Homeಕರ್ನಾಟಕಮಂಗಳೂರು | ಹತ್ಯೆಗೀಡಾದ ರೌಡಿಗೆ ಬಿಜೆಪಿಯಿಂದ ₹25 ಲಕ್ಷ ಘೋಷಣೆ

ಮಂಗಳೂರು | ಹತ್ಯೆಗೀಡಾದ ರೌಡಿಗೆ ಬಿಜೆಪಿಯಿಂದ ₹25 ಲಕ್ಷ ಘೋಷಣೆ

- Advertisement -
- Advertisement -

ಮಂಗಳೂರು ಬಳಿಯ ಬಜ್ಪೆಯಲ್ಲಿ ಗುರುವಾರ ಕೊಲೆಗೀಡಾ ರೌಡಿ ಶೀಟರ್ ಸುಹಾಶ್ ಶೆಟ್ಟಿ ಕುಟುಂಬಕ್ಕೆ ರಾಜ್ಯ ಬಿಜೆಪಿ 25 ಲಕ್ಷ ರೂ. ಪರಿಹಾರ ನೀಡುವುದಾಗಿ ಶುಕ್ರವಾರ ಘೋಷಿಸಿದೆ. ಕೊಲೆಗಾಡಾದ ರೌಡಿಯ ಮನೆಗೆ ವಿಧಾನಸಭೆಯಲ್ಲಿನ ವಿಪಕ್ಷ ನಾಯಕ ಆರ್. ಅಶೋಕ್ ಜೊತೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ NIA ಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ವಿಜಯೇಂದ್ರ ಅವರು, “ಸುಹಾಸ್ ಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಮಂಗಳೂರಿನಲ್ಲಿ ನಡೆದ ಈ ಘಟನೆ ಖಂಡನಾರ್ಹ. ಬಿಜೆಪಿಯು ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡಿದೆ. ಸುಹಾಸ್ ಜೀವಕ್ಕೆ ಬೆದರಿಕೆ ಇದ್ದರೂ ರಕ್ಷಣೆ ಇಲ್ಲದಿರುವುದು ಪೊಲೀಸರ ವೈಫಲ್ಯವಾಗಿದೆ. ಘಟನೆಯಲ್ಲಿ ರಾಜ್ಯ ಸರಕಾರದ, ಗೃಹ ಇಲಾಖೆಯ ಮತ್ತು ಪೊಲೀಸ್ ಇಲಾಖೆಯ ವೈಫಲ್ಯ ಮೇಲ್ನೋಟಕ್ಕೆ ಎದ್ದು ಕಾಣುತ್ತಿದೆ” ಎಂದು ಹೇಳಿದ್ದಾರೆ.

ಕಾಂಗ್ರೆಸ್ ಸರಕಾರದ ನೀತಿಗಳಿಂದ ಹಿಂದೂ ಸಂಘಟನೆಗಳಿಗೆ, ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ಇಲ್ಲದಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್ ಸರಕಾರದ ಮೇಲೆ ವಿಶ್ವಾಸವೇ ಇಲ್ಲದಂತಾಗಿದೆ ಎಂದು ಅವರು ಹೇಳಿದ್ದಾರೆ.

“ಸುಹಾಸ್ ಕುಟುಂಬಕ್ಕೆ ಧೈರ್ಯ ತುಂಬಿದ್ದೇವೆ. ಸಾಂತ್ವನ ಹೇಳಿದ್ದೇವೆ. ಕುಟುಂಬದ ಆಧಾರ ಸ್ಥಂಭವೇ ಕಳಚಿ ಬಿದ್ದಿದೆ. ಈ ಸಂದರ್ಭದಲ್ಲಿ ಆ ಬಡ ಕುಟುಂಬದ ಕೊತೆ ನಾವಿದ್ದೇವೆ. ಪಕ್ಷದ ಪರವಾಗಿ 25 ಲಕ್ಷ ರೂ. ಪರಿಹಾರ ಹಣವನ್ನು ಘೋಷಣೆ ಮಾಡುತ್ತಿದ್ದೇವೆ. ಘಟನೆಯ ಗಂಭೀರತೆ, ಕುಟುಂಬದ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಸರಕಾರವೂ ಪರಿಹಾರ ಘೋಷಣೆ ಮಾಡಬೇಕು”, ಎಂದು ಅವರು ಆಗ್ರಸಿದ್ದಾರೆ.

2022ರ ಜುಲೈ 26ರಂದು ಮಂಗಳೂರಿನಲ್ಲಿ ನಡೆದಿದ್ದ ಮೊಹಮ್ಮದ್ ಫಾಝಿಲ್ ಕೊಲೆ ಪ್ರಕರಣದ ಆರೋಪಿ ರೌಡಿಶೀಟರ್ ಕಾಟಿಪಳ್ಳ-ಕೋಡಿಕೆರೆ ನಿವಾಸಿ ಸುಹಾಸ್ ಶೆಟ್ಟಿ (42) ಎಂಬಾತನನ್ನು 6 ಮಂದಿಯ ತಂಡವೊಂದು ಗುರುವಾರ ಭೀಭತ್ಸವಾಗಿ ಕೊಲೆಗೈದಿದೆ.

ಕೊಲೆಗೀಡಾದ ರೌಡಿ ಸುಹಾಸ್ ಶೆಟ್ಟಿ ವಿರುದ್ಧ ಎರಡು ಕೊಲೆ ಪ್ರಕರಣಗಳೂ ಸೇರಿದಂತೆ ಐದು ಪ್ರಕರಣಗಳು ದಾಖಲಾಗಿದ್ದವು. ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ಬೆನ್ನಲ್ಲೇ ಮಂಗಳೂರು ನಗರ ಪೊಲೀಸ್‌ ಕಮಿಷನರ್‌ ವ್ಯಾಪ್ತಿಯಲ್ಲಿ ಸೆಕ್ಷನ್‌ 163 ಜಾರಿಗೊಳಿಸಲಾಗಿದೆ. ಈ ನಡುವೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಐದು ಪ್ರತ್ಯೇಕ ಚೂರಿ ಇರಿತ ಪ್ರಕರಣಗಳು ವರದಿಯಾಗಿದ್ದು, ಸಂತ್ರಸ್ತರೆಲ್ಲರೂ ಮುಸ್ಲಿಮರು ಎಂದು ವರದಿ ಹೇಳಿವೆ. ಮಂಗಳೂರು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕೊಲೆ ಆರೋಪಿ, ರೌಡಿಶೀಟರ್ ಸುಹಾಸ್‌ ಹತ್ಯೆ: ಇಂದು ದ.ಕನ್ನಡ ಜಿಲ್ಲೆ ಬಂದ್‌ಗೆ ಕರೆ

ಕೊಲೆ ಆರೋಪಿ, ರೌಡಿಶೀಟರ್ ಸುಹಾಸ್‌ ಹತ್ಯೆ: ಇಂದು ದ.ಕನ್ನಡ ಜಿಲ್ಲೆ ಬಂದ್‌ಗೆ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...