Homeಕರ್ನಾಟಕಮಂಗಳೂರು - ರಾಮ ಸೇನಾ ದುಷ್ಕರ್ಮಿಗಳ ದಾಳಿಯ ನಂತರ ನಗರಾದಾದ್ಯಂತ ಸಲೂನ್‌ಗಳ ಪರಿಶೀಲನೆಗೆ ಸಜ್ಜಾದ ಪಾಲಿಕೆ!

ಮಂಗಳೂರು – ರಾಮ ಸೇನಾ ದುಷ್ಕರ್ಮಿಗಳ ದಾಳಿಯ ನಂತರ ನಗರಾದಾದ್ಯಂತ ಸಲೂನ್‌ಗಳ ಪರಿಶೀಲನೆಗೆ ಸಜ್ಜಾದ ಪಾಲಿಕೆ!

- Advertisement -
- Advertisement -

ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ನಗರದ ವ್ಯಾಪ್ತಿಯಲ್ಲಿ ಸಲೂನ್‌ಗಳು ಮತ್ತು ಬ್ಯೂಟಿ ಪಾರ್ಲರ್‌ಗಳ ಪರವಾನಗಿ ಉಲ್ಲಂಘನೆಯನ್ನು ಪರಿಶೀಲಿಸಲು ಅಧಿಕಾರಿಗಳನ್ನು ಒಳಗೊಂಡ ತಂಡಗಳನ್ನು ರಚಿಸುವುದಾಗಿ ಮೇಯರ್ ಮನೋಜ್ ಕುಮಾರ್ ಹೇಳಿದ್ದಾರೆ. ಬಹುತೇಕ ಸಲೂನ್‌ಗಳು, ಬ್ಯೂಟಿ ಪಾರ್ಲರ್‌ಗಳು, ಸ್ಪಾ, ಮಸಾಜ್ ಸೆಂಟರ್‌ಗಳು ಪಾಲಿಕೆಯಿಂದ ಪರವಾನಗಿ ಪಡೆದಿವೆ ಎಂದು ಮೇಯರ್ ಹೇಳಿದರು.

ಜನವರಿ 23ರ ಗುರುವಾರದಂದು ಬಿಜೈನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಇರುವ ‘ಕಲರ್ಸ್’ ಎಂಬ ಯೂನಿಸೆಕ್ಸ್ ಸಲೂನ್‌ಗೆ ರಾಮ ಸೇನಾ ನಾಯಕ ಪ್ರಸಾದ್ ಅತ್ತಾವರ್ ನೇತೃತ್ವದ ದುಷ್ಕರ್ಮಿಗಳು ನುಗ್ಗಿ ಪೀಠೋಪಕರಣಗಳಿಗೆ ಹಾನಿ, ಗಾಜು ಒಡೆದು, ಮಹಿಳಾ ಸಿಬ್ಬಂದಿಯ ಮೇಲೆ ಹಲ್ಲೆ ಮತ್ತು ಬೆದರಿಕೆ ಹಾಕಿದ್ದರು. ಈ ಘಟನೆಯ ನಂತರ ಮಹಾನಗರ ಪಾಲಿಕೆ ಈ ಹೇಳಿಕೆ ನೀಡಿದೆ. ಮಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಪರವಾನಗಿ ಷರತ್ತುಗಳ ಉಲ್ಲಂಘನೆಯಾಗಿದೆಯೇ ಎಂದು ಪರಿಶೀಲಿಸುವುದು ನಮ್ಮ ಕರ್ತವ್ಯ. ಅಧಿಕಾರಿಗಳ ತಂಡವು ದಾಖಲೆಗಳನ್ನು ಪರಿಶೀಲಿಸುತ್ತದೆ ಮತ್ತು ಪರವಾನಗಿ ಷರತ್ತುಗಳನ್ನು ಪಾಲಿಸಲಾಗಿದೆಯೇ ಎಂದು ಆವರಣದಲ್ಲಿ ಪರಿಶೀಲಿಸುತ್ತದೆ. ಸಲೂನ್‌ಗಳು ಮತ್ತು ಬ್ಯೂಟಿ ಪಾರ್ಲರ್‌ಗಳ ಹೆಸರಿನಲ್ಲಿ ಕಾನೂನುಬಾಹಿರ ಚಟುವಟಿಕೆಗಳ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಬೇಕಾಗುತ್ತದೆ” ಎಂದು ಅವರು ಹೇಳಿದ್ದಾರೆ.

“ಅಧಿಕಾರಿಗಳು ಪರವಾನಗಿಯನ್ನು ಯಾವ ಉದ್ದೇಶಕ್ಕಾಗಿ ನೀಡಲಾಗಿದೆ ಎಂಬುದನ್ನು ಪರಿಶೀಲಿಸುತ್ತಾರೆ. ಪರವಾನಗಿ ಹೊಂದಿರುವವರು ಪರವಾನಗಿಗಳನ್ನು ಉಲ್ಲಂಘಿಸುತ್ತಿದ್ದಾರೆಯೇ? ಎಂದು ಪರಿಶೀಲಿಸಲಾಗುತ್ತದೆ. ತಂಡಗಳ ಭೇಟಿಯ ಸಮಯದಲ್ಲಿ ಯಾವುದೇ ಉಲ್ಲಂಘನೆಗಳು ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಅವರು ಹೇಳಿದ್ದಾರೆ.

2017 ರಲ್ಲಿ ಮಂಗಳೂರು ಮೇಯರ್ ಆಗಿದ್ದ ಕವಿತಾ ಸನಿಲ್ ಅವರು ಹಲವಾರು ಅಕ್ರಮ ಮಸಾಜ್ ಕೇಂದ್ರಗಳು, ಸ್ಕಲ್ ಗೇಮ್ ಕೇಂದ್ರಗಳ ಮೇಲೆ ದಾಳಿ ನಡೆಸಿ ಅವುಗಳನ್ನು ಸೀಲ್‌ ಮಾಡಿದ್ದರು.

ಮಾಸಿಕ ಫೋನ್-ಇನ್ ಕಾರ್ಯಕ್ರಮದ ಸಮಯದಲ್ಲಿ, ಬೋಂಡೆಲ್‌ನಿಂದ ಕರೆ ಮಾಡಿದ್ದ ವ್ಯಕ್ತಿಯೊಬ್ಬರು ಈ ಪ್ರದೇಶದಲ್ಲಿ ಹೋಂಸ್ಟೇ ಕಾರ್ಯನಿರ್ವಹಿಸುತ್ತಿದ್ದು, ನಿವಾಸಿಗಳಿಗೆ ಅನಾನುಕೂಲತೆಯನ್ನುಂಟುಮಾಡುತ್ತಿದೆ ಎಂದು ಹೇಳಿದ್ದರು, ಅಧಿಕಾರಿಗಳು ಈ ಸಮಸ್ಯೆಯನ್ನೂ ಪರಿಶೀಲಿಸುತ್ತಾರೆ ಎಂದು ಮೇಯರ್ ಹೇಳಿದ್ದಾರೆ.

ಮಾಹಾನಗರ ಪಾಲಿಕೆ ಹೋಂ ಸ್ಟೇಗಾಗಿ ಕಟ್ಟಡ ಪರವಾನಗಿಗಳನ್ನು ಮಾತ್ರ ನೀಡುತ್ತದೆ ಎಂದು ಮೇಯರ್ ಹೇಳಿದ್ದು, ಇತರ ಪರವಾನಗಿಗಳು ಮತ್ತು ಅನುಮೋದನೆಗಳನ್ನು ಪ್ರವಾಸೋದ್ಯಮ ಇಲಾಖೆಯಿಂದ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂಓದಿ:  ಕೇಂದ್ರೀಯ ವಿವಿಯ ಬಾಕಿ ಇರುವ ಪ್ರಸ್ತಾವನೆಗಳ ಬಗ್ಗೆ ಕ್ರಮಕೈಗೊಳ್ಳಿ – ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ

ಕೇಂದ್ರೀಯ ವಿವಿಯ ಬಾಕಿ ಇರುವ ಪ್ರಸ್ತಾವನೆಗಳ ಬಗ್ಗೆ ಕ್ರಮಕೈಗೊಳ್ಳಿ – ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...