Homeಕರ್ನಾಟಕಮಂಗಳೂರು: ’ಸರ್ಕಾರಿ ಆಸ್ಪತ್ರೆ ಉಳಿಸಿ’ ಸಮಿತಿಯಿಂದ ಸಾಮೂಹಿಕ ಧರಣಿ!

ಮಂಗಳೂರು: ’ಸರ್ಕಾರಿ ಆಸ್ಪತ್ರೆ ಉಳಿಸಿ’ ಸಮಿತಿಯಿಂದ ಸಾಮೂಹಿಕ ಧರಣಿ!

ಆರೋಗ್ಯ ಪ್ರತಿಯೊಬ್ಬ ಪ್ರಜೆಯ ಹಕ್ಕು” ಎಂಬ ಸಂವಿಧಾನದ ಆಶಯಗಳು ಈಗ ಕಾಗದದಲ್ಲಷ್ಟೇ ಉಳಿದಿದೆ. ಸರಕಾರಿ ಆಸ್ಪತ್ರೆಗಳನ್ನು ಮುಚ್ಚಲಾಗುತ್ತಿದೆ, ಅಥವಾ ದುರ್ಬಲಗೊಳಿಸಲಾಗುತ್ತಿದೆ.

- Advertisement -
- Advertisement -

ದೇಶದಲ್ಲಿ ಎಲ್ಲವನ್ನೂ ಖಾಸಗೀಕರಣಕ್ಕೆ ಒಳಪಡಿಸುತ್ತಿರುವ ಇಂದಿನ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆ ಮತ್ತು ಸರ್ಕಾರೀ ವೈದ್ಯಕೀಯ ಕಾಲೇಜುಗಳೂ ಸಹ ಖಾಸಗೀಕರಣದ ಬಿರುಗಾಳಿಗೆ ಸಿಲುಕಿ ನಿರ್ಣಾಮವಾಗುತ್ತಿವೆ. ಇದನ್ನು ಆಳುವ ಸರ್ಕಾರಗಳು ಉದ್ದೇಶಪೂರ್ವಕವಾಗಿಯೇ ಮಾಡುತ್ತಿವೆ. ಪ್ರಭುತ್ವಕ್ಕೆ ಎಂದಿಗೂ ಜನಸಾಮಾನ್ಯರ ಚಿಂತೆಯಿಲ್ಲ ಎಂಬುದನ್ನು ಇಂತಹ ಪ್ರಕ್ರಿಯೆಗಳ ಮೂಲಕ ಆಗಾಗ ಸಾಬೀತುಪಡಿಸುತ್ತಲೇ ಇರುತ್ತವೆ.

ಇದರ ವಿರುದ್ಧ ಇಂದಿನ ನಾಗರೀಕ ಸಮಾಜ ಪ್ರತಿಭಟಿಸದಿದ್ದರೆ ಮಧ್ಯಮ ಮತ್ತು ಕೆಳವರ್ಗಗಳು ಸಹಜ ಬದುಕು ನಡೆಸಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಇಂದು ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿ ಎದುರು ‘ಸರ್ಕಾರಿ ಆಸ್ಪತ್ರೆ ಉಳಿಸಿ ಹೋರಾಟ ಸಮಿತಿ’ಯಿಂದ ಸಾಮೂಹಿಕ ಧರಣಿಯನ್ನು ಹಮ್ಮಿಕೊಳ್ಳಲಾಗಿತ್ತು.

ಮೊದಲ ಹಂತದಲ್ಲಿ ಜಿಲ್ಲೆಯ ಎಲ್ಲಾ ಶಾಸಕರ ಕಚೇರಿಯ ಮುಂಭಾಗ ಸಾಮೂಹಿಕ ಧರಣಿ ನಡೆಸಲು ನಿರ್ಧರಿಸಲಾಗಿದೆ. ಅದರಂತೆ ಮಂಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕರ ಕಚೇರಿ ಮುಂಭಾಗ (ತೊಕ್ಕೊಟ್ಟು ಬಸ್‌ನಿಲ್ದಾಣ) ಸಾಮೂಹಿಕ ಧರಣಿ ಸತ್ಯಾಗ್ರಹವನ್ನು ಜನಪರ ಸಂಘಟನೆಗಳು, ಸಾಮಾಜಿಕ ಕಾರ್ಯಕರ್ತರ ವೇದಿಕೆಯಾಗಿರುವ ಸರಕಾರಿ ಆಸ್ಪತ್ರೆ ಉಳಿಸಿ ಹೋರಾಟ ಸಮಿತಿ, ದಕ್ಷಿಣ ಕನ್ನಡ ಇದರ ವತಿಯಿಂದ ಆಯೋಜಿಸಲಾಗಿದೆ.

“ಆರೋಗ್ಯ ಇಲ್ಲದಿದ್ದರೆ ಬದುಕಿಲ್ಲ. ಇಂದಿನ ದಿನಮಾನದಲ್ಲಿ ಪ್ರತಿಯೊಬ್ಬ ನಾಗರಿಕನೂ ಆರೋಗ್ಯದ ಚಿಕಿತ್ಸೆಯ ಕುರಿತು ಚಿಂತಿತನಾಗಿದ್ದಾನೆ. ಅನಾರೋಗ್ಯ ಕಾಡಿದರೆ ಚಿಕಿತ್ಸೆ ಪಡೆಯುವುದು ಹೇಗೆ? ಎಂದು ಪ್ರತಿಯೊಬ್ಬರೂ ಆತಂಕಗೊಳ್ಳುವಂತಾಗಿದೆ. ಈ ರೀತಿಯ ಆತಂಕಕ್ಕೆ ಕಾರಣ ನಮ್ಮ ಸರಕಾರಗಳು ಆರೋಗ್ಯ ಕ್ಷೇತ್ರವನ್ನು ವ್ಯಾಪಾರೀಕರಣಕ್ಕೆ ಒಡ್ಡಿರುವುದು” ಎಂದು ಹೋರಾಟಗಾರರು ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನೂ ಓದಿ: ಮುತ್ತಯ್ಯ ಮುರುಳೀಧರನ್ ಬಯೋಪಿಕ್: 800 ಚಿತ್ರದ ನಿರ್ದೇಶಕರಿಗೆ ಜೀವ ಬೆದರಿಕೆ!

“ಆರೋಗ್ಯ ಪ್ರತಿಯೊಬ್ಬ ಪ್ರಜೆಯ ಹಕ್ಕು” ಎಂಬ ಸಂವಿಧಾನದ ಆಶಯಗಳು ಈಗ ಕಾಗದದಲ್ಲಷ್ಟೇ ಉಳಿದಿದೆ. ಸರಕಾರಿ ಆಸ್ಪತ್ರೆಗಳನ್ನು ಮುಚ್ಚಲಾಗುತ್ತಿದೆ ಅಥವಾ ದುರ್ಬಲಗೊಳಿಸಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳ ಪರ ಆರೋಗ್ಯ ನೀತಿಗಳನ್ನು ರೂಪಿಸಲಾಗುತ್ತಿದೆ. ಆಯುಷ್ಮಾನ್ ಸಹಿತ ಸರಕಾರಿ ಆರೋಗ್ಯ ವಿಮೆಗಳು ಖಾಸಗಿ ಆರೋಗ್ಯ ವ್ಯಾಪಾರಿಗಳ ಖಜಾನೆ ತುಂಬುತ್ತಿವೆ.

ಜನಸಂಖ್ಯಾವಾರು ರಾಜ್ಯ ಸರಕಾರದ ನಿಯಮಗಳ ಪ್ರಕಾರವೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕನಿಷ್ಟ 120 ಪ್ರಾಥಮಿಕ ಆರೋಗ್ಯ ಕೇಂದ್ರ, 40 ಹಾಸಿಗೆಗಳ 32 ಸಮುದಾಯ ಆಸ್ಪತ್ರೆ, 100 ಹಾಸಿಗೆಗಳ 8 ತಾಲೂಕು ಆಸ್ಪತ್ರೆ ಇರಬೇಕು. ಆದರೆ ಈಗ 80 ಪ್ರಾಥಮಿಕ ಆರೋಗ್ಯ ಕೇಂದ್ರ 7 ಸಮುದಾಯ ಆಸ್ಪತ್ರೆ, 4 ತಾಲೂಕು ಆಸ್ಪತ್ರೆಗಳು ಮಾತ್ರ ಇದೆ. ಇರುವ ಆಸ್ಪತ್ರೆಗಳಲ್ಲೂ ಅರ್ಧದಷ್ಟು ವೈದ್ಯರ, ಸಿಬ್ಬಂದಿಗಳು ಸ್ಥಾನ ಖಾಲಿ ಬಿದ್ದಿದೆ. ತಜ್ಞ ವೈದ್ಯರಂತೂ ಇಲ್ಲವೇ ಇಲ್ಲ ಅನ್ನುವಷ್ಟು ವಿರಳ. ಜಿಲ್ಲಾಸ್ಪತ್ರೆ ವೆನ್ಲಾಕ್ ಶತಮಾನ ಕಳೆದರೂ ಅದೇ ಹಳೆಯ ಸ್ಥಿತಿಯಲ್ಲಿದೆ. ಇದು ಜನಸಾಮಾನ್ಯರ ಆರೋಗ್ಯದ ಸ್ಥಿತಿಯ ಮೇಲೆ ಗಂಭೀರ ಪರಿಣಾಮ ಬೀರಿದೆ.

ಇದನ್ನೂ ಓದಿ: ಪ್ರತ್ಯೇಕ ಜಾಹೀರಾತು: ಬಿಹಾರದಲ್ಲಿ ಜೆಡಿಯು-ಬಿಜೆಪಿ ನಡುವಿನ ಮುನಿಸಿಗೆ ತೇಪೆ?

“ಖಾಸಗಿ ಆಸ್ಪತ್ರೆಗಳ, ಮೆಡಿಕಲ್ ಕಾಲೇಜುಗಳ ಲಂಗುಲಗಾಮಿಲ್ಲದ ವ್ಯಾಪಾರಕ್ಕೆ ಅನುವು ಮಾಡಿಕೊಟ್ಟಿದೆ. 8 ಖಾಸಗಿ ಮೆಡಿಕಲ್ ಕಾಲೇಜುಗಳಿರುವ ನಮ್ಮ ಜಿಲ್ಲೆಯಲ್ಲಿ ಒಂದು ಸರಕಾರಿ ಮೆಡಿಕಲ್ ಕಾಲೇಜು ಇಲ್ಲದಿರುವುದು ನಮ್ಮ ಜನಪ್ರತಿನಿಧಿಗಳ ರಾಜಕೀಯ ಇಚ್ಚಾಶಕ್ತಿಯ ಕೊರತೆಯನ್ನು ಎತ್ತಿ ತೋರಿಸುತ್ತದೆ” ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳಿದರು.

ಖಾಸಗಿ ಮೆಡಿಕಲ್ ಕಾಲೇಜುಗಳ ಆಡುಂಬೊಲವಾಗಿರುವ ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರದಲ್ಲಿ ಸರಕಾರಿ ಆಸ್ಪತ್ರೆಗಳ ಸ್ಥಿತಿ ಶೋಚನೀಯ. ನಿಯಮಗಳ ಪ್ರಕಾರ 15 ಪ್ರಾಥಮಿಕ ಆರೋಗ್ಯ ಕೇಂದ್ರ ಇರಬೇಕಾದಲ್ಲಿ 8 ಪ್ರಾಥಮಿಕ ಆರೋಗ್ಯ ಕೇಂದ್ರ ಮಾತ್ರ ಇದೆ. 40 ಹಾಸಿಗೆಗಳ 4 ಸಮುದಾಯ ಇರಬೇಕಾದ ಆಸ್ಪತ್ರೆಯಲ್ಲಿ ಒಂದೇ ಒಂದು ಸಮುದಾಯ ಆಸ್ಪತ್ರೆಯೂ ಕ್ಷೇತ್ರದಲ್ಲಿ ಇಲ್ಲ. ಉಳ್ಳಾಲದಲ್ಲಿ ಸುಸಜ್ಜಿತ ಕಟ್ಟಡ ಕಟ್ಟಲಾಗಿದ್ದರೂ ಸಮುದಾಯ ಆಸ್ಪತ್ರೆಯಾಗಿ ಇನ್ನೂ ಮೇಲ್ದರ್ಜೆಗೆ ಏರಿಸಲಾಗಿಲ್ಲ. ಉಳ್ಳಾಲ ತಾಲೂಕಾಗಿ ಘೋಷಿಸಲ್ಪಟ್ಟಿದ್ದರೂ 100 ಹಾಸಿಗೆಗಳ ತಾಲೂಕು ಆಸ್ಪತ್ರ ಸ್ಥಾಪನೆ ಕುರಿತು ಸಣ್ಣ ಚರ್ಚೆಯೂ ಸರಕಾರದ ಮಟ್ಟದಲ್ಲಿ ನಡೆದಿಲ್ಲ.

ಇದರಿಂದಾಗಿ ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಗಳು ಆಡಿದ್ದೇ ಆಟ ಎಂಬಂತಾಗಿದೆ. ಬಡರೋಗಿಗಳು ಖಾಸಗಿ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ಕಲಿಕೆಯ ಸಾಧನದಂತಾಗಿ ಹೋಗಿದ್ದಾರೆ. ಈ ಹಿನ್ನಲೆಯಲ್ಲಿ, ಸರಕಾರದ ವೈದ್ಯಕೀಯ ಅಧಿನಿಯಮದಂತೆ ಮಂಗಳೂರು (ಉಳ್ಳಾಲ) ವಿಧಾನ ಸಭಾ ಕ್ಷೇತ್ರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ, ತಾಲೂಕು ಆಸ್ಪತ್ರೆಗಳು ಸ್ಥಾಪನೆಗೊಳ್ಳಬೇಕು. ಜಿಲ್ಲೆಯಲ್ಲಿ ಒಂದು ಸರಕಾರಿ ಮೆಡಿಕಲ್ ಕಾಲೇಜು, ಕ್ಯಾನ್ಸರ್ ಆಸ್ಪತ್ರೆ ಸ್ಥಾಪಿಸಬೇಕು. ವೆನ್‌ಲಾಕನ್ನು ಪೂರ್ಣ ಪ್ರಮಾಣದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಬೇಕು ಎಂದು ಜನಾಂದೋಲನ ರೂಪಿಸಲು ನಿರ್ಧರಿಸಲಾಗಿದೆ ಎಂದು ಹೋರಾಟಗಾರರು ಹೇಳಿದರು.


ಇದನ್ನೂ ಓದಿ: ಸುಳ್ಳು ಹೇಳುವುದರಲ್ಲಿ ಪ್ರಧಾನಿಗೆ ಪೈಪೋಟಿ ನೀಡಲಾರೆವು; ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...