Homeಕರ್ನಾಟಕಮಂಗಳೂರು | ಫೆ.28ರಿಂದ ಮಾ.3ವರೆಗೆ ನಿರ್ದಿಗಂತ ನಾಟಕೋತ್ಸವ: ಪ್ರಕಾಶ್ ರಾಜ್

ಮಂಗಳೂರು | ಫೆ.28ರಿಂದ ಮಾ.3ವರೆಗೆ ನಿರ್ದಿಗಂತ ನಾಟಕೋತ್ಸವ: ಪ್ರಕಾಶ್ ರಾಜ್

- Advertisement -
- Advertisement -

ಯುವ ಮನಸ್ಸುಗಳನ್ನು ರಂಗಭೂಮಿಯತ್ತ ಸೆಳೆಯುವ ಉದ್ದೇಶದಿಂದ ತಮ್ಮ ನಿರ್ದಿಗಂತ ತಂಡವು ನಿರ್ದಿಗಂತ ನಾಟಕೋತ್ಸವ ನಡೆಸುತ್ತಿದೆ. ಈ ಬಾರಿ, ಮಂಗಳೂರಿನಲ್ಲಿ ‘ಸೌಹಾರ್ದದ ಬಳಿ; ನಮ್ಮ ಕರಾವಳಿ’ ಎಂಬ ಶೀರ್ಷಿಕೆಯಡಿ ಫೆಬ್ರವರಿ 28ರಿಂದ ಮಾರ್ಚ್‌ 3ರವರೆಗೆ ನಾಟಕೋತ್ಸವ ನಡೆಯಲಿದೆ ಎಂದು ಖ್ಯಾತ ನಟ ಪ್ರಕಾಶ್‌ ರಾಜ್ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಆವರಣದಲ್ಲಿ ನಾಟಕೋತ್ಸವ ನಡೆಯಲಿದೆ. ತುಳು, ಕೊಂಕಣಿ ಸೇರಿದಂತೆ ರಂಗಭೂಮಿ ನಿರ್ದೇಶಕರಿಂದ ರಚನೆಗೊಂಡಿರುವ 8 ನಾಟಕಗಳ ಪ್ರದರ್ಶನ ಇರಲಿದೆ. ಜೊತೆಗೆ, ವಿವಿಧ ರೀತಿಯ ಕಾರ್ಯಾಗಾರ, ವಿಚಾರಗೋಷ್ಠಿ, ಬೀದಿನಾಟಕಗಳನ್ನು ಆಯೋಜಿಸಲಾಗಿದೆ” ಎಂದು ತಿಳಿಸಿದ್ದಾರೆ.

“ನಾಟಕೋತ್ಸವವನ್ನು ಸಂತ ಅಲೋಶಿಯಸ್ ಕಾಲೇಜಿನ ಕುಲಪತಿ ರೆ.ಡಾ. ಪ್ರವೀಣ್ ಮಾರ್ಟಿಸ್ ಉಪಸ್ಥಿತಿಯಲ್ಲಿ ಉದ್ಘಾಟಿಸಲಾಗುತ್ತದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಆಶಯ ಭಾಷಣ ಮಾಡಲಿದ್ದಾರೆ” ಎಂದು ತಿಳಿಸಿದ್ದಾರೆ.

ನಾಟಕೋತ್ಸವದಲ್ಲಿ ಬಿಜಾಪುರದ ಸ್ಪಿನ್ನಿಂಗ್ ಟ್ರೀ ಥಿಯೇಟರ್ ತಂಡ ಪ್ರಸ್ತುತಪಡಿಸಲಿರುವ ‘ಫಾರ್ ಎ ಬೈಟ್ ಆಫ್ ಫುಡ್’, ಮಂಗಳೂರು ಯಕ್ಷಮಿತ್ರರು ತಂಡದಿಂದ ‘ಕೋಟಿ ಚೆನ್ನಯ’ ಯಕ್ಷಗಾನ, ಧಾರವಾಡದ ಆಟಮಾಟ ತಂಡ ಹಾಗೂ ಮಹದೇವ ಹಡಪದ ನಿರ್ದೇಶನದ ‘ಗುಡಿಯ ನೋಡಿರಣ್ಣ’, ಸಂತ ಅಲೋಶಿಯಸ್ ಕಾಲೇಜಿನ ರಂಗ ಅಧ್ಯಯನ ಕೇಂದ್ರದ ತಂಡದಿಂದ ‘ಹ್ಯಾಂಗಾನ್’ ಕೊಂಕಣಿ ನಾಟಕ, ಕೇರಳದ ಲಿಟಲ್ ಅರ್ತ್ ಸ್ಕೂಲ್ ಆಫ್ ಥಿಯೇಟರ್ ತಂಡದಿಂದ ‘ಕುಹೂ: ಆಂತಾಲಜಿ ಆನ್ ದ ರೈಲ್ಸ್’, ನಿರ್ದಿಗಂತ ತಂಡದಿಂದ ‘ರಸೀದಿ ಟಿಕೇಟ್’, ಹಾಗೂ ‘ತಿಂಡಿಗೆ ಬಂದ ತುಂಡೇರಾಯ’ ನಾಟಕಗಳು ಪ್ರದರ್ಶನಗೊಳ್ಳಲಿವೆ” ಎಂದು ಪ್ರಕಾಶ್ ವಿವರಿಸಿದ್ದಾರೆ.

ಅಲ್ಲದೆ, ಡಾ. ಗಣನಾಥ ಎಕ್ಕಾರು ಅವರಿಂದ ‘ಬದಲಾಗುತ್ತಿರುವ ಯಕ್ಷಗಾನದ ಸ್ವರೂಪ’ ಎಂಬ ಬಗ್ಗೆ ವಿಷಯ ಮಂಡನೆ ಮಾಡಲಿದ್ದಾರೆ. ಸಂತ ಅಲೋಶಿಯಸ್ ಕಾಲೇಜು ತಂಡದಿಂದ ಕಾಲೇಜ್ ಬ್ಯಾಂಡ್ ಜ್ಯಾಮಿಂಗ್ ನಡೆಯಲಿದೆ. ಡಾ. ಮೋಹನ್ ಕುಂಟಾರ್ ಅವರು ‘ಕರಾವಳಿಯ ಭಾಷಾ ಸಂಬಂಧದ ಕೊಡುಕೊಳ್ವೆಯ ಸ್ವರೂಪ’ ವಿಷಯದಲ್ಲಿ ಮಾತನಾಡಲಿದ್ದಾರೆ. ಶಾರದಾ ಜಿ. ಬಂಗೇರ ಅವರು ಪಾಡ್ದನ ಹಾಡಲಿದ್ದು, ಐರಿನ್ ರೆಬಲ್ಲೋ ಮತ್ತು ತಂಡದಿಂದ ವೊವಿಯೊ ಕೊಂಕಣಿ ಹಾಡು ಹಾಗೂ ಪೂಜ್ಯ ಸೇಸು ಗೌಡ ಕಲಾ ಟ್ರಸ್ಟ್‌ನಿಂದ ಕುಡುಬಿ ಹಾಡುಗಳು ಪ್ರಸ್ತುತಗೊಳ್ಳಲಿವೆ. ವೆಂಕಟರಮಣ ಐತಾಳ್‌ರವರು ‘ಸ್ಥಳೀಯ ಚರಿತ್ರೆಗಳು ಮತ್ತು ಕುಸಿಯುತ್ತಿರುವ ಬಹುತ್ವದ ನೆಲೆ’ ವಿಷಯದ ಕುರಿತು ಮಾತನಾಡಲಿದ್ದಾರೆ. ಅಲ್ಲದೆ, ಕರಗ ಡೋಲು, ಕಾವ್ಯ ವಾಚನ ಸೇಋಇದಂತೆ ಹಲವಾರು ರೀತಿಯ ಕಾರ್ಯಕ್ರಮಗಳು ನಡೆಯಲಿವೆ” ಎಂದು ತಿಳಿಸಿದ್ದಾರೆ.

“ನಾಟಕೋತ್ಸವ ಸಮಾರೋಪವು ಮಾರ್ಚ್‌ 3ರ ಸಂಜೆ ನಡೆಯಲಿದ್ದು, ಸಮಾರೋಪ ಕಾರ್ಯಕ್ರಮದಲ್ಲಿ ಮಲಯಾಳಂ ನಟಿ ಪಾರ್ವತಿ ತಿರುವೊತ್ತು ಭಾವಹಿಸಲಿದ್ದಾರೆ. ಅಂದು, ನಿರ್ದಿಗಂತ ತಂಡದಿಂದ ಅಮಿತ್ ರೆಡ್ಡಿ ನಿರ್ದೇಶನದ ‘ಮೈ ಮನಗಳ ಸುಳಿಯಲ್ಲಿ’ ನಾಟಕ ಪ್ರದರ್ಶನಗೊಳ್ಳಲಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಕನ್ನಡ ಕಲಿತು ಬರಬೇಕು: ಡಾ.ಎಲ್.ಹನುಮಂತಯ್ಯ

ಬೆಂಗಳೂರು, ಮಾ.28: ಇತರೇ ರಾಜ್ಯಗಳಿಂದ ಕರ್ನಾಟಕದ ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಬರುವವರು ಕಡ್ಡಾಯವಾಗಿ ಕನಿಷ್ಠ ಆರು ತಿಂಗಳು ವ್ಯಾವಹಾರಿಕ ಕನ್ನಡವನ್ನು ಕಲಿತು ಬರಬೇಕು. ಇಲ್ಲದಿದ್ದರೆ ಇಲ್ಲಿನ ಧರ್ಮಾಧ್ಯಕ್ಷರ ಸ್ಥಾನಕ್ಕೆ ಗೌರವ ಉಳಿಯುವುದಿಲ್ಲ ಎಂದು ಸಾಹಿತಿ...

‘ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಒತ್ತಡ ಎದುರಿಸಬಹುದು..’; ಸೇನಾ ಮುಖ್ಯಸ್ಥರಿಂದ ಸರ್ಕಾರಕ್ಕೆ ಎಚ್ಚರಿಕೆ

ಹೆಚ್ಚುತ್ತಿರುವ ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಕಾರ್ಯಾಚರಣೆಯ ಗಂಭೀರ ಒತ್ತಡವನ್ನು ಎದುರಿಸಬಹುದು ಎಂದು ಸೇನಾ ಮುಖ್ಯಸ್ಥ ಇಯಾಲ್ ಜಮೀರ್ ಭದ್ರತಾ ಕ್ಯಾಬಿನೆಟ್ ಸಭೆಯಲ್ಲಿ ಸರ್ಕಾರಕ್ಕೆ ಎಚ್ಚರಿಸಿದ್ದಾರೆ ಎಂದು ಇಸ್ರೇಲ್ ಮಾಧ್ಯಮ ವರದಿಗಳನ್ನು...

ಯೆಮೆನ್‌ನಿಂದ ಹಾರಿದ ಮೊದಲ ಕ್ಷಿಪಣಿ ಎದುರಿಸಿದ ಇಸ್ರೇಲ್; ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಹೌತಿ ಪ್ರವೇಶ?

ಕಳೆದ ತಿಂಗಳು ಮಧ್ಯಪ್ರಾಚ್ಯದಲ್ಲಿ ಯುದ್ಧ ಭುಗಿಲೆದ್ದ ನಂತರ, ಮಾರ್ಚ್ 28 ರಂದು ಯೆಮೆನ್‌ನಿಂದ ಹಾರಿಸಲಾದ ಕ್ಷಿಪಣಿಯೊಂದನ್ನು ಇಸ್ರೇಲ್ ಮೊದಲಬಾರಿಗೆ ಎದುರಿಸಿದೆ. ಕಳೆದ ತಿಂಗಳು ಮಧ್ಯಪ್ರಾಚ್ಯದಲ್ಲಿ ಯುದ್ಧ ಭುಗಿಲೆದ್ದ ನಂತರ ಯೆಮೆನ್‌ನಿಂದ ಮೊದಲ ಬಾರಿಗೆ...

ಬಿಜೆಪಿಗೆ ಮತ ಹಾಕುವುದು ವ್ಯರ್ಥ; ಬದಲಿಗೆ ಕಾಂಗ್ರೆಸ್‌ಗೆ ಹಾಕಿ: ಸಂಸದ ಶಶಿ ತರೂರ್

ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಮತ ಹಾಕುವುದು ವ್ಯರ್ಥ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಕೇರಳದಲ್ಲಿ ಹೇಳಿದ್ದಾರೆ. ರಾಜ್ಯದ ಚುನಾವಣಾ ಸ್ಪರ್ಧೆ ಪ್ರಾಥಮಿಕವಾಗಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಮತ್ತು ಎಡ...

ಅಬುಧಾಬಿ | ಭದ್ರತಾ ಪಡೆಗಳು ಹೊಡೆದುರುಳಿಸಿದ ಕ್ಷಿಪಣಿಯ ಅವಶೇಷಗಳು ಬಿದ್ದು ಐವರು ಭಾರತೀಯರಿಗೆ ಗಾಯ

ಯುಎಇ ರಾಜಧಾನಿ ಅಬುಧಾಬಿ ಸೇರಿದಂತೆ ವಿವಿಧ ಪ್ರದೇಶಗಳ ಮೇಲೆ ಇರಾನ್ ನಡೆಸಿದ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳ ಸಂದರ್ಭದಲ್ಲಿ, ಕ್ಷಿಪಣಿಗಳ ಅವಶೇಷಗಳು ಬಿದ್ದ ಪರಿಣಾಮ ಐವರು ಭಾರತೀಯರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅಬುಧಾಬಿಯ ಸರ್ಕಾರಿ...

ಧುರಂಧರ್-2 ಬಿಜೆಪಿಯ ದೊಡ್ಡ ಬಜೆಟ್‌ನ ರಾಜಕೀಯ ಜಾಹೀರಾತು: ಧ್ರುವ ರಾಥೀ

ಚಲನಚಿತ್ರ ನಿರ್ಮಾಪಕ ಆದಿತ್ಯ ಧರ್ ಅವರ ಆಕ್ಷನ್ ಎಂಟರ್‌ಟೈನರ್ ಧುರಂಧರ್‌ನ ಮುಂದುವರಿದ ಭಾಗವು ಬಾಕ್ಸ್ ಆಫೀಸ್‌ನಲ್ಲಿ ಭಾರಿ ಗಳಿಕೆಯ ಜೊತೆಗೆ ಬಲಪಂಥೀಯ ವರ್ಗದ ಪ್ರೇಕ್ಷಕರ ಪ್ರತಿಕ್ರಿಯೆಯನ್ನು ಗಳಿಸುತ್ತಿದೆ. ಆದರೂ, ಈ ಚಿತ್ರವು ಸಾಕಷ್ಟು...

ಗುರುತು ಬಹಿರಂಗ ಆರೋಪ; ಜೆಫ್ರಿ ಎಪ್ಸ್ಟೀನ್ ಸಂತ್ರಸ್ತರಿಂದ ಗೂಗಲ್‌ ವಿರುದ್ಧ ಮೊಕದ್ದಮೆ

ಜೆಫ್ರಿ ಎಪ್ಸ್ಟೀನ್ ಸಂತ್ರಸ್ತರು ಗೂಗಲ್ ವಿರುದ್ಧ ಯುಎಸ್ ಫೆಡರಲ್ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದಾರೆ. ಅದರ ಸರ್ಚ್ ಇಂಜಿನ್ ಮತ್ತು ಎಐ ಪರಿಕರಗಳಲ್ಲಿ ತಮ್ಮ ಹೆಸರುಗಳು, ಇಮೇಲ್‌ಗಳು ಮತ್ತು ಫೋನ್ ಸಂಖ್ಯೆಗಳನ್ನು ಪ್ರಸಾರ ಮಾಡುತ್ತಿವೆ...

ಬೆಂಗಳೂರು : ತರಗತಿ ಕೊಠಡಿಯಲ್ಲೇ ಮುಸ್ಲಿಂ ವಿದ್ಯಾರ್ಥಿಗೆ ‘ಟೆರರಿಸ್ಟ್’ ಎಂದು ನಿಂದಿಸಿದ ಪ್ರಾಧ್ಯಾಪಕ!

ಪ್ರಾಧ್ಯಾಪಕರೊಬ್ಬರು ತರಗತಿ ಕೊಠಡಿಯಲ್ಲೇ ಮುಸ್ಲಿಂ ವಿದ್ಯಾರ್ಥಿಯನ್ನು 'ಟೆರರಿಸ್ಟ್' ಎಂದು ನಿಂದಿಸಿದ ಘಟನೆ ಬೆಂಗಳೂರಿನ ಪಿಇಎಸ್‌ ವಿಶ್ವವಿದ್ಯಾಲಯದಲ್ಲಿ ನಡೆದಿದೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾದ...

ನೇಪಾಳ : ಹೊಸ ಪ್ರಧಾನಿ ಅಧಿಕಾರ ಸ್ವೀಕರಿಸಿದ ಮರುದಿನವೇ ಮಾಜಿ ಪ್ರಧಾನಿಯ ಬಂಧನ!

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ (ಬಾಲೆನ್ ಶಾ) ಪ್ರಮಾಣವಚನ ಸ್ವೀಕರಿಸಿದ ಮರುದಿನವೇ (ಮಾ.28, ಶನಿವಾರ), ಮಾಜಿ ಪ್ರಧಾನಿ ಕೆ. ಪಿ. ಶರ್ಮಾ ಓಲಿ ಅವರ ಬಂಧನವಾಗಿದೆ. ಸೆಪ್ಟೆಂಬರ್ 2025ರಲ್ಲಿ ನಡೆದ ಭ್ರಷ್ಟಾಚಾರ ವಿರೋಧಿ...

‘ಕರ್ನಾಟಕ ಸರ್ಕಾರ ಸಾಮಾಜಿಕ ನ್ಯಾಯ ನಿರಾಕರಿಸುತ್ತಿದೆ’: ವಿಶೇಷ ಸಚಿವ ಸಂಪುಟ ಸಭೆ ಮುಂದೂಡಿಕೆಗೆ ಹೋರಾಟಗಾರರ ಖಂಡನೆ

ಕಳೆದ 35 ವರ್ಷಗಳಿಂದ ಒಳಮೀಸಲಾತಿಗಾಗಿ ಆಗ್ರಹಿಸಿ ನಡೆಯುತ್ತಿದ್ದ ಹೋರಾಟಕ್ಕೆ ಸುಪ್ರೀಂ ಕೋರ್ಟ್‌ ತೀರ್ಪಿನ ನಂತರ ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿಯಾಗುವ ಭರವಸೆಯನ್ನು ಒಳಮೀಸಲಾತಿ ಹೋರಾಟಗಾರರು ಹೊಂದಿದ್ದರು.  ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರ ಎರಡು ವರ್ಷಗಳಿಂದ ನಿರಂತರವಾಗಿ...