Homeಕರ್ನಾಟಕಮಂಗಳೂರು: ’ಸರ್ಕಾರಿ ಆಸ್ಪತ್ರೆ ಉಳಿಸಿ’ ಸಮಿತಿಯಿಂದ ಸಾಮೂಹಿಕ ಧರಣಿ!

ಮಂಗಳೂರು: ’ಸರ್ಕಾರಿ ಆಸ್ಪತ್ರೆ ಉಳಿಸಿ’ ಸಮಿತಿಯಿಂದ ಸಾಮೂಹಿಕ ಧರಣಿ!

ಆರೋಗ್ಯ ಪ್ರತಿಯೊಬ್ಬ ಪ್ರಜೆಯ ಹಕ್ಕು” ಎಂಬ ಸಂವಿಧಾನದ ಆಶಯಗಳು ಈಗ ಕಾಗದದಲ್ಲಷ್ಟೇ ಉಳಿದಿದೆ. ಸರಕಾರಿ ಆಸ್ಪತ್ರೆಗಳನ್ನು ಮುಚ್ಚಲಾಗುತ್ತಿದೆ, ಅಥವಾ ದುರ್ಬಲಗೊಳಿಸಲಾಗುತ್ತಿದೆ.

- Advertisement -
- Advertisement -

ದೇಶದಲ್ಲಿ ಎಲ್ಲವನ್ನೂ ಖಾಸಗೀಕರಣಕ್ಕೆ ಒಳಪಡಿಸುತ್ತಿರುವ ಇಂದಿನ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆ ಮತ್ತು ಸರ್ಕಾರೀ ವೈದ್ಯಕೀಯ ಕಾಲೇಜುಗಳೂ ಸಹ ಖಾಸಗೀಕರಣದ ಬಿರುಗಾಳಿಗೆ ಸಿಲುಕಿ ನಿರ್ಣಾಮವಾಗುತ್ತಿವೆ. ಇದನ್ನು ಆಳುವ ಸರ್ಕಾರಗಳು ಉದ್ದೇಶಪೂರ್ವಕವಾಗಿಯೇ ಮಾಡುತ್ತಿವೆ. ಪ್ರಭುತ್ವಕ್ಕೆ ಎಂದಿಗೂ ಜನಸಾಮಾನ್ಯರ ಚಿಂತೆಯಿಲ್ಲ ಎಂಬುದನ್ನು ಇಂತಹ ಪ್ರಕ್ರಿಯೆಗಳ ಮೂಲಕ ಆಗಾಗ ಸಾಬೀತುಪಡಿಸುತ್ತಲೇ ಇರುತ್ತವೆ.

ಇದರ ವಿರುದ್ಧ ಇಂದಿನ ನಾಗರೀಕ ಸಮಾಜ ಪ್ರತಿಭಟಿಸದಿದ್ದರೆ ಮಧ್ಯಮ ಮತ್ತು ಕೆಳವರ್ಗಗಳು ಸಹಜ ಬದುಕು ನಡೆಸಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಇಂದು ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿ ಎದುರು ‘ಸರ್ಕಾರಿ ಆಸ್ಪತ್ರೆ ಉಳಿಸಿ ಹೋರಾಟ ಸಮಿತಿ’ಯಿಂದ ಸಾಮೂಹಿಕ ಧರಣಿಯನ್ನು ಹಮ್ಮಿಕೊಳ್ಳಲಾಗಿತ್ತು.

ಮೊದಲ ಹಂತದಲ್ಲಿ ಜಿಲ್ಲೆಯ ಎಲ್ಲಾ ಶಾಸಕರ ಕಚೇರಿಯ ಮುಂಭಾಗ ಸಾಮೂಹಿಕ ಧರಣಿ ನಡೆಸಲು ನಿರ್ಧರಿಸಲಾಗಿದೆ. ಅದರಂತೆ ಮಂಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕರ ಕಚೇರಿ ಮುಂಭಾಗ (ತೊಕ್ಕೊಟ್ಟು ಬಸ್‌ನಿಲ್ದಾಣ) ಸಾಮೂಹಿಕ ಧರಣಿ ಸತ್ಯಾಗ್ರಹವನ್ನು ಜನಪರ ಸಂಘಟನೆಗಳು, ಸಾಮಾಜಿಕ ಕಾರ್ಯಕರ್ತರ ವೇದಿಕೆಯಾಗಿರುವ ಸರಕಾರಿ ಆಸ್ಪತ್ರೆ ಉಳಿಸಿ ಹೋರಾಟ ಸಮಿತಿ, ದಕ್ಷಿಣ ಕನ್ನಡ ಇದರ ವತಿಯಿಂದ ಆಯೋಜಿಸಲಾಗಿದೆ.

“ಆರೋಗ್ಯ ಇಲ್ಲದಿದ್ದರೆ ಬದುಕಿಲ್ಲ. ಇಂದಿನ ದಿನಮಾನದಲ್ಲಿ ಪ್ರತಿಯೊಬ್ಬ ನಾಗರಿಕನೂ ಆರೋಗ್ಯದ ಚಿಕಿತ್ಸೆಯ ಕುರಿತು ಚಿಂತಿತನಾಗಿದ್ದಾನೆ. ಅನಾರೋಗ್ಯ ಕಾಡಿದರೆ ಚಿಕಿತ್ಸೆ ಪಡೆಯುವುದು ಹೇಗೆ? ಎಂದು ಪ್ರತಿಯೊಬ್ಬರೂ ಆತಂಕಗೊಳ್ಳುವಂತಾಗಿದೆ. ಈ ರೀತಿಯ ಆತಂಕಕ್ಕೆ ಕಾರಣ ನಮ್ಮ ಸರಕಾರಗಳು ಆರೋಗ್ಯ ಕ್ಷೇತ್ರವನ್ನು ವ್ಯಾಪಾರೀಕರಣಕ್ಕೆ ಒಡ್ಡಿರುವುದು” ಎಂದು ಹೋರಾಟಗಾರರು ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನೂ ಓದಿ: ಮುತ್ತಯ್ಯ ಮುರುಳೀಧರನ್ ಬಯೋಪಿಕ್: 800 ಚಿತ್ರದ ನಿರ್ದೇಶಕರಿಗೆ ಜೀವ ಬೆದರಿಕೆ!

“ಆರೋಗ್ಯ ಪ್ರತಿಯೊಬ್ಬ ಪ್ರಜೆಯ ಹಕ್ಕು” ಎಂಬ ಸಂವಿಧಾನದ ಆಶಯಗಳು ಈಗ ಕಾಗದದಲ್ಲಷ್ಟೇ ಉಳಿದಿದೆ. ಸರಕಾರಿ ಆಸ್ಪತ್ರೆಗಳನ್ನು ಮುಚ್ಚಲಾಗುತ್ತಿದೆ ಅಥವಾ ದುರ್ಬಲಗೊಳಿಸಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳ ಪರ ಆರೋಗ್ಯ ನೀತಿಗಳನ್ನು ರೂಪಿಸಲಾಗುತ್ತಿದೆ. ಆಯುಷ್ಮಾನ್ ಸಹಿತ ಸರಕಾರಿ ಆರೋಗ್ಯ ವಿಮೆಗಳು ಖಾಸಗಿ ಆರೋಗ್ಯ ವ್ಯಾಪಾರಿಗಳ ಖಜಾನೆ ತುಂಬುತ್ತಿವೆ.

ಜನಸಂಖ್ಯಾವಾರು ರಾಜ್ಯ ಸರಕಾರದ ನಿಯಮಗಳ ಪ್ರಕಾರವೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕನಿಷ್ಟ 120 ಪ್ರಾಥಮಿಕ ಆರೋಗ್ಯ ಕೇಂದ್ರ, 40 ಹಾಸಿಗೆಗಳ 32 ಸಮುದಾಯ ಆಸ್ಪತ್ರೆ, 100 ಹಾಸಿಗೆಗಳ 8 ತಾಲೂಕು ಆಸ್ಪತ್ರೆ ಇರಬೇಕು. ಆದರೆ ಈಗ 80 ಪ್ರಾಥಮಿಕ ಆರೋಗ್ಯ ಕೇಂದ್ರ 7 ಸಮುದಾಯ ಆಸ್ಪತ್ರೆ, 4 ತಾಲೂಕು ಆಸ್ಪತ್ರೆಗಳು ಮಾತ್ರ ಇದೆ. ಇರುವ ಆಸ್ಪತ್ರೆಗಳಲ್ಲೂ ಅರ್ಧದಷ್ಟು ವೈದ್ಯರ, ಸಿಬ್ಬಂದಿಗಳು ಸ್ಥಾನ ಖಾಲಿ ಬಿದ್ದಿದೆ. ತಜ್ಞ ವೈದ್ಯರಂತೂ ಇಲ್ಲವೇ ಇಲ್ಲ ಅನ್ನುವಷ್ಟು ವಿರಳ. ಜಿಲ್ಲಾಸ್ಪತ್ರೆ ವೆನ್ಲಾಕ್ ಶತಮಾನ ಕಳೆದರೂ ಅದೇ ಹಳೆಯ ಸ್ಥಿತಿಯಲ್ಲಿದೆ. ಇದು ಜನಸಾಮಾನ್ಯರ ಆರೋಗ್ಯದ ಸ್ಥಿತಿಯ ಮೇಲೆ ಗಂಭೀರ ಪರಿಣಾಮ ಬೀರಿದೆ.

ಇದನ್ನೂ ಓದಿ: ಪ್ರತ್ಯೇಕ ಜಾಹೀರಾತು: ಬಿಹಾರದಲ್ಲಿ ಜೆಡಿಯು-ಬಿಜೆಪಿ ನಡುವಿನ ಮುನಿಸಿಗೆ ತೇಪೆ?

“ಖಾಸಗಿ ಆಸ್ಪತ್ರೆಗಳ, ಮೆಡಿಕಲ್ ಕಾಲೇಜುಗಳ ಲಂಗುಲಗಾಮಿಲ್ಲದ ವ್ಯಾಪಾರಕ್ಕೆ ಅನುವು ಮಾಡಿಕೊಟ್ಟಿದೆ. 8 ಖಾಸಗಿ ಮೆಡಿಕಲ್ ಕಾಲೇಜುಗಳಿರುವ ನಮ್ಮ ಜಿಲ್ಲೆಯಲ್ಲಿ ಒಂದು ಸರಕಾರಿ ಮೆಡಿಕಲ್ ಕಾಲೇಜು ಇಲ್ಲದಿರುವುದು ನಮ್ಮ ಜನಪ್ರತಿನಿಧಿಗಳ ರಾಜಕೀಯ ಇಚ್ಚಾಶಕ್ತಿಯ ಕೊರತೆಯನ್ನು ಎತ್ತಿ ತೋರಿಸುತ್ತದೆ” ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳಿದರು.

ಖಾಸಗಿ ಮೆಡಿಕಲ್ ಕಾಲೇಜುಗಳ ಆಡುಂಬೊಲವಾಗಿರುವ ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರದಲ್ಲಿ ಸರಕಾರಿ ಆಸ್ಪತ್ರೆಗಳ ಸ್ಥಿತಿ ಶೋಚನೀಯ. ನಿಯಮಗಳ ಪ್ರಕಾರ 15 ಪ್ರಾಥಮಿಕ ಆರೋಗ್ಯ ಕೇಂದ್ರ ಇರಬೇಕಾದಲ್ಲಿ 8 ಪ್ರಾಥಮಿಕ ಆರೋಗ್ಯ ಕೇಂದ್ರ ಮಾತ್ರ ಇದೆ. 40 ಹಾಸಿಗೆಗಳ 4 ಸಮುದಾಯ ಇರಬೇಕಾದ ಆಸ್ಪತ್ರೆಯಲ್ಲಿ ಒಂದೇ ಒಂದು ಸಮುದಾಯ ಆಸ್ಪತ್ರೆಯೂ ಕ್ಷೇತ್ರದಲ್ಲಿ ಇಲ್ಲ. ಉಳ್ಳಾಲದಲ್ಲಿ ಸುಸಜ್ಜಿತ ಕಟ್ಟಡ ಕಟ್ಟಲಾಗಿದ್ದರೂ ಸಮುದಾಯ ಆಸ್ಪತ್ರೆಯಾಗಿ ಇನ್ನೂ ಮೇಲ್ದರ್ಜೆಗೆ ಏರಿಸಲಾಗಿಲ್ಲ. ಉಳ್ಳಾಲ ತಾಲೂಕಾಗಿ ಘೋಷಿಸಲ್ಪಟ್ಟಿದ್ದರೂ 100 ಹಾಸಿಗೆಗಳ ತಾಲೂಕು ಆಸ್ಪತ್ರ ಸ್ಥಾಪನೆ ಕುರಿತು ಸಣ್ಣ ಚರ್ಚೆಯೂ ಸರಕಾರದ ಮಟ್ಟದಲ್ಲಿ ನಡೆದಿಲ್ಲ.

ಇದರಿಂದಾಗಿ ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಗಳು ಆಡಿದ್ದೇ ಆಟ ಎಂಬಂತಾಗಿದೆ. ಬಡರೋಗಿಗಳು ಖಾಸಗಿ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ಕಲಿಕೆಯ ಸಾಧನದಂತಾಗಿ ಹೋಗಿದ್ದಾರೆ. ಈ ಹಿನ್ನಲೆಯಲ್ಲಿ, ಸರಕಾರದ ವೈದ್ಯಕೀಯ ಅಧಿನಿಯಮದಂತೆ ಮಂಗಳೂರು (ಉಳ್ಳಾಲ) ವಿಧಾನ ಸಭಾ ಕ್ಷೇತ್ರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ, ತಾಲೂಕು ಆಸ್ಪತ್ರೆಗಳು ಸ್ಥಾಪನೆಗೊಳ್ಳಬೇಕು. ಜಿಲ್ಲೆಯಲ್ಲಿ ಒಂದು ಸರಕಾರಿ ಮೆಡಿಕಲ್ ಕಾಲೇಜು, ಕ್ಯಾನ್ಸರ್ ಆಸ್ಪತ್ರೆ ಸ್ಥಾಪಿಸಬೇಕು. ವೆನ್‌ಲಾಕನ್ನು ಪೂರ್ಣ ಪ್ರಮಾಣದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಬೇಕು ಎಂದು ಜನಾಂದೋಲನ ರೂಪಿಸಲು ನಿರ್ಧರಿಸಲಾಗಿದೆ ಎಂದು ಹೋರಾಟಗಾರರು ಹೇಳಿದರು.


ಇದನ್ನೂ ಓದಿ: ಸುಳ್ಳು ಹೇಳುವುದರಲ್ಲಿ ಪ್ರಧಾನಿಗೆ ಪೈಪೋಟಿ ನೀಡಲಾರೆವು; ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...