Homeಕರ್ನಾಟಕಮಂಗಳೂರು: ಪಠ್ಯಪರಿಷ್ಕರಣೆ ಸಮಿತಿಯ ವಿವಾದಾತ್ಮಕ ಮಾಜಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ‘ಸನ್ಮಾನ ಕಾರ್ಯಕ್ರಮ’ ರದ್ದು

ಮಂಗಳೂರು: ಪಠ್ಯಪರಿಷ್ಕರಣೆ ಸಮಿತಿಯ ವಿವಾದಾತ್ಮಕ ಮಾಜಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ‘ಸನ್ಮಾನ ಕಾರ್ಯಕ್ರಮ’ ರದ್ದು

- Advertisement -
- Advertisement -

ರಾಷ್ಟ್ರಕವಿ ಕುವೆಂಪುರವರಿಗೆ ಅವಮಾನಿಸಿ, ನಾಡಗೀತೆ ತಿರುಚಿದ ಆರೋಪ ಎದುರಿಸುತ್ತಿರುವ, ವಿವಾದಾತ್ಮಕ ಪಠ್ಯ ಪರಿಷ್ಕರಣೆ ಸಮಿತಿಯ ಮಾಜಿ ಅಧ್ಯಕ್ಷರಾದ ರೋಹಿತ್ ಚಕ್ರತೀರ್ಥ ಅವರನ್ನು, ಮಂಗಳೂರು ವಿಶ್ವ ವಿದ್ಯಾಲಯದ ಉಪ ಕುಲಪತಿಗಳು ಸನ್ಮಾನಿಸುವ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ. ನಾಡಿನ ಮಹಾತ್ಮರಿಗೆ ಅವಮಾನ ಎಸಗಿರುವ ವ್ಯಕ್ತಿಗೆ ಕುಲಪತಿಯೊಬ್ಬರು ಸನ್ಮಾನ ಮಾಡುವುದನ್ನು ವಿರೋಧಿಸಿ ಎಡಪಂಥೀಯ ಮತ್ತು ಜನಪರ ಸಂಘಟನೆಗಳು ಪ್ರತಿಭಟನೆ ನಡೆಸುವುದಾಗಿ ಮತ್ತು ಕಾರ್ಯಕ್ರಮದ ಸ್ಥಳಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದವು. ಈ ಹಿನ್ನಲೆಯಲ್ಲಿ ಕಾರ್ಯಕ್ರಮ ರದ್ದಾಗಿದೆ.

ಚಿಂತನಗಂಗಾ ಮತ್ತು ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಜೂನ್ 25ರ ಶನಿವಾರ ಸಂಜೆ 5 ಗಂಟೆಗೆ ಮಂಗಳೂರಿನ ಡೊಂಗರಕೇರಿ ಕೆನರಾ ಹೈಸ್ಕೂಲ್‌ನ ಭುವನೇಂದ್ರ ಸಭಾಂಗಣದಲ್ಲಿ ರೋಹಿತ್ ಚಕ್ರತೀರ್ಥ ಅವರಿಗೆ ‘ನಾಗರಿಕ ಸನ್ಮಾನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ‘ಭರತಖಂಡದ ಗತವೈಭವ ಮತ್ತು ಅಳಿಸಿಹೋದ ಇತಿಹಾಸ’ ಎಂಬ ವಿಷಯದ ಬಗ್ಗೆ ಚಕ್ರತೀರ್ಥ ಅವರು ವಿಷಯ ಮಂಡಿಸಲಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಉಪ ಕುಲಪತಿ ಪ್ರೊಫೆಸರ್‌ ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯರು ವಹಿಸಲಿದ್ದರು. ಆದರೆ ಈ ಕಾರ್ಯಕ್ರಮದ ವಿರುದ್ಧ ರಾಜ್ಯದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿತ್ತು.

ಇದನ್ನೂ ಓದಿ: ಪಠ್ಯ ಪರಿಷ್ಕರಣೆಯಲ್ಲಿ ಸರ್ಕಾರ ಸುಳ್ಳು ಹೇಳುತ್ತಿದೆ: 35 ಅಂಶಗಳನ್ನು ಪಟ್ಟಿ ಮಾಡಿದ ಸಿದ್ದರಾಮಯ್ಯ

ಕಾರ್ಯಕ್ರಮದ ರದ್ದಾಗ ಕುರಿತು ಸಂಘಟಕ ನಾಗೇಶ್ ಶೆಣೈ ಅವರು ಮಾತನಾಡಿ, “ಶಾಂತಿ ಸುವ್ಯವಸ್ಥೆಗೆ ಭಂಗ ಬರುವ ಬಗ್ಗೆ ನಮಗೆ ಮಾಹಿತಿ ಬಂತು. ಅಲ್ಲದೇ, ಸಾಮಾಜಿಕ ಮಾಧ್ಯಮಗಳಲ್ಲಿ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕುವ ಬಗ್ಗೆ ಕೆಲವರು ಪೋಸ್ಟ್ ಹಾಕಿದ್ದರು. ನಮ್ಮ ಕಾರ್ಯಕ್ರಮದಿಂದ ಮಂಗಳೂರಿನ ಶಾಂತಿ-ಸುವ್ಯವಸ್ಥೆಗೆ ಭಂಗ ಬರುವುದು ಬೇಡ ಎಂದು ಕಾರ್ಯಕ್ರಮ ರದ್ದು ಮಾಡಿದ್ದೇವೆ” ಎಂದು ಹೇಳಿದ್ದಾಗಿ ಈದಿನ.ಕಾಂ ವರಿದ ಮಾಡಿದೆ.

ಕಾರ್ಯಕಮ್ರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ, “ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ನಾಡಿನ ಖ್ಯಾತನಾಮರು, ಮಹಾನ್ ಚೇತನಗಳಿಗೆ ಅವಮಾನ ಎಸಗಿರುವ, ನಾಡಗೀತೆಗೆ ಅಪಮಾನ ಎಸಗಿರುವ, ರಾಜ್ಯದಲ್ಲಿ ಸಾರ್ವತ್ರಿಕ ಆಕ್ರೋಶಕ್ಕೆ ಗುರಿಯಾಗಿರುವ ರೋಹಿತ್ ಚಕ್ರತೀರ್ಥ ಗೆ ಮಂಗಳೂರಿನ ಬಲಪಂಥೀಯ ವೇದಿಕೆಯೊಂದು ಶನಿವಾರ (ಜೂನ್ 25) ನಾಗರಿಕ ಸನ್ಮಾನ ನಡೆಸುತ್ತಿದೆ ಎಂಬ ಮಾಹಿತಿ ತಿಳಿದು ಆಘಾತವಾಯಿತು” ಎಂದು ಹೇಳಿದ್ದರು.

“ಇಡೀ ಕರ್ನಾಟಕ ಈ ವ್ಯಕ್ತಿಯ ವಿರುದ್ದ ಆಕ್ರೋಶಗೊಂಡಿರುವಾಗ, ಬಸವಣ್ಣ, ಕುವೆಂಪು, ನಾರಾಯಣ ಗುರುಗಳ ಅನುಯಾಯಿಗಳು ಪ್ರತಿಭಟನೆ ನಿರತರಾಗಿರುವ ಸಂದರ್ಭದಲ್ಲಿ ಮಂಗಳೂರಿನಂತಹ ವಿದ್ಯಾವಂತ ಜನರಿರುವ ನಗರದಲ್ಲಿ ಇದು ಘಟಿಸಬಾರದಿತ್ತು. ಅದರಲ್ಲಿಯೂ ನಾಗರಿಕ ಸನ್ಮಾನದ ಸಭಾಧ್ಯಕ್ಷತೆಯನ್ನು ಮಂಗಳೂರು ವಿವಿಯ ಕುಲಪತಿಗಳಾದ ಮಾನ್ಯ ಯಡಪಡಿತ್ತಾಯರು ವಹಿಸಲಿರುವುದು ಕಂಡು ಮನಸ್ಸು ವಿಷಣ್ಣವಾಯಿತು” ಎಂದು  ಮುನೀರ್ ಕಾಟಿಪಳ್ಳ ಬೇಸರ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಪಠ್ಯದಲ್ಲಿ ಸೂಲಿಬೆಲೆ ಪಾಠದ ಕುರಿತು ಮಾತನಾಡಲು ಆರ್ ಅಶೋಕ್ ಹಿಂದೇಟು: ಚಕ್ರವರ್ತಿಯ ಈ ಸುಳ್ಳುಗಳು ಕಾರಣವೇ?

ಕಾರ್ಯಕ್ರಮ ರದ್ದು ಪಡಿಸುವಂತೆ ಕಾರ್ಯಕ್ರಮ ನಡೆಸುವ ಸ್ಥಳಕ್ಕೆ ಮುತ್ತಿಗೆ ಹಾಕುವುದಾಗಿ, ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ, ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲೆ, ದಲಿತ ಸಂಘರ್ಷ ಸಮಿತಿ ದಕ್ಷಿಣ ಕನ್ನಡ, ಸಿಐಟಿಯು ದ ಕ ಜಿಲ್ಲೆ, ಸಾಮರಸ್ಯ ಮಂಗಳೂರು, ದಕ ಜಿಲ್ಲಾ ಕಾಂಗ್ರೆಸ್, ದಕ ಜಿಲ್ಲಾ ಜಾತ್ಯಾತೀತ ಜನತಾ ದಳ, ದಕ ಜಿಲ್ಲಾ ಸಿಪಿಐಎಂ, SFI,NSUI, ಮಾನವತಾ ವೇದಿಕೆ, ಅಖಿಲ ವಕೀಲರ ಭಾರತ ಸಂಘ ದಕ ಜಿಲ್ಲೆ, ಪ್ರಗತಿಪರ ಚಿಂತಕರ ವೇದಿಕೆ, ಜನವಾದಿ ಮಹಿಳಾ ಸಂಘ (JMS), ಸಿಪಿಐ ದಕ್ಷಿಣ ಕನ್ನಡ ಜಿಲ್ಲೆ, ನಾರಾಯಣ ಗುರು ಅಭಿಮಾನಿ ಬಳಗ ಮಂಗಳೂರು, AITUC ದಕ ಜಿಲ್ಲೆ, AIYF ದ ಕ ಜಿಲ್ಲಾ ಸಮಿತಿ, ಭಗತ್ ಸಿಂಗ್ ಕ್ರಾಂತಿ ಬಳಗ, INTUC ದಕ್ಷಿಣ ಕನ್ನಡ ಸೇರಿದಂತೆ ಹಲವಾರು ಸಂಘಟನೆಗಳು ಎಚ್ಚರಿಕೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆ ಅಯ್ಯೊಗ್ಯ ಉಪಕುಲಪತಿ ಮತ್ತು ಸಮಾರಂಭದ ಅಯೋಜಕರಿಗೆ ಕಡೆಗಾದರು ಬುದ್ದಿಬಂತಲ್ಲಾ, ಇಲ್ಲ ಅಂದರೆ ಸಾರ್ವಜನಿಕರು ಸರಿಯಾಗಿ ಪೂಜೆ ಮಾಡುತ್ತಿದ್ದರು.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...