Homeಕರ್ನಾಟಕಮಂಗಳೂರು - ರಾಮ ಸೇನಾ ದುಷ್ಕರ್ಮಿಗಳ ದಾಳಿಯ ನಂತರ ನಗರಾದಾದ್ಯಂತ ಸಲೂನ್‌ಗಳ ಪರಿಶೀಲನೆಗೆ ಸಜ್ಜಾದ ಪಾಲಿಕೆ!

ಮಂಗಳೂರು – ರಾಮ ಸೇನಾ ದುಷ್ಕರ್ಮಿಗಳ ದಾಳಿಯ ನಂತರ ನಗರಾದಾದ್ಯಂತ ಸಲೂನ್‌ಗಳ ಪರಿಶೀಲನೆಗೆ ಸಜ್ಜಾದ ಪಾಲಿಕೆ!

- Advertisement -
- Advertisement -

ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ನಗರದ ವ್ಯಾಪ್ತಿಯಲ್ಲಿ ಸಲೂನ್‌ಗಳು ಮತ್ತು ಬ್ಯೂಟಿ ಪಾರ್ಲರ್‌ಗಳ ಪರವಾನಗಿ ಉಲ್ಲಂಘನೆಯನ್ನು ಪರಿಶೀಲಿಸಲು ಅಧಿಕಾರಿಗಳನ್ನು ಒಳಗೊಂಡ ತಂಡಗಳನ್ನು ರಚಿಸುವುದಾಗಿ ಮೇಯರ್ ಮನೋಜ್ ಕುಮಾರ್ ಹೇಳಿದ್ದಾರೆ. ಬಹುತೇಕ ಸಲೂನ್‌ಗಳು, ಬ್ಯೂಟಿ ಪಾರ್ಲರ್‌ಗಳು, ಸ್ಪಾ, ಮಸಾಜ್ ಸೆಂಟರ್‌ಗಳು ಪಾಲಿಕೆಯಿಂದ ಪರವಾನಗಿ ಪಡೆದಿವೆ ಎಂದು ಮೇಯರ್ ಹೇಳಿದರು.

ಜನವರಿ 23ರ ಗುರುವಾರದಂದು ಬಿಜೈನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಇರುವ ‘ಕಲರ್ಸ್’ ಎಂಬ ಯೂನಿಸೆಕ್ಸ್ ಸಲೂನ್‌ಗೆ ರಾಮ ಸೇನಾ ನಾಯಕ ಪ್ರಸಾದ್ ಅತ್ತಾವರ್ ನೇತೃತ್ವದ ದುಷ್ಕರ್ಮಿಗಳು ನುಗ್ಗಿ ಪೀಠೋಪಕರಣಗಳಿಗೆ ಹಾನಿ, ಗಾಜು ಒಡೆದು, ಮಹಿಳಾ ಸಿಬ್ಬಂದಿಯ ಮೇಲೆ ಹಲ್ಲೆ ಮತ್ತು ಬೆದರಿಕೆ ಹಾಕಿದ್ದರು. ಈ ಘಟನೆಯ ನಂತರ ಮಹಾನಗರ ಪಾಲಿಕೆ ಈ ಹೇಳಿಕೆ ನೀಡಿದೆ. ಮಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಪರವಾನಗಿ ಷರತ್ತುಗಳ ಉಲ್ಲಂಘನೆಯಾಗಿದೆಯೇ ಎಂದು ಪರಿಶೀಲಿಸುವುದು ನಮ್ಮ ಕರ್ತವ್ಯ. ಅಧಿಕಾರಿಗಳ ತಂಡವು ದಾಖಲೆಗಳನ್ನು ಪರಿಶೀಲಿಸುತ್ತದೆ ಮತ್ತು ಪರವಾನಗಿ ಷರತ್ತುಗಳನ್ನು ಪಾಲಿಸಲಾಗಿದೆಯೇ ಎಂದು ಆವರಣದಲ್ಲಿ ಪರಿಶೀಲಿಸುತ್ತದೆ. ಸಲೂನ್‌ಗಳು ಮತ್ತು ಬ್ಯೂಟಿ ಪಾರ್ಲರ್‌ಗಳ ಹೆಸರಿನಲ್ಲಿ ಕಾನೂನುಬಾಹಿರ ಚಟುವಟಿಕೆಗಳ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಬೇಕಾಗುತ್ತದೆ” ಎಂದು ಅವರು ಹೇಳಿದ್ದಾರೆ.

“ಅಧಿಕಾರಿಗಳು ಪರವಾನಗಿಯನ್ನು ಯಾವ ಉದ್ದೇಶಕ್ಕಾಗಿ ನೀಡಲಾಗಿದೆ ಎಂಬುದನ್ನು ಪರಿಶೀಲಿಸುತ್ತಾರೆ. ಪರವಾನಗಿ ಹೊಂದಿರುವವರು ಪರವಾನಗಿಗಳನ್ನು ಉಲ್ಲಂಘಿಸುತ್ತಿದ್ದಾರೆಯೇ? ಎಂದು ಪರಿಶೀಲಿಸಲಾಗುತ್ತದೆ. ತಂಡಗಳ ಭೇಟಿಯ ಸಮಯದಲ್ಲಿ ಯಾವುದೇ ಉಲ್ಲಂಘನೆಗಳು ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಅವರು ಹೇಳಿದ್ದಾರೆ.

2017 ರಲ್ಲಿ ಮಂಗಳೂರು ಮೇಯರ್ ಆಗಿದ್ದ ಕವಿತಾ ಸನಿಲ್ ಅವರು ಹಲವಾರು ಅಕ್ರಮ ಮಸಾಜ್ ಕೇಂದ್ರಗಳು, ಸ್ಕಲ್ ಗೇಮ್ ಕೇಂದ್ರಗಳ ಮೇಲೆ ದಾಳಿ ನಡೆಸಿ ಅವುಗಳನ್ನು ಸೀಲ್‌ ಮಾಡಿದ್ದರು.

ಮಾಸಿಕ ಫೋನ್-ಇನ್ ಕಾರ್ಯಕ್ರಮದ ಸಮಯದಲ್ಲಿ, ಬೋಂಡೆಲ್‌ನಿಂದ ಕರೆ ಮಾಡಿದ್ದ ವ್ಯಕ್ತಿಯೊಬ್ಬರು ಈ ಪ್ರದೇಶದಲ್ಲಿ ಹೋಂಸ್ಟೇ ಕಾರ್ಯನಿರ್ವಹಿಸುತ್ತಿದ್ದು, ನಿವಾಸಿಗಳಿಗೆ ಅನಾನುಕೂಲತೆಯನ್ನುಂಟುಮಾಡುತ್ತಿದೆ ಎಂದು ಹೇಳಿದ್ದರು, ಅಧಿಕಾರಿಗಳು ಈ ಸಮಸ್ಯೆಯನ್ನೂ ಪರಿಶೀಲಿಸುತ್ತಾರೆ ಎಂದು ಮೇಯರ್ ಹೇಳಿದ್ದಾರೆ.

ಮಾಹಾನಗರ ಪಾಲಿಕೆ ಹೋಂ ಸ್ಟೇಗಾಗಿ ಕಟ್ಟಡ ಪರವಾನಗಿಗಳನ್ನು ಮಾತ್ರ ನೀಡುತ್ತದೆ ಎಂದು ಮೇಯರ್ ಹೇಳಿದ್ದು, ಇತರ ಪರವಾನಗಿಗಳು ಮತ್ತು ಅನುಮೋದನೆಗಳನ್ನು ಪ್ರವಾಸೋದ್ಯಮ ಇಲಾಖೆಯಿಂದ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂಓದಿ:  ಕೇಂದ್ರೀಯ ವಿವಿಯ ಬಾಕಿ ಇರುವ ಪ್ರಸ್ತಾವನೆಗಳ ಬಗ್ಗೆ ಕ್ರಮಕೈಗೊಳ್ಳಿ – ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ

ಕೇಂದ್ರೀಯ ವಿವಿಯ ಬಾಕಿ ಇರುವ ಪ್ರಸ್ತಾವನೆಗಳ ಬಗ್ಗೆ ಕ್ರಮಕೈಗೊಳ್ಳಿ – ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...