Homeಕರ್ನಾಟಕಮಂಗಳೂರು: ’ಸರ್ಕಾರಿ ಆಸ್ಪತ್ರೆ ಉಳಿಸಿ’ ಸಮಿತಿಯಿಂದ ಸಾಮೂಹಿಕ ಧರಣಿ!

ಮಂಗಳೂರು: ’ಸರ್ಕಾರಿ ಆಸ್ಪತ್ರೆ ಉಳಿಸಿ’ ಸಮಿತಿಯಿಂದ ಸಾಮೂಹಿಕ ಧರಣಿ!

ಆರೋಗ್ಯ ಪ್ರತಿಯೊಬ್ಬ ಪ್ರಜೆಯ ಹಕ್ಕು” ಎಂಬ ಸಂವಿಧಾನದ ಆಶಯಗಳು ಈಗ ಕಾಗದದಲ್ಲಷ್ಟೇ ಉಳಿದಿದೆ. ಸರಕಾರಿ ಆಸ್ಪತ್ರೆಗಳನ್ನು ಮುಚ್ಚಲಾಗುತ್ತಿದೆ, ಅಥವಾ ದುರ್ಬಲಗೊಳಿಸಲಾಗುತ್ತಿದೆ.

- Advertisement -
- Advertisement -

ದೇಶದಲ್ಲಿ ಎಲ್ಲವನ್ನೂ ಖಾಸಗೀಕರಣಕ್ಕೆ ಒಳಪಡಿಸುತ್ತಿರುವ ಇಂದಿನ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆ ಮತ್ತು ಸರ್ಕಾರೀ ವೈದ್ಯಕೀಯ ಕಾಲೇಜುಗಳೂ ಸಹ ಖಾಸಗೀಕರಣದ ಬಿರುಗಾಳಿಗೆ ಸಿಲುಕಿ ನಿರ್ಣಾಮವಾಗುತ್ತಿವೆ. ಇದನ್ನು ಆಳುವ ಸರ್ಕಾರಗಳು ಉದ್ದೇಶಪೂರ್ವಕವಾಗಿಯೇ ಮಾಡುತ್ತಿವೆ. ಪ್ರಭುತ್ವಕ್ಕೆ ಎಂದಿಗೂ ಜನಸಾಮಾನ್ಯರ ಚಿಂತೆಯಿಲ್ಲ ಎಂಬುದನ್ನು ಇಂತಹ ಪ್ರಕ್ರಿಯೆಗಳ ಮೂಲಕ ಆಗಾಗ ಸಾಬೀತುಪಡಿಸುತ್ತಲೇ ಇರುತ್ತವೆ.

ಇದರ ವಿರುದ್ಧ ಇಂದಿನ ನಾಗರೀಕ ಸಮಾಜ ಪ್ರತಿಭಟಿಸದಿದ್ದರೆ ಮಧ್ಯಮ ಮತ್ತು ಕೆಳವರ್ಗಗಳು ಸಹಜ ಬದುಕು ನಡೆಸಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಇಂದು ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿ ಎದುರು ‘ಸರ್ಕಾರಿ ಆಸ್ಪತ್ರೆ ಉಳಿಸಿ ಹೋರಾಟ ಸಮಿತಿ’ಯಿಂದ ಸಾಮೂಹಿಕ ಧರಣಿಯನ್ನು ಹಮ್ಮಿಕೊಳ್ಳಲಾಗಿತ್ತು.

ಮೊದಲ ಹಂತದಲ್ಲಿ ಜಿಲ್ಲೆಯ ಎಲ್ಲಾ ಶಾಸಕರ ಕಚೇರಿಯ ಮುಂಭಾಗ ಸಾಮೂಹಿಕ ಧರಣಿ ನಡೆಸಲು ನಿರ್ಧರಿಸಲಾಗಿದೆ. ಅದರಂತೆ ಮಂಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕರ ಕಚೇರಿ ಮುಂಭಾಗ (ತೊಕ್ಕೊಟ್ಟು ಬಸ್‌ನಿಲ್ದಾಣ) ಸಾಮೂಹಿಕ ಧರಣಿ ಸತ್ಯಾಗ್ರಹವನ್ನು ಜನಪರ ಸಂಘಟನೆಗಳು, ಸಾಮಾಜಿಕ ಕಾರ್ಯಕರ್ತರ ವೇದಿಕೆಯಾಗಿರುವ ಸರಕಾರಿ ಆಸ್ಪತ್ರೆ ಉಳಿಸಿ ಹೋರಾಟ ಸಮಿತಿ, ದಕ್ಷಿಣ ಕನ್ನಡ ಇದರ ವತಿಯಿಂದ ಆಯೋಜಿಸಲಾಗಿದೆ.

“ಆರೋಗ್ಯ ಇಲ್ಲದಿದ್ದರೆ ಬದುಕಿಲ್ಲ. ಇಂದಿನ ದಿನಮಾನದಲ್ಲಿ ಪ್ರತಿಯೊಬ್ಬ ನಾಗರಿಕನೂ ಆರೋಗ್ಯದ ಚಿಕಿತ್ಸೆಯ ಕುರಿತು ಚಿಂತಿತನಾಗಿದ್ದಾನೆ. ಅನಾರೋಗ್ಯ ಕಾಡಿದರೆ ಚಿಕಿತ್ಸೆ ಪಡೆಯುವುದು ಹೇಗೆ? ಎಂದು ಪ್ರತಿಯೊಬ್ಬರೂ ಆತಂಕಗೊಳ್ಳುವಂತಾಗಿದೆ. ಈ ರೀತಿಯ ಆತಂಕಕ್ಕೆ ಕಾರಣ ನಮ್ಮ ಸರಕಾರಗಳು ಆರೋಗ್ಯ ಕ್ಷೇತ್ರವನ್ನು ವ್ಯಾಪಾರೀಕರಣಕ್ಕೆ ಒಡ್ಡಿರುವುದು” ಎಂದು ಹೋರಾಟಗಾರರು ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನೂ ಓದಿ: ಮುತ್ತಯ್ಯ ಮುರುಳೀಧರನ್ ಬಯೋಪಿಕ್: 800 ಚಿತ್ರದ ನಿರ್ದೇಶಕರಿಗೆ ಜೀವ ಬೆದರಿಕೆ!

“ಆರೋಗ್ಯ ಪ್ರತಿಯೊಬ್ಬ ಪ್ರಜೆಯ ಹಕ್ಕು” ಎಂಬ ಸಂವಿಧಾನದ ಆಶಯಗಳು ಈಗ ಕಾಗದದಲ್ಲಷ್ಟೇ ಉಳಿದಿದೆ. ಸರಕಾರಿ ಆಸ್ಪತ್ರೆಗಳನ್ನು ಮುಚ್ಚಲಾಗುತ್ತಿದೆ ಅಥವಾ ದುರ್ಬಲಗೊಳಿಸಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳ ಪರ ಆರೋಗ್ಯ ನೀತಿಗಳನ್ನು ರೂಪಿಸಲಾಗುತ್ತಿದೆ. ಆಯುಷ್ಮಾನ್ ಸಹಿತ ಸರಕಾರಿ ಆರೋಗ್ಯ ವಿಮೆಗಳು ಖಾಸಗಿ ಆರೋಗ್ಯ ವ್ಯಾಪಾರಿಗಳ ಖಜಾನೆ ತುಂಬುತ್ತಿವೆ.

ಜನಸಂಖ್ಯಾವಾರು ರಾಜ್ಯ ಸರಕಾರದ ನಿಯಮಗಳ ಪ್ರಕಾರವೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕನಿಷ್ಟ 120 ಪ್ರಾಥಮಿಕ ಆರೋಗ್ಯ ಕೇಂದ್ರ, 40 ಹಾಸಿಗೆಗಳ 32 ಸಮುದಾಯ ಆಸ್ಪತ್ರೆ, 100 ಹಾಸಿಗೆಗಳ 8 ತಾಲೂಕು ಆಸ್ಪತ್ರೆ ಇರಬೇಕು. ಆದರೆ ಈಗ 80 ಪ್ರಾಥಮಿಕ ಆರೋಗ್ಯ ಕೇಂದ್ರ 7 ಸಮುದಾಯ ಆಸ್ಪತ್ರೆ, 4 ತಾಲೂಕು ಆಸ್ಪತ್ರೆಗಳು ಮಾತ್ರ ಇದೆ. ಇರುವ ಆಸ್ಪತ್ರೆಗಳಲ್ಲೂ ಅರ್ಧದಷ್ಟು ವೈದ್ಯರ, ಸಿಬ್ಬಂದಿಗಳು ಸ್ಥಾನ ಖಾಲಿ ಬಿದ್ದಿದೆ. ತಜ್ಞ ವೈದ್ಯರಂತೂ ಇಲ್ಲವೇ ಇಲ್ಲ ಅನ್ನುವಷ್ಟು ವಿರಳ. ಜಿಲ್ಲಾಸ್ಪತ್ರೆ ವೆನ್ಲಾಕ್ ಶತಮಾನ ಕಳೆದರೂ ಅದೇ ಹಳೆಯ ಸ್ಥಿತಿಯಲ್ಲಿದೆ. ಇದು ಜನಸಾಮಾನ್ಯರ ಆರೋಗ್ಯದ ಸ್ಥಿತಿಯ ಮೇಲೆ ಗಂಭೀರ ಪರಿಣಾಮ ಬೀರಿದೆ.

ಇದನ್ನೂ ಓದಿ: ಪ್ರತ್ಯೇಕ ಜಾಹೀರಾತು: ಬಿಹಾರದಲ್ಲಿ ಜೆಡಿಯು-ಬಿಜೆಪಿ ನಡುವಿನ ಮುನಿಸಿಗೆ ತೇಪೆ?

“ಖಾಸಗಿ ಆಸ್ಪತ್ರೆಗಳ, ಮೆಡಿಕಲ್ ಕಾಲೇಜುಗಳ ಲಂಗುಲಗಾಮಿಲ್ಲದ ವ್ಯಾಪಾರಕ್ಕೆ ಅನುವು ಮಾಡಿಕೊಟ್ಟಿದೆ. 8 ಖಾಸಗಿ ಮೆಡಿಕಲ್ ಕಾಲೇಜುಗಳಿರುವ ನಮ್ಮ ಜಿಲ್ಲೆಯಲ್ಲಿ ಒಂದು ಸರಕಾರಿ ಮೆಡಿಕಲ್ ಕಾಲೇಜು ಇಲ್ಲದಿರುವುದು ನಮ್ಮ ಜನಪ್ರತಿನಿಧಿಗಳ ರಾಜಕೀಯ ಇಚ್ಚಾಶಕ್ತಿಯ ಕೊರತೆಯನ್ನು ಎತ್ತಿ ತೋರಿಸುತ್ತದೆ” ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳಿದರು.

ಖಾಸಗಿ ಮೆಡಿಕಲ್ ಕಾಲೇಜುಗಳ ಆಡುಂಬೊಲವಾಗಿರುವ ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರದಲ್ಲಿ ಸರಕಾರಿ ಆಸ್ಪತ್ರೆಗಳ ಸ್ಥಿತಿ ಶೋಚನೀಯ. ನಿಯಮಗಳ ಪ್ರಕಾರ 15 ಪ್ರಾಥಮಿಕ ಆರೋಗ್ಯ ಕೇಂದ್ರ ಇರಬೇಕಾದಲ್ಲಿ 8 ಪ್ರಾಥಮಿಕ ಆರೋಗ್ಯ ಕೇಂದ್ರ ಮಾತ್ರ ಇದೆ. 40 ಹಾಸಿಗೆಗಳ 4 ಸಮುದಾಯ ಇರಬೇಕಾದ ಆಸ್ಪತ್ರೆಯಲ್ಲಿ ಒಂದೇ ಒಂದು ಸಮುದಾಯ ಆಸ್ಪತ್ರೆಯೂ ಕ್ಷೇತ್ರದಲ್ಲಿ ಇಲ್ಲ. ಉಳ್ಳಾಲದಲ್ಲಿ ಸುಸಜ್ಜಿತ ಕಟ್ಟಡ ಕಟ್ಟಲಾಗಿದ್ದರೂ ಸಮುದಾಯ ಆಸ್ಪತ್ರೆಯಾಗಿ ಇನ್ನೂ ಮೇಲ್ದರ್ಜೆಗೆ ಏರಿಸಲಾಗಿಲ್ಲ. ಉಳ್ಳಾಲ ತಾಲೂಕಾಗಿ ಘೋಷಿಸಲ್ಪಟ್ಟಿದ್ದರೂ 100 ಹಾಸಿಗೆಗಳ ತಾಲೂಕು ಆಸ್ಪತ್ರ ಸ್ಥಾಪನೆ ಕುರಿತು ಸಣ್ಣ ಚರ್ಚೆಯೂ ಸರಕಾರದ ಮಟ್ಟದಲ್ಲಿ ನಡೆದಿಲ್ಲ.

ಇದರಿಂದಾಗಿ ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಗಳು ಆಡಿದ್ದೇ ಆಟ ಎಂಬಂತಾಗಿದೆ. ಬಡರೋಗಿಗಳು ಖಾಸಗಿ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ಕಲಿಕೆಯ ಸಾಧನದಂತಾಗಿ ಹೋಗಿದ್ದಾರೆ. ಈ ಹಿನ್ನಲೆಯಲ್ಲಿ, ಸರಕಾರದ ವೈದ್ಯಕೀಯ ಅಧಿನಿಯಮದಂತೆ ಮಂಗಳೂರು (ಉಳ್ಳಾಲ) ವಿಧಾನ ಸಭಾ ಕ್ಷೇತ್ರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ, ತಾಲೂಕು ಆಸ್ಪತ್ರೆಗಳು ಸ್ಥಾಪನೆಗೊಳ್ಳಬೇಕು. ಜಿಲ್ಲೆಯಲ್ಲಿ ಒಂದು ಸರಕಾರಿ ಮೆಡಿಕಲ್ ಕಾಲೇಜು, ಕ್ಯಾನ್ಸರ್ ಆಸ್ಪತ್ರೆ ಸ್ಥಾಪಿಸಬೇಕು. ವೆನ್‌ಲಾಕನ್ನು ಪೂರ್ಣ ಪ್ರಮಾಣದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಬೇಕು ಎಂದು ಜನಾಂದೋಲನ ರೂಪಿಸಲು ನಿರ್ಧರಿಸಲಾಗಿದೆ ಎಂದು ಹೋರಾಟಗಾರರು ಹೇಳಿದರು.


ಇದನ್ನೂ ಓದಿ: ಸುಳ್ಳು ಹೇಳುವುದರಲ್ಲಿ ಪ್ರಧಾನಿಗೆ ಪೈಪೋಟಿ ನೀಡಲಾರೆವು; ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...