Homeಕರ್ನಾಟಕಮಂಗಳೂರು: ಕೇಸರಿ ಧ್ವಜ ಹಾಕಿರುವ ಅಂಗಡಿಗಳಲ್ಲಿ ಮಾತ್ರ ವ್ಯಾಪಾರ ಮಾಡಿ; ಶರಣ್ ಪಂಪ್‌ವೆಲ್ ಕರೆ

ಮಂಗಳೂರು: ಕೇಸರಿ ಧ್ವಜ ಹಾಕಿರುವ ಅಂಗಡಿಗಳಲ್ಲಿ ಮಾತ್ರ ವ್ಯಾಪಾರ ಮಾಡಿ; ಶರಣ್ ಪಂಪ್‌ವೆಲ್ ಕರೆ

- Advertisement -
- Advertisement -

ಮಂಗಳೂರಿನ ಇತಿಹಾಸ ಪ್ರಸಿದ್ಧ ಮಂಗಳಾದೇವಿ ದೇವಸ್ಥಾನ ಸೇರಿದಂತೆ ಜಿಲ್ಲೆಯ ಎಲ್ಲಾ ದೇವಸ್ಥಾನಗಳು ದತ್ತಿ ಇಲಾಖೆಯ ಕಾನೂನಿಗೆ ಒಳಪಡುತ್ತಿದ್ದು, ಜಾತ್ರಾ ಸಂದರ್ಭ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಸಂತೆಯಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಬೇಕು ಎಂದು ವಿಶ್ವ ಹಿಂದೂ ಪರಿಷತ್‌ನ ಜಿಲ್ಲಾಧ್ಯಕ್ಷ ಎಚ್.ಕೆ. ಪುರುಷೋತ್ತಮ ದತ್ತನಗರ ಒತ್ತಾಯಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲಾಡಳಿತ ಮಂಗಳಾದೇವಿ ದೇವಸ್ಥಾನದಲ್ಲಿ 2ನೇ ಬಾರಿ ಏಲಂ ಕರೆದು ಹಿಂದುಯೇತರರಿಗೆ ವ್ಯಾಪಾರಕ್ಕೆ ಅವಕಾಶ ನೀಡಿದ್ದು ಸರಿಯಲ್ಲ. ದತ್ತಿ ಇಲಾಖೆಯ ಕಾನೂನಿನ ಪ್ರಕಾರ ದೇವಸ್ಥಾನಗಳ ರಥಬೀದಿಯಲ್ಲಿ ಹಿಂದುಯೇತರರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ. ಬಡ ಹಿಂದೂ ವ್ಯಾಪಾರಸ್ಥರು ಈ ಜಾತ್ರೆ ವ್ಯಾಪಾರ ನಂಬಿ ಜೀವನ ಸಾಗಿಸುತ್ತಿದ್ದಾರೆ. ಹಾಗಾಗಿ ಕೇಸರಿ ಧ್ವಜ ಹಾಕಿರುವ ಅಂಗಡಿಗಳಲ್ಲಿ ಮಾತ್ರ ವ್ಯಾಪಾರ ಮಾಡುವಂತೆ ಮಂಗಳಾದೇವಿ ದೇವಸ್ಥಾನಕ್ಕೆ ಬರುವ ಭಕ್ತರಲ್ಲಿ ವಿನಂತಿಸುವುದಾಗಿ ಅವರು ಹೇಳಿದ್ದಾರೆ.

ಬಡ ಮುಸ್ಲಿಂ ವ್ಯಾಪಾರಿಗಳಿಗೆ ನಮ್ಮ ವಿರೋಧವಿಲ್ಲ. ಕಾರ್ಮಿಕ ಕ್ಷೇತ್ರ ನಮ್ಮ ಹಕ್ಕು. ದತ್ತಿ ಇಲಾಖೆ ಕಾನೂನು ಅನ್ವಯ ರಥಬೀದಿಯಲ್ಲಿ ಹಿಂದುಯೇತರರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ. ರಥಬೀದಿ ಬಿಟ್ಟು ಬೇರೆ ಕಡೆ ವ್ಯಾಪಾರ ಮಾಡಿದರೆ ಅಭ್ಯಂತರ ಇಲ್ಲ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ನೇತೃತ್ವದಲ್ಲಿ ಸ್ಥಳಕ್ಕೆ ಬಂದ ಕಾರ್ಯಕರ್ತರು, ಸೋಮವಾರ ಮಧ್ಯಾಹ್ನ ಹಿಂದು ವ್ಯಾಪಾರಸ್ಥರು ನಡೆಸುವ ಅಂಗಡಿಗಳಿಗೆ ಕೇಸರಿ ಪತಾಕೆಯನ್ನು ಕಟ್ಟಿದ್ದಾರೆ.

ಇದೇ ವೇಳೆ ಮಾತನಾಡಿದ ಶರಣ್ ಪಂಪ್‌ವೆಲ್, ”ಇವತ್ತು ಎಲ್ಲಾ ಅಂಗಡಿಗಳಿಗೆ ಕೇಸರಿ ಭಗವಾಧ್ವಜ ಹಾಕಿದ್ದೇವೆ. ಹಿಂದೂಗಳ ಅಂಗಡಿಯೆಂದು ಭಕ್ತರಿಗೆ ಗೊತ್ತಾಗಬೇಕು ಎಂದು ಭಗವಧ್ವಜ ಕಟ್ಟುತ್ತಿದ್ದೇವೆ. ಹಿಂದುಗಳು, ಹಿಂದೂಗಳ ಅಂಗಡಿಯಲ್ಲೇ ವ್ಯಾಪಾರ ಮಾಡಬೇಕು, ಹಿಂದೂಗಳ ದೇವಸ್ಥಾನದಲ್ಲಿ ಹಿಂದುಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡಬೇಕು” ಎಂದು ಹೇಳಿದರು.

”ಮಂಗಳಾದೇವಿ ದೇವಸ್ಥಾನದ ದಸರಾ ಸಂದರ್ಭದಲ್ಲಿ ಹಿಂದುಗಳಿಗೆ ಮುತ್ರ ವ್ಯಾಪಾರಕ್ಕೆ ಅವಕಾಶ ಕೊಡಬೇಕು ಎಂಬ ಬೇಡಿಕೆಯನ್ನು ಸನಾತನ ಹಿಂದು ವ್ಯಾಪಾರಸ್ಥರ ಸಂಘದವರು ಜಿಲ್ಲಾಡಳಿತಕ್ಕೆ ಸಲ್ಲಿಸಿದ್ದರು. ನಮ್ಮ ಈ ರೀತಿಯ ಬೇಡಿಕೆ `ಕಳೆದ ಎರಡು ಮೂರು ವರ್ಷಗಳಿಂದ ಇದೆ ಧಾರ್ಮಿಕ ದತ್ತಿ ಇಲಾಖೆಯ ಕಾನೂನಿನ ಪ್ರಕಾರ ದೇವಸ್ಥಾನ, ಜಾತ್ರೆಯ ಸಂತೆ ವ್ಯಾಪಾರ ಹಿಂದೂಗಳಿಗೆ ಕೊಡಬೇಕು. ಎಂಬ ನಿಯಮ ಇದೆ. ಇದನ್ನೀಗ ಮಂಗಳಾದೇವಿ ದೇವಸ್ಥಾನದಲ್ಲಿ ಮಾಡಿದ್ದೇವೆ. ಮುಂದೆ ಎಲ್ಲಾ ದೇವಸ್ಥಾನಗಳಲ್ಲಿ ಇದೇ ನೀತಿ ಮಾಡಬೇಕು” ಎಂದು ಹೇಳಿದರು.

”ಕಮ್ಯುನಿಸ್ಟ್ ನವರು ಮುಸಲ್ಮಾನ ಬಡ ವ್ಯಾಪಾರಿಗಳಿಗೆ ಅವಕಾಶ ನೀಡಬೇಕು ಎನ್ನುತ್ತಾರೆ, ನಾವು ಮುಸಲ್ಮಾನ, ವ್ಯಾಪಾರಿಗಳ ವಿರೋಧಿಗಳಲ್ಲ. ನಮ್ಮ ದೇವಸ್ಥಾನದ ಸುತ್ತ ಮುತ್ತ ಹಿಂದುಗಳಿಗೆ ಅವಕಾಶ ಕೊಡಿ ಎಂದು ಕೇಳುತ್ತಿದ್ದೇವೆ. ಆಸುಪಾಸಿನ ರಸ್ತೆಯ ಎಲ್ಲಿ ಬೇಕಾದರೂ ಅನ್ಯಧರ್ಮದವರಿಗೆ ವ್ಯಾಪಾರಕ್ಕೆ ಅವಕಾಶ ಕೂಡಿ, ನಮ್ಮ ಅಭ್ಯಂತರ ಇಲ್ಲ. ಎಲ್ಲಿ ದೇವಸ್ಥಾನಕ್ಕೆ ಜನ ಬರುತ್ತಾರೆ, ಎಲ್ಲಿ ದೇವಸ್ಥಾನದ ರಥ ಹೋಗುತ್ತೆ ಅಲ್ಲಿ ಹಿಂದುಗಳಿಗೆ ಅವಕಾಶ ಕೊಡಬೇಕು” ಎಂಬುದು ನಮ್ಮ ನಿಲುವು” ಎಂದರು.

”ಒಮ್ಮೆ ಹರಾಜು ಪ್ರಕ್ರಿಯೆ ಆದ ಬಳಿಕ ಮಹಾನಗರ ಪಾಲಿಕೆ ಮತ್ತೆ ಹರಾಜು ಪ್ರಕ್ರಿಯೆ ನಡೆಸಿದೆ ಒಂದು ಬಾರಿ ಹರಾಜು ಆದ ಬಳಿಕ ಎರಡನೇ ಹರಾಜಿಗೆ ಅವಕಾಶ ಇರುವುದಿಲ್ಲ. ಇದು ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನ, ಕಾನೂನು ಪ್ರಕಾರ ಹಿಂದುಯೇತರರಿಗೆ ಅವಕಾಶ ಇಲ್ಲ. ಯಾವ ರೀತಿಯಲ್ಲಿ ಎರಡನೇ ಸಲ ಹರಾಜು ನಡೆಸಿ ಅನ್ಯರಿಗೆ ಅವಕಾಶ ಕೊಟ್ಟರು ಅಂತ ಗೊತ್ತಿಲ್ಲ ನಾವು ಇದನ್ನ ವಿರೋಧ ಮಾಡ್ತೀವಿ” ಎಂದು ಹೇಳಿದರು.

ಇದನ್ನೂ ಓದಿ: ಮಂಗಳೂರು: ಮಂಗಳಾದೇವಿ ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...