Homeಕರ್ನಾಟಕಮಂಗಳೂರು: ಕೇಸರಿ ಧ್ವಜ ಹಾಕಿರುವ ಅಂಗಡಿಗಳಲ್ಲಿ ಮಾತ್ರ ವ್ಯಾಪಾರ ಮಾಡಿ; ಶರಣ್ ಪಂಪ್‌ವೆಲ್ ಕರೆ

ಮಂಗಳೂರು: ಕೇಸರಿ ಧ್ವಜ ಹಾಕಿರುವ ಅಂಗಡಿಗಳಲ್ಲಿ ಮಾತ್ರ ವ್ಯಾಪಾರ ಮಾಡಿ; ಶರಣ್ ಪಂಪ್‌ವೆಲ್ ಕರೆ

- Advertisement -
- Advertisement -

ಮಂಗಳೂರಿನ ಇತಿಹಾಸ ಪ್ರಸಿದ್ಧ ಮಂಗಳಾದೇವಿ ದೇವಸ್ಥಾನ ಸೇರಿದಂತೆ ಜಿಲ್ಲೆಯ ಎಲ್ಲಾ ದೇವಸ್ಥಾನಗಳು ದತ್ತಿ ಇಲಾಖೆಯ ಕಾನೂನಿಗೆ ಒಳಪಡುತ್ತಿದ್ದು, ಜಾತ್ರಾ ಸಂದರ್ಭ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಸಂತೆಯಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಬೇಕು ಎಂದು ವಿಶ್ವ ಹಿಂದೂ ಪರಿಷತ್‌ನ ಜಿಲ್ಲಾಧ್ಯಕ್ಷ ಎಚ್.ಕೆ. ಪುರುಷೋತ್ತಮ ದತ್ತನಗರ ಒತ್ತಾಯಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲಾಡಳಿತ ಮಂಗಳಾದೇವಿ ದೇವಸ್ಥಾನದಲ್ಲಿ 2ನೇ ಬಾರಿ ಏಲಂ ಕರೆದು ಹಿಂದುಯೇತರರಿಗೆ ವ್ಯಾಪಾರಕ್ಕೆ ಅವಕಾಶ ನೀಡಿದ್ದು ಸರಿಯಲ್ಲ. ದತ್ತಿ ಇಲಾಖೆಯ ಕಾನೂನಿನ ಪ್ರಕಾರ ದೇವಸ್ಥಾನಗಳ ರಥಬೀದಿಯಲ್ಲಿ ಹಿಂದುಯೇತರರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ. ಬಡ ಹಿಂದೂ ವ್ಯಾಪಾರಸ್ಥರು ಈ ಜಾತ್ರೆ ವ್ಯಾಪಾರ ನಂಬಿ ಜೀವನ ಸಾಗಿಸುತ್ತಿದ್ದಾರೆ. ಹಾಗಾಗಿ ಕೇಸರಿ ಧ್ವಜ ಹಾಕಿರುವ ಅಂಗಡಿಗಳಲ್ಲಿ ಮಾತ್ರ ವ್ಯಾಪಾರ ಮಾಡುವಂತೆ ಮಂಗಳಾದೇವಿ ದೇವಸ್ಥಾನಕ್ಕೆ ಬರುವ ಭಕ್ತರಲ್ಲಿ ವಿನಂತಿಸುವುದಾಗಿ ಅವರು ಹೇಳಿದ್ದಾರೆ.

ಬಡ ಮುಸ್ಲಿಂ ವ್ಯಾಪಾರಿಗಳಿಗೆ ನಮ್ಮ ವಿರೋಧವಿಲ್ಲ. ಕಾರ್ಮಿಕ ಕ್ಷೇತ್ರ ನಮ್ಮ ಹಕ್ಕು. ದತ್ತಿ ಇಲಾಖೆ ಕಾನೂನು ಅನ್ವಯ ರಥಬೀದಿಯಲ್ಲಿ ಹಿಂದುಯೇತರರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ. ರಥಬೀದಿ ಬಿಟ್ಟು ಬೇರೆ ಕಡೆ ವ್ಯಾಪಾರ ಮಾಡಿದರೆ ಅಭ್ಯಂತರ ಇಲ್ಲ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ನೇತೃತ್ವದಲ್ಲಿ ಸ್ಥಳಕ್ಕೆ ಬಂದ ಕಾರ್ಯಕರ್ತರು, ಸೋಮವಾರ ಮಧ್ಯಾಹ್ನ ಹಿಂದು ವ್ಯಾಪಾರಸ್ಥರು ನಡೆಸುವ ಅಂಗಡಿಗಳಿಗೆ ಕೇಸರಿ ಪತಾಕೆಯನ್ನು ಕಟ್ಟಿದ್ದಾರೆ.

ಇದೇ ವೇಳೆ ಮಾತನಾಡಿದ ಶರಣ್ ಪಂಪ್‌ವೆಲ್, ”ಇವತ್ತು ಎಲ್ಲಾ ಅಂಗಡಿಗಳಿಗೆ ಕೇಸರಿ ಭಗವಾಧ್ವಜ ಹಾಕಿದ್ದೇವೆ. ಹಿಂದೂಗಳ ಅಂಗಡಿಯೆಂದು ಭಕ್ತರಿಗೆ ಗೊತ್ತಾಗಬೇಕು ಎಂದು ಭಗವಧ್ವಜ ಕಟ್ಟುತ್ತಿದ್ದೇವೆ. ಹಿಂದುಗಳು, ಹಿಂದೂಗಳ ಅಂಗಡಿಯಲ್ಲೇ ವ್ಯಾಪಾರ ಮಾಡಬೇಕು, ಹಿಂದೂಗಳ ದೇವಸ್ಥಾನದಲ್ಲಿ ಹಿಂದುಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡಬೇಕು” ಎಂದು ಹೇಳಿದರು.

”ಮಂಗಳಾದೇವಿ ದೇವಸ್ಥಾನದ ದಸರಾ ಸಂದರ್ಭದಲ್ಲಿ ಹಿಂದುಗಳಿಗೆ ಮುತ್ರ ವ್ಯಾಪಾರಕ್ಕೆ ಅವಕಾಶ ಕೊಡಬೇಕು ಎಂಬ ಬೇಡಿಕೆಯನ್ನು ಸನಾತನ ಹಿಂದು ವ್ಯಾಪಾರಸ್ಥರ ಸಂಘದವರು ಜಿಲ್ಲಾಡಳಿತಕ್ಕೆ ಸಲ್ಲಿಸಿದ್ದರು. ನಮ್ಮ ಈ ರೀತಿಯ ಬೇಡಿಕೆ `ಕಳೆದ ಎರಡು ಮೂರು ವರ್ಷಗಳಿಂದ ಇದೆ ಧಾರ್ಮಿಕ ದತ್ತಿ ಇಲಾಖೆಯ ಕಾನೂನಿನ ಪ್ರಕಾರ ದೇವಸ್ಥಾನ, ಜಾತ್ರೆಯ ಸಂತೆ ವ್ಯಾಪಾರ ಹಿಂದೂಗಳಿಗೆ ಕೊಡಬೇಕು. ಎಂಬ ನಿಯಮ ಇದೆ. ಇದನ್ನೀಗ ಮಂಗಳಾದೇವಿ ದೇವಸ್ಥಾನದಲ್ಲಿ ಮಾಡಿದ್ದೇವೆ. ಮುಂದೆ ಎಲ್ಲಾ ದೇವಸ್ಥಾನಗಳಲ್ಲಿ ಇದೇ ನೀತಿ ಮಾಡಬೇಕು” ಎಂದು ಹೇಳಿದರು.

”ಕಮ್ಯುನಿಸ್ಟ್ ನವರು ಮುಸಲ್ಮಾನ ಬಡ ವ್ಯಾಪಾರಿಗಳಿಗೆ ಅವಕಾಶ ನೀಡಬೇಕು ಎನ್ನುತ್ತಾರೆ, ನಾವು ಮುಸಲ್ಮಾನ, ವ್ಯಾಪಾರಿಗಳ ವಿರೋಧಿಗಳಲ್ಲ. ನಮ್ಮ ದೇವಸ್ಥಾನದ ಸುತ್ತ ಮುತ್ತ ಹಿಂದುಗಳಿಗೆ ಅವಕಾಶ ಕೊಡಿ ಎಂದು ಕೇಳುತ್ತಿದ್ದೇವೆ. ಆಸುಪಾಸಿನ ರಸ್ತೆಯ ಎಲ್ಲಿ ಬೇಕಾದರೂ ಅನ್ಯಧರ್ಮದವರಿಗೆ ವ್ಯಾಪಾರಕ್ಕೆ ಅವಕಾಶ ಕೂಡಿ, ನಮ್ಮ ಅಭ್ಯಂತರ ಇಲ್ಲ. ಎಲ್ಲಿ ದೇವಸ್ಥಾನಕ್ಕೆ ಜನ ಬರುತ್ತಾರೆ, ಎಲ್ಲಿ ದೇವಸ್ಥಾನದ ರಥ ಹೋಗುತ್ತೆ ಅಲ್ಲಿ ಹಿಂದುಗಳಿಗೆ ಅವಕಾಶ ಕೊಡಬೇಕು” ಎಂಬುದು ನಮ್ಮ ನಿಲುವು” ಎಂದರು.

”ಒಮ್ಮೆ ಹರಾಜು ಪ್ರಕ್ರಿಯೆ ಆದ ಬಳಿಕ ಮಹಾನಗರ ಪಾಲಿಕೆ ಮತ್ತೆ ಹರಾಜು ಪ್ರಕ್ರಿಯೆ ನಡೆಸಿದೆ ಒಂದು ಬಾರಿ ಹರಾಜು ಆದ ಬಳಿಕ ಎರಡನೇ ಹರಾಜಿಗೆ ಅವಕಾಶ ಇರುವುದಿಲ್ಲ. ಇದು ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನ, ಕಾನೂನು ಪ್ರಕಾರ ಹಿಂದುಯೇತರರಿಗೆ ಅವಕಾಶ ಇಲ್ಲ. ಯಾವ ರೀತಿಯಲ್ಲಿ ಎರಡನೇ ಸಲ ಹರಾಜು ನಡೆಸಿ ಅನ್ಯರಿಗೆ ಅವಕಾಶ ಕೊಟ್ಟರು ಅಂತ ಗೊತ್ತಿಲ್ಲ ನಾವು ಇದನ್ನ ವಿರೋಧ ಮಾಡ್ತೀವಿ” ಎಂದು ಹೇಳಿದರು.

ಇದನ್ನೂ ಓದಿ: ಮಂಗಳೂರು: ಮಂಗಳಾದೇವಿ ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...