Homeಕರ್ನಾಟಕಮಂಗಳೂರು: ಆದಿವಾಸಿ ಕೊರಗ ಜನಾಂಗದ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ಪ್ರತಿಭಟನೆ

ಮಂಗಳೂರು: ಆದಿವಾಸಿ ಕೊರಗ ಜನಾಂಗದ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ಪ್ರತಿಭಟನೆ

- Advertisement -
- Advertisement -

ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ತವರು ಗ್ರಾಮ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲ್ಲೂಕಿನ ಕೋಟತಟ್ಟುವಿನಲ್ಲಿ ಆದಿವಾಸಿ ಕೊರಗ ಸಮುದಾಯದ ಮನೆಗೆ ನುಗ್ಗಿ ಅಮಾನವೀಯ ಹಲ್ಲೆ, ದೌರ್ಜನ್ಯ ನಡೆಸಿದ ಪೊಲೀಸರ ವಿರುದ್ಧ ತೀವ್ರ ಖಂಡನೆ ವ್ಯಕ್ತವಾಗಿದೆ. ಕೃತ್ಯ ಖಂಡಿಸಿ ಗುರುವಾರ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ, ದಲಿತ ಹಕ್ಕುಗಳ ಸಮಿತಿ, ಡಿವೈಎಫ್‌ಐ ವತಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆ ನಡೆಯಿತು.

ಕ್ಲಾಕ್ ಟವರ್ ಬಳಿ ಜರುಗಿದ ಈ ಪ್ರತಿಭಟನಾ ಸಭೆಯಲ್ಲಿ ಮಾತಾಡಿದ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ರಾಜ್ಯ ಸಹ ಸಂಚಾಲಕ ಡಾ.ಕೃಷ್ಣಪ್ಪ ಕೊಂಚಾಡಿ, “ಕೊರಗ ಜನಾಂಗದವರ ಮನೆಗೆ ನುಗ್ಗಿ ದಾಂಧಲೆ ಮಾಡಿದ ಪೊಲೀಸರನ್ನು ಬಂದಿಸಿ ಜೈಲಿಗಟ್ಟುವುದು ಸಹಜ ನ್ಯಾಯವಾಗಿತ್ತು. ಆದರೆ ದೌರ್ಜನ್ಯಕ್ಕೆ ಒಳಗಾದವರ ಮೇಲೆಯೆ ಪ್ರಕರಣ ದಾಖಲಿಸಲಾಗಿದೆ. ಇದ್ಯಾವ ನ್ಯಾಯ” ಎಂದು ಪ್ರಶ್ನಸಿದ್ದಾರೆ.

ಕೊರಗ ಜನಾಂಗ ಇಲ್ಲಿಯ ಮೂಲ ನಿವಾಸಿಗಳು. ಈ ಸಮುದಾಯದ ಜನಸಂಖ್ಯೆ ವರ್ಷದಿಂದ ವರ್ಷಕ್ಕೆ ಇಳಿಕೆಯಾಗುತ್ತಿದೆ. ಕೊರಗರನ್ನು ಮುಖ್ಯವಾಹಿನಿಗೆ ತರಬೇಕಾದ ಪೊಲೀಸರೆ ದಬ್ಬಾಳಿಕೆ ಮಾಡಿರುವುದು ಅಕ್ಷಮ್ಯ ಅಪರಾಧ. ಮೂಲನಿವಾಸಿಗಳ ಮೇಲೆ ಲಾಠಿ ಬೀಸಿದ ತಪ್ಪಿತಸ್ಥ ಪೊಲೀಸರನ್ನು ಅಮಾನತು ಮಾಡಿದರೆ ಅಥವಾ ವರ್ಗಾಯಿಸಿದರೆ ಸಾಲದು. ಆ ಪೊಲೀಸರನ್ನು ಬಂಧಿಸಿ ಜೈಲಿಗೆ ಹಾಕಬೇಕು ಕಠಿಣ ಶಿಕ್ಷಗೊಳಪಡಿಸಬೇಕು ಎಂದು ಕೃಷ್ಣಪ್ಪ ಕೊಂಚಾಡಿ ಒತ್ತಾಯಿಸಿದರು.

ಡಿಜೆಯಿಂದ ಸಾರ್ವಜನಿಕರ ನಿದ್ದೆಗೆ ಭಂಗ ಬರುವುದಾದರೆ ಜಿಲ್ಲೆಯಲ್ಲಿ ಇಡೀ ವರ್ಷ ರಾತ್ರಿ ವೇಳೆಯಲ್ಲಿ ನಡೆಯುವ ಯಕ್ಷಗಾನ, ಭಜನೆ ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮದಿಂದ ಜನರ ನಿದ್ದೆ ಹಾಳಾಗುದಿಲ್ಲವೆ? ಆ ಬಗ್ಗೆ ಪೊಲೀಸರು ಎಂಥ ಕ್ರಮ ಕೈಗೊಂಡಿದ್ದಾರೆ ಎಂದು ಕೃಷ್ಣಪ್ಪ ಪ್ರಶ್ನಿಸಿದ್ದಾರೆ.

ಸಚಿವ ಕೋಟ ಶ್ರೀನಿವಾಸ ಪೂಜಾರಿ ದೌರ್ಜನ್ಯಕ್ಕೆ ಒಳಗಾದ ವರನ ಮದುವೆಯಲ್ಲಿ ಪಾಲ್ಗೊಂಡು ಮೊಸಳೆ ಕಣ್ಣೀರು ಸುರಿಸಿದ್ದಾರೆ. ಸಚಿವರಿಗೆ ನಿಜವಾಗಿಯೂ ಕೊರಗ ಜನಾಂಗದ ಮೇಲೆ ಕಾಳಜಿ, ಪ್ರೀತಿಯಿದ್ದರೆ ವರನ ಸಮೇತ 7 ಜನ ಕೊರಗರ ಮೇಲೆ ಪೋಲೀಸರು ಹಾಕಿರುವ ಸುಳ್ಳು ಪ್ರಕರಣ ತಕ್ಷಣ ವಾಪಸ್ ಪಡೆಯಲು ಕ್ರಮ ಕೈಗೊಳ್ಳಬೇಕೆಂದು ಕೃಷ್ಣಪ್ಪ ಆಗ್ರಹಿಸಿದರು.


ಇದನ್ನೂ ಓದಿ: ಉಡುಪಿ: ಕೊರಗ ಸಮುದಾಯದ ಮೆಹಂದಿ ಕಾರ್ಯಕ್ರಮಕ್ಕೆ ನುಗ್ಗಿ ದೌರ್ಜನ್ಯ ಎಸಗಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...