Homeಕರ್ನಾಟಕಮಂಗಳೂರು: ’ಸರ್ಕಾರಿ ಆಸ್ಪತ್ರೆ ಉಳಿಸಿ’ ಸಮಿತಿಯಿಂದ ಸಾಮೂಹಿಕ ಧರಣಿ!

ಮಂಗಳೂರು: ’ಸರ್ಕಾರಿ ಆಸ್ಪತ್ರೆ ಉಳಿಸಿ’ ಸಮಿತಿಯಿಂದ ಸಾಮೂಹಿಕ ಧರಣಿ!

ಆರೋಗ್ಯ ಪ್ರತಿಯೊಬ್ಬ ಪ್ರಜೆಯ ಹಕ್ಕು” ಎಂಬ ಸಂವಿಧಾನದ ಆಶಯಗಳು ಈಗ ಕಾಗದದಲ್ಲಷ್ಟೇ ಉಳಿದಿದೆ. ಸರಕಾರಿ ಆಸ್ಪತ್ರೆಗಳನ್ನು ಮುಚ್ಚಲಾಗುತ್ತಿದೆ, ಅಥವಾ ದುರ್ಬಲಗೊಳಿಸಲಾಗುತ್ತಿದೆ.

- Advertisement -
- Advertisement -

ದೇಶದಲ್ಲಿ ಎಲ್ಲವನ್ನೂ ಖಾಸಗೀಕರಣಕ್ಕೆ ಒಳಪಡಿಸುತ್ತಿರುವ ಇಂದಿನ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆ ಮತ್ತು ಸರ್ಕಾರೀ ವೈದ್ಯಕೀಯ ಕಾಲೇಜುಗಳೂ ಸಹ ಖಾಸಗೀಕರಣದ ಬಿರುಗಾಳಿಗೆ ಸಿಲುಕಿ ನಿರ್ಣಾಮವಾಗುತ್ತಿವೆ. ಇದನ್ನು ಆಳುವ ಸರ್ಕಾರಗಳು ಉದ್ದೇಶಪೂರ್ವಕವಾಗಿಯೇ ಮಾಡುತ್ತಿವೆ. ಪ್ರಭುತ್ವಕ್ಕೆ ಎಂದಿಗೂ ಜನಸಾಮಾನ್ಯರ ಚಿಂತೆಯಿಲ್ಲ ಎಂಬುದನ್ನು ಇಂತಹ ಪ್ರಕ್ರಿಯೆಗಳ ಮೂಲಕ ಆಗಾಗ ಸಾಬೀತುಪಡಿಸುತ್ತಲೇ ಇರುತ್ತವೆ.

ಇದರ ವಿರುದ್ಧ ಇಂದಿನ ನಾಗರೀಕ ಸಮಾಜ ಪ್ರತಿಭಟಿಸದಿದ್ದರೆ ಮಧ್ಯಮ ಮತ್ತು ಕೆಳವರ್ಗಗಳು ಸಹಜ ಬದುಕು ನಡೆಸಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಇಂದು ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿ ಎದುರು ‘ಸರ್ಕಾರಿ ಆಸ್ಪತ್ರೆ ಉಳಿಸಿ ಹೋರಾಟ ಸಮಿತಿ’ಯಿಂದ ಸಾಮೂಹಿಕ ಧರಣಿಯನ್ನು ಹಮ್ಮಿಕೊಳ್ಳಲಾಗಿತ್ತು.

ಮೊದಲ ಹಂತದಲ್ಲಿ ಜಿಲ್ಲೆಯ ಎಲ್ಲಾ ಶಾಸಕರ ಕಚೇರಿಯ ಮುಂಭಾಗ ಸಾಮೂಹಿಕ ಧರಣಿ ನಡೆಸಲು ನಿರ್ಧರಿಸಲಾಗಿದೆ. ಅದರಂತೆ ಮಂಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕರ ಕಚೇರಿ ಮುಂಭಾಗ (ತೊಕ್ಕೊಟ್ಟು ಬಸ್‌ನಿಲ್ದಾಣ) ಸಾಮೂಹಿಕ ಧರಣಿ ಸತ್ಯಾಗ್ರಹವನ್ನು ಜನಪರ ಸಂಘಟನೆಗಳು, ಸಾಮಾಜಿಕ ಕಾರ್ಯಕರ್ತರ ವೇದಿಕೆಯಾಗಿರುವ ಸರಕಾರಿ ಆಸ್ಪತ್ರೆ ಉಳಿಸಿ ಹೋರಾಟ ಸಮಿತಿ, ದಕ್ಷಿಣ ಕನ್ನಡ ಇದರ ವತಿಯಿಂದ ಆಯೋಜಿಸಲಾಗಿದೆ.

“ಆರೋಗ್ಯ ಇಲ್ಲದಿದ್ದರೆ ಬದುಕಿಲ್ಲ. ಇಂದಿನ ದಿನಮಾನದಲ್ಲಿ ಪ್ರತಿಯೊಬ್ಬ ನಾಗರಿಕನೂ ಆರೋಗ್ಯದ ಚಿಕಿತ್ಸೆಯ ಕುರಿತು ಚಿಂತಿತನಾಗಿದ್ದಾನೆ. ಅನಾರೋಗ್ಯ ಕಾಡಿದರೆ ಚಿಕಿತ್ಸೆ ಪಡೆಯುವುದು ಹೇಗೆ? ಎಂದು ಪ್ರತಿಯೊಬ್ಬರೂ ಆತಂಕಗೊಳ್ಳುವಂತಾಗಿದೆ. ಈ ರೀತಿಯ ಆತಂಕಕ್ಕೆ ಕಾರಣ ನಮ್ಮ ಸರಕಾರಗಳು ಆರೋಗ್ಯ ಕ್ಷೇತ್ರವನ್ನು ವ್ಯಾಪಾರೀಕರಣಕ್ಕೆ ಒಡ್ಡಿರುವುದು” ಎಂದು ಹೋರಾಟಗಾರರು ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನೂ ಓದಿ: ಮುತ್ತಯ್ಯ ಮುರುಳೀಧರನ್ ಬಯೋಪಿಕ್: 800 ಚಿತ್ರದ ನಿರ್ದೇಶಕರಿಗೆ ಜೀವ ಬೆದರಿಕೆ!

“ಆರೋಗ್ಯ ಪ್ರತಿಯೊಬ್ಬ ಪ್ರಜೆಯ ಹಕ್ಕು” ಎಂಬ ಸಂವಿಧಾನದ ಆಶಯಗಳು ಈಗ ಕಾಗದದಲ್ಲಷ್ಟೇ ಉಳಿದಿದೆ. ಸರಕಾರಿ ಆಸ್ಪತ್ರೆಗಳನ್ನು ಮುಚ್ಚಲಾಗುತ್ತಿದೆ ಅಥವಾ ದುರ್ಬಲಗೊಳಿಸಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳ ಪರ ಆರೋಗ್ಯ ನೀತಿಗಳನ್ನು ರೂಪಿಸಲಾಗುತ್ತಿದೆ. ಆಯುಷ್ಮಾನ್ ಸಹಿತ ಸರಕಾರಿ ಆರೋಗ್ಯ ವಿಮೆಗಳು ಖಾಸಗಿ ಆರೋಗ್ಯ ವ್ಯಾಪಾರಿಗಳ ಖಜಾನೆ ತುಂಬುತ್ತಿವೆ.

ಜನಸಂಖ್ಯಾವಾರು ರಾಜ್ಯ ಸರಕಾರದ ನಿಯಮಗಳ ಪ್ರಕಾರವೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕನಿಷ್ಟ 120 ಪ್ರಾಥಮಿಕ ಆರೋಗ್ಯ ಕೇಂದ್ರ, 40 ಹಾಸಿಗೆಗಳ 32 ಸಮುದಾಯ ಆಸ್ಪತ್ರೆ, 100 ಹಾಸಿಗೆಗಳ 8 ತಾಲೂಕು ಆಸ್ಪತ್ರೆ ಇರಬೇಕು. ಆದರೆ ಈಗ 80 ಪ್ರಾಥಮಿಕ ಆರೋಗ್ಯ ಕೇಂದ್ರ 7 ಸಮುದಾಯ ಆಸ್ಪತ್ರೆ, 4 ತಾಲೂಕು ಆಸ್ಪತ್ರೆಗಳು ಮಾತ್ರ ಇದೆ. ಇರುವ ಆಸ್ಪತ್ರೆಗಳಲ್ಲೂ ಅರ್ಧದಷ್ಟು ವೈದ್ಯರ, ಸಿಬ್ಬಂದಿಗಳು ಸ್ಥಾನ ಖಾಲಿ ಬಿದ್ದಿದೆ. ತಜ್ಞ ವೈದ್ಯರಂತೂ ಇಲ್ಲವೇ ಇಲ್ಲ ಅನ್ನುವಷ್ಟು ವಿರಳ. ಜಿಲ್ಲಾಸ್ಪತ್ರೆ ವೆನ್ಲಾಕ್ ಶತಮಾನ ಕಳೆದರೂ ಅದೇ ಹಳೆಯ ಸ್ಥಿತಿಯಲ್ಲಿದೆ. ಇದು ಜನಸಾಮಾನ್ಯರ ಆರೋಗ್ಯದ ಸ್ಥಿತಿಯ ಮೇಲೆ ಗಂಭೀರ ಪರಿಣಾಮ ಬೀರಿದೆ.

ಇದನ್ನೂ ಓದಿ: ಪ್ರತ್ಯೇಕ ಜಾಹೀರಾತು: ಬಿಹಾರದಲ್ಲಿ ಜೆಡಿಯು-ಬಿಜೆಪಿ ನಡುವಿನ ಮುನಿಸಿಗೆ ತೇಪೆ?

“ಖಾಸಗಿ ಆಸ್ಪತ್ರೆಗಳ, ಮೆಡಿಕಲ್ ಕಾಲೇಜುಗಳ ಲಂಗುಲಗಾಮಿಲ್ಲದ ವ್ಯಾಪಾರಕ್ಕೆ ಅನುವು ಮಾಡಿಕೊಟ್ಟಿದೆ. 8 ಖಾಸಗಿ ಮೆಡಿಕಲ್ ಕಾಲೇಜುಗಳಿರುವ ನಮ್ಮ ಜಿಲ್ಲೆಯಲ್ಲಿ ಒಂದು ಸರಕಾರಿ ಮೆಡಿಕಲ್ ಕಾಲೇಜು ಇಲ್ಲದಿರುವುದು ನಮ್ಮ ಜನಪ್ರತಿನಿಧಿಗಳ ರಾಜಕೀಯ ಇಚ್ಚಾಶಕ್ತಿಯ ಕೊರತೆಯನ್ನು ಎತ್ತಿ ತೋರಿಸುತ್ತದೆ” ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳಿದರು.

ಖಾಸಗಿ ಮೆಡಿಕಲ್ ಕಾಲೇಜುಗಳ ಆಡುಂಬೊಲವಾಗಿರುವ ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರದಲ್ಲಿ ಸರಕಾರಿ ಆಸ್ಪತ್ರೆಗಳ ಸ್ಥಿತಿ ಶೋಚನೀಯ. ನಿಯಮಗಳ ಪ್ರಕಾರ 15 ಪ್ರಾಥಮಿಕ ಆರೋಗ್ಯ ಕೇಂದ್ರ ಇರಬೇಕಾದಲ್ಲಿ 8 ಪ್ರಾಥಮಿಕ ಆರೋಗ್ಯ ಕೇಂದ್ರ ಮಾತ್ರ ಇದೆ. 40 ಹಾಸಿಗೆಗಳ 4 ಸಮುದಾಯ ಇರಬೇಕಾದ ಆಸ್ಪತ್ರೆಯಲ್ಲಿ ಒಂದೇ ಒಂದು ಸಮುದಾಯ ಆಸ್ಪತ್ರೆಯೂ ಕ್ಷೇತ್ರದಲ್ಲಿ ಇಲ್ಲ. ಉಳ್ಳಾಲದಲ್ಲಿ ಸುಸಜ್ಜಿತ ಕಟ್ಟಡ ಕಟ್ಟಲಾಗಿದ್ದರೂ ಸಮುದಾಯ ಆಸ್ಪತ್ರೆಯಾಗಿ ಇನ್ನೂ ಮೇಲ್ದರ್ಜೆಗೆ ಏರಿಸಲಾಗಿಲ್ಲ. ಉಳ್ಳಾಲ ತಾಲೂಕಾಗಿ ಘೋಷಿಸಲ್ಪಟ್ಟಿದ್ದರೂ 100 ಹಾಸಿಗೆಗಳ ತಾಲೂಕು ಆಸ್ಪತ್ರ ಸ್ಥಾಪನೆ ಕುರಿತು ಸಣ್ಣ ಚರ್ಚೆಯೂ ಸರಕಾರದ ಮಟ್ಟದಲ್ಲಿ ನಡೆದಿಲ್ಲ.

ಇದರಿಂದಾಗಿ ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಗಳು ಆಡಿದ್ದೇ ಆಟ ಎಂಬಂತಾಗಿದೆ. ಬಡರೋಗಿಗಳು ಖಾಸಗಿ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ಕಲಿಕೆಯ ಸಾಧನದಂತಾಗಿ ಹೋಗಿದ್ದಾರೆ. ಈ ಹಿನ್ನಲೆಯಲ್ಲಿ, ಸರಕಾರದ ವೈದ್ಯಕೀಯ ಅಧಿನಿಯಮದಂತೆ ಮಂಗಳೂರು (ಉಳ್ಳಾಲ) ವಿಧಾನ ಸಭಾ ಕ್ಷೇತ್ರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ, ತಾಲೂಕು ಆಸ್ಪತ್ರೆಗಳು ಸ್ಥಾಪನೆಗೊಳ್ಳಬೇಕು. ಜಿಲ್ಲೆಯಲ್ಲಿ ಒಂದು ಸರಕಾರಿ ಮೆಡಿಕಲ್ ಕಾಲೇಜು, ಕ್ಯಾನ್ಸರ್ ಆಸ್ಪತ್ರೆ ಸ್ಥಾಪಿಸಬೇಕು. ವೆನ್‌ಲಾಕನ್ನು ಪೂರ್ಣ ಪ್ರಮಾಣದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಬೇಕು ಎಂದು ಜನಾಂದೋಲನ ರೂಪಿಸಲು ನಿರ್ಧರಿಸಲಾಗಿದೆ ಎಂದು ಹೋರಾಟಗಾರರು ಹೇಳಿದರು.


ಇದನ್ನೂ ಓದಿ: ಸುಳ್ಳು ಹೇಳುವುದರಲ್ಲಿ ಪ್ರಧಾನಿಗೆ ಪೈಪೋಟಿ ನೀಡಲಾರೆವು; ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...