Homeಕರ್ನಾಟಕಮಂಗಳೂರು: ಪಠ್ಯಪರಿಷ್ಕರಣೆ ಸಮಿತಿಯ ವಿವಾದಾತ್ಮಕ ಮಾಜಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ‘ಸನ್ಮಾನ ಕಾರ್ಯಕ್ರಮ’ ರದ್ದು

ಮಂಗಳೂರು: ಪಠ್ಯಪರಿಷ್ಕರಣೆ ಸಮಿತಿಯ ವಿವಾದಾತ್ಮಕ ಮಾಜಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ‘ಸನ್ಮಾನ ಕಾರ್ಯಕ್ರಮ’ ರದ್ದು

- Advertisement -
- Advertisement -

ರಾಷ್ಟ್ರಕವಿ ಕುವೆಂಪುರವರಿಗೆ ಅವಮಾನಿಸಿ, ನಾಡಗೀತೆ ತಿರುಚಿದ ಆರೋಪ ಎದುರಿಸುತ್ತಿರುವ, ವಿವಾದಾತ್ಮಕ ಪಠ್ಯ ಪರಿಷ್ಕರಣೆ ಸಮಿತಿಯ ಮಾಜಿ ಅಧ್ಯಕ್ಷರಾದ ರೋಹಿತ್ ಚಕ್ರತೀರ್ಥ ಅವರನ್ನು, ಮಂಗಳೂರು ವಿಶ್ವ ವಿದ್ಯಾಲಯದ ಉಪ ಕುಲಪತಿಗಳು ಸನ್ಮಾನಿಸುವ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ. ನಾಡಿನ ಮಹಾತ್ಮರಿಗೆ ಅವಮಾನ ಎಸಗಿರುವ ವ್ಯಕ್ತಿಗೆ ಕುಲಪತಿಯೊಬ್ಬರು ಸನ್ಮಾನ ಮಾಡುವುದನ್ನು ವಿರೋಧಿಸಿ ಎಡಪಂಥೀಯ ಮತ್ತು ಜನಪರ ಸಂಘಟನೆಗಳು ಪ್ರತಿಭಟನೆ ನಡೆಸುವುದಾಗಿ ಮತ್ತು ಕಾರ್ಯಕ್ರಮದ ಸ್ಥಳಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದವು. ಈ ಹಿನ್ನಲೆಯಲ್ಲಿ ಕಾರ್ಯಕ್ರಮ ರದ್ದಾಗಿದೆ.

ಚಿಂತನಗಂಗಾ ಮತ್ತು ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಜೂನ್ 25ರ ಶನಿವಾರ ಸಂಜೆ 5 ಗಂಟೆಗೆ ಮಂಗಳೂರಿನ ಡೊಂಗರಕೇರಿ ಕೆನರಾ ಹೈಸ್ಕೂಲ್‌ನ ಭುವನೇಂದ್ರ ಸಭಾಂಗಣದಲ್ಲಿ ರೋಹಿತ್ ಚಕ್ರತೀರ್ಥ ಅವರಿಗೆ ‘ನಾಗರಿಕ ಸನ್ಮಾನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ‘ಭರತಖಂಡದ ಗತವೈಭವ ಮತ್ತು ಅಳಿಸಿಹೋದ ಇತಿಹಾಸ’ ಎಂಬ ವಿಷಯದ ಬಗ್ಗೆ ಚಕ್ರತೀರ್ಥ ಅವರು ವಿಷಯ ಮಂಡಿಸಲಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಉಪ ಕುಲಪತಿ ಪ್ರೊಫೆಸರ್‌ ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯರು ವಹಿಸಲಿದ್ದರು. ಆದರೆ ಈ ಕಾರ್ಯಕ್ರಮದ ವಿರುದ್ಧ ರಾಜ್ಯದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿತ್ತು.

ಇದನ್ನೂ ಓದಿ: ಪಠ್ಯ ಪರಿಷ್ಕರಣೆಯಲ್ಲಿ ಸರ್ಕಾರ ಸುಳ್ಳು ಹೇಳುತ್ತಿದೆ: 35 ಅಂಶಗಳನ್ನು ಪಟ್ಟಿ ಮಾಡಿದ ಸಿದ್ದರಾಮಯ್ಯ

ಕಾರ್ಯಕ್ರಮದ ರದ್ದಾಗ ಕುರಿತು ಸಂಘಟಕ ನಾಗೇಶ್ ಶೆಣೈ ಅವರು ಮಾತನಾಡಿ, “ಶಾಂತಿ ಸುವ್ಯವಸ್ಥೆಗೆ ಭಂಗ ಬರುವ ಬಗ್ಗೆ ನಮಗೆ ಮಾಹಿತಿ ಬಂತು. ಅಲ್ಲದೇ, ಸಾಮಾಜಿಕ ಮಾಧ್ಯಮಗಳಲ್ಲಿ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕುವ ಬಗ್ಗೆ ಕೆಲವರು ಪೋಸ್ಟ್ ಹಾಕಿದ್ದರು. ನಮ್ಮ ಕಾರ್ಯಕ್ರಮದಿಂದ ಮಂಗಳೂರಿನ ಶಾಂತಿ-ಸುವ್ಯವಸ್ಥೆಗೆ ಭಂಗ ಬರುವುದು ಬೇಡ ಎಂದು ಕಾರ್ಯಕ್ರಮ ರದ್ದು ಮಾಡಿದ್ದೇವೆ” ಎಂದು ಹೇಳಿದ್ದಾಗಿ ಈದಿನ.ಕಾಂ ವರಿದ ಮಾಡಿದೆ.

ಕಾರ್ಯಕಮ್ರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ, “ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ನಾಡಿನ ಖ್ಯಾತನಾಮರು, ಮಹಾನ್ ಚೇತನಗಳಿಗೆ ಅವಮಾನ ಎಸಗಿರುವ, ನಾಡಗೀತೆಗೆ ಅಪಮಾನ ಎಸಗಿರುವ, ರಾಜ್ಯದಲ್ಲಿ ಸಾರ್ವತ್ರಿಕ ಆಕ್ರೋಶಕ್ಕೆ ಗುರಿಯಾಗಿರುವ ರೋಹಿತ್ ಚಕ್ರತೀರ್ಥ ಗೆ ಮಂಗಳೂರಿನ ಬಲಪಂಥೀಯ ವೇದಿಕೆಯೊಂದು ಶನಿವಾರ (ಜೂನ್ 25) ನಾಗರಿಕ ಸನ್ಮಾನ ನಡೆಸುತ್ತಿದೆ ಎಂಬ ಮಾಹಿತಿ ತಿಳಿದು ಆಘಾತವಾಯಿತು” ಎಂದು ಹೇಳಿದ್ದರು.

“ಇಡೀ ಕರ್ನಾಟಕ ಈ ವ್ಯಕ್ತಿಯ ವಿರುದ್ದ ಆಕ್ರೋಶಗೊಂಡಿರುವಾಗ, ಬಸವಣ್ಣ, ಕುವೆಂಪು, ನಾರಾಯಣ ಗುರುಗಳ ಅನುಯಾಯಿಗಳು ಪ್ರತಿಭಟನೆ ನಿರತರಾಗಿರುವ ಸಂದರ್ಭದಲ್ಲಿ ಮಂಗಳೂರಿನಂತಹ ವಿದ್ಯಾವಂತ ಜನರಿರುವ ನಗರದಲ್ಲಿ ಇದು ಘಟಿಸಬಾರದಿತ್ತು. ಅದರಲ್ಲಿಯೂ ನಾಗರಿಕ ಸನ್ಮಾನದ ಸಭಾಧ್ಯಕ್ಷತೆಯನ್ನು ಮಂಗಳೂರು ವಿವಿಯ ಕುಲಪತಿಗಳಾದ ಮಾನ್ಯ ಯಡಪಡಿತ್ತಾಯರು ವಹಿಸಲಿರುವುದು ಕಂಡು ಮನಸ್ಸು ವಿಷಣ್ಣವಾಯಿತು” ಎಂದು  ಮುನೀರ್ ಕಾಟಿಪಳ್ಳ ಬೇಸರ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಪಠ್ಯದಲ್ಲಿ ಸೂಲಿಬೆಲೆ ಪಾಠದ ಕುರಿತು ಮಾತನಾಡಲು ಆರ್ ಅಶೋಕ್ ಹಿಂದೇಟು: ಚಕ್ರವರ್ತಿಯ ಈ ಸುಳ್ಳುಗಳು ಕಾರಣವೇ?

ಕಾರ್ಯಕ್ರಮ ರದ್ದು ಪಡಿಸುವಂತೆ ಕಾರ್ಯಕ್ರಮ ನಡೆಸುವ ಸ್ಥಳಕ್ಕೆ ಮುತ್ತಿಗೆ ಹಾಕುವುದಾಗಿ, ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ, ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲೆ, ದಲಿತ ಸಂಘರ್ಷ ಸಮಿತಿ ದಕ್ಷಿಣ ಕನ್ನಡ, ಸಿಐಟಿಯು ದ ಕ ಜಿಲ್ಲೆ, ಸಾಮರಸ್ಯ ಮಂಗಳೂರು, ದಕ ಜಿಲ್ಲಾ ಕಾಂಗ್ರೆಸ್, ದಕ ಜಿಲ್ಲಾ ಜಾತ್ಯಾತೀತ ಜನತಾ ದಳ, ದಕ ಜಿಲ್ಲಾ ಸಿಪಿಐಎಂ, SFI,NSUI, ಮಾನವತಾ ವೇದಿಕೆ, ಅಖಿಲ ವಕೀಲರ ಭಾರತ ಸಂಘ ದಕ ಜಿಲ್ಲೆ, ಪ್ರಗತಿಪರ ಚಿಂತಕರ ವೇದಿಕೆ, ಜನವಾದಿ ಮಹಿಳಾ ಸಂಘ (JMS), ಸಿಪಿಐ ದಕ್ಷಿಣ ಕನ್ನಡ ಜಿಲ್ಲೆ, ನಾರಾಯಣ ಗುರು ಅಭಿಮಾನಿ ಬಳಗ ಮಂಗಳೂರು, AITUC ದಕ ಜಿಲ್ಲೆ, AIYF ದ ಕ ಜಿಲ್ಲಾ ಸಮಿತಿ, ಭಗತ್ ಸಿಂಗ್ ಕ್ರಾಂತಿ ಬಳಗ, INTUC ದಕ್ಷಿಣ ಕನ್ನಡ ಸೇರಿದಂತೆ ಹಲವಾರು ಸಂಘಟನೆಗಳು ಎಚ್ಚರಿಕೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆ ಅಯ್ಯೊಗ್ಯ ಉಪಕುಲಪತಿ ಮತ್ತು ಸಮಾರಂಭದ ಅಯೋಜಕರಿಗೆ ಕಡೆಗಾದರು ಬುದ್ದಿಬಂತಲ್ಲಾ, ಇಲ್ಲ ಅಂದರೆ ಸಾರ್ವಜನಿಕರು ಸರಿಯಾಗಿ ಪೂಜೆ ಮಾಡುತ್ತಿದ್ದರು.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...