆಯನ್ನು ಆಕ್ರಮಿಸಿ ಮಳಿಗೆಯ ಕಾಮಗಾರಿ ನಡೆಸಲು ಕಂಬಗಳನ್ನು ಹಾಗೂ ಶೀಟುಗಳನ್ನು ತಂದು ಸುರಿಯುತ್ತಿರುವುದನ್ನು ಗಮನಿಸಿದ ಬೀದಿಬದಿ ವ್ಯಾಪಾರಸ್ಥರು ಪ್ರತಿಭಟನೆಗೆ ನಡೆಸಿದ್ದಾರೆ.

ಬೀದಿ ಬದಿ ವ್ಯಾಪಾರಿಗಳ ಪ್ರತಿಭಡನೆ

(ಮಾರುಕಟ್ಟೆ ನಿರ್ಮಿಸಲು ಶೀಟುಗಳನ್ನು ತಂದ ಲಾರಿಯನ್ನು ತಡೆದ ಬೀದಿ ಬದಿ ವ್ಯಾಪಾರಿಗಳು)

ರಸ್ತೆ ಬದಿ 3 ಅಡಿ ಜಾಗದಲ್ಲಿ ಬೀದಿ ಬದಿ ವ್ಯಾಪಾರಸ್ಥರು ವ್ಯಾಪಾರ ಮಾಡುತಿದ್ದಾಗ ಬೀದಿಬದಿ ವ್ಯಾಪಾರಿಗಳ ಮೇಲೆ ಧಾಳಿ ಮಾಡುತ್ತಿದ್ದ ಮಹಾನಗರ ಪಾಲಿಕೆ ಈಗ ತಾನೆ ಮುಂದಾಗಿ ಈ ಹಿಂದೆ ಕೇಂದ್ರ ಮಾರುಕಟ್ಟೆಯಲ್ಲಿದ್ದ ವ್ಯಾಪಾರಿಗಳಿಗೆ ಅದೇ ರಸ್ತೆಯ ಜಾಗದಲ್ಲಿ 10 ಅಡಿ ರಸ್ತೆ ಕಬಳಿಸಿ ತಾತ್ಕಾಲಿಕ ಮಾರುಕಟ್ಟೆ ನಿರ್ಮಾಣ ಮಾಡುತ್ತಿದ್ದಾರೆ, ಇದ್ಯಾವ ನ್ಯಾಯ ಎಂದು ಬೀದಿ ಬದಿ ವ್ಯಾಪಾರಿಗಳು ಪ್ರಶ್ನಿಸುತ್ತಿದ್ದಾರೆ.

ಘಟನೆಯ ಬಗ್ಗೆ ಮಾತನಾಡಿದ ಬೀದಿ ಬದಿ ವ್ಯಾಪಾರಿಗಳ ಸಂಘ(ಸಿಐಟಿಯು)ದ ಬಿ.ಕೆ. ಇಂತಿಯಾಝ್ “ಸರ್ಕಾರವೇ ಗುರುತಿನ ಚೀಟಿ ನೀಡಿದ್ದ ಕಳೆದ ಮೂವತ್ತು ನಲವತ್ತು ವರ್ಷಗಳಿಂದ ವ್ಯಾಪಾರ ಮಾಡಿಕೊಂಡು ಬರುತ್ತಿದ್ದಂತಹ ಜಾಗದಲ್ಲೇ ತಾತ್ಕಾಲಿಕ ಮಾರುಕಟ್ಟೆ ನಿರ್ಮಿಸುತ್ತಿದ್ದಾರೆ. ಅಲ್ಲದೆ ಕಾನೂನು ಬಾಹಿರವಾಗಿ ಹತ್ತು ಅಡಿ ಜಾಗವನ್ನು ಅತಿಕ್ರಮಿಸಿ ರಸ್ತೆಯ ಮೇಲೆ ಮಾರುಕಟ್ಟೆ ಕಟ್ಟುತ್ತಿದ್ದಾರೆ. ಇದು ಕಳೆದ ತಿಂಗಳಿನಿಂದ ವ್ಯಾಪಾರ ಮಾಡಲಾಗದೆ ಕಷ್ಟಪಡುತ್ತಿರುವ ಬಡ ಬೀದಿಬದಿ ವ್ಯಾಪಾರಿಗಳ ಬದುಕಿನ ಮೇಲಿನ ದಾಳಿಯಾಗಿದೆ. ಇಂತಹ ಅನ್ಯಾಯವನ್ನು ನಾವು ಒಪ್ಪುವುದಿಲ್ಲ, ಇದರ ವಿರುದ್ದ ಹೋರಾಟವನ್ನು ಕೈಗೆತ್ತಿಕೊಳ್ಳುತ್ತೇವೆ” ಎಂದು ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಮಂಗಳೂರು ಮಹಾನಗರ ಪಾಲಿಕೆಯ ಉಪ ಆಯುಕ್ತ ಸಂತೋಷ್ ಕುಮಾರ್‌ ” ಕೇಂದ್ರ ಮಾರುಕಟ್ಟೆಯ 106 ವ್ಯಾಪಾರಿಗಳು ಹಾಗೂ ಅಲ್ಲೇ ಇರುವ ತರಕಾರಿ ಹಾಗೂ ಹಣ್ಣು ಮಾರಾಟ ಮಾಡುವ ಬೀದಿಬದಿ ವ್ಯಾಪಾರಿಗಳ ಸಹಿತ ಒಟ್ಟು 150 ರಷ್ಟು ಜನರಿಗೆ ಶೆಡ್ ಕಟ್ಟಲಾಗುತ್ತಿದೆ. ಈ ಶೆಡ್ಡುಗಳು ಕೇವಲ ಎರಡು ಮೂರು ತಿಂಗಳಿಗೆ ಮಾತ್ರವಾಗಿದ್ದು, ತಾತ್ಕಾಲಿಕ ಮಾರುಕಟ್ಟೆಯಾಗಿದೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ನಾವು ಆತ್ಮಹತ್ಯೆ ಮಾಡಿಕೊಳ್ಳಬೇಕೆ : ಮಂಗಳೂರು ಪಾಲಿಕೆಗೆ ಬೀದಿಬದಿ ವ್ಯಾಪಾರಿಗಳ ಪ್ರಶ್ನೆ


ನಮ್ಮ ಯೂಟ್ಯೂಬ್ ಚಾನೆಲ್‌ಗೆ Subscribe ಆಗಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...