Homeಕರ್ನಾಟಕಮಂಗಳೂರು: ಕೇಸರಿ ಧ್ವಜ ಹಾಕಿರುವ ಅಂಗಡಿಗಳಲ್ಲಿ ಮಾತ್ರ ವ್ಯಾಪಾರ ಮಾಡಿ; ಶರಣ್ ಪಂಪ್‌ವೆಲ್ ಕರೆ

ಮಂಗಳೂರು: ಕೇಸರಿ ಧ್ವಜ ಹಾಕಿರುವ ಅಂಗಡಿಗಳಲ್ಲಿ ಮಾತ್ರ ವ್ಯಾಪಾರ ಮಾಡಿ; ಶರಣ್ ಪಂಪ್‌ವೆಲ್ ಕರೆ

- Advertisement -
- Advertisement -

ಮಂಗಳೂರಿನ ಇತಿಹಾಸ ಪ್ರಸಿದ್ಧ ಮಂಗಳಾದೇವಿ ದೇವಸ್ಥಾನ ಸೇರಿದಂತೆ ಜಿಲ್ಲೆಯ ಎಲ್ಲಾ ದೇವಸ್ಥಾನಗಳು ದತ್ತಿ ಇಲಾಖೆಯ ಕಾನೂನಿಗೆ ಒಳಪಡುತ್ತಿದ್ದು, ಜಾತ್ರಾ ಸಂದರ್ಭ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಸಂತೆಯಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಬೇಕು ಎಂದು ವಿಶ್ವ ಹಿಂದೂ ಪರಿಷತ್‌ನ ಜಿಲ್ಲಾಧ್ಯಕ್ಷ ಎಚ್.ಕೆ. ಪುರುಷೋತ್ತಮ ದತ್ತನಗರ ಒತ್ತಾಯಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲಾಡಳಿತ ಮಂಗಳಾದೇವಿ ದೇವಸ್ಥಾನದಲ್ಲಿ 2ನೇ ಬಾರಿ ಏಲಂ ಕರೆದು ಹಿಂದುಯೇತರರಿಗೆ ವ್ಯಾಪಾರಕ್ಕೆ ಅವಕಾಶ ನೀಡಿದ್ದು ಸರಿಯಲ್ಲ. ದತ್ತಿ ಇಲಾಖೆಯ ಕಾನೂನಿನ ಪ್ರಕಾರ ದೇವಸ್ಥಾನಗಳ ರಥಬೀದಿಯಲ್ಲಿ ಹಿಂದುಯೇತರರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ. ಬಡ ಹಿಂದೂ ವ್ಯಾಪಾರಸ್ಥರು ಈ ಜಾತ್ರೆ ವ್ಯಾಪಾರ ನಂಬಿ ಜೀವನ ಸಾಗಿಸುತ್ತಿದ್ದಾರೆ. ಹಾಗಾಗಿ ಕೇಸರಿ ಧ್ವಜ ಹಾಕಿರುವ ಅಂಗಡಿಗಳಲ್ಲಿ ಮಾತ್ರ ವ್ಯಾಪಾರ ಮಾಡುವಂತೆ ಮಂಗಳಾದೇವಿ ದೇವಸ್ಥಾನಕ್ಕೆ ಬರುವ ಭಕ್ತರಲ್ಲಿ ವಿನಂತಿಸುವುದಾಗಿ ಅವರು ಹೇಳಿದ್ದಾರೆ.

ಬಡ ಮುಸ್ಲಿಂ ವ್ಯಾಪಾರಿಗಳಿಗೆ ನಮ್ಮ ವಿರೋಧವಿಲ್ಲ. ಕಾರ್ಮಿಕ ಕ್ಷೇತ್ರ ನಮ್ಮ ಹಕ್ಕು. ದತ್ತಿ ಇಲಾಖೆ ಕಾನೂನು ಅನ್ವಯ ರಥಬೀದಿಯಲ್ಲಿ ಹಿಂದುಯೇತರರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ. ರಥಬೀದಿ ಬಿಟ್ಟು ಬೇರೆ ಕಡೆ ವ್ಯಾಪಾರ ಮಾಡಿದರೆ ಅಭ್ಯಂತರ ಇಲ್ಲ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ನೇತೃತ್ವದಲ್ಲಿ ಸ್ಥಳಕ್ಕೆ ಬಂದ ಕಾರ್ಯಕರ್ತರು, ಸೋಮವಾರ ಮಧ್ಯಾಹ್ನ ಹಿಂದು ವ್ಯಾಪಾರಸ್ಥರು ನಡೆಸುವ ಅಂಗಡಿಗಳಿಗೆ ಕೇಸರಿ ಪತಾಕೆಯನ್ನು ಕಟ್ಟಿದ್ದಾರೆ.

ಇದೇ ವೇಳೆ ಮಾತನಾಡಿದ ಶರಣ್ ಪಂಪ್‌ವೆಲ್, ”ಇವತ್ತು ಎಲ್ಲಾ ಅಂಗಡಿಗಳಿಗೆ ಕೇಸರಿ ಭಗವಾಧ್ವಜ ಹಾಕಿದ್ದೇವೆ. ಹಿಂದೂಗಳ ಅಂಗಡಿಯೆಂದು ಭಕ್ತರಿಗೆ ಗೊತ್ತಾಗಬೇಕು ಎಂದು ಭಗವಧ್ವಜ ಕಟ್ಟುತ್ತಿದ್ದೇವೆ. ಹಿಂದುಗಳು, ಹಿಂದೂಗಳ ಅಂಗಡಿಯಲ್ಲೇ ವ್ಯಾಪಾರ ಮಾಡಬೇಕು, ಹಿಂದೂಗಳ ದೇವಸ್ಥಾನದಲ್ಲಿ ಹಿಂದುಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡಬೇಕು” ಎಂದು ಹೇಳಿದರು.

”ಮಂಗಳಾದೇವಿ ದೇವಸ್ಥಾನದ ದಸರಾ ಸಂದರ್ಭದಲ್ಲಿ ಹಿಂದುಗಳಿಗೆ ಮುತ್ರ ವ್ಯಾಪಾರಕ್ಕೆ ಅವಕಾಶ ಕೊಡಬೇಕು ಎಂಬ ಬೇಡಿಕೆಯನ್ನು ಸನಾತನ ಹಿಂದು ವ್ಯಾಪಾರಸ್ಥರ ಸಂಘದವರು ಜಿಲ್ಲಾಡಳಿತಕ್ಕೆ ಸಲ್ಲಿಸಿದ್ದರು. ನಮ್ಮ ಈ ರೀತಿಯ ಬೇಡಿಕೆ `ಕಳೆದ ಎರಡು ಮೂರು ವರ್ಷಗಳಿಂದ ಇದೆ ಧಾರ್ಮಿಕ ದತ್ತಿ ಇಲಾಖೆಯ ಕಾನೂನಿನ ಪ್ರಕಾರ ದೇವಸ್ಥಾನ, ಜಾತ್ರೆಯ ಸಂತೆ ವ್ಯಾಪಾರ ಹಿಂದೂಗಳಿಗೆ ಕೊಡಬೇಕು. ಎಂಬ ನಿಯಮ ಇದೆ. ಇದನ್ನೀಗ ಮಂಗಳಾದೇವಿ ದೇವಸ್ಥಾನದಲ್ಲಿ ಮಾಡಿದ್ದೇವೆ. ಮುಂದೆ ಎಲ್ಲಾ ದೇವಸ್ಥಾನಗಳಲ್ಲಿ ಇದೇ ನೀತಿ ಮಾಡಬೇಕು” ಎಂದು ಹೇಳಿದರು.

”ಕಮ್ಯುನಿಸ್ಟ್ ನವರು ಮುಸಲ್ಮಾನ ಬಡ ವ್ಯಾಪಾರಿಗಳಿಗೆ ಅವಕಾಶ ನೀಡಬೇಕು ಎನ್ನುತ್ತಾರೆ, ನಾವು ಮುಸಲ್ಮಾನ, ವ್ಯಾಪಾರಿಗಳ ವಿರೋಧಿಗಳಲ್ಲ. ನಮ್ಮ ದೇವಸ್ಥಾನದ ಸುತ್ತ ಮುತ್ತ ಹಿಂದುಗಳಿಗೆ ಅವಕಾಶ ಕೊಡಿ ಎಂದು ಕೇಳುತ್ತಿದ್ದೇವೆ. ಆಸುಪಾಸಿನ ರಸ್ತೆಯ ಎಲ್ಲಿ ಬೇಕಾದರೂ ಅನ್ಯಧರ್ಮದವರಿಗೆ ವ್ಯಾಪಾರಕ್ಕೆ ಅವಕಾಶ ಕೂಡಿ, ನಮ್ಮ ಅಭ್ಯಂತರ ಇಲ್ಲ. ಎಲ್ಲಿ ದೇವಸ್ಥಾನಕ್ಕೆ ಜನ ಬರುತ್ತಾರೆ, ಎಲ್ಲಿ ದೇವಸ್ಥಾನದ ರಥ ಹೋಗುತ್ತೆ ಅಲ್ಲಿ ಹಿಂದುಗಳಿಗೆ ಅವಕಾಶ ಕೊಡಬೇಕು” ಎಂಬುದು ನಮ್ಮ ನಿಲುವು” ಎಂದರು.

”ಒಮ್ಮೆ ಹರಾಜು ಪ್ರಕ್ರಿಯೆ ಆದ ಬಳಿಕ ಮಹಾನಗರ ಪಾಲಿಕೆ ಮತ್ತೆ ಹರಾಜು ಪ್ರಕ್ರಿಯೆ ನಡೆಸಿದೆ ಒಂದು ಬಾರಿ ಹರಾಜು ಆದ ಬಳಿಕ ಎರಡನೇ ಹರಾಜಿಗೆ ಅವಕಾಶ ಇರುವುದಿಲ್ಲ. ಇದು ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನ, ಕಾನೂನು ಪ್ರಕಾರ ಹಿಂದುಯೇತರರಿಗೆ ಅವಕಾಶ ಇಲ್ಲ. ಯಾವ ರೀತಿಯಲ್ಲಿ ಎರಡನೇ ಸಲ ಹರಾಜು ನಡೆಸಿ ಅನ್ಯರಿಗೆ ಅವಕಾಶ ಕೊಟ್ಟರು ಅಂತ ಗೊತ್ತಿಲ್ಲ ನಾವು ಇದನ್ನ ವಿರೋಧ ಮಾಡ್ತೀವಿ” ಎಂದು ಹೇಳಿದರು.

ಇದನ್ನೂ ಓದಿ: ಮಂಗಳೂರು: ಮಂಗಳಾದೇವಿ ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...