Homeಕರ್ನಾಟಕಬೀದಿಬದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸುವ ಮಂಗಳೂರು ಮನಪಾ ವಿರುದ್ಧ ಪ್ರತಿಭಟನೆ

ಬೀದಿಬದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸುವ ಮಂಗಳೂರು ಮನಪಾ ವಿರುದ್ಧ ಪ್ರತಿಭಟನೆ

- Advertisement -
- Advertisement -

ಬೀದಿ ಬದಿ ವ್ಯಾಪಾರಿಗಳು ವ್ಯಾಪಾರ ಮಾಡುವ ಸ್ಥಳದಲ್ಲಿ ಮಂಗಳೂರು ಮಹಾನಗರ ಪಾಲಿಕೆ ತರಕಾರಿ ಮಾರುಕಟ್ಟೆಗೆ ಅಂಗಡಿ ನಿರ್ಮಿಸುತ್ತಿದೆ ಎಂದು ಆರೋಪಿಸಿ ನಗರದ ಲೇಡಿಗೋಷನ್ ಆಸ್ಪತ್ರೆಯ ಬಳಿ ಬೀದಿಬದಿ ವ್ಯಾಪಾರಿಗಳು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಮಂಗಳೂರು ನಗರದ ಲೇಡಿಗೋಷನ್ ಬಳಿ ಘಟನೆ ನಡೆದಿದ್ದು, ರಸ್ತೆಯ ಮೇಲೆಯೆ ತಾತ್ಕಾಲಿಕ ಮಾರುಕಟ್ಟೆ ಮಾಡಲು ಮಂಗಳೂರು ಮಹಾನಗರ ಪಾಲಿಕೆ ಮುಂದಾಗಿದೆ ಎಂದು ತಿಳಿದು ಬಂದಿದೆ. ಆಸ್ಪತ್ರೆ ಪಕ್ಕದಲ್ಲಿರುವ ರಸ್ತೆಯನ್ನು ಆಕ್ರಮಿಸಿ ಮಳಿಗೆಯ ಕಾಮಗಾರಿ ನಡೆಸಲು ಕಂಬಗಳನ್ನು ಹಾಗೂ ಶೀಟುಗಳನ್ನು ತಂದು ಸುರಿಯುತ್ತಿರುವುದನ್ನು ಗಮನಿಸಿದ ಬೀದಿಬದಿ ವ್ಯಾಪಾರಸ್ಥರು ಪ್ರತಿಭಟನೆಗೆ ನಡೆಸಿದ್ದಾರೆ.

ಬೀದಿ ಬದಿ ವ್ಯಾಪಾರಿಗಳ ಪ್ರತಿಭಡನೆ

(ಮಾರುಕಟ್ಟೆ ನಿರ್ಮಿಸಲು ಶೀಟುಗಳನ್ನು ತಂದ ಲಾರಿಯನ್ನು ತಡೆದ ಬೀದಿ ಬದಿ ವ್ಯಾಪಾರಿಗಳು)

ರಸ್ತೆ ಬದಿ 3 ಅಡಿ ಜಾಗದಲ್ಲಿ ಬೀದಿ ಬದಿ ವ್ಯಾಪಾರಸ್ಥರು ವ್ಯಾಪಾರ ಮಾಡುತಿದ್ದಾಗ ಬೀದಿಬದಿ ವ್ಯಾಪಾರಿಗಳ ಮೇಲೆ ಧಾಳಿ ಮಾಡುತ್ತಿದ್ದ ಮಹಾನಗರ ಪಾಲಿಕೆ ಈಗ ತಾನೆ ಮುಂದಾಗಿ ಈ ಹಿಂದೆ ಕೇಂದ್ರ ಮಾರುಕಟ್ಟೆಯಲ್ಲಿದ್ದ ವ್ಯಾಪಾರಿಗಳಿಗೆ ಅದೇ ರಸ್ತೆಯ ಜಾಗದಲ್ಲಿ 10 ಅಡಿ ರಸ್ತೆ ಕಬಳಿಸಿ ತಾತ್ಕಾಲಿಕ ಮಾರುಕಟ್ಟೆ ನಿರ್ಮಾಣ ಮಾಡುತ್ತಿದ್ದಾರೆ, ಇದ್ಯಾವ ನ್ಯಾಯ ಎಂದು ಬೀದಿ ಬದಿ ವ್ಯಾಪಾರಿಗಳು ಪ್ರಶ್ನಿಸುತ್ತಿದ್ದಾರೆ.

ಘಟನೆಯ ಬಗ್ಗೆ ಮಾತನಾಡಿದ ಬೀದಿ ಬದಿ ವ್ಯಾಪಾರಿಗಳ ಸಂಘ(ಸಿಐಟಿಯು)ದ ಬಿ.ಕೆ. ಇಂತಿಯಾಝ್ “ಸರ್ಕಾರವೇ ಗುರುತಿನ ಚೀಟಿ ನೀಡಿದ್ದ ಕಳೆದ ಮೂವತ್ತು ನಲವತ್ತು ವರ್ಷಗಳಿಂದ ವ್ಯಾಪಾರ ಮಾಡಿಕೊಂಡು ಬರುತ್ತಿದ್ದಂತಹ ಜಾಗದಲ್ಲೇ ತಾತ್ಕಾಲಿಕ ಮಾರುಕಟ್ಟೆ ನಿರ್ಮಿಸುತ್ತಿದ್ದಾರೆ. ಅಲ್ಲದೆ ಕಾನೂನು ಬಾಹಿರವಾಗಿ ಹತ್ತು ಅಡಿ ಜಾಗವನ್ನು ಅತಿಕ್ರಮಿಸಿ ರಸ್ತೆಯ ಮೇಲೆ ಮಾರುಕಟ್ಟೆ ಕಟ್ಟುತ್ತಿದ್ದಾರೆ. ಇದು ಕಳೆದ ತಿಂಗಳಿನಿಂದ ವ್ಯಾಪಾರ ಮಾಡಲಾಗದೆ ಕಷ್ಟಪಡುತ್ತಿರುವ ಬಡ ಬೀದಿಬದಿ ವ್ಯಾಪಾರಿಗಳ ಬದುಕಿನ ಮೇಲಿನ ದಾಳಿಯಾಗಿದೆ. ಇಂತಹ ಅನ್ಯಾಯವನ್ನು ನಾವು ಒಪ್ಪುವುದಿಲ್ಲ, ಇದರ ವಿರುದ್ದ ಹೋರಾಟವನ್ನು ಕೈಗೆತ್ತಿಕೊಳ್ಳುತ್ತೇವೆ” ಎಂದು ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಮಂಗಳೂರು ಮಹಾನಗರ ಪಾಲಿಕೆಯ ಉಪ ಆಯುಕ್ತ ಸಂತೋಷ್ ಕುಮಾರ್‌ ” ಕೇಂದ್ರ ಮಾರುಕಟ್ಟೆಯ 106 ವ್ಯಾಪಾರಿಗಳು ಹಾಗೂ ಅಲ್ಲೇ ಇರುವ ತರಕಾರಿ ಹಾಗೂ ಹಣ್ಣು ಮಾರಾಟ ಮಾಡುವ ಬೀದಿಬದಿ ವ್ಯಾಪಾರಿಗಳ ಸಹಿತ ಒಟ್ಟು 150 ರಷ್ಟು ಜನರಿಗೆ ಶೆಡ್ ಕಟ್ಟಲಾಗುತ್ತಿದೆ. ಈ ಶೆಡ್ಡುಗಳು ಕೇವಲ ಎರಡು ಮೂರು ತಿಂಗಳಿಗೆ ಮಾತ್ರವಾಗಿದ್ದು, ತಾತ್ಕಾಲಿಕ ಮಾರುಕಟ್ಟೆಯಾಗಿದೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ನಾವು ಆತ್ಮಹತ್ಯೆ ಮಾಡಿಕೊಳ್ಳಬೇಕೆ : ಮಂಗಳೂರು ಪಾಲಿಕೆಗೆ ಬೀದಿಬದಿ ವ್ಯಾಪಾರಿಗಳ ಪ್ರಶ್ನೆ


ನಮ್ಮ ಯೂಟ್ಯೂಬ್ ಚಾನೆಲ್‌ಗೆ Subscribe ಆಗಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...