Homeಕರ್ನಾಟಕಮಂಗಳೂರು: ಪಠ್ಯಪರಿಷ್ಕರಣೆ ಸಮಿತಿಯ ವಿವಾದಾತ್ಮಕ ಮಾಜಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ‘ಸನ್ಮಾನ ಕಾರ್ಯಕ್ರಮ’ ರದ್ದು

ಮಂಗಳೂರು: ಪಠ್ಯಪರಿಷ್ಕರಣೆ ಸಮಿತಿಯ ವಿವಾದಾತ್ಮಕ ಮಾಜಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ‘ಸನ್ಮಾನ ಕಾರ್ಯಕ್ರಮ’ ರದ್ದು

- Advertisement -
- Advertisement -

ರಾಷ್ಟ್ರಕವಿ ಕುವೆಂಪುರವರಿಗೆ ಅವಮಾನಿಸಿ, ನಾಡಗೀತೆ ತಿರುಚಿದ ಆರೋಪ ಎದುರಿಸುತ್ತಿರುವ, ವಿವಾದಾತ್ಮಕ ಪಠ್ಯ ಪರಿಷ್ಕರಣೆ ಸಮಿತಿಯ ಮಾಜಿ ಅಧ್ಯಕ್ಷರಾದ ರೋಹಿತ್ ಚಕ್ರತೀರ್ಥ ಅವರನ್ನು, ಮಂಗಳೂರು ವಿಶ್ವ ವಿದ್ಯಾಲಯದ ಉಪ ಕುಲಪತಿಗಳು ಸನ್ಮಾನಿಸುವ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ. ನಾಡಿನ ಮಹಾತ್ಮರಿಗೆ ಅವಮಾನ ಎಸಗಿರುವ ವ್ಯಕ್ತಿಗೆ ಕುಲಪತಿಯೊಬ್ಬರು ಸನ್ಮಾನ ಮಾಡುವುದನ್ನು ವಿರೋಧಿಸಿ ಎಡಪಂಥೀಯ ಮತ್ತು ಜನಪರ ಸಂಘಟನೆಗಳು ಪ್ರತಿಭಟನೆ ನಡೆಸುವುದಾಗಿ ಮತ್ತು ಕಾರ್ಯಕ್ರಮದ ಸ್ಥಳಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದವು. ಈ ಹಿನ್ನಲೆಯಲ್ಲಿ ಕಾರ್ಯಕ್ರಮ ರದ್ದಾಗಿದೆ.

ಚಿಂತನಗಂಗಾ ಮತ್ತು ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಜೂನ್ 25ರ ಶನಿವಾರ ಸಂಜೆ 5 ಗಂಟೆಗೆ ಮಂಗಳೂರಿನ ಡೊಂಗರಕೇರಿ ಕೆನರಾ ಹೈಸ್ಕೂಲ್‌ನ ಭುವನೇಂದ್ರ ಸಭಾಂಗಣದಲ್ಲಿ ರೋಹಿತ್ ಚಕ್ರತೀರ್ಥ ಅವರಿಗೆ ‘ನಾಗರಿಕ ಸನ್ಮಾನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ‘ಭರತಖಂಡದ ಗತವೈಭವ ಮತ್ತು ಅಳಿಸಿಹೋದ ಇತಿಹಾಸ’ ಎಂಬ ವಿಷಯದ ಬಗ್ಗೆ ಚಕ್ರತೀರ್ಥ ಅವರು ವಿಷಯ ಮಂಡಿಸಲಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಉಪ ಕುಲಪತಿ ಪ್ರೊಫೆಸರ್‌ ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯರು ವಹಿಸಲಿದ್ದರು. ಆದರೆ ಈ ಕಾರ್ಯಕ್ರಮದ ವಿರುದ್ಧ ರಾಜ್ಯದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿತ್ತು.

ಇದನ್ನೂ ಓದಿ: ಪಠ್ಯ ಪರಿಷ್ಕರಣೆಯಲ್ಲಿ ಸರ್ಕಾರ ಸುಳ್ಳು ಹೇಳುತ್ತಿದೆ: 35 ಅಂಶಗಳನ್ನು ಪಟ್ಟಿ ಮಾಡಿದ ಸಿದ್ದರಾಮಯ್ಯ

ಕಾರ್ಯಕ್ರಮದ ರದ್ದಾಗ ಕುರಿತು ಸಂಘಟಕ ನಾಗೇಶ್ ಶೆಣೈ ಅವರು ಮಾತನಾಡಿ, “ಶಾಂತಿ ಸುವ್ಯವಸ್ಥೆಗೆ ಭಂಗ ಬರುವ ಬಗ್ಗೆ ನಮಗೆ ಮಾಹಿತಿ ಬಂತು. ಅಲ್ಲದೇ, ಸಾಮಾಜಿಕ ಮಾಧ್ಯಮಗಳಲ್ಲಿ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕುವ ಬಗ್ಗೆ ಕೆಲವರು ಪೋಸ್ಟ್ ಹಾಕಿದ್ದರು. ನಮ್ಮ ಕಾರ್ಯಕ್ರಮದಿಂದ ಮಂಗಳೂರಿನ ಶಾಂತಿ-ಸುವ್ಯವಸ್ಥೆಗೆ ಭಂಗ ಬರುವುದು ಬೇಡ ಎಂದು ಕಾರ್ಯಕ್ರಮ ರದ್ದು ಮಾಡಿದ್ದೇವೆ” ಎಂದು ಹೇಳಿದ್ದಾಗಿ ಈದಿನ.ಕಾಂ ವರಿದ ಮಾಡಿದೆ.

ಕಾರ್ಯಕಮ್ರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ, “ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ನಾಡಿನ ಖ್ಯಾತನಾಮರು, ಮಹಾನ್ ಚೇತನಗಳಿಗೆ ಅವಮಾನ ಎಸಗಿರುವ, ನಾಡಗೀತೆಗೆ ಅಪಮಾನ ಎಸಗಿರುವ, ರಾಜ್ಯದಲ್ಲಿ ಸಾರ್ವತ್ರಿಕ ಆಕ್ರೋಶಕ್ಕೆ ಗುರಿಯಾಗಿರುವ ರೋಹಿತ್ ಚಕ್ರತೀರ್ಥ ಗೆ ಮಂಗಳೂರಿನ ಬಲಪಂಥೀಯ ವೇದಿಕೆಯೊಂದು ಶನಿವಾರ (ಜೂನ್ 25) ನಾಗರಿಕ ಸನ್ಮಾನ ನಡೆಸುತ್ತಿದೆ ಎಂಬ ಮಾಹಿತಿ ತಿಳಿದು ಆಘಾತವಾಯಿತು” ಎಂದು ಹೇಳಿದ್ದರು.

“ಇಡೀ ಕರ್ನಾಟಕ ಈ ವ್ಯಕ್ತಿಯ ವಿರುದ್ದ ಆಕ್ರೋಶಗೊಂಡಿರುವಾಗ, ಬಸವಣ್ಣ, ಕುವೆಂಪು, ನಾರಾಯಣ ಗುರುಗಳ ಅನುಯಾಯಿಗಳು ಪ್ರತಿಭಟನೆ ನಿರತರಾಗಿರುವ ಸಂದರ್ಭದಲ್ಲಿ ಮಂಗಳೂರಿನಂತಹ ವಿದ್ಯಾವಂತ ಜನರಿರುವ ನಗರದಲ್ಲಿ ಇದು ಘಟಿಸಬಾರದಿತ್ತು. ಅದರಲ್ಲಿಯೂ ನಾಗರಿಕ ಸನ್ಮಾನದ ಸಭಾಧ್ಯಕ್ಷತೆಯನ್ನು ಮಂಗಳೂರು ವಿವಿಯ ಕುಲಪತಿಗಳಾದ ಮಾನ್ಯ ಯಡಪಡಿತ್ತಾಯರು ವಹಿಸಲಿರುವುದು ಕಂಡು ಮನಸ್ಸು ವಿಷಣ್ಣವಾಯಿತು” ಎಂದು  ಮುನೀರ್ ಕಾಟಿಪಳ್ಳ ಬೇಸರ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಪಠ್ಯದಲ್ಲಿ ಸೂಲಿಬೆಲೆ ಪಾಠದ ಕುರಿತು ಮಾತನಾಡಲು ಆರ್ ಅಶೋಕ್ ಹಿಂದೇಟು: ಚಕ್ರವರ್ತಿಯ ಈ ಸುಳ್ಳುಗಳು ಕಾರಣವೇ?

ಕಾರ್ಯಕ್ರಮ ರದ್ದು ಪಡಿಸುವಂತೆ ಕಾರ್ಯಕ್ರಮ ನಡೆಸುವ ಸ್ಥಳಕ್ಕೆ ಮುತ್ತಿಗೆ ಹಾಕುವುದಾಗಿ, ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ, ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲೆ, ದಲಿತ ಸಂಘರ್ಷ ಸಮಿತಿ ದಕ್ಷಿಣ ಕನ್ನಡ, ಸಿಐಟಿಯು ದ ಕ ಜಿಲ್ಲೆ, ಸಾಮರಸ್ಯ ಮಂಗಳೂರು, ದಕ ಜಿಲ್ಲಾ ಕಾಂಗ್ರೆಸ್, ದಕ ಜಿಲ್ಲಾ ಜಾತ್ಯಾತೀತ ಜನತಾ ದಳ, ದಕ ಜಿಲ್ಲಾ ಸಿಪಿಐಎಂ, SFI,NSUI, ಮಾನವತಾ ವೇದಿಕೆ, ಅಖಿಲ ವಕೀಲರ ಭಾರತ ಸಂಘ ದಕ ಜಿಲ್ಲೆ, ಪ್ರಗತಿಪರ ಚಿಂತಕರ ವೇದಿಕೆ, ಜನವಾದಿ ಮಹಿಳಾ ಸಂಘ (JMS), ಸಿಪಿಐ ದಕ್ಷಿಣ ಕನ್ನಡ ಜಿಲ್ಲೆ, ನಾರಾಯಣ ಗುರು ಅಭಿಮಾನಿ ಬಳಗ ಮಂಗಳೂರು, AITUC ದಕ ಜಿಲ್ಲೆ, AIYF ದ ಕ ಜಿಲ್ಲಾ ಸಮಿತಿ, ಭಗತ್ ಸಿಂಗ್ ಕ್ರಾಂತಿ ಬಳಗ, INTUC ದಕ್ಷಿಣ ಕನ್ನಡ ಸೇರಿದಂತೆ ಹಲವಾರು ಸಂಘಟನೆಗಳು ಎಚ್ಚರಿಕೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆ ಅಯ್ಯೊಗ್ಯ ಉಪಕುಲಪತಿ ಮತ್ತು ಸಮಾರಂಭದ ಅಯೋಜಕರಿಗೆ ಕಡೆಗಾದರು ಬುದ್ದಿಬಂತಲ್ಲಾ, ಇಲ್ಲ ಅಂದರೆ ಸಾರ್ವಜನಿಕರು ಸರಿಯಾಗಿ ಪೂಜೆ ಮಾಡುತ್ತಿದ್ದರು.

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...