Homeಕರ್ನಾಟಕಮಂಗಳೂರು: ಕೇಸರಿ ಧ್ವಜ ಹಾಕಿರುವ ಅಂಗಡಿಗಳಲ್ಲಿ ಮಾತ್ರ ವ್ಯಾಪಾರ ಮಾಡಿ; ಶರಣ್ ಪಂಪ್‌ವೆಲ್ ಕರೆ

ಮಂಗಳೂರು: ಕೇಸರಿ ಧ್ವಜ ಹಾಕಿರುವ ಅಂಗಡಿಗಳಲ್ಲಿ ಮಾತ್ರ ವ್ಯಾಪಾರ ಮಾಡಿ; ಶರಣ್ ಪಂಪ್‌ವೆಲ್ ಕರೆ

- Advertisement -
- Advertisement -

ಮಂಗಳೂರಿನ ಇತಿಹಾಸ ಪ್ರಸಿದ್ಧ ಮಂಗಳಾದೇವಿ ದೇವಸ್ಥಾನ ಸೇರಿದಂತೆ ಜಿಲ್ಲೆಯ ಎಲ್ಲಾ ದೇವಸ್ಥಾನಗಳು ದತ್ತಿ ಇಲಾಖೆಯ ಕಾನೂನಿಗೆ ಒಳಪಡುತ್ತಿದ್ದು, ಜಾತ್ರಾ ಸಂದರ್ಭ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಸಂತೆಯಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಬೇಕು ಎಂದು ವಿಶ್ವ ಹಿಂದೂ ಪರಿಷತ್‌ನ ಜಿಲ್ಲಾಧ್ಯಕ್ಷ ಎಚ್.ಕೆ. ಪುರುಷೋತ್ತಮ ದತ್ತನಗರ ಒತ್ತಾಯಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲಾಡಳಿತ ಮಂಗಳಾದೇವಿ ದೇವಸ್ಥಾನದಲ್ಲಿ 2ನೇ ಬಾರಿ ಏಲಂ ಕರೆದು ಹಿಂದುಯೇತರರಿಗೆ ವ್ಯಾಪಾರಕ್ಕೆ ಅವಕಾಶ ನೀಡಿದ್ದು ಸರಿಯಲ್ಲ. ದತ್ತಿ ಇಲಾಖೆಯ ಕಾನೂನಿನ ಪ್ರಕಾರ ದೇವಸ್ಥಾನಗಳ ರಥಬೀದಿಯಲ್ಲಿ ಹಿಂದುಯೇತರರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ. ಬಡ ಹಿಂದೂ ವ್ಯಾಪಾರಸ್ಥರು ಈ ಜಾತ್ರೆ ವ್ಯಾಪಾರ ನಂಬಿ ಜೀವನ ಸಾಗಿಸುತ್ತಿದ್ದಾರೆ. ಹಾಗಾಗಿ ಕೇಸರಿ ಧ್ವಜ ಹಾಕಿರುವ ಅಂಗಡಿಗಳಲ್ಲಿ ಮಾತ್ರ ವ್ಯಾಪಾರ ಮಾಡುವಂತೆ ಮಂಗಳಾದೇವಿ ದೇವಸ್ಥಾನಕ್ಕೆ ಬರುವ ಭಕ್ತರಲ್ಲಿ ವಿನಂತಿಸುವುದಾಗಿ ಅವರು ಹೇಳಿದ್ದಾರೆ.

ಬಡ ಮುಸ್ಲಿಂ ವ್ಯಾಪಾರಿಗಳಿಗೆ ನಮ್ಮ ವಿರೋಧವಿಲ್ಲ. ಕಾರ್ಮಿಕ ಕ್ಷೇತ್ರ ನಮ್ಮ ಹಕ್ಕು. ದತ್ತಿ ಇಲಾಖೆ ಕಾನೂನು ಅನ್ವಯ ರಥಬೀದಿಯಲ್ಲಿ ಹಿಂದುಯೇತರರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ. ರಥಬೀದಿ ಬಿಟ್ಟು ಬೇರೆ ಕಡೆ ವ್ಯಾಪಾರ ಮಾಡಿದರೆ ಅಭ್ಯಂತರ ಇಲ್ಲ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ನೇತೃತ್ವದಲ್ಲಿ ಸ್ಥಳಕ್ಕೆ ಬಂದ ಕಾರ್ಯಕರ್ತರು, ಸೋಮವಾರ ಮಧ್ಯಾಹ್ನ ಹಿಂದು ವ್ಯಾಪಾರಸ್ಥರು ನಡೆಸುವ ಅಂಗಡಿಗಳಿಗೆ ಕೇಸರಿ ಪತಾಕೆಯನ್ನು ಕಟ್ಟಿದ್ದಾರೆ.

ಇದೇ ವೇಳೆ ಮಾತನಾಡಿದ ಶರಣ್ ಪಂಪ್‌ವೆಲ್, ”ಇವತ್ತು ಎಲ್ಲಾ ಅಂಗಡಿಗಳಿಗೆ ಕೇಸರಿ ಭಗವಾಧ್ವಜ ಹಾಕಿದ್ದೇವೆ. ಹಿಂದೂಗಳ ಅಂಗಡಿಯೆಂದು ಭಕ್ತರಿಗೆ ಗೊತ್ತಾಗಬೇಕು ಎಂದು ಭಗವಧ್ವಜ ಕಟ್ಟುತ್ತಿದ್ದೇವೆ. ಹಿಂದುಗಳು, ಹಿಂದೂಗಳ ಅಂಗಡಿಯಲ್ಲೇ ವ್ಯಾಪಾರ ಮಾಡಬೇಕು, ಹಿಂದೂಗಳ ದೇವಸ್ಥಾನದಲ್ಲಿ ಹಿಂದುಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡಬೇಕು” ಎಂದು ಹೇಳಿದರು.

”ಮಂಗಳಾದೇವಿ ದೇವಸ್ಥಾನದ ದಸರಾ ಸಂದರ್ಭದಲ್ಲಿ ಹಿಂದುಗಳಿಗೆ ಮುತ್ರ ವ್ಯಾಪಾರಕ್ಕೆ ಅವಕಾಶ ಕೊಡಬೇಕು ಎಂಬ ಬೇಡಿಕೆಯನ್ನು ಸನಾತನ ಹಿಂದು ವ್ಯಾಪಾರಸ್ಥರ ಸಂಘದವರು ಜಿಲ್ಲಾಡಳಿತಕ್ಕೆ ಸಲ್ಲಿಸಿದ್ದರು. ನಮ್ಮ ಈ ರೀತಿಯ ಬೇಡಿಕೆ `ಕಳೆದ ಎರಡು ಮೂರು ವರ್ಷಗಳಿಂದ ಇದೆ ಧಾರ್ಮಿಕ ದತ್ತಿ ಇಲಾಖೆಯ ಕಾನೂನಿನ ಪ್ರಕಾರ ದೇವಸ್ಥಾನ, ಜಾತ್ರೆಯ ಸಂತೆ ವ್ಯಾಪಾರ ಹಿಂದೂಗಳಿಗೆ ಕೊಡಬೇಕು. ಎಂಬ ನಿಯಮ ಇದೆ. ಇದನ್ನೀಗ ಮಂಗಳಾದೇವಿ ದೇವಸ್ಥಾನದಲ್ಲಿ ಮಾಡಿದ್ದೇವೆ. ಮುಂದೆ ಎಲ್ಲಾ ದೇವಸ್ಥಾನಗಳಲ್ಲಿ ಇದೇ ನೀತಿ ಮಾಡಬೇಕು” ಎಂದು ಹೇಳಿದರು.

”ಕಮ್ಯುನಿಸ್ಟ್ ನವರು ಮುಸಲ್ಮಾನ ಬಡ ವ್ಯಾಪಾರಿಗಳಿಗೆ ಅವಕಾಶ ನೀಡಬೇಕು ಎನ್ನುತ್ತಾರೆ, ನಾವು ಮುಸಲ್ಮಾನ, ವ್ಯಾಪಾರಿಗಳ ವಿರೋಧಿಗಳಲ್ಲ. ನಮ್ಮ ದೇವಸ್ಥಾನದ ಸುತ್ತ ಮುತ್ತ ಹಿಂದುಗಳಿಗೆ ಅವಕಾಶ ಕೊಡಿ ಎಂದು ಕೇಳುತ್ತಿದ್ದೇವೆ. ಆಸುಪಾಸಿನ ರಸ್ತೆಯ ಎಲ್ಲಿ ಬೇಕಾದರೂ ಅನ್ಯಧರ್ಮದವರಿಗೆ ವ್ಯಾಪಾರಕ್ಕೆ ಅವಕಾಶ ಕೂಡಿ, ನಮ್ಮ ಅಭ್ಯಂತರ ಇಲ್ಲ. ಎಲ್ಲಿ ದೇವಸ್ಥಾನಕ್ಕೆ ಜನ ಬರುತ್ತಾರೆ, ಎಲ್ಲಿ ದೇವಸ್ಥಾನದ ರಥ ಹೋಗುತ್ತೆ ಅಲ್ಲಿ ಹಿಂದುಗಳಿಗೆ ಅವಕಾಶ ಕೊಡಬೇಕು” ಎಂಬುದು ನಮ್ಮ ನಿಲುವು” ಎಂದರು.

”ಒಮ್ಮೆ ಹರಾಜು ಪ್ರಕ್ರಿಯೆ ಆದ ಬಳಿಕ ಮಹಾನಗರ ಪಾಲಿಕೆ ಮತ್ತೆ ಹರಾಜು ಪ್ರಕ್ರಿಯೆ ನಡೆಸಿದೆ ಒಂದು ಬಾರಿ ಹರಾಜು ಆದ ಬಳಿಕ ಎರಡನೇ ಹರಾಜಿಗೆ ಅವಕಾಶ ಇರುವುದಿಲ್ಲ. ಇದು ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನ, ಕಾನೂನು ಪ್ರಕಾರ ಹಿಂದುಯೇತರರಿಗೆ ಅವಕಾಶ ಇಲ್ಲ. ಯಾವ ರೀತಿಯಲ್ಲಿ ಎರಡನೇ ಸಲ ಹರಾಜು ನಡೆಸಿ ಅನ್ಯರಿಗೆ ಅವಕಾಶ ಕೊಟ್ಟರು ಅಂತ ಗೊತ್ತಿಲ್ಲ ನಾವು ಇದನ್ನ ವಿರೋಧ ಮಾಡ್ತೀವಿ” ಎಂದು ಹೇಳಿದರು.

ಇದನ್ನೂ ಓದಿ: ಮಂಗಳೂರು: ಮಂಗಳಾದೇವಿ ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...