Homeಕರ್ನಾಟಕಮಂಗಳೂರು | ಚಲಿಸುತ್ತಿದ್ದ ಬಸ್‌ನಲ್ಲೆ ಯುವತಿ ಮೇಲೆ ಕಂಡಕ್ಟರ್‌ನಿಂದ ಲೈಂಗಿಕ ದೌರ್ಜನ್ಯ

ಮಂಗಳೂರು | ಚಲಿಸುತ್ತಿದ್ದ ಬಸ್‌ನಲ್ಲೆ ಯುವತಿ ಮೇಲೆ ಕಂಡಕ್ಟರ್‌ನಿಂದ ಲೈಂಗಿಕ ದೌರ್ಜನ್ಯ

- Advertisement -
- Advertisement -

ನಿದ್ದೆಯಲ್ಲಿದ್ದ ಯುವತಿಯ ಮೇಲೆ ಕೆಎಸ್‌ಆರ್‌ಟಿಸಿ ಕಂಡಕ್ಟರೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಚಲಿಸುತ್ತಿದ್ದ ಬಸ್‌ನಲ್ಲಿ ಹಾಡ ಹಗಲೆ ಈ ಘಟನೆ ನಡೆದಿದೆ. ಆರೋಪಿಯನ್ನು ಕೆಸ್‌ಆರ್‌ಟಿಸಿ ಕಂಡಕ್ಟರ್ ಬಾಗಲೆಕೋಟೆ ಮೂಲದ ಪ್ರದೀಪ್ ಎಂದು ಗುರುತಿಸಲಾಗಿದ್ದು, ಘಟನೆಯ ವಿಡಿಯೊ ಬಂದ ತಕ್ಷಣವೆ ಅವರನ್ನು ಅಮಾನತು ಮಾಡಲಾಗಿದೆ ಎಂದು ನಾನುಗೌರಿ.ಕಾಂಗೆ ಕೆಎಸ್‌ಆರ್‌ಟಿಸಿ ತಿಳಿಸಿದೆ. ಮಂಗಳೂರು

ಮಂಗಳೂರಿನಿಂದ ಮುಡಿಪು ಮಾರ್ಗದಲ್ಲಿ ಸಂಚರಿಸುವ ಕೆಎಸ್‌ಆರ್‌ಟಿಸಿ ನಗರ ಸಾರಿಗೆಯಲ್ಲಿ ಬುಧವಾರ ಈ ಕೃತ್ಯ ನಡೆದಿದೆ ಎಂದು ವರದಿಯಾಗಿದೆ. ಸಹ ಪ್ರಯಾಣಿಕರೊಬ್ಬರು ಘಟನೆಯ ವಿಡಿಯೊ ಮಾಡಿದ್ದು, ಅದರಲ್ಲಿ ದುಷ್ಕರ್ಮಿ ಕಂಡಕ್ಟರ್ ಪ್ರದೀಪ್ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿರುವುದು ದಾಖಲಾಗಿದೆ. ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆಯೇ ಕೊಣಾಜೆ ಠಾಣೆ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ, “ಆರೋಪಿ ಕಂಡಕ್ಟರ್ ಹೆಸರು ಪ್ರದೀಪ್ ಎಂದಾಗಿದೆ. ಮಂಗಳೂರಿನಿಂದ ಮುಡಿಪುವಿಗೆ ತೆರಳುವ ಸರ್ಕಾರಿ ಬಸ್‌ನ ವಿಡಿಯೊ ಇದಾಗಿದೆ. ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿರುವ ಈ ವಿಡಿಯೊದ ವರದಿ ನಮಗೆ 10 ಗಂಟೆಗೆ ಬಂದಿದ್ದು, ನಾವು ಅವರನ್ನು 10.15ಕ್ಕೆ ಅಮಾನತು ಮಾಡಿದ್ದೇವೆ” ಎಂದು ಅವರು ಹೇಳಿದ್ದಾರೆ.

“ಇಂತಹ ಕೃತ್ಯವನ್ನು ಸಹಿಸಲು ಸಾಧ್ಯವಿಲ್ಲ, ಹಾಗಾಗಿಯೆ ತಕ್ಷಣವೆ ಅವರನ್ನು ಅಮಾನತು ಮಾಡಿದ್ದೇವೆ. ಮುಂದೆ ಅವನ ಮೇಲೆ ವಿಚಾರಣೆ ನಡೆಯಲಿದ್ದು, ವಿಚಾರಣೆಯಲ್ಲಿ ಕಂಡಕ್ಟರ್ ತಪ್ಪಿತಸ್ಥ ಎಂದು ಕಂಡು ಬಂದರೆ ಆತ ನೌಕರಿ ಕೂಡಾ ಕಳೆದುಕೊಳ್ಳಲಿದ್ದಾರೆ” ಎಂದು ಅವರು ಹೇಳಿದ್ದಾರೆ.

ಹಾಗೆ ನೋಡಿದರೆ, ಆತ ಲೈಂಗಿಕ ದೌರ್ಜನ್ಯ ಎಸಗುವುದು ವಿಡಿಯೊದಲ್ಲಿ ಸ್ಪಷ್ಟವಾಗಿ ಕಾಣುತ್ತಿದ್ದು, ಉದ್ದೇಶಪೂರ್ವಕವಾಗಿ ಯುವತಿಯ ಮೇಲೆ ದೌರ್ಜನ್ಯ ಎಸಗುತ್ತಿದ್ದಾನೆ. ಹಾಗಾಗಿ ಇದು ಗಂಭೀರ ವಿಚಾರವಾಗಿದ್ದು, ಆತನಿಗೆ ತನ್ನನ್ನು ಸಮರ್ಥಿಸಿಕೊಳ್ಳಲು ಕಾರಣಗಳೆ ಇಲ್ಲ ಎಂದು ರಾಜೇಶ್ ಹೇಳಿದ್ದಾರೆ.

“ಪ್ರಯಾಣಿಕರೊಂದಿಗೆ ಹೇಗೆ ವರ್ತಿಸಬೇಕು ಎಂಬ ಬಗ್ಗೆ ನಮ್ಮ ಸಿಬ್ಬಂದಿಗೆ ಪ್ರತಿದಿನ ನಿರ್ದೇಶನ ನೀಡುತ್ತೇವೆ. ಅದನ್ನು ಡಿಪೋಗಳಲ್ಲಿ ಪುನರಾವರ್ತಿತವಾಗಿ ನೀಡುತ್ತಲೆ ಇರುತ್ತೇವೆ. ಆದರೆ ಎಲ್ಲಾ ಕಡೆಯೂ ಒಬ್ಬರಿಬ್ಬರು ಇಂತವರು ಇದ್ದೇ ಇರುತ್ತಾರೆ. ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕಿದೆ. ಈ ಘಟನೆಯು ವಿಡಿಯೊ ಮಾಡದೆ ಇದ್ದರೆ ನಮಗೆ ತಿಳಿದು ಬರುತ್ತಲೆ ಇರಲಿಲ್ಲ. ಆದ್ದರಿಂದ ಈ ವಿಡಿಯೊ ಮಾಡಿದವರಿಗೆ ಸೆಲ್ಯೂಟ್. ವಿಡಿಯೊ ಸ್ಪಷ್ಟವಾಗಿದ್ದು, ಕಂಡಕ್ಟರ್ ರೆಡ್‌ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.” ಎಂದು ರಾಜೇಶ್ ಹೇಳಿದ್ದಾರೆ.

ಮಂಗಳೂರು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪತ್ನಿಯನ್ನು ಕೊಲೆಗೈದ ಸುಳ್ಳು ಆರೋಪ: 2 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಸುರೇಶ್ ‘ಗೌರವಯುತ’ ಖುಲಾಸೆ

ಪತ್ನಿಯನ್ನು ಕೊಲೆಗೈದ ಸುಳ್ಳು ಆರೋಪ: 2 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಸುರೇಶ್ ‘ಗೌರವಯುತ’ ಖುಲಾಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...