Homeಕರ್ನಾಟಕಮಂಗಳೂರು: ’ಸರ್ಕಾರಿ ಆಸ್ಪತ್ರೆ ಉಳಿಸಿ’ ಸಮಿತಿಯಿಂದ ಸಾಮೂಹಿಕ ಧರಣಿ!

ಮಂಗಳೂರು: ’ಸರ್ಕಾರಿ ಆಸ್ಪತ್ರೆ ಉಳಿಸಿ’ ಸಮಿತಿಯಿಂದ ಸಾಮೂಹಿಕ ಧರಣಿ!

ಆರೋಗ್ಯ ಪ್ರತಿಯೊಬ್ಬ ಪ್ರಜೆಯ ಹಕ್ಕು” ಎಂಬ ಸಂವಿಧಾನದ ಆಶಯಗಳು ಈಗ ಕಾಗದದಲ್ಲಷ್ಟೇ ಉಳಿದಿದೆ. ಸರಕಾರಿ ಆಸ್ಪತ್ರೆಗಳನ್ನು ಮುಚ್ಚಲಾಗುತ್ತಿದೆ, ಅಥವಾ ದುರ್ಬಲಗೊಳಿಸಲಾಗುತ್ತಿದೆ.

- Advertisement -
- Advertisement -

ದೇಶದಲ್ಲಿ ಎಲ್ಲವನ್ನೂ ಖಾಸಗೀಕರಣಕ್ಕೆ ಒಳಪಡಿಸುತ್ತಿರುವ ಇಂದಿನ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆ ಮತ್ತು ಸರ್ಕಾರೀ ವೈದ್ಯಕೀಯ ಕಾಲೇಜುಗಳೂ ಸಹ ಖಾಸಗೀಕರಣದ ಬಿರುಗಾಳಿಗೆ ಸಿಲುಕಿ ನಿರ್ಣಾಮವಾಗುತ್ತಿವೆ. ಇದನ್ನು ಆಳುವ ಸರ್ಕಾರಗಳು ಉದ್ದೇಶಪೂರ್ವಕವಾಗಿಯೇ ಮಾಡುತ್ತಿವೆ. ಪ್ರಭುತ್ವಕ್ಕೆ ಎಂದಿಗೂ ಜನಸಾಮಾನ್ಯರ ಚಿಂತೆಯಿಲ್ಲ ಎಂಬುದನ್ನು ಇಂತಹ ಪ್ರಕ್ರಿಯೆಗಳ ಮೂಲಕ ಆಗಾಗ ಸಾಬೀತುಪಡಿಸುತ್ತಲೇ ಇರುತ್ತವೆ.

ಇದರ ವಿರುದ್ಧ ಇಂದಿನ ನಾಗರೀಕ ಸಮಾಜ ಪ್ರತಿಭಟಿಸದಿದ್ದರೆ ಮಧ್ಯಮ ಮತ್ತು ಕೆಳವರ್ಗಗಳು ಸಹಜ ಬದುಕು ನಡೆಸಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಇಂದು ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿ ಎದುರು ‘ಸರ್ಕಾರಿ ಆಸ್ಪತ್ರೆ ಉಳಿಸಿ ಹೋರಾಟ ಸಮಿತಿ’ಯಿಂದ ಸಾಮೂಹಿಕ ಧರಣಿಯನ್ನು ಹಮ್ಮಿಕೊಳ್ಳಲಾಗಿತ್ತು.

ಮೊದಲ ಹಂತದಲ್ಲಿ ಜಿಲ್ಲೆಯ ಎಲ್ಲಾ ಶಾಸಕರ ಕಚೇರಿಯ ಮುಂಭಾಗ ಸಾಮೂಹಿಕ ಧರಣಿ ನಡೆಸಲು ನಿರ್ಧರಿಸಲಾಗಿದೆ. ಅದರಂತೆ ಮಂಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕರ ಕಚೇರಿ ಮುಂಭಾಗ (ತೊಕ್ಕೊಟ್ಟು ಬಸ್‌ನಿಲ್ದಾಣ) ಸಾಮೂಹಿಕ ಧರಣಿ ಸತ್ಯಾಗ್ರಹವನ್ನು ಜನಪರ ಸಂಘಟನೆಗಳು, ಸಾಮಾಜಿಕ ಕಾರ್ಯಕರ್ತರ ವೇದಿಕೆಯಾಗಿರುವ ಸರಕಾರಿ ಆಸ್ಪತ್ರೆ ಉಳಿಸಿ ಹೋರಾಟ ಸಮಿತಿ, ದಕ್ಷಿಣ ಕನ್ನಡ ಇದರ ವತಿಯಿಂದ ಆಯೋಜಿಸಲಾಗಿದೆ.

“ಆರೋಗ್ಯ ಇಲ್ಲದಿದ್ದರೆ ಬದುಕಿಲ್ಲ. ಇಂದಿನ ದಿನಮಾನದಲ್ಲಿ ಪ್ರತಿಯೊಬ್ಬ ನಾಗರಿಕನೂ ಆರೋಗ್ಯದ ಚಿಕಿತ್ಸೆಯ ಕುರಿತು ಚಿಂತಿತನಾಗಿದ್ದಾನೆ. ಅನಾರೋಗ್ಯ ಕಾಡಿದರೆ ಚಿಕಿತ್ಸೆ ಪಡೆಯುವುದು ಹೇಗೆ? ಎಂದು ಪ್ರತಿಯೊಬ್ಬರೂ ಆತಂಕಗೊಳ್ಳುವಂತಾಗಿದೆ. ಈ ರೀತಿಯ ಆತಂಕಕ್ಕೆ ಕಾರಣ ನಮ್ಮ ಸರಕಾರಗಳು ಆರೋಗ್ಯ ಕ್ಷೇತ್ರವನ್ನು ವ್ಯಾಪಾರೀಕರಣಕ್ಕೆ ಒಡ್ಡಿರುವುದು” ಎಂದು ಹೋರಾಟಗಾರರು ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನೂ ಓದಿ: ಮುತ್ತಯ್ಯ ಮುರುಳೀಧರನ್ ಬಯೋಪಿಕ್: 800 ಚಿತ್ರದ ನಿರ್ದೇಶಕರಿಗೆ ಜೀವ ಬೆದರಿಕೆ!

“ಆರೋಗ್ಯ ಪ್ರತಿಯೊಬ್ಬ ಪ್ರಜೆಯ ಹಕ್ಕು” ಎಂಬ ಸಂವಿಧಾನದ ಆಶಯಗಳು ಈಗ ಕಾಗದದಲ್ಲಷ್ಟೇ ಉಳಿದಿದೆ. ಸರಕಾರಿ ಆಸ್ಪತ್ರೆಗಳನ್ನು ಮುಚ್ಚಲಾಗುತ್ತಿದೆ ಅಥವಾ ದುರ್ಬಲಗೊಳಿಸಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳ ಪರ ಆರೋಗ್ಯ ನೀತಿಗಳನ್ನು ರೂಪಿಸಲಾಗುತ್ತಿದೆ. ಆಯುಷ್ಮಾನ್ ಸಹಿತ ಸರಕಾರಿ ಆರೋಗ್ಯ ವಿಮೆಗಳು ಖಾಸಗಿ ಆರೋಗ್ಯ ವ್ಯಾಪಾರಿಗಳ ಖಜಾನೆ ತುಂಬುತ್ತಿವೆ.

ಜನಸಂಖ್ಯಾವಾರು ರಾಜ್ಯ ಸರಕಾರದ ನಿಯಮಗಳ ಪ್ರಕಾರವೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕನಿಷ್ಟ 120 ಪ್ರಾಥಮಿಕ ಆರೋಗ್ಯ ಕೇಂದ್ರ, 40 ಹಾಸಿಗೆಗಳ 32 ಸಮುದಾಯ ಆಸ್ಪತ್ರೆ, 100 ಹಾಸಿಗೆಗಳ 8 ತಾಲೂಕು ಆಸ್ಪತ್ರೆ ಇರಬೇಕು. ಆದರೆ ಈಗ 80 ಪ್ರಾಥಮಿಕ ಆರೋಗ್ಯ ಕೇಂದ್ರ 7 ಸಮುದಾಯ ಆಸ್ಪತ್ರೆ, 4 ತಾಲೂಕು ಆಸ್ಪತ್ರೆಗಳು ಮಾತ್ರ ಇದೆ. ಇರುವ ಆಸ್ಪತ್ರೆಗಳಲ್ಲೂ ಅರ್ಧದಷ್ಟು ವೈದ್ಯರ, ಸಿಬ್ಬಂದಿಗಳು ಸ್ಥಾನ ಖಾಲಿ ಬಿದ್ದಿದೆ. ತಜ್ಞ ವೈದ್ಯರಂತೂ ಇಲ್ಲವೇ ಇಲ್ಲ ಅನ್ನುವಷ್ಟು ವಿರಳ. ಜಿಲ್ಲಾಸ್ಪತ್ರೆ ವೆನ್ಲಾಕ್ ಶತಮಾನ ಕಳೆದರೂ ಅದೇ ಹಳೆಯ ಸ್ಥಿತಿಯಲ್ಲಿದೆ. ಇದು ಜನಸಾಮಾನ್ಯರ ಆರೋಗ್ಯದ ಸ್ಥಿತಿಯ ಮೇಲೆ ಗಂಭೀರ ಪರಿಣಾಮ ಬೀರಿದೆ.

ಇದನ್ನೂ ಓದಿ: ಪ್ರತ್ಯೇಕ ಜಾಹೀರಾತು: ಬಿಹಾರದಲ್ಲಿ ಜೆಡಿಯು-ಬಿಜೆಪಿ ನಡುವಿನ ಮುನಿಸಿಗೆ ತೇಪೆ?

“ಖಾಸಗಿ ಆಸ್ಪತ್ರೆಗಳ, ಮೆಡಿಕಲ್ ಕಾಲೇಜುಗಳ ಲಂಗುಲಗಾಮಿಲ್ಲದ ವ್ಯಾಪಾರಕ್ಕೆ ಅನುವು ಮಾಡಿಕೊಟ್ಟಿದೆ. 8 ಖಾಸಗಿ ಮೆಡಿಕಲ್ ಕಾಲೇಜುಗಳಿರುವ ನಮ್ಮ ಜಿಲ್ಲೆಯಲ್ಲಿ ಒಂದು ಸರಕಾರಿ ಮೆಡಿಕಲ್ ಕಾಲೇಜು ಇಲ್ಲದಿರುವುದು ನಮ್ಮ ಜನಪ್ರತಿನಿಧಿಗಳ ರಾಜಕೀಯ ಇಚ್ಚಾಶಕ್ತಿಯ ಕೊರತೆಯನ್ನು ಎತ್ತಿ ತೋರಿಸುತ್ತದೆ” ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳಿದರು.

ಖಾಸಗಿ ಮೆಡಿಕಲ್ ಕಾಲೇಜುಗಳ ಆಡುಂಬೊಲವಾಗಿರುವ ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರದಲ್ಲಿ ಸರಕಾರಿ ಆಸ್ಪತ್ರೆಗಳ ಸ್ಥಿತಿ ಶೋಚನೀಯ. ನಿಯಮಗಳ ಪ್ರಕಾರ 15 ಪ್ರಾಥಮಿಕ ಆರೋಗ್ಯ ಕೇಂದ್ರ ಇರಬೇಕಾದಲ್ಲಿ 8 ಪ್ರಾಥಮಿಕ ಆರೋಗ್ಯ ಕೇಂದ್ರ ಮಾತ್ರ ಇದೆ. 40 ಹಾಸಿಗೆಗಳ 4 ಸಮುದಾಯ ಇರಬೇಕಾದ ಆಸ್ಪತ್ರೆಯಲ್ಲಿ ಒಂದೇ ಒಂದು ಸಮುದಾಯ ಆಸ್ಪತ್ರೆಯೂ ಕ್ಷೇತ್ರದಲ್ಲಿ ಇಲ್ಲ. ಉಳ್ಳಾಲದಲ್ಲಿ ಸುಸಜ್ಜಿತ ಕಟ್ಟಡ ಕಟ್ಟಲಾಗಿದ್ದರೂ ಸಮುದಾಯ ಆಸ್ಪತ್ರೆಯಾಗಿ ಇನ್ನೂ ಮೇಲ್ದರ್ಜೆಗೆ ಏರಿಸಲಾಗಿಲ್ಲ. ಉಳ್ಳಾಲ ತಾಲೂಕಾಗಿ ಘೋಷಿಸಲ್ಪಟ್ಟಿದ್ದರೂ 100 ಹಾಸಿಗೆಗಳ ತಾಲೂಕು ಆಸ್ಪತ್ರ ಸ್ಥಾಪನೆ ಕುರಿತು ಸಣ್ಣ ಚರ್ಚೆಯೂ ಸರಕಾರದ ಮಟ್ಟದಲ್ಲಿ ನಡೆದಿಲ್ಲ.

ಇದರಿಂದಾಗಿ ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಗಳು ಆಡಿದ್ದೇ ಆಟ ಎಂಬಂತಾಗಿದೆ. ಬಡರೋಗಿಗಳು ಖಾಸಗಿ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ಕಲಿಕೆಯ ಸಾಧನದಂತಾಗಿ ಹೋಗಿದ್ದಾರೆ. ಈ ಹಿನ್ನಲೆಯಲ್ಲಿ, ಸರಕಾರದ ವೈದ್ಯಕೀಯ ಅಧಿನಿಯಮದಂತೆ ಮಂಗಳೂರು (ಉಳ್ಳಾಲ) ವಿಧಾನ ಸಭಾ ಕ್ಷೇತ್ರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ, ತಾಲೂಕು ಆಸ್ಪತ್ರೆಗಳು ಸ್ಥಾಪನೆಗೊಳ್ಳಬೇಕು. ಜಿಲ್ಲೆಯಲ್ಲಿ ಒಂದು ಸರಕಾರಿ ಮೆಡಿಕಲ್ ಕಾಲೇಜು, ಕ್ಯಾನ್ಸರ್ ಆಸ್ಪತ್ರೆ ಸ್ಥಾಪಿಸಬೇಕು. ವೆನ್‌ಲಾಕನ್ನು ಪೂರ್ಣ ಪ್ರಮಾಣದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಬೇಕು ಎಂದು ಜನಾಂದೋಲನ ರೂಪಿಸಲು ನಿರ್ಧರಿಸಲಾಗಿದೆ ಎಂದು ಹೋರಾಟಗಾರರು ಹೇಳಿದರು.


ಇದನ್ನೂ ಓದಿ: ಸುಳ್ಳು ಹೇಳುವುದರಲ್ಲಿ ಪ್ರಧಾನಿಗೆ ಪೈಪೋಟಿ ನೀಡಲಾರೆವು; ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...