Homeಕರ್ನಾಟಕಮಂಗಳೂರು: ತೆರವುಗೊಳಿಸಲು ಬಂದ ಅಧಿಕಾರಿಗಳಿಗೆ ಕಾನೂನು ಪಾಠ ಮಾಡಿದ ಬೀದಿಬದಿ ವ್ಯಾಪಾರಿಗಳು!

ಮಂಗಳೂರು: ತೆರವುಗೊಳಿಸಲು ಬಂದ ಅಧಿಕಾರಿಗಳಿಗೆ ಕಾನೂನು ಪಾಠ ಮಾಡಿದ ಬೀದಿಬದಿ ವ್ಯಾಪಾರಿಗಳು!

- Advertisement -
- Advertisement -

ತಮ್ಮನ್ನು ತೆರವುಗೊಳಿಸುವುದರ ವಿರುದ್ದ ಮಂಗಳೂರು ಬೀದಿಬದಿ ವ್ಯಾಪಾರಿಗಳು ಸಿಡಿದೆದ್ದಿದ್ದು, ಮಹಾನಗರ ಪಾಲಿಕೆ ಸತತ ಮೂರನೇ ದಿನವೂ ನಗರದ ಬೀದಿಬದಿ ವ್ಯಾಪಾರಿಗಳನ್ನು ತೆರವು ಮಾಡಲು ಬಂದಾಗ ವಾಗ್ವಾದ ನಡೆಸಿದ ಘಟನೆ ಶನಿವಾರ ನಡೆದಿದೆ. ಪಾಲಿಕೆಯ ಅಧಿಕಾರಿಗಳು ಕಾನೂನು ಮೀರಿ ಬೀದಿಬದಿ ವ್ಯಪಾರಿಗಳ ವಸ್ತುಗಳು ಮತ್ತು ತಳ್ಳುಗಾಡಿಗಳನ್ನು ನಾಶ ಮಾಡುವುದರ ವಿರುದ್ದ ವ್ಯಾಪಾರಿಗಳು ಬೀದಿಯಲ್ಲೇ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಅನಧಿಕೃತ ಗೂಡಂಗಡಿ ಮತ್ತು ಪುಟ್‌ಪಾತ್ ತೆರವು ಕಾರ್ಯಾಚರಣೆ ಮಾಡಲು ಕಳೆದ ಬುಧವಾರದಂದು ಪಾಲಿಕೆಯ ಮೇಯರ್ ಮತ್ತು ಕಮೀಷನರ್‌‌‌‌ ಆದೇಶ ಹೊರಡಿಸಿದ್ದರು ಎನ್ನಲಾಗಿದ್ದು, ಅದರಂತೆ ಗುರುವಾರದಿಂದ ತೆರವು ಕಾರ್ಯಾಚರಣೆ ಪ್ರಾರಂಭವಾಗಿದೆ. ಆದರೆ ಬೀದಿಬದಿ ವ್ಯಾಪಾರಿಗಳಿಗೆ ಸರಕಾರವೇ ನೀಡಿದ್ದ ಗುರುತಿನ ಚೀಟಿಯಿದ್ದರೂ ಅಂತಹ ವ್ಯಾಪಾರಿಗಳನ್ನು ಕೂಡಾ ಅಧಿಕಾರಿಗಳು ತೆರವುಗೊಳಿಸಿದ್ದು, ಹಲವು ವ್ಯಾಪಾರಿಗಳ ಗಾಡಿ ಮತ್ತಿತರ ವಸ್ತುಗಳನ್ನು ಅಧಿಕಾರಿಗಳ ಸಮ್ಮುಖದಲ್ಲಿ ನಿಯಮಬಾಹಿರವಾಗಿ ಜಜ್ಜಿ ನಾಶಪಡಿಸಲಾಗಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ:‘ತೆರವು’ ಹೆಸರಿನಲ್ಲಿ ಬೀದಿಬದಿ ವ್ಯಾಪಾರಿಗಳ ವಸ್ತುಗಳನ್ನು ಜಜ್ಜಿ ಪುಡಿಮಾಡಿ ದರ್ಪ ಮೆರೆದ ಅಧಿಕಾರಿಗಳು

ತೆರವು ಕಾರ್ಯಾಚರಣೆ ಮಾಡಲು ಶನಿವಾರ ಕೂಡಾ ಪಾಲಿಕೆ ಅಧಿಕಾರಿಗಳು ನಗರದ ಬೀದಿಗೆ ಬಂದಾಗ ಬೀದಿಬದಿ ವ್ಯಾಪಾರಿಗಳು ತಡೆದಿದ್ದು, ತೆರವು ಕಾರ್ಯಾಚರಣೆ ಮಾಡುವ ಆದೇಶ ಪತ್ರವನ್ನು ಕೇಳಿದ್ದಾರೆ. ಜೊತಗೆ ಸರ್ಕಾರ ನೀಡಿದ ಗುರುತಿನ ಚೀಟಿವ ಇರುವ ವ್ಯಾಪಾರಿಗಳ ತೆರವು ಮಾಡಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾನೂನು ಪಾಠ ಮಾಡಿ, ಅಧಿಕಾರಿಗಳನ್ನು ತರಾಟೆಗೆ ಪಡೆದ ವ್ಯಾಪಾರಿಗಳು

ಕಾನೂನಿನ ಪ್ರಕಾರ ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸಬೇಕೆಂದರೆ ಅವರಿಗೆ ಪರ್ಯಾಯ ವ್ಯವಸ್ಥೆಯನ್ನು ಸ್ಥಳೀಯ ಸಂಸ್ಥೆಯೂ ಮಾಡಿರಬೇಕು. ಜೊತೆಗೆ ತೆರವುಗೊಳಿಸಿದ ವಸ್ತುಗಳನ್ನು ದಂಡ ಕಟ್ಟಿಸಿ ಅದನ್ನು ಅವರಿಗೆ ವಾಪಾಸು ಕೊಡಬೇಕು.

ಶನಿವಾರ ತೆರವು ಕಾರ್ಯಾಚರಣೆ ಮಾಡಲು ಬಂದ ಅಧಿಕಾರಿಗಳನ್ನು ತಡೆದ ವ್ಯಾಪಾರಿಗಳು, ತಮ್ಮ ವಸ್ತುಗಳನ್ನು ನಾಶ ಪಡಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಅಧಿಕಾರಿಗಳಿಗೆ ಬೀದಿಯಲ್ಲೇ ಕಾನೂನು ಪಾಠ ಮಾಡಿದ್ದಾರೆ.

ಇದನ್ನೂ ಓದಿ:ಬೀದಿಬದಿ ವ್ಯಾಪಾರಿಗಳ ಮೇಲೆ ಮಂಗಳೂರು ಪಾಲಿಕೆ ದಾಳಿ: ನಾವು ಆತ್ಮಹತ್ಯೆ ಮಾಡಿಕೊಳ್ಳಬೇಕೆ ಎಂದು ವ್ಯಾಪಾರಿಗಳ ಅಳಲು

“ಅನಧೀಕೃತ ಮತ್ತು ಗುರುತಿನ ಚೀಟಿ ಇಲ್ಲದ ಬೀದಿಬದಿ ವ್ಯಾಪಾರಿಗಳ ವಸ್ತುಗಳನ್ನು ಅಧಿಕಾರಿಲು ವಶಕ್ಕೆ ಪಡೆಯಬಹುದು. ಆದರೆ ಅವುಗಳನ್ನು ನಾಶ ಪಡಿಸುವ ಅಧಿಕಾರ ಯಾರು ನೀಡಿದ್ದು. ಇದು ಸರಿಯಾದ ಕ್ರಮವಲ್ಲ. ಅಲ್ಲದೆ, ಇತ್ತೀಚೆಗೆ ಬೀದಿಬದಿ ವ್ಯಾಪಾರಿಗಳ ಸರ್ವೇ ಮಾಡಲಾಗಿತ್ತು. ಅವರಿಗೆ ಪಾಲಿಕೆ ಗುರುತಿನ ಚೀಟಿ ಮುಂದಿನ ದಿನದಲ್ಲಿ ನೀಡುತ್ತದೆ. ಆದರೆ ಈಗ ಸರ್ವೇ ಮಾಡಿರುವ ಬೀದಿಬದಿ ವ್ಯಾಪಾರಿಗಳನ್ನು ಕೂಡಾ ತೆರವುಗೊಳಿಸಲು ಮುಂದಾಗಿದ್ದಾರೆ” ಎಂದು ‘ದ.ಕ.ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಶ್ರೇಯೋಭಿವೃಧಿ ಸಂಘ’ದ ಅಧ್ಯಕ್ಷ ಮುಸ್ತಫಾ ಕಿಡಿಕಾರಿದ್ದಾರೆ.

ಗುರುವಾರ ಮತ್ತು ಶುಕ್ರವಾರದಂದು ದರ್ಪ ಮೆರೆದ ಅಧಿಕಾರಿಗಳು

ತೆರವಿನ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಬೀದಿಬದಿ ವ್ಯಾಪಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ, “ಮಹಾನಗರ ಪಾಲಿಕೆಯ ತೆರವು ಕಾರ್ಯಾಚರಣೆಯು ಸತತ ಮೂರನೇ ದಿನವೂ ನಡೆಯುತ್ತಿದೆ. ಆದರೆ ಈ ರೀತಿ ಕಾರ್ಯಾಚರಣೆ ನಡೆಸಲು ಪಟ್ಟಣ ವ್ಯಾಪಾರಿ ಸಮಿತಿಯಲ್ಲಿ ನಿರ್ಧಾರ ಮಾಡಿಲ್ಲ. ಕಾನೂನಿನ ಪ್ರಕಾರ ಪಟ್ಟಣ ವ್ಯಾಪಾರಿ ಸಮಿತಿಯಲ್ಲಿ ನಿರ್ಧಾರ ತೆಗೆದುಕೊಳ್ಳಬೇಕು. ಆದರೆ ಪಾಲಿಕೆಯು ಏಕಾಏಕಿ ವ್ಯಾಪಾರಿಗಳಿಗೆ ತೊಂದರೆ ನೀಡಿ, ಅವರ ವಸ್ತುಗಳು ಮತ್ತು ತಳ್ಳುವ ಗಾಡಿಗಳನ್ನು ನಾಶ ಮಾಡುತ್ತಿದೆ” ಎಂದು ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಸರ್ಕಾರದ ಸಹಾಯಧನ ಕೇಂದ್ರ ಸರ್ಕಾರದ ಸಾಲಕ್ಕೆ ವಜಾ: ಬೀದಿ ಬದಿ ವ್ಯಾಪಾರಿಗಳನ್ನು ತಲುಪದ ಸರ್ಕಾರದ ನೆರವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...