Homeಕರ್ನಾಟಕಮಂಗಳೂರು | ಫೆ.28ರಿಂದ ಮಾ.3ವರೆಗೆ ನಿರ್ದಿಗಂತ ನಾಟಕೋತ್ಸವ: ಪ್ರಕಾಶ್ ರಾಜ್

ಮಂಗಳೂರು | ಫೆ.28ರಿಂದ ಮಾ.3ವರೆಗೆ ನಿರ್ದಿಗಂತ ನಾಟಕೋತ್ಸವ: ಪ್ರಕಾಶ್ ರಾಜ್

- Advertisement -
- Advertisement -

ಯುವ ಮನಸ್ಸುಗಳನ್ನು ರಂಗಭೂಮಿಯತ್ತ ಸೆಳೆಯುವ ಉದ್ದೇಶದಿಂದ ತಮ್ಮ ನಿರ್ದಿಗಂತ ತಂಡವು ನಿರ್ದಿಗಂತ ನಾಟಕೋತ್ಸವ ನಡೆಸುತ್ತಿದೆ. ಈ ಬಾರಿ, ಮಂಗಳೂರಿನಲ್ಲಿ ‘ಸೌಹಾರ್ದದ ಬಳಿ; ನಮ್ಮ ಕರಾವಳಿ’ ಎಂಬ ಶೀರ್ಷಿಕೆಯಡಿ ಫೆಬ್ರವರಿ 28ರಿಂದ ಮಾರ್ಚ್‌ 3ರವರೆಗೆ ನಾಟಕೋತ್ಸವ ನಡೆಯಲಿದೆ ಎಂದು ಖ್ಯಾತ ನಟ ಪ್ರಕಾಶ್‌ ರಾಜ್ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಆವರಣದಲ್ಲಿ ನಾಟಕೋತ್ಸವ ನಡೆಯಲಿದೆ. ತುಳು, ಕೊಂಕಣಿ ಸೇರಿದಂತೆ ರಂಗಭೂಮಿ ನಿರ್ದೇಶಕರಿಂದ ರಚನೆಗೊಂಡಿರುವ 8 ನಾಟಕಗಳ ಪ್ರದರ್ಶನ ಇರಲಿದೆ. ಜೊತೆಗೆ, ವಿವಿಧ ರೀತಿಯ ಕಾರ್ಯಾಗಾರ, ವಿಚಾರಗೋಷ್ಠಿ, ಬೀದಿನಾಟಕಗಳನ್ನು ಆಯೋಜಿಸಲಾಗಿದೆ” ಎಂದು ತಿಳಿಸಿದ್ದಾರೆ.

“ನಾಟಕೋತ್ಸವವನ್ನು ಸಂತ ಅಲೋಶಿಯಸ್ ಕಾಲೇಜಿನ ಕುಲಪತಿ ರೆ.ಡಾ. ಪ್ರವೀಣ್ ಮಾರ್ಟಿಸ್ ಉಪಸ್ಥಿತಿಯಲ್ಲಿ ಉದ್ಘಾಟಿಸಲಾಗುತ್ತದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಆಶಯ ಭಾಷಣ ಮಾಡಲಿದ್ದಾರೆ” ಎಂದು ತಿಳಿಸಿದ್ದಾರೆ.

ನಾಟಕೋತ್ಸವದಲ್ಲಿ ಬಿಜಾಪುರದ ಸ್ಪಿನ್ನಿಂಗ್ ಟ್ರೀ ಥಿಯೇಟರ್ ತಂಡ ಪ್ರಸ್ತುತಪಡಿಸಲಿರುವ ‘ಫಾರ್ ಎ ಬೈಟ್ ಆಫ್ ಫುಡ್’, ಮಂಗಳೂರು ಯಕ್ಷಮಿತ್ರರು ತಂಡದಿಂದ ‘ಕೋಟಿ ಚೆನ್ನಯ’ ಯಕ್ಷಗಾನ, ಧಾರವಾಡದ ಆಟಮಾಟ ತಂಡ ಹಾಗೂ ಮಹದೇವ ಹಡಪದ ನಿರ್ದೇಶನದ ‘ಗುಡಿಯ ನೋಡಿರಣ್ಣ’, ಸಂತ ಅಲೋಶಿಯಸ್ ಕಾಲೇಜಿನ ರಂಗ ಅಧ್ಯಯನ ಕೇಂದ್ರದ ತಂಡದಿಂದ ‘ಹ್ಯಾಂಗಾನ್’ ಕೊಂಕಣಿ ನಾಟಕ, ಕೇರಳದ ಲಿಟಲ್ ಅರ್ತ್ ಸ್ಕೂಲ್ ಆಫ್ ಥಿಯೇಟರ್ ತಂಡದಿಂದ ‘ಕುಹೂ: ಆಂತಾಲಜಿ ಆನ್ ದ ರೈಲ್ಸ್’, ನಿರ್ದಿಗಂತ ತಂಡದಿಂದ ‘ರಸೀದಿ ಟಿಕೇಟ್’, ಹಾಗೂ ‘ತಿಂಡಿಗೆ ಬಂದ ತುಂಡೇರಾಯ’ ನಾಟಕಗಳು ಪ್ರದರ್ಶನಗೊಳ್ಳಲಿವೆ” ಎಂದು ಪ್ರಕಾಶ್ ವಿವರಿಸಿದ್ದಾರೆ.

ಅಲ್ಲದೆ, ಡಾ. ಗಣನಾಥ ಎಕ್ಕಾರು ಅವರಿಂದ ‘ಬದಲಾಗುತ್ತಿರುವ ಯಕ್ಷಗಾನದ ಸ್ವರೂಪ’ ಎಂಬ ಬಗ್ಗೆ ವಿಷಯ ಮಂಡನೆ ಮಾಡಲಿದ್ದಾರೆ. ಸಂತ ಅಲೋಶಿಯಸ್ ಕಾಲೇಜು ತಂಡದಿಂದ ಕಾಲೇಜ್ ಬ್ಯಾಂಡ್ ಜ್ಯಾಮಿಂಗ್ ನಡೆಯಲಿದೆ. ಡಾ. ಮೋಹನ್ ಕುಂಟಾರ್ ಅವರು ‘ಕರಾವಳಿಯ ಭಾಷಾ ಸಂಬಂಧದ ಕೊಡುಕೊಳ್ವೆಯ ಸ್ವರೂಪ’ ವಿಷಯದಲ್ಲಿ ಮಾತನಾಡಲಿದ್ದಾರೆ. ಶಾರದಾ ಜಿ. ಬಂಗೇರ ಅವರು ಪಾಡ್ದನ ಹಾಡಲಿದ್ದು, ಐರಿನ್ ರೆಬಲ್ಲೋ ಮತ್ತು ತಂಡದಿಂದ ವೊವಿಯೊ ಕೊಂಕಣಿ ಹಾಡು ಹಾಗೂ ಪೂಜ್ಯ ಸೇಸು ಗೌಡ ಕಲಾ ಟ್ರಸ್ಟ್‌ನಿಂದ ಕುಡುಬಿ ಹಾಡುಗಳು ಪ್ರಸ್ತುತಗೊಳ್ಳಲಿವೆ. ವೆಂಕಟರಮಣ ಐತಾಳ್‌ರವರು ‘ಸ್ಥಳೀಯ ಚರಿತ್ರೆಗಳು ಮತ್ತು ಕುಸಿಯುತ್ತಿರುವ ಬಹುತ್ವದ ನೆಲೆ’ ವಿಷಯದ ಕುರಿತು ಮಾತನಾಡಲಿದ್ದಾರೆ. ಅಲ್ಲದೆ, ಕರಗ ಡೋಲು, ಕಾವ್ಯ ವಾಚನ ಸೇಋಇದಂತೆ ಹಲವಾರು ರೀತಿಯ ಕಾರ್ಯಕ್ರಮಗಳು ನಡೆಯಲಿವೆ” ಎಂದು ತಿಳಿಸಿದ್ದಾರೆ.

“ನಾಟಕೋತ್ಸವ ಸಮಾರೋಪವು ಮಾರ್ಚ್‌ 3ರ ಸಂಜೆ ನಡೆಯಲಿದ್ದು, ಸಮಾರೋಪ ಕಾರ್ಯಕ್ರಮದಲ್ಲಿ ಮಲಯಾಳಂ ನಟಿ ಪಾರ್ವತಿ ತಿರುವೊತ್ತು ಭಾವಹಿಸಲಿದ್ದಾರೆ. ಅಂದು, ನಿರ್ದಿಗಂತ ತಂಡದಿಂದ ಅಮಿತ್ ರೆಡ್ಡಿ ನಿರ್ದೇಶನದ ‘ಮೈ ಮನಗಳ ಸುಳಿಯಲ್ಲಿ’ ನಾಟಕ ಪ್ರದರ್ಶನಗೊಳ್ಳಲಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರಾಚ್ಯ ಸಂಘರ್ಷ| ಇರಾನ್ ಮೇಲಿನ ದಾಳಿಗೆ ಅಮೆರಿಕಾ ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ಹೇಳಿಕೆ ವೈರಲ್: ಭಾರತದ ಪ್ರತಿಕ್ರಿಯೆ ಏನು?

ಇರಾನ್ ಮೇಲೆ ನೌಕಾ ದಾಳಿ ನಡೆಸಲು ಅಮೆರಿಕ ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ವೈರಲ್ ಹೇಳಿಕೆಗಳನ್ನು ಭಾರತ ಬಲವಾಗಿ ತಿರಸ್ಕರಿಸಿದೆ. ಅಲ್ಲದೇ ಈ ಆರೋಪಗಳನ್ನು "ನಕಲಿ"  ಮತ್ತು “ಆಧಾರರಹಿತ” ಎಂದು ಕರೆದಿದೆ. ಬುಧವಾರ ವಿದೇಶಾಂಗ...

ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ‘ಪ್ರಗತಿಪರ ಸೌಹಾರ್ದ ಸಂಘಟನೆಗಳ’ ಆಗ್ರಹ

ಚಿಕ್ಕಮಗಳೂರಿನ ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ಆಗ್ರಹಿಸಿದ ಕರ್ನಾಟಕ ಸಮಸ್ತ ಪ್ರಗತಿಪರ ಸೌಹಾರ್ದ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದು ಆಗ್ರಹಿಸಿದ್ದಾರೆ. ಚಿಕ್ಕಮಗಳೂರಿನ ಬಾಬಾ ಬುಡನ್‌...

ಖಮೇನಿ ನಿಧನಕ್ಕೆ ತಡವಾಗಿ ಸಂತಾಪ ಸೂಚಿಸಿದ ಭಾರತ; ಇರಾನ್‌ ರಾಯಭಾರ ಕಚೇರಿಯಲ್ಲಿನ ಪುಸ್ತಕದಲ್ಲಿ ವಿಕ್ರಮ್ ಮಿಶ್ರಿ ಸಹಿ

ಇರಾನಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನಕ್ಕೆ ಭಾರತ ತಡವಾಗಿ ಸಂತಾಪ ಸೂಚಿಸಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಗುರುವಾರ ನವದೆಹಲಿಯ ಇರಾನಿನ ರಾಯಭಾರ ಕಚೇರಿಯಲ್ಲಿ ಸಂತಾಪ ಸೂಚಿಸುವ ಪುಸ್ತಕಕ್ಕೆ...

ಉಕ್ರೇನ್, ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷ ತ್ವರಿತವಾಗಿ ಕೊನೆಗೊಳಿಸಲು ಬೆಂಬಲಿಸುತ್ತೇನೆ: ಫಿನ್ಲೆಂಡ್‌ನಲ್ಲಿ ಪ್ರಧಾನಿ ಮೋದಿ

ನವದೆಹಲಿ: ಪಶ್ಚಿಮ ಏಷ್ಯಾ ಮತ್ತು ಉಕ್ರೇನ್‌ನಲ್ಲಿನ ಸಂಘರ್ಷಗಳಿಗೆ "ತ್ವರಿತ ಅಂತ್ಯ" ವನ್ನು ತರಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಕರೆ ನೀಡಿದ್ದಾರೆ, ಯಾವುದೇ ಸಮಸ್ಯೆಯನ್ನು ಮಿಲಿಟರಿ ಮುಖಾಮುಖಿಯ ಮೂಲಕ ಪರಿಹರಿಸಲು ಸಾಧ್ಯವಿಲ್ಲ ಎಂದು...

ಮಹಾರಾಷ್ಟ್ರ| ಬಣ್ಣ ಎರಚಿದ ಮೊಮ್ಮಗನ ಮೇಲೆ ಬಿಸಿ ನೀರು ಸುರಿದ ಮಹಿಳೆ; ಬಾಲಕನ ಸ್ಥಿತಿ ಗಂಭೀರ

ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕೊರಾಡಿ ಪ್ರದೇಶದಲ್ಲಿ ಹೋಲಿ ಆಡುತ್ತಿದ್ದಾಗ ನಾಲ್ಕು ವರ್ಷದ ಮೊಮ್ಮಗ ತನ್ನ ಮೇಲೆ ಬಣ್ಣ ಎರಚಿದ್ದರಿಂದ ಕೋಪಗೊಂಡ ಅಜ್ಜಿ ಮಗುವಿನ ಮೇಲೆ ಕುದಿಯುವ ನೀರನ್ನು ಸುರಿದಿರುವ ವಿಡಿಯೋ ಇದೀಗ ವೈರಲ್...

ಭಾರತದ ಕಾಲ ಬುಡದಲ್ಲಿ ಇರಾನ್ ನೌಕೆ ಮೇಲೆ ಅಮೆರಿಕ ದಾಳಿ : 100ರಷ್ಟು ಸಿಬ್ಬಂದಿ ಸಾವಿಗೀಡಾದರೂ ಮೋದಿ ಸರ್ಕಾರ ಮೌನ!

ಭಾರತದಿಂದ ಕೇವಲ 300 ಕಿಲೋ ಮೀಟರ್ ದೂರದಲ್ಲಿ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ 'ಐಆರ್‌ಐಎಸ್ ದೆನಾ' ಮೇಲೆ ಅಮೆರಿಕ ಜಲಾಂತರ್ಗಾಮಿ ಬುಧವಾರ (ಮಾ.4) ಭೀಕರ ದಾಳಿ ನಡೆಸಿದೆ. ಈ ಘಟನೆಯಲ್ಲಿ ಇರಾನ್‌ ನೌಕೆಯಲ್ಲಿದ್ದ 180 ಸಿಬ್ಬಂದಿಯ...

ಹಿಂದೂ ಮಹಾಸಾಗರದಲ್ಲಿ ಇರಾನ್ ನೌಕೆ ಮೇಲೆ ದಾಳಿ: ‘ರಾಜಿ ಮಾಡಿಕೊಂಡ ಪ್ರಧಾನಿ ಕಾರ್ಯತಂತ್ರದ ಸ್ವಾಯತ್ತತೆ ಬಿಟ್ಟುಕೊಟ್ಟರು: ರಾಹುಲ್ ಟೀಕೆ

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆ ಐರಿಸ್ ದೇನಾದ ಮೇಲೆ ಅಮೆರಿಕಾ ದಾಳಿ ಮಾಡಿದ ಒಂದು ದಿನದ ನಂತರ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಾಗ್ದಾಳಿ...

ಟ್ರಂಪ್ ಬೆದರಿಕೆಗೆ ಹೆದರದ ಸ್ಪೇನ್ ಪ್ರಧಾನಿ; ಇರಾನ್ ಮೇಲಿನ ದಾಳಿಗೆ ಸೇನಾ ನೆಲೆ ಬಳಸಲು ಅನುಮತಿ ನಿರಾಕರಿಸಿದ ಪೆಡ್ರೊ ಸ್ಯಾಂಚೆಜ್

ಇರಾನ್ ಮೇಲೆ ದಾಳಿ ಮಾಡಲು ಅಮೆರಿಕದ ವಿಮಾನಗಳು ತನ್ನ ನೆಲೆಗಳನ್ನು ಬಳಸಲು ಅನುಮತಿಸಲು ಮ್ಯಾಡ್ರಿಡ್ ನಿರಾಕರಿಸಿದ್ದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ ಟೀಕೆಗಳಿಗೆ ಬುಧವಾರ ಸ್ಪ್ಯಾನಿಷ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ತಿರುಗೇಟು...

ಭಾರತದಿಂದ ಹಿಂದಿರುಗುತ್ತಿದ್ದ ಯುದ್ಧನೌಕೆ ಮೇಲೆ ಹಠಾತ್ ದಾಳಿ : ಅಮೆರಿಕ ಪಶ್ಚಾತ್ತಾಪ ಪಡಲಿದೆ ಎಂದ ಇರಾನ್

ಭಾರತೀಯ ನೌಕಾಪಡೆಯ ಆಹ್ವಾನದ ಮೇರೆಗೆ ಸಮರಾಭ್ಯಾಸದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ ಐಆರ್‌ಐಎಸ್ ದೆನಾ ಮೇಲೆ ಅಮೆರಿಕದ ಜಲಾಂತರ್ಗಾಮಿ ದಾಳಿ ನಡೆಸಿ ಅದನ್ನು ಮುಳುಗಿಸಿದೆ. ಮಾರ್ಚ್ 4ರಂದು ಶ್ರೀಲಂಕಾದ ದಕ್ಷಿಣ ಕರಾವಳಿಯಿಂದ ಸುಮಾರು 40 ನಾಟಿಕಲ್...

ದೆಹಲಿ| ಹೋಳಿ ಹಬ್ಬ ಸಡಗರದಲ್ಲಿ ಕುಡಿದು ವಾಹನ ಚಾಲನೆ; 1,200 ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು

ಹೋಳಿ ಹಬ್ಬದಂದು ನಗರದಾದ್ಯಂತ ನಡೆಸಿದ ವಿಶೇಷ ಪರಿಶೀಲನೆಯಲ್ಲಿ ದೆಹಲಿ ಸಂಚಾರ ಪೊಲೀಸರು 1,200 ಕ್ಕೂ ಹೆಚ್ಚು ವಾಹನ ಚಾಲಕರ ವಿರುದ್ಧ ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಪಶ್ಚಿಮ ವಲಯದಿಂದ ಅತಿ ಹೆಚ್ಚು...