Homeಕರ್ನಾಟಕಮಂಗಳೂರು: ಪಠ್ಯಪರಿಷ್ಕರಣೆ ಸಮಿತಿಯ ವಿವಾದಾತ್ಮಕ ಮಾಜಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ‘ಸನ್ಮಾನ ಕಾರ್ಯಕ್ರಮ’ ರದ್ದು

ಮಂಗಳೂರು: ಪಠ್ಯಪರಿಷ್ಕರಣೆ ಸಮಿತಿಯ ವಿವಾದಾತ್ಮಕ ಮಾಜಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ‘ಸನ್ಮಾನ ಕಾರ್ಯಕ್ರಮ’ ರದ್ದು

- Advertisement -
- Advertisement -

ರಾಷ್ಟ್ರಕವಿ ಕುವೆಂಪುರವರಿಗೆ ಅವಮಾನಿಸಿ, ನಾಡಗೀತೆ ತಿರುಚಿದ ಆರೋಪ ಎದುರಿಸುತ್ತಿರುವ, ವಿವಾದಾತ್ಮಕ ಪಠ್ಯ ಪರಿಷ್ಕರಣೆ ಸಮಿತಿಯ ಮಾಜಿ ಅಧ್ಯಕ್ಷರಾದ ರೋಹಿತ್ ಚಕ್ರತೀರ್ಥ ಅವರನ್ನು, ಮಂಗಳೂರು ವಿಶ್ವ ವಿದ್ಯಾಲಯದ ಉಪ ಕುಲಪತಿಗಳು ಸನ್ಮಾನಿಸುವ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ. ನಾಡಿನ ಮಹಾತ್ಮರಿಗೆ ಅವಮಾನ ಎಸಗಿರುವ ವ್ಯಕ್ತಿಗೆ ಕುಲಪತಿಯೊಬ್ಬರು ಸನ್ಮಾನ ಮಾಡುವುದನ್ನು ವಿರೋಧಿಸಿ ಎಡಪಂಥೀಯ ಮತ್ತು ಜನಪರ ಸಂಘಟನೆಗಳು ಪ್ರತಿಭಟನೆ ನಡೆಸುವುದಾಗಿ ಮತ್ತು ಕಾರ್ಯಕ್ರಮದ ಸ್ಥಳಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದವು. ಈ ಹಿನ್ನಲೆಯಲ್ಲಿ ಕಾರ್ಯಕ್ರಮ ರದ್ದಾಗಿದೆ.

ಚಿಂತನಗಂಗಾ ಮತ್ತು ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಜೂನ್ 25ರ ಶನಿವಾರ ಸಂಜೆ 5 ಗಂಟೆಗೆ ಮಂಗಳೂರಿನ ಡೊಂಗರಕೇರಿ ಕೆನರಾ ಹೈಸ್ಕೂಲ್‌ನ ಭುವನೇಂದ್ರ ಸಭಾಂಗಣದಲ್ಲಿ ರೋಹಿತ್ ಚಕ್ರತೀರ್ಥ ಅವರಿಗೆ ‘ನಾಗರಿಕ ಸನ್ಮಾನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ‘ಭರತಖಂಡದ ಗತವೈಭವ ಮತ್ತು ಅಳಿಸಿಹೋದ ಇತಿಹಾಸ’ ಎಂಬ ವಿಷಯದ ಬಗ್ಗೆ ಚಕ್ರತೀರ್ಥ ಅವರು ವಿಷಯ ಮಂಡಿಸಲಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಉಪ ಕುಲಪತಿ ಪ್ರೊಫೆಸರ್‌ ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯರು ವಹಿಸಲಿದ್ದರು. ಆದರೆ ಈ ಕಾರ್ಯಕ್ರಮದ ವಿರುದ್ಧ ರಾಜ್ಯದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿತ್ತು.

ಇದನ್ನೂ ಓದಿ: ಪಠ್ಯ ಪರಿಷ್ಕರಣೆಯಲ್ಲಿ ಸರ್ಕಾರ ಸುಳ್ಳು ಹೇಳುತ್ತಿದೆ: 35 ಅಂಶಗಳನ್ನು ಪಟ್ಟಿ ಮಾಡಿದ ಸಿದ್ದರಾಮಯ್ಯ

ಕಾರ್ಯಕ್ರಮದ ರದ್ದಾಗ ಕುರಿತು ಸಂಘಟಕ ನಾಗೇಶ್ ಶೆಣೈ ಅವರು ಮಾತನಾಡಿ, “ಶಾಂತಿ ಸುವ್ಯವಸ್ಥೆಗೆ ಭಂಗ ಬರುವ ಬಗ್ಗೆ ನಮಗೆ ಮಾಹಿತಿ ಬಂತು. ಅಲ್ಲದೇ, ಸಾಮಾಜಿಕ ಮಾಧ್ಯಮಗಳಲ್ಲಿ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕುವ ಬಗ್ಗೆ ಕೆಲವರು ಪೋಸ್ಟ್ ಹಾಕಿದ್ದರು. ನಮ್ಮ ಕಾರ್ಯಕ್ರಮದಿಂದ ಮಂಗಳೂರಿನ ಶಾಂತಿ-ಸುವ್ಯವಸ್ಥೆಗೆ ಭಂಗ ಬರುವುದು ಬೇಡ ಎಂದು ಕಾರ್ಯಕ್ರಮ ರದ್ದು ಮಾಡಿದ್ದೇವೆ” ಎಂದು ಹೇಳಿದ್ದಾಗಿ ಈದಿನ.ಕಾಂ ವರಿದ ಮಾಡಿದೆ.

ಕಾರ್ಯಕಮ್ರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ, “ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ನಾಡಿನ ಖ್ಯಾತನಾಮರು, ಮಹಾನ್ ಚೇತನಗಳಿಗೆ ಅವಮಾನ ಎಸಗಿರುವ, ನಾಡಗೀತೆಗೆ ಅಪಮಾನ ಎಸಗಿರುವ, ರಾಜ್ಯದಲ್ಲಿ ಸಾರ್ವತ್ರಿಕ ಆಕ್ರೋಶಕ್ಕೆ ಗುರಿಯಾಗಿರುವ ರೋಹಿತ್ ಚಕ್ರತೀರ್ಥ ಗೆ ಮಂಗಳೂರಿನ ಬಲಪಂಥೀಯ ವೇದಿಕೆಯೊಂದು ಶನಿವಾರ (ಜೂನ್ 25) ನಾಗರಿಕ ಸನ್ಮಾನ ನಡೆಸುತ್ತಿದೆ ಎಂಬ ಮಾಹಿತಿ ತಿಳಿದು ಆಘಾತವಾಯಿತು” ಎಂದು ಹೇಳಿದ್ದರು.

“ಇಡೀ ಕರ್ನಾಟಕ ಈ ವ್ಯಕ್ತಿಯ ವಿರುದ್ದ ಆಕ್ರೋಶಗೊಂಡಿರುವಾಗ, ಬಸವಣ್ಣ, ಕುವೆಂಪು, ನಾರಾಯಣ ಗುರುಗಳ ಅನುಯಾಯಿಗಳು ಪ್ರತಿಭಟನೆ ನಿರತರಾಗಿರುವ ಸಂದರ್ಭದಲ್ಲಿ ಮಂಗಳೂರಿನಂತಹ ವಿದ್ಯಾವಂತ ಜನರಿರುವ ನಗರದಲ್ಲಿ ಇದು ಘಟಿಸಬಾರದಿತ್ತು. ಅದರಲ್ಲಿಯೂ ನಾಗರಿಕ ಸನ್ಮಾನದ ಸಭಾಧ್ಯಕ್ಷತೆಯನ್ನು ಮಂಗಳೂರು ವಿವಿಯ ಕುಲಪತಿಗಳಾದ ಮಾನ್ಯ ಯಡಪಡಿತ್ತಾಯರು ವಹಿಸಲಿರುವುದು ಕಂಡು ಮನಸ್ಸು ವಿಷಣ್ಣವಾಯಿತು” ಎಂದು  ಮುನೀರ್ ಕಾಟಿಪಳ್ಳ ಬೇಸರ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಪಠ್ಯದಲ್ಲಿ ಸೂಲಿಬೆಲೆ ಪಾಠದ ಕುರಿತು ಮಾತನಾಡಲು ಆರ್ ಅಶೋಕ್ ಹಿಂದೇಟು: ಚಕ್ರವರ್ತಿಯ ಈ ಸುಳ್ಳುಗಳು ಕಾರಣವೇ?

ಕಾರ್ಯಕ್ರಮ ರದ್ದು ಪಡಿಸುವಂತೆ ಕಾರ್ಯಕ್ರಮ ನಡೆಸುವ ಸ್ಥಳಕ್ಕೆ ಮುತ್ತಿಗೆ ಹಾಕುವುದಾಗಿ, ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ, ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲೆ, ದಲಿತ ಸಂಘರ್ಷ ಸಮಿತಿ ದಕ್ಷಿಣ ಕನ್ನಡ, ಸಿಐಟಿಯು ದ ಕ ಜಿಲ್ಲೆ, ಸಾಮರಸ್ಯ ಮಂಗಳೂರು, ದಕ ಜಿಲ್ಲಾ ಕಾಂಗ್ರೆಸ್, ದಕ ಜಿಲ್ಲಾ ಜಾತ್ಯಾತೀತ ಜನತಾ ದಳ, ದಕ ಜಿಲ್ಲಾ ಸಿಪಿಐಎಂ, SFI,NSUI, ಮಾನವತಾ ವೇದಿಕೆ, ಅಖಿಲ ವಕೀಲರ ಭಾರತ ಸಂಘ ದಕ ಜಿಲ್ಲೆ, ಪ್ರಗತಿಪರ ಚಿಂತಕರ ವೇದಿಕೆ, ಜನವಾದಿ ಮಹಿಳಾ ಸಂಘ (JMS), ಸಿಪಿಐ ದಕ್ಷಿಣ ಕನ್ನಡ ಜಿಲ್ಲೆ, ನಾರಾಯಣ ಗುರು ಅಭಿಮಾನಿ ಬಳಗ ಮಂಗಳೂರು, AITUC ದಕ ಜಿಲ್ಲೆ, AIYF ದ ಕ ಜಿಲ್ಲಾ ಸಮಿತಿ, ಭಗತ್ ಸಿಂಗ್ ಕ್ರಾಂತಿ ಬಳಗ, INTUC ದಕ್ಷಿಣ ಕನ್ನಡ ಸೇರಿದಂತೆ ಹಲವಾರು ಸಂಘಟನೆಗಳು ಎಚ್ಚರಿಕೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆ ಅಯ್ಯೊಗ್ಯ ಉಪಕುಲಪತಿ ಮತ್ತು ಸಮಾರಂಭದ ಅಯೋಜಕರಿಗೆ ಕಡೆಗಾದರು ಬುದ್ದಿಬಂತಲ್ಲಾ, ಇಲ್ಲ ಅಂದರೆ ಸಾರ್ವಜನಿಕರು ಸರಿಯಾಗಿ ಪೂಜೆ ಮಾಡುತ್ತಿದ್ದರು.

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...