Homeಕರ್ನಾಟಕಮಂಗಳೂರು | ಫೆ.28ರಿಂದ ಮಾ.3ವರೆಗೆ ನಿರ್ದಿಗಂತ ನಾಟಕೋತ್ಸವ: ಪ್ರಕಾಶ್ ರಾಜ್

ಮಂಗಳೂರು | ಫೆ.28ರಿಂದ ಮಾ.3ವರೆಗೆ ನಿರ್ದಿಗಂತ ನಾಟಕೋತ್ಸವ: ಪ್ರಕಾಶ್ ರಾಜ್

- Advertisement -
- Advertisement -

ಯುವ ಮನಸ್ಸುಗಳನ್ನು ರಂಗಭೂಮಿಯತ್ತ ಸೆಳೆಯುವ ಉದ್ದೇಶದಿಂದ ತಮ್ಮ ನಿರ್ದಿಗಂತ ತಂಡವು ನಿರ್ದಿಗಂತ ನಾಟಕೋತ್ಸವ ನಡೆಸುತ್ತಿದೆ. ಈ ಬಾರಿ, ಮಂಗಳೂರಿನಲ್ಲಿ ‘ಸೌಹಾರ್ದದ ಬಳಿ; ನಮ್ಮ ಕರಾವಳಿ’ ಎಂಬ ಶೀರ್ಷಿಕೆಯಡಿ ಫೆಬ್ರವರಿ 28ರಿಂದ ಮಾರ್ಚ್‌ 3ರವರೆಗೆ ನಾಟಕೋತ್ಸವ ನಡೆಯಲಿದೆ ಎಂದು ಖ್ಯಾತ ನಟ ಪ್ರಕಾಶ್‌ ರಾಜ್ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಆವರಣದಲ್ಲಿ ನಾಟಕೋತ್ಸವ ನಡೆಯಲಿದೆ. ತುಳು, ಕೊಂಕಣಿ ಸೇರಿದಂತೆ ರಂಗಭೂಮಿ ನಿರ್ದೇಶಕರಿಂದ ರಚನೆಗೊಂಡಿರುವ 8 ನಾಟಕಗಳ ಪ್ರದರ್ಶನ ಇರಲಿದೆ. ಜೊತೆಗೆ, ವಿವಿಧ ರೀತಿಯ ಕಾರ್ಯಾಗಾರ, ವಿಚಾರಗೋಷ್ಠಿ, ಬೀದಿನಾಟಕಗಳನ್ನು ಆಯೋಜಿಸಲಾಗಿದೆ” ಎಂದು ತಿಳಿಸಿದ್ದಾರೆ.

“ನಾಟಕೋತ್ಸವವನ್ನು ಸಂತ ಅಲೋಶಿಯಸ್ ಕಾಲೇಜಿನ ಕುಲಪತಿ ರೆ.ಡಾ. ಪ್ರವೀಣ್ ಮಾರ್ಟಿಸ್ ಉಪಸ್ಥಿತಿಯಲ್ಲಿ ಉದ್ಘಾಟಿಸಲಾಗುತ್ತದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಆಶಯ ಭಾಷಣ ಮಾಡಲಿದ್ದಾರೆ” ಎಂದು ತಿಳಿಸಿದ್ದಾರೆ.

ನಾಟಕೋತ್ಸವದಲ್ಲಿ ಬಿಜಾಪುರದ ಸ್ಪಿನ್ನಿಂಗ್ ಟ್ರೀ ಥಿಯೇಟರ್ ತಂಡ ಪ್ರಸ್ತುತಪಡಿಸಲಿರುವ ‘ಫಾರ್ ಎ ಬೈಟ್ ಆಫ್ ಫುಡ್’, ಮಂಗಳೂರು ಯಕ್ಷಮಿತ್ರರು ತಂಡದಿಂದ ‘ಕೋಟಿ ಚೆನ್ನಯ’ ಯಕ್ಷಗಾನ, ಧಾರವಾಡದ ಆಟಮಾಟ ತಂಡ ಹಾಗೂ ಮಹದೇವ ಹಡಪದ ನಿರ್ದೇಶನದ ‘ಗುಡಿಯ ನೋಡಿರಣ್ಣ’, ಸಂತ ಅಲೋಶಿಯಸ್ ಕಾಲೇಜಿನ ರಂಗ ಅಧ್ಯಯನ ಕೇಂದ್ರದ ತಂಡದಿಂದ ‘ಹ್ಯಾಂಗಾನ್’ ಕೊಂಕಣಿ ನಾಟಕ, ಕೇರಳದ ಲಿಟಲ್ ಅರ್ತ್ ಸ್ಕೂಲ್ ಆಫ್ ಥಿಯೇಟರ್ ತಂಡದಿಂದ ‘ಕುಹೂ: ಆಂತಾಲಜಿ ಆನ್ ದ ರೈಲ್ಸ್’, ನಿರ್ದಿಗಂತ ತಂಡದಿಂದ ‘ರಸೀದಿ ಟಿಕೇಟ್’, ಹಾಗೂ ‘ತಿಂಡಿಗೆ ಬಂದ ತುಂಡೇರಾಯ’ ನಾಟಕಗಳು ಪ್ರದರ್ಶನಗೊಳ್ಳಲಿವೆ” ಎಂದು ಪ್ರಕಾಶ್ ವಿವರಿಸಿದ್ದಾರೆ.

ಅಲ್ಲದೆ, ಡಾ. ಗಣನಾಥ ಎಕ್ಕಾರು ಅವರಿಂದ ‘ಬದಲಾಗುತ್ತಿರುವ ಯಕ್ಷಗಾನದ ಸ್ವರೂಪ’ ಎಂಬ ಬಗ್ಗೆ ವಿಷಯ ಮಂಡನೆ ಮಾಡಲಿದ್ದಾರೆ. ಸಂತ ಅಲೋಶಿಯಸ್ ಕಾಲೇಜು ತಂಡದಿಂದ ಕಾಲೇಜ್ ಬ್ಯಾಂಡ್ ಜ್ಯಾಮಿಂಗ್ ನಡೆಯಲಿದೆ. ಡಾ. ಮೋಹನ್ ಕುಂಟಾರ್ ಅವರು ‘ಕರಾವಳಿಯ ಭಾಷಾ ಸಂಬಂಧದ ಕೊಡುಕೊಳ್ವೆಯ ಸ್ವರೂಪ’ ವಿಷಯದಲ್ಲಿ ಮಾತನಾಡಲಿದ್ದಾರೆ. ಶಾರದಾ ಜಿ. ಬಂಗೇರ ಅವರು ಪಾಡ್ದನ ಹಾಡಲಿದ್ದು, ಐರಿನ್ ರೆಬಲ್ಲೋ ಮತ್ತು ತಂಡದಿಂದ ವೊವಿಯೊ ಕೊಂಕಣಿ ಹಾಡು ಹಾಗೂ ಪೂಜ್ಯ ಸೇಸು ಗೌಡ ಕಲಾ ಟ್ರಸ್ಟ್‌ನಿಂದ ಕುಡುಬಿ ಹಾಡುಗಳು ಪ್ರಸ್ತುತಗೊಳ್ಳಲಿವೆ. ವೆಂಕಟರಮಣ ಐತಾಳ್‌ರವರು ‘ಸ್ಥಳೀಯ ಚರಿತ್ರೆಗಳು ಮತ್ತು ಕುಸಿಯುತ್ತಿರುವ ಬಹುತ್ವದ ನೆಲೆ’ ವಿಷಯದ ಕುರಿತು ಮಾತನಾಡಲಿದ್ದಾರೆ. ಅಲ್ಲದೆ, ಕರಗ ಡೋಲು, ಕಾವ್ಯ ವಾಚನ ಸೇಋಇದಂತೆ ಹಲವಾರು ರೀತಿಯ ಕಾರ್ಯಕ್ರಮಗಳು ನಡೆಯಲಿವೆ” ಎಂದು ತಿಳಿಸಿದ್ದಾರೆ.

“ನಾಟಕೋತ್ಸವ ಸಮಾರೋಪವು ಮಾರ್ಚ್‌ 3ರ ಸಂಜೆ ನಡೆಯಲಿದ್ದು, ಸಮಾರೋಪ ಕಾರ್ಯಕ್ರಮದಲ್ಲಿ ಮಲಯಾಳಂ ನಟಿ ಪಾರ್ವತಿ ತಿರುವೊತ್ತು ಭಾವಹಿಸಲಿದ್ದಾರೆ. ಅಂದು, ನಿರ್ದಿಗಂತ ತಂಡದಿಂದ ಅಮಿತ್ ರೆಡ್ಡಿ ನಿರ್ದೇಶನದ ‘ಮೈ ಮನಗಳ ಸುಳಿಯಲ್ಲಿ’ ನಾಟಕ ಪ್ರದರ್ಶನಗೊಳ್ಳಲಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...