Homeಕರ್ನಾಟಕಮಂಗಳೂರಿನಲ್ಲಿ ಮತೀಯ ಗೂಂಡಾಗಿರಿ: ಇಬ್ಬರ ಬಂಧನ

ಮಂಗಳೂರಿನಲ್ಲಿ ಮತೀಯ ಗೂಂಡಾಗಿರಿ: ಇಬ್ಬರ ಬಂಧನ

- Advertisement -
- Advertisement -

ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಮತೀಯ ಗೂಂಡಾಗಿರಿ ನಡೆದಿದ್ದು, ಒಂದೇ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಯುವಕ-ಯುವತಿ ಜೊತೆಯಾಗಿ ಹೋಗುವಾಗ ಹಿಂಬಾಲಿಸಿಕೊಂಡು ಹೋಗಿ ತಡೆದು ಹಲ್ಲೆಗೆ ಮುಂದಾದ ಘಟನೆ ನಡೆದಿದೆ.

ಸೋಮವಾರ ರಾತ್ರಿ 8 ಗಂಟೆಯ ವೇಳೆಗೆ ನಗರದ ಮುಳಿಹಿತ್ಲು ಎಂಬಲ್ಲಿನ ಸ್ಪೋರ್ಟ್ಸ್ ಮಳಿಗೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ನೂರುಲ್ಲಾ ಅಮೀನ್ ಮತ್ತು ಸೌಜನ್ಯಾ ಎಂಬವರು ಮೊಬೈಲ್ ರಿಪೇರ್ ಮಾಡಿಸಿಕೊಂಡು ನಗರದ ಮಿಲಾಗ್ರಿಸ್ ಚರ್ಚ್ ಕಡೆಯಿಂದ ಭಗಿನಿ ಸಮಾಜದ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ  ಆರೋಪಿಗಳು ಬೈಕ್ ನಲ್ಲಿ ಹಿಂಬಾಲಿಸಿಕೊಂಡು ಬಂದು ಇವರನ್ನು ತಡೆದು ನೀವು ಹಿಂದೂ -ಮುಸ್ಲಿಮ್ ಎಲ್ಲಿಗೆ ಹೋಗುತ್ತಿದ್ದೀರಿ? ಎಂದು ನಿಂದಿಸಿ ಗೂಂಡಾಗಿರಿ ನಡೆಸಿದ್ದಾರೆ.

ಈ ವೇಳೆ ಹೊಯ್ಸಳ ವಾಹನದ ಪೊಲೀಸರು ಇಬ್ಬರು ಉದ್ಯೋಗಿಗಳನ್ನು ರಕ್ಷಣೆ ಮಾಡಿ ಪೊಲೀಸ್‌ ಠಾಣೆಗೆ ಕರೆ ತಂದಿದ್ದಾರೆ. ಈ ಕುರಿತು ಪಾಂಡೇಶ್ವರ ಪೊಲೀಸ್‌ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 341, 354ರಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪಾಂಡೇಶ್ವರ ಠಾಣಾ ಪೊಲೀಸರು ಅಕ್ಷಯ್ ರಾವ್ ಮತ್ತು ಶಿಬಿನ್ ಪಡಿಕ್ಕಲ್ ಎಂಬಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಕಳೆದ ಬಿಜೆಪಿ ಸರಕಾರದ ಅವಧಿಯಲ್ಲಿ ಮಂಗಳೂರಿನಲ್ಲಿ ಮತೀಯ ಗೂಂಡಾಗಿರಿ ಪದೇ ಪದೇ ನಡೆಯುತ್ತಿತ್ತು. ಕಾಂಗ್ರೆಸ್‌ ಸರಕಾರ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ಕರಾವಳಿಯಲ್ಲಿ ನಡೆಯುತ್ತಿದ್ದ ಮತೀಯ ಗೂಂಡಾಗಿರಿಗೆ ಬ್ರೇಕ್ ಹಾಕುವುದಾಗಿಯೂ ಹೇಳಿತ್ತು. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೂ ಕರಾವಳಿಯಲ್ಲಿ ಮತೀಯ ಗೂಂಡಾಗಿರಿ ಮುಂದುವರಿದಿದೆ.

ಕಳೆದ ಜುಲೈನಲ್ಲಿ ಬಂಟ್ವಾಳದಲ್ಲಿ ಪೊಲೀಸ್ ಮೇಲೆಯೇ ಮತೀಯ ಗೂಂಡಾಗಿರಿ ನಡೆಸಿದ ಘಟನೆ ನಡೆದಿತ್ತು. ಬಿ.ಸಿ.ರೋಡ್ ನಿವಾಸಿಯಾಗಿರುವ ಪೊಲೀಸ್ ಸಿಬ್ಬಂದಿಯೊಬ್ಬರು ತನ್ನ ಪತ್ನಿ ಮತ್ತು ಸಹೊದರಿಯ ಜೊತೆ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಅವರ ಮೇಲೆ ಗೂಂಡಾಗಿರಿ ನಡೆಸಲಾಗಿತ್ತು. ಇದು ಕರಾವಳಿಯಲ್ಲಿ ಮತೀಯ ಗೂಂಡಾಗಿರಿ ಎಷ್ಟರ ಮಟ್ಟಿಗೆ ಇದೆ ಎಂಬುವುದಕ್ಕೆ ಸ್ಪಷ್ಟವಾದ ಉದಾಹರಣೆಯಾಗಿದೆ.

ಆ.3ರಂದು ಆಟೋದಲ್ಲಿ ಪ್ರಯಾಣಿಕರನ್ನು ಕೂರಿಸಿಕೊಂಡು ಹೋಗುತ್ತಿದ್ದ ಆಟೋ ಚಾಲಕ ಮಹಮ್ಮದ್ ಆಶಿಕ್‌ ಮೇಲೆ ಸಂಘಪರಿವಾರದ ಕಾರ್ಯಕರ್ತರು ಹಲ್ಲೆ ನಡೆಸಿದ್ದರು. ಕರಾವಳಿಯಲ್ಲಿ ಮತೀಯ ಗೂಂಡಾಗಿರಿಯನ್ನು ಸಂಪೂರ್ಣವಾಗಿ ತಡೆಯುವುದಾಗಿ ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದ ದಿನೇಶ್‌ ಗುಂಡೂರಾವ್‌ ಅವರು ಹೇಳಿದ್ದರು. ಆದರೆ ಕರಾವಳಿಯಲ್ಲಿ ಮತ್ತೆ- ಮತ್ತೆ ಘಟನೆಗಳು ಮರುಕಳಿಸುತ್ತಿದ್ದು, ಟೀಕೆಗೆ ಕಾರಣವಾಗಿದೆ.

ಇದನ್ನು ಓದಿ: ಗಾಝಾ ಕರಾವಳಿ ಪಟ್ಟಿಗೆ ನೆತನ್ಯಾಹು ಭೇಟಿ: ಇಸ್ರೇಲ್‌ ನಿಯಂತ್ರಣದಲ್ಲಿ ಹಮಾಸ್‌ ಆಳ್ವಿಕೆಯ ಭೂ ಪ್ರದೇಶ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...