Homeಕರ್ನಾಟಕಮಂಗಳೂರು | ಫೆ.28ರಿಂದ ಮಾ.3ವರೆಗೆ ನಿರ್ದಿಗಂತ ನಾಟಕೋತ್ಸವ: ಪ್ರಕಾಶ್ ರಾಜ್

ಮಂಗಳೂರು | ಫೆ.28ರಿಂದ ಮಾ.3ವರೆಗೆ ನಿರ್ದಿಗಂತ ನಾಟಕೋತ್ಸವ: ಪ್ರಕಾಶ್ ರಾಜ್

- Advertisement -
- Advertisement -

ಯುವ ಮನಸ್ಸುಗಳನ್ನು ರಂಗಭೂಮಿಯತ್ತ ಸೆಳೆಯುವ ಉದ್ದೇಶದಿಂದ ತಮ್ಮ ನಿರ್ದಿಗಂತ ತಂಡವು ನಿರ್ದಿಗಂತ ನಾಟಕೋತ್ಸವ ನಡೆಸುತ್ತಿದೆ. ಈ ಬಾರಿ, ಮಂಗಳೂರಿನಲ್ಲಿ ‘ಸೌಹಾರ್ದದ ಬಳಿ; ನಮ್ಮ ಕರಾವಳಿ’ ಎಂಬ ಶೀರ್ಷಿಕೆಯಡಿ ಫೆಬ್ರವರಿ 28ರಿಂದ ಮಾರ್ಚ್‌ 3ರವರೆಗೆ ನಾಟಕೋತ್ಸವ ನಡೆಯಲಿದೆ ಎಂದು ಖ್ಯಾತ ನಟ ಪ್ರಕಾಶ್‌ ರಾಜ್ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಆವರಣದಲ್ಲಿ ನಾಟಕೋತ್ಸವ ನಡೆಯಲಿದೆ. ತುಳು, ಕೊಂಕಣಿ ಸೇರಿದಂತೆ ರಂಗಭೂಮಿ ನಿರ್ದೇಶಕರಿಂದ ರಚನೆಗೊಂಡಿರುವ 8 ನಾಟಕಗಳ ಪ್ರದರ್ಶನ ಇರಲಿದೆ. ಜೊತೆಗೆ, ವಿವಿಧ ರೀತಿಯ ಕಾರ್ಯಾಗಾರ, ವಿಚಾರಗೋಷ್ಠಿ, ಬೀದಿನಾಟಕಗಳನ್ನು ಆಯೋಜಿಸಲಾಗಿದೆ” ಎಂದು ತಿಳಿಸಿದ್ದಾರೆ.

“ನಾಟಕೋತ್ಸವವನ್ನು ಸಂತ ಅಲೋಶಿಯಸ್ ಕಾಲೇಜಿನ ಕುಲಪತಿ ರೆ.ಡಾ. ಪ್ರವೀಣ್ ಮಾರ್ಟಿಸ್ ಉಪಸ್ಥಿತಿಯಲ್ಲಿ ಉದ್ಘಾಟಿಸಲಾಗುತ್ತದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಆಶಯ ಭಾಷಣ ಮಾಡಲಿದ್ದಾರೆ” ಎಂದು ತಿಳಿಸಿದ್ದಾರೆ.

ನಾಟಕೋತ್ಸವದಲ್ಲಿ ಬಿಜಾಪುರದ ಸ್ಪಿನ್ನಿಂಗ್ ಟ್ರೀ ಥಿಯೇಟರ್ ತಂಡ ಪ್ರಸ್ತುತಪಡಿಸಲಿರುವ ‘ಫಾರ್ ಎ ಬೈಟ್ ಆಫ್ ಫುಡ್’, ಮಂಗಳೂರು ಯಕ್ಷಮಿತ್ರರು ತಂಡದಿಂದ ‘ಕೋಟಿ ಚೆನ್ನಯ’ ಯಕ್ಷಗಾನ, ಧಾರವಾಡದ ಆಟಮಾಟ ತಂಡ ಹಾಗೂ ಮಹದೇವ ಹಡಪದ ನಿರ್ದೇಶನದ ‘ಗುಡಿಯ ನೋಡಿರಣ್ಣ’, ಸಂತ ಅಲೋಶಿಯಸ್ ಕಾಲೇಜಿನ ರಂಗ ಅಧ್ಯಯನ ಕೇಂದ್ರದ ತಂಡದಿಂದ ‘ಹ್ಯಾಂಗಾನ್’ ಕೊಂಕಣಿ ನಾಟಕ, ಕೇರಳದ ಲಿಟಲ್ ಅರ್ತ್ ಸ್ಕೂಲ್ ಆಫ್ ಥಿಯೇಟರ್ ತಂಡದಿಂದ ‘ಕುಹೂ: ಆಂತಾಲಜಿ ಆನ್ ದ ರೈಲ್ಸ್’, ನಿರ್ದಿಗಂತ ತಂಡದಿಂದ ‘ರಸೀದಿ ಟಿಕೇಟ್’, ಹಾಗೂ ‘ತಿಂಡಿಗೆ ಬಂದ ತುಂಡೇರಾಯ’ ನಾಟಕಗಳು ಪ್ರದರ್ಶನಗೊಳ್ಳಲಿವೆ” ಎಂದು ಪ್ರಕಾಶ್ ವಿವರಿಸಿದ್ದಾರೆ.

ಅಲ್ಲದೆ, ಡಾ. ಗಣನಾಥ ಎಕ್ಕಾರು ಅವರಿಂದ ‘ಬದಲಾಗುತ್ತಿರುವ ಯಕ್ಷಗಾನದ ಸ್ವರೂಪ’ ಎಂಬ ಬಗ್ಗೆ ವಿಷಯ ಮಂಡನೆ ಮಾಡಲಿದ್ದಾರೆ. ಸಂತ ಅಲೋಶಿಯಸ್ ಕಾಲೇಜು ತಂಡದಿಂದ ಕಾಲೇಜ್ ಬ್ಯಾಂಡ್ ಜ್ಯಾಮಿಂಗ್ ನಡೆಯಲಿದೆ. ಡಾ. ಮೋಹನ್ ಕುಂಟಾರ್ ಅವರು ‘ಕರಾವಳಿಯ ಭಾಷಾ ಸಂಬಂಧದ ಕೊಡುಕೊಳ್ವೆಯ ಸ್ವರೂಪ’ ವಿಷಯದಲ್ಲಿ ಮಾತನಾಡಲಿದ್ದಾರೆ. ಶಾರದಾ ಜಿ. ಬಂಗೇರ ಅವರು ಪಾಡ್ದನ ಹಾಡಲಿದ್ದು, ಐರಿನ್ ರೆಬಲ್ಲೋ ಮತ್ತು ತಂಡದಿಂದ ವೊವಿಯೊ ಕೊಂಕಣಿ ಹಾಡು ಹಾಗೂ ಪೂಜ್ಯ ಸೇಸು ಗೌಡ ಕಲಾ ಟ್ರಸ್ಟ್‌ನಿಂದ ಕುಡುಬಿ ಹಾಡುಗಳು ಪ್ರಸ್ತುತಗೊಳ್ಳಲಿವೆ. ವೆಂಕಟರಮಣ ಐತಾಳ್‌ರವರು ‘ಸ್ಥಳೀಯ ಚರಿತ್ರೆಗಳು ಮತ್ತು ಕುಸಿಯುತ್ತಿರುವ ಬಹುತ್ವದ ನೆಲೆ’ ವಿಷಯದ ಕುರಿತು ಮಾತನಾಡಲಿದ್ದಾರೆ. ಅಲ್ಲದೆ, ಕರಗ ಡೋಲು, ಕಾವ್ಯ ವಾಚನ ಸೇಋಇದಂತೆ ಹಲವಾರು ರೀತಿಯ ಕಾರ್ಯಕ್ರಮಗಳು ನಡೆಯಲಿವೆ” ಎಂದು ತಿಳಿಸಿದ್ದಾರೆ.

“ನಾಟಕೋತ್ಸವ ಸಮಾರೋಪವು ಮಾರ್ಚ್‌ 3ರ ಸಂಜೆ ನಡೆಯಲಿದ್ದು, ಸಮಾರೋಪ ಕಾರ್ಯಕ್ರಮದಲ್ಲಿ ಮಲಯಾಳಂ ನಟಿ ಪಾರ್ವತಿ ತಿರುವೊತ್ತು ಭಾವಹಿಸಲಿದ್ದಾರೆ. ಅಂದು, ನಿರ್ದಿಗಂತ ತಂಡದಿಂದ ಅಮಿತ್ ರೆಡ್ಡಿ ನಿರ್ದೇಶನದ ‘ಮೈ ಮನಗಳ ಸುಳಿಯಲ್ಲಿ’ ನಾಟಕ ಪ್ರದರ್ಶನಗೊಳ್ಳಲಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...