Homeಕರ್ನಾಟಕಮಂಗಳೂರು: ಪಠ್ಯಪರಿಷ್ಕರಣೆ ಸಮಿತಿಯ ವಿವಾದಾತ್ಮಕ ಮಾಜಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ‘ಸನ್ಮಾನ ಕಾರ್ಯಕ್ರಮ’ ರದ್ದು

ಮಂಗಳೂರು: ಪಠ್ಯಪರಿಷ್ಕರಣೆ ಸಮಿತಿಯ ವಿವಾದಾತ್ಮಕ ಮಾಜಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ‘ಸನ್ಮಾನ ಕಾರ್ಯಕ್ರಮ’ ರದ್ದು

- Advertisement -
- Advertisement -

ರಾಷ್ಟ್ರಕವಿ ಕುವೆಂಪುರವರಿಗೆ ಅವಮಾನಿಸಿ, ನಾಡಗೀತೆ ತಿರುಚಿದ ಆರೋಪ ಎದುರಿಸುತ್ತಿರುವ, ವಿವಾದಾತ್ಮಕ ಪಠ್ಯ ಪರಿಷ್ಕರಣೆ ಸಮಿತಿಯ ಮಾಜಿ ಅಧ್ಯಕ್ಷರಾದ ರೋಹಿತ್ ಚಕ್ರತೀರ್ಥ ಅವರನ್ನು, ಮಂಗಳೂರು ವಿಶ್ವ ವಿದ್ಯಾಲಯದ ಉಪ ಕುಲಪತಿಗಳು ಸನ್ಮಾನಿಸುವ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ. ನಾಡಿನ ಮಹಾತ್ಮರಿಗೆ ಅವಮಾನ ಎಸಗಿರುವ ವ್ಯಕ್ತಿಗೆ ಕುಲಪತಿಯೊಬ್ಬರು ಸನ್ಮಾನ ಮಾಡುವುದನ್ನು ವಿರೋಧಿಸಿ ಎಡಪಂಥೀಯ ಮತ್ತು ಜನಪರ ಸಂಘಟನೆಗಳು ಪ್ರತಿಭಟನೆ ನಡೆಸುವುದಾಗಿ ಮತ್ತು ಕಾರ್ಯಕ್ರಮದ ಸ್ಥಳಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದವು. ಈ ಹಿನ್ನಲೆಯಲ್ಲಿ ಕಾರ್ಯಕ್ರಮ ರದ್ದಾಗಿದೆ.

ಚಿಂತನಗಂಗಾ ಮತ್ತು ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಜೂನ್ 25ರ ಶನಿವಾರ ಸಂಜೆ 5 ಗಂಟೆಗೆ ಮಂಗಳೂರಿನ ಡೊಂಗರಕೇರಿ ಕೆನರಾ ಹೈಸ್ಕೂಲ್‌ನ ಭುವನೇಂದ್ರ ಸಭಾಂಗಣದಲ್ಲಿ ರೋಹಿತ್ ಚಕ್ರತೀರ್ಥ ಅವರಿಗೆ ‘ನಾಗರಿಕ ಸನ್ಮಾನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ‘ಭರತಖಂಡದ ಗತವೈಭವ ಮತ್ತು ಅಳಿಸಿಹೋದ ಇತಿಹಾಸ’ ಎಂಬ ವಿಷಯದ ಬಗ್ಗೆ ಚಕ್ರತೀರ್ಥ ಅವರು ವಿಷಯ ಮಂಡಿಸಲಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಉಪ ಕುಲಪತಿ ಪ್ರೊಫೆಸರ್‌ ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯರು ವಹಿಸಲಿದ್ದರು. ಆದರೆ ಈ ಕಾರ್ಯಕ್ರಮದ ವಿರುದ್ಧ ರಾಜ್ಯದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿತ್ತು.

ಇದನ್ನೂ ಓದಿ: ಪಠ್ಯ ಪರಿಷ್ಕರಣೆಯಲ್ಲಿ ಸರ್ಕಾರ ಸುಳ್ಳು ಹೇಳುತ್ತಿದೆ: 35 ಅಂಶಗಳನ್ನು ಪಟ್ಟಿ ಮಾಡಿದ ಸಿದ್ದರಾಮಯ್ಯ

ಕಾರ್ಯಕ್ರಮದ ರದ್ದಾಗ ಕುರಿತು ಸಂಘಟಕ ನಾಗೇಶ್ ಶೆಣೈ ಅವರು ಮಾತನಾಡಿ, “ಶಾಂತಿ ಸುವ್ಯವಸ್ಥೆಗೆ ಭಂಗ ಬರುವ ಬಗ್ಗೆ ನಮಗೆ ಮಾಹಿತಿ ಬಂತು. ಅಲ್ಲದೇ, ಸಾಮಾಜಿಕ ಮಾಧ್ಯಮಗಳಲ್ಲಿ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕುವ ಬಗ್ಗೆ ಕೆಲವರು ಪೋಸ್ಟ್ ಹಾಕಿದ್ದರು. ನಮ್ಮ ಕಾರ್ಯಕ್ರಮದಿಂದ ಮಂಗಳೂರಿನ ಶಾಂತಿ-ಸುವ್ಯವಸ್ಥೆಗೆ ಭಂಗ ಬರುವುದು ಬೇಡ ಎಂದು ಕಾರ್ಯಕ್ರಮ ರದ್ದು ಮಾಡಿದ್ದೇವೆ” ಎಂದು ಹೇಳಿದ್ದಾಗಿ ಈದಿನ.ಕಾಂ ವರಿದ ಮಾಡಿದೆ.

ಕಾರ್ಯಕಮ್ರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ, “ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ನಾಡಿನ ಖ್ಯಾತನಾಮರು, ಮಹಾನ್ ಚೇತನಗಳಿಗೆ ಅವಮಾನ ಎಸಗಿರುವ, ನಾಡಗೀತೆಗೆ ಅಪಮಾನ ಎಸಗಿರುವ, ರಾಜ್ಯದಲ್ಲಿ ಸಾರ್ವತ್ರಿಕ ಆಕ್ರೋಶಕ್ಕೆ ಗುರಿಯಾಗಿರುವ ರೋಹಿತ್ ಚಕ್ರತೀರ್ಥ ಗೆ ಮಂಗಳೂರಿನ ಬಲಪಂಥೀಯ ವೇದಿಕೆಯೊಂದು ಶನಿವಾರ (ಜೂನ್ 25) ನಾಗರಿಕ ಸನ್ಮಾನ ನಡೆಸುತ್ತಿದೆ ಎಂಬ ಮಾಹಿತಿ ತಿಳಿದು ಆಘಾತವಾಯಿತು” ಎಂದು ಹೇಳಿದ್ದರು.

“ಇಡೀ ಕರ್ನಾಟಕ ಈ ವ್ಯಕ್ತಿಯ ವಿರುದ್ದ ಆಕ್ರೋಶಗೊಂಡಿರುವಾಗ, ಬಸವಣ್ಣ, ಕುವೆಂಪು, ನಾರಾಯಣ ಗುರುಗಳ ಅನುಯಾಯಿಗಳು ಪ್ರತಿಭಟನೆ ನಿರತರಾಗಿರುವ ಸಂದರ್ಭದಲ್ಲಿ ಮಂಗಳೂರಿನಂತಹ ವಿದ್ಯಾವಂತ ಜನರಿರುವ ನಗರದಲ್ಲಿ ಇದು ಘಟಿಸಬಾರದಿತ್ತು. ಅದರಲ್ಲಿಯೂ ನಾಗರಿಕ ಸನ್ಮಾನದ ಸಭಾಧ್ಯಕ್ಷತೆಯನ್ನು ಮಂಗಳೂರು ವಿವಿಯ ಕುಲಪತಿಗಳಾದ ಮಾನ್ಯ ಯಡಪಡಿತ್ತಾಯರು ವಹಿಸಲಿರುವುದು ಕಂಡು ಮನಸ್ಸು ವಿಷಣ್ಣವಾಯಿತು” ಎಂದು  ಮುನೀರ್ ಕಾಟಿಪಳ್ಳ ಬೇಸರ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಪಠ್ಯದಲ್ಲಿ ಸೂಲಿಬೆಲೆ ಪಾಠದ ಕುರಿತು ಮಾತನಾಡಲು ಆರ್ ಅಶೋಕ್ ಹಿಂದೇಟು: ಚಕ್ರವರ್ತಿಯ ಈ ಸುಳ್ಳುಗಳು ಕಾರಣವೇ?

ಕಾರ್ಯಕ್ರಮ ರದ್ದು ಪಡಿಸುವಂತೆ ಕಾರ್ಯಕ್ರಮ ನಡೆಸುವ ಸ್ಥಳಕ್ಕೆ ಮುತ್ತಿಗೆ ಹಾಕುವುದಾಗಿ, ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ, ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲೆ, ದಲಿತ ಸಂಘರ್ಷ ಸಮಿತಿ ದಕ್ಷಿಣ ಕನ್ನಡ, ಸಿಐಟಿಯು ದ ಕ ಜಿಲ್ಲೆ, ಸಾಮರಸ್ಯ ಮಂಗಳೂರು, ದಕ ಜಿಲ್ಲಾ ಕಾಂಗ್ರೆಸ್, ದಕ ಜಿಲ್ಲಾ ಜಾತ್ಯಾತೀತ ಜನತಾ ದಳ, ದಕ ಜಿಲ್ಲಾ ಸಿಪಿಐಎಂ, SFI,NSUI, ಮಾನವತಾ ವೇದಿಕೆ, ಅಖಿಲ ವಕೀಲರ ಭಾರತ ಸಂಘ ದಕ ಜಿಲ್ಲೆ, ಪ್ರಗತಿಪರ ಚಿಂತಕರ ವೇದಿಕೆ, ಜನವಾದಿ ಮಹಿಳಾ ಸಂಘ (JMS), ಸಿಪಿಐ ದಕ್ಷಿಣ ಕನ್ನಡ ಜಿಲ್ಲೆ, ನಾರಾಯಣ ಗುರು ಅಭಿಮಾನಿ ಬಳಗ ಮಂಗಳೂರು, AITUC ದಕ ಜಿಲ್ಲೆ, AIYF ದ ಕ ಜಿಲ್ಲಾ ಸಮಿತಿ, ಭಗತ್ ಸಿಂಗ್ ಕ್ರಾಂತಿ ಬಳಗ, INTUC ದಕ್ಷಿಣ ಕನ್ನಡ ಸೇರಿದಂತೆ ಹಲವಾರು ಸಂಘಟನೆಗಳು ಎಚ್ಚರಿಕೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆ ಅಯ್ಯೊಗ್ಯ ಉಪಕುಲಪತಿ ಮತ್ತು ಸಮಾರಂಭದ ಅಯೋಜಕರಿಗೆ ಕಡೆಗಾದರು ಬುದ್ದಿಬಂತಲ್ಲಾ, ಇಲ್ಲ ಅಂದರೆ ಸಾರ್ವಜನಿಕರು ಸರಿಯಾಗಿ ಪೂಜೆ ಮಾಡುತ್ತಿದ್ದರು.

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....