Homeಕರ್ನಾಟಕಮಂಗಳೂರು | ರೌಡಿ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; 8 ಆರೋಪಿಗಳ ಬಂಧನ

ಮಂಗಳೂರು | ರೌಡಿ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; 8 ಆರೋಪಿಗಳ ಬಂಧನ

- Advertisement -
- Advertisement -

ಮಂಗಳೂರಿನ ಹೊರವಲಯದಲ್ಲಿ ಕೊಲೆಗೀಡಾದ ರೌಡಿ ಸುಹಾಸ್ ಶೆಟ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಪ್ರಮುಖ ಆರೋಪಿ ಸೇರಿದಂತೆ ಎಂಟು ಜನರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. 2022 ರ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯೂ ಆಗಿದ್ದ ರೌಡಿ ಸುಹಾಸ್‌ ಅವರನ್ನು ಗುರುವಾರ ರಾತ್ರಿ ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ಹತ್ಯೆ ಮಾಡಿತ್ತು.

ಘಟನೆಯ ನಂತರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಾದ್ಯಂತ ಅಶಾಂತಿಯನ್ನು ಹುಟ್ಟುಹಾಕಿತ್ತು. ಇದಕ್ಕೆ ಪ್ರತಿಕ್ರಿಯೆಯಾಗಿ ಅಧಿಕಾರಿಗಳು ನಿಷೇಧಾಜ್ಞೆಗಳನ್ನು ಜಾರಿ ಮಾಡಿದ್ದರು. ಅದಾಗ್ಯೂ, ಶುಕ್ರವಾರ ರೌಡಿಯ ಮೃತದೇಹ ಮೆರವಣಿಗೆ ವೇಳೆ ಹಿಂಸಾಚಾರ ಕೂಡಾ ಸಂಭವಿಸಿತ್ತು. ಅಲ್ಲದೆ, ಅವಳಿ ಜಿಲ್ಲೆಗಳಲ್ಲಿ ಹಿಂಸಾಚಾರದ ಐದು ಪ್ರತ್ಯೇಕ ಘಟನೆಗಳು ಸಂಭವಿಸಿತ್ತು.

ಕೊಲೆ ಪ್ರಕರಣದಲ್ಲಿ ಒಟ್ಟು 8 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರ ಪಟ್ಟಿ ಕೆಳಗಿನಂತಿವೆ.

  1. ಶಾಂತಿಗುಡ್ಡೆ ಪೇಜಾವರ ಗ್ರಾಮದ ನಿವಾಸಿ ಅಬ್ದುಲ್ ನಾಸಿರ್ ಅವರ ಪುತ್ರ ಅಬ್ದುಲ್ ಸಫ್ವಾನ್ (29) ಈತ ಚಾಲಕನಾಗಿ ದುಡಿಯುತ್ತಿದ್ದ.
  2. ಬಜ್ಪೆ ನಿವಾಸಿ ಅಬೂಬಕ್ಕರ್ ಅವರ ಪುತ್ರ ನಿಯಾಝ್ (28), ಈತ ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ.
  3. ಕೆಂಜಾರು ನಿವಾಸಿ ಅಬ್ದುಲ್ ರಝಾಕ್ ಅವರ ಪುತ್ರ ಮುಹಮ್ಮದ್ ಮುಝಮ್ಮಿಲ್ (32), ಸೌದಿ ಅರೇಬಿಯಾದಲ್ಲಿ ಸೇಲ್ಸ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಈತ ಕಳೆದ ನಾಲ್ಕು ತಿಂಗಳ ಹಿಂದೆ ಊರಿಗೆ ಮರಳಿದ್ದಾನೆ.
  4. ಕಳವಾರು ನಿವಾಸಿ ಮುಹಮ್ಮದ್ ಅವರ ಪುತ್ರ ಕಲಂದರ್ ಶಾಫಿ (31), ಈತ ಬೆಂಗಳೂರಿನಲ್ಲಿ ಸೇಲ್ಸ್ ಮ್ಯಾನ್ ಆಗಿ ದುಡಿಯುತ್ತಿದ್ದ.
  5. ಚಿಕ್ಕಮಗಳೂರಿನ ಕಳಸ ನಿವಾಸಿ ರಾಜೇಶ್ ಅವರ ಪುತ್ರ ರಂಜಿತ್ (19), ಈತ ಚಾಲಕನಾಗಿ ದುಡಿಯುತ್ತಿದ್ದ.
  6. ಚಿಕ್ಕಮಗಳೂರಿನ ಕಳಸ ನಿವಾಸಿ ಮಾರಿ ಮುತ್ತು ಅವರ ಪುತ್ರ ನಾಗರಾಜ್ (20), ಈತ ಶಾಮಿಯಾನ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ.
  7. ಜೋಕಟ್ಟೆ ನಿವಾಸಿ ಅಬ್ದುಲ್ ಮಜೀದ್ ಅವರ ಪುತ್ರ ಮುಹಮ್ಮದ್ ರಿಝ್ವಾನ್ (28), ಈತ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದ.
  8. ಉಮರುಲ್‌ ಫಾರೂಕ್‌ ಅವರ ಪುತ್ರ ಆದಿಲ್‌ ಮೆಹರೂಫ್. ಈತ 2022 ರಲ್ಲಿ ಕೊಲೆಯಾದ ಫಾಝಿಲ್‌ ಅವರ ಸಹೋದರ.

ಯಾರು ಈ ರೌಡಿ ಸುಹಾಸ್ ಶೆಟ್ಟಿ?

42 ವರ್ಷದ ರೌಡಿ ಶೀಟರ್‌ ಸುಹಾಸ್ ಶೆಟ್ಟಿ ಕ್ರಿಮಿನಲ್ ದಾಖಲೆಯಿರುವ ವ್ಯಕ್ತಿಯಾಗಿದ್ದಾರೆ. ಅವರ ವಿರುದ್ಧ ಐದು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. ಇವುಗಳಲ್ಲಿ ದಕ್ಷಿಣ ಕನ್ನಡದಲ್ಲಿ ಒಂದು ಮತ್ತು ಮಂಗಳೂರು ನಗರದಲ್ಲಿ ನಾಲ್ಕು ದಾಖಲಾಗಿವೆ. ಒಟ್ಟು ಪ್ರಕರಣಗಳಲ್ಲಿ ಎರಡು ಕೊಲೆ ಪ್ರಕರಣ ಮತ್ತು ದಲಿತ ದೌರ್ಜನ್ಯ ಸೇರಿದಂತೆ ಇತರ ಪ್ರಕರಣಗಳು ಅವರ ಮೇಲೆ ಇದ್ದವು.

2022 ರಲ್ಲಿ ಕಾಟಿಪಳ್ಳದ ಮಂಗಳಪೇಟೆಯ ಮುಸ್ಲಿಂ ಯುವಕ 23 ವರ್ಷದ ಮೊಹಮ್ಮದ್ ಫಾಜಿಲ್ ಹತ್ಯೆಯಲ್ಲಿ ರೌಡಿ ಸುಹಾಸ್‌ನ ಮೊದಲ ಆರೋಪಿಯಾಗಿದ್ದರು.

ಸುಹಾಸ್ ಕೊಲೆ ರಾಜಕೀಯ ಮತ್ತು ಕೋಮು ಅಶಾಂತಿಗೆ ಕಾರಣವಾಗಿದೆ. ಬಿಜೆಪಿ ಪರ ಸಂಘಟನೆಯಾದ ವಿಎಚ್‌ಪಿ ದುಷ್ಕರ್ಮಿ ಸಂಘಟನೆಗಳು ಶುಕ್ರವಾರ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಂದ್‌ಗೆ ಕರೆ ನೀಡಿದ್ದವು. ಈ ವೇಳೆ ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್‌ಗಳ ಮೇಲೆ ಹಲವಾರು ಕಲ್ಲು ತೂರಾಟದ ಘಟನೆಗಳು ವರದಿಯಾಗಿವೆ. ರೌಡಿ ಸುಹಾಸ್ ಶೆಟ್ಟಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಭಯೋತ್ಪಾದನಾ ವಿರೋಧಿ ರ‍್ಯಾಲಿಯಲ್ಲಿ ರೈತ ನಾಯಕ ರಾಕೇಶ್ ಟಿಕಾಯತ್ ಮೇಲೆ ದಾಳಿ ಮಾಡಿದ ಹಿಂದುತ್ವ ಸಂಘಟನೆಗಳ ದುಷ್ಕರ್ಮಿಗಳು

ಭಯೋತ್ಪಾದನಾ ವಿರೋಧಿ ರ‍್ಯಾಲಿಯಲ್ಲಿ ರೈತ ನಾಯಕ ರಾಕೇಶ್ ಟಿಕಾಯತ್ ಮೇಲೆ ದಾಳಿ ಮಾಡಿದ ಹಿಂದುತ್ವ ಸಂಘಟನೆಗಳ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...