Homeಕರ್ನಾಟಕಬೀದಿಬದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸುವ ಮಂಗಳೂರು ಮನಪಾ ವಿರುದ್ಧ ಪ್ರತಿಭಟನೆ

ಬೀದಿಬದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸುವ ಮಂಗಳೂರು ಮನಪಾ ವಿರುದ್ಧ ಪ್ರತಿಭಟನೆ

- Advertisement -
- Advertisement -

ಬೀದಿ ಬದಿ ವ್ಯಾಪಾರಿಗಳು ವ್ಯಾಪಾರ ಮಾಡುವ ಸ್ಥಳದಲ್ಲಿ ಮಂಗಳೂರು ಮಹಾನಗರ ಪಾಲಿಕೆ ತರಕಾರಿ ಮಾರುಕಟ್ಟೆಗೆ ಅಂಗಡಿ ನಿರ್ಮಿಸುತ್ತಿದೆ ಎಂದು ಆರೋಪಿಸಿ ನಗರದ ಲೇಡಿಗೋಷನ್ ಆಸ್ಪತ್ರೆಯ ಬಳಿ ಬೀದಿಬದಿ ವ್ಯಾಪಾರಿಗಳು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಮಂಗಳೂರು ನಗರದ ಲೇಡಿಗೋಷನ್ ಬಳಿ ಘಟನೆ ನಡೆದಿದ್ದು, ರಸ್ತೆಯ ಮೇಲೆಯೆ ತಾತ್ಕಾಲಿಕ ಮಾರುಕಟ್ಟೆ ಮಾಡಲು ಮಂಗಳೂರು ಮಹಾನಗರ ಪಾಲಿಕೆ ಮುಂದಾಗಿದೆ ಎಂದು ತಿಳಿದು ಬಂದಿದೆ. ಆಸ್ಪತ್ರೆ ಪಕ್ಕದಲ್ಲಿರುವ ರಸ್ತೆಯನ್ನು ಆಕ್ರಮಿಸಿ ಮಳಿಗೆಯ ಕಾಮಗಾರಿ ನಡೆಸಲು ಕಂಬಗಳನ್ನು ಹಾಗೂ ಶೀಟುಗಳನ್ನು ತಂದು ಸುರಿಯುತ್ತಿರುವುದನ್ನು ಗಮನಿಸಿದ ಬೀದಿಬದಿ ವ್ಯಾಪಾರಸ್ಥರು ಪ್ರತಿಭಟನೆಗೆ ನಡೆಸಿದ್ದಾರೆ.

ಬೀದಿ ಬದಿ ವ್ಯಾಪಾರಿಗಳ ಪ್ರತಿಭಡನೆ

(ಮಾರುಕಟ್ಟೆ ನಿರ್ಮಿಸಲು ಶೀಟುಗಳನ್ನು ತಂದ ಲಾರಿಯನ್ನು ತಡೆದ ಬೀದಿ ಬದಿ ವ್ಯಾಪಾರಿಗಳು)

ರಸ್ತೆ ಬದಿ 3 ಅಡಿ ಜಾಗದಲ್ಲಿ ಬೀದಿ ಬದಿ ವ್ಯಾಪಾರಸ್ಥರು ವ್ಯಾಪಾರ ಮಾಡುತಿದ್ದಾಗ ಬೀದಿಬದಿ ವ್ಯಾಪಾರಿಗಳ ಮೇಲೆ ಧಾಳಿ ಮಾಡುತ್ತಿದ್ದ ಮಹಾನಗರ ಪಾಲಿಕೆ ಈಗ ತಾನೆ ಮುಂದಾಗಿ ಈ ಹಿಂದೆ ಕೇಂದ್ರ ಮಾರುಕಟ್ಟೆಯಲ್ಲಿದ್ದ ವ್ಯಾಪಾರಿಗಳಿಗೆ ಅದೇ ರಸ್ತೆಯ ಜಾಗದಲ್ಲಿ 10 ಅಡಿ ರಸ್ತೆ ಕಬಳಿಸಿ ತಾತ್ಕಾಲಿಕ ಮಾರುಕಟ್ಟೆ ನಿರ್ಮಾಣ ಮಾಡುತ್ತಿದ್ದಾರೆ, ಇದ್ಯಾವ ನ್ಯಾಯ ಎಂದು ಬೀದಿ ಬದಿ ವ್ಯಾಪಾರಿಗಳು ಪ್ರಶ್ನಿಸುತ್ತಿದ್ದಾರೆ.

ಘಟನೆಯ ಬಗ್ಗೆ ಮಾತನಾಡಿದ ಬೀದಿ ಬದಿ ವ್ಯಾಪಾರಿಗಳ ಸಂಘ(ಸಿಐಟಿಯು)ದ ಬಿ.ಕೆ. ಇಂತಿಯಾಝ್ “ಸರ್ಕಾರವೇ ಗುರುತಿನ ಚೀಟಿ ನೀಡಿದ್ದ ಕಳೆದ ಮೂವತ್ತು ನಲವತ್ತು ವರ್ಷಗಳಿಂದ ವ್ಯಾಪಾರ ಮಾಡಿಕೊಂಡು ಬರುತ್ತಿದ್ದಂತಹ ಜಾಗದಲ್ಲೇ ತಾತ್ಕಾಲಿಕ ಮಾರುಕಟ್ಟೆ ನಿರ್ಮಿಸುತ್ತಿದ್ದಾರೆ. ಅಲ್ಲದೆ ಕಾನೂನು ಬಾಹಿರವಾಗಿ ಹತ್ತು ಅಡಿ ಜಾಗವನ್ನು ಅತಿಕ್ರಮಿಸಿ ರಸ್ತೆಯ ಮೇಲೆ ಮಾರುಕಟ್ಟೆ ಕಟ್ಟುತ್ತಿದ್ದಾರೆ. ಇದು ಕಳೆದ ತಿಂಗಳಿನಿಂದ ವ್ಯಾಪಾರ ಮಾಡಲಾಗದೆ ಕಷ್ಟಪಡುತ್ತಿರುವ ಬಡ ಬೀದಿಬದಿ ವ್ಯಾಪಾರಿಗಳ ಬದುಕಿನ ಮೇಲಿನ ದಾಳಿಯಾಗಿದೆ. ಇಂತಹ ಅನ್ಯಾಯವನ್ನು ನಾವು ಒಪ್ಪುವುದಿಲ್ಲ, ಇದರ ವಿರುದ್ದ ಹೋರಾಟವನ್ನು ಕೈಗೆತ್ತಿಕೊಳ್ಳುತ್ತೇವೆ” ಎಂದು ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಮಂಗಳೂರು ಮಹಾನಗರ ಪಾಲಿಕೆಯ ಉಪ ಆಯುಕ್ತ ಸಂತೋಷ್ ಕುಮಾರ್‌ ” ಕೇಂದ್ರ ಮಾರುಕಟ್ಟೆಯ 106 ವ್ಯಾಪಾರಿಗಳು ಹಾಗೂ ಅಲ್ಲೇ ಇರುವ ತರಕಾರಿ ಹಾಗೂ ಹಣ್ಣು ಮಾರಾಟ ಮಾಡುವ ಬೀದಿಬದಿ ವ್ಯಾಪಾರಿಗಳ ಸಹಿತ ಒಟ್ಟು 150 ರಷ್ಟು ಜನರಿಗೆ ಶೆಡ್ ಕಟ್ಟಲಾಗುತ್ತಿದೆ. ಈ ಶೆಡ್ಡುಗಳು ಕೇವಲ ಎರಡು ಮೂರು ತಿಂಗಳಿಗೆ ಮಾತ್ರವಾಗಿದ್ದು, ತಾತ್ಕಾಲಿಕ ಮಾರುಕಟ್ಟೆಯಾಗಿದೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ನಾವು ಆತ್ಮಹತ್ಯೆ ಮಾಡಿಕೊಳ್ಳಬೇಕೆ : ಮಂಗಳೂರು ಪಾಲಿಕೆಗೆ ಬೀದಿಬದಿ ವ್ಯಾಪಾರಿಗಳ ಪ್ರಶ್ನೆ


ನಮ್ಮ ಯೂಟ್ಯೂಬ್ ಚಾನೆಲ್‌ಗೆ Subscribe ಆಗಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...