Homeಕರ್ನಾಟಕಮಂಗಳೂರು: ತೆರವುಗೊಳಿಸಲು ಬಂದ ಅಧಿಕಾರಿಗಳಿಗೆ ಕಾನೂನು ಪಾಠ ಮಾಡಿದ ಬೀದಿಬದಿ ವ್ಯಾಪಾರಿಗಳು!

ಮಂಗಳೂರು: ತೆರವುಗೊಳಿಸಲು ಬಂದ ಅಧಿಕಾರಿಗಳಿಗೆ ಕಾನೂನು ಪಾಠ ಮಾಡಿದ ಬೀದಿಬದಿ ವ್ಯಾಪಾರಿಗಳು!

- Advertisement -
- Advertisement -

ತಮ್ಮನ್ನು ತೆರವುಗೊಳಿಸುವುದರ ವಿರುದ್ದ ಮಂಗಳೂರು ಬೀದಿಬದಿ ವ್ಯಾಪಾರಿಗಳು ಸಿಡಿದೆದ್ದಿದ್ದು, ಮಹಾನಗರ ಪಾಲಿಕೆ ಸತತ ಮೂರನೇ ದಿನವೂ ನಗರದ ಬೀದಿಬದಿ ವ್ಯಾಪಾರಿಗಳನ್ನು ತೆರವು ಮಾಡಲು ಬಂದಾಗ ವಾಗ್ವಾದ ನಡೆಸಿದ ಘಟನೆ ಶನಿವಾರ ನಡೆದಿದೆ. ಪಾಲಿಕೆಯ ಅಧಿಕಾರಿಗಳು ಕಾನೂನು ಮೀರಿ ಬೀದಿಬದಿ ವ್ಯಪಾರಿಗಳ ವಸ್ತುಗಳು ಮತ್ತು ತಳ್ಳುಗಾಡಿಗಳನ್ನು ನಾಶ ಮಾಡುವುದರ ವಿರುದ್ದ ವ್ಯಾಪಾರಿಗಳು ಬೀದಿಯಲ್ಲೇ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಅನಧಿಕೃತ ಗೂಡಂಗಡಿ ಮತ್ತು ಪುಟ್‌ಪಾತ್ ತೆರವು ಕಾರ್ಯಾಚರಣೆ ಮಾಡಲು ಕಳೆದ ಬುಧವಾರದಂದು ಪಾಲಿಕೆಯ ಮೇಯರ್ ಮತ್ತು ಕಮೀಷನರ್‌‌‌‌ ಆದೇಶ ಹೊರಡಿಸಿದ್ದರು ಎನ್ನಲಾಗಿದ್ದು, ಅದರಂತೆ ಗುರುವಾರದಿಂದ ತೆರವು ಕಾರ್ಯಾಚರಣೆ ಪ್ರಾರಂಭವಾಗಿದೆ. ಆದರೆ ಬೀದಿಬದಿ ವ್ಯಾಪಾರಿಗಳಿಗೆ ಸರಕಾರವೇ ನೀಡಿದ್ದ ಗುರುತಿನ ಚೀಟಿಯಿದ್ದರೂ ಅಂತಹ ವ್ಯಾಪಾರಿಗಳನ್ನು ಕೂಡಾ ಅಧಿಕಾರಿಗಳು ತೆರವುಗೊಳಿಸಿದ್ದು, ಹಲವು ವ್ಯಾಪಾರಿಗಳ ಗಾಡಿ ಮತ್ತಿತರ ವಸ್ತುಗಳನ್ನು ಅಧಿಕಾರಿಗಳ ಸಮ್ಮುಖದಲ್ಲಿ ನಿಯಮಬಾಹಿರವಾಗಿ ಜಜ್ಜಿ ನಾಶಪಡಿಸಲಾಗಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ:‘ತೆರವು’ ಹೆಸರಿನಲ್ಲಿ ಬೀದಿಬದಿ ವ್ಯಾಪಾರಿಗಳ ವಸ್ತುಗಳನ್ನು ಜಜ್ಜಿ ಪುಡಿಮಾಡಿ ದರ್ಪ ಮೆರೆದ ಅಧಿಕಾರಿಗಳು

ತೆರವು ಕಾರ್ಯಾಚರಣೆ ಮಾಡಲು ಶನಿವಾರ ಕೂಡಾ ಪಾಲಿಕೆ ಅಧಿಕಾರಿಗಳು ನಗರದ ಬೀದಿಗೆ ಬಂದಾಗ ಬೀದಿಬದಿ ವ್ಯಾಪಾರಿಗಳು ತಡೆದಿದ್ದು, ತೆರವು ಕಾರ್ಯಾಚರಣೆ ಮಾಡುವ ಆದೇಶ ಪತ್ರವನ್ನು ಕೇಳಿದ್ದಾರೆ. ಜೊತಗೆ ಸರ್ಕಾರ ನೀಡಿದ ಗುರುತಿನ ಚೀಟಿವ ಇರುವ ವ್ಯಾಪಾರಿಗಳ ತೆರವು ಮಾಡಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾನೂನು ಪಾಠ ಮಾಡಿ, ಅಧಿಕಾರಿಗಳನ್ನು ತರಾಟೆಗೆ ಪಡೆದ ವ್ಯಾಪಾರಿಗಳು

ಕಾನೂನಿನ ಪ್ರಕಾರ ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸಬೇಕೆಂದರೆ ಅವರಿಗೆ ಪರ್ಯಾಯ ವ್ಯವಸ್ಥೆಯನ್ನು ಸ್ಥಳೀಯ ಸಂಸ್ಥೆಯೂ ಮಾಡಿರಬೇಕು. ಜೊತೆಗೆ ತೆರವುಗೊಳಿಸಿದ ವಸ್ತುಗಳನ್ನು ದಂಡ ಕಟ್ಟಿಸಿ ಅದನ್ನು ಅವರಿಗೆ ವಾಪಾಸು ಕೊಡಬೇಕು.

ಶನಿವಾರ ತೆರವು ಕಾರ್ಯಾಚರಣೆ ಮಾಡಲು ಬಂದ ಅಧಿಕಾರಿಗಳನ್ನು ತಡೆದ ವ್ಯಾಪಾರಿಗಳು, ತಮ್ಮ ವಸ್ತುಗಳನ್ನು ನಾಶ ಪಡಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಅಧಿಕಾರಿಗಳಿಗೆ ಬೀದಿಯಲ್ಲೇ ಕಾನೂನು ಪಾಠ ಮಾಡಿದ್ದಾರೆ.

ಇದನ್ನೂ ಓದಿ:ಬೀದಿಬದಿ ವ್ಯಾಪಾರಿಗಳ ಮೇಲೆ ಮಂಗಳೂರು ಪಾಲಿಕೆ ದಾಳಿ: ನಾವು ಆತ್ಮಹತ್ಯೆ ಮಾಡಿಕೊಳ್ಳಬೇಕೆ ಎಂದು ವ್ಯಾಪಾರಿಗಳ ಅಳಲು

“ಅನಧೀಕೃತ ಮತ್ತು ಗುರುತಿನ ಚೀಟಿ ಇಲ್ಲದ ಬೀದಿಬದಿ ವ್ಯಾಪಾರಿಗಳ ವಸ್ತುಗಳನ್ನು ಅಧಿಕಾರಿಲು ವಶಕ್ಕೆ ಪಡೆಯಬಹುದು. ಆದರೆ ಅವುಗಳನ್ನು ನಾಶ ಪಡಿಸುವ ಅಧಿಕಾರ ಯಾರು ನೀಡಿದ್ದು. ಇದು ಸರಿಯಾದ ಕ್ರಮವಲ್ಲ. ಅಲ್ಲದೆ, ಇತ್ತೀಚೆಗೆ ಬೀದಿಬದಿ ವ್ಯಾಪಾರಿಗಳ ಸರ್ವೇ ಮಾಡಲಾಗಿತ್ತು. ಅವರಿಗೆ ಪಾಲಿಕೆ ಗುರುತಿನ ಚೀಟಿ ಮುಂದಿನ ದಿನದಲ್ಲಿ ನೀಡುತ್ತದೆ. ಆದರೆ ಈಗ ಸರ್ವೇ ಮಾಡಿರುವ ಬೀದಿಬದಿ ವ್ಯಾಪಾರಿಗಳನ್ನು ಕೂಡಾ ತೆರವುಗೊಳಿಸಲು ಮುಂದಾಗಿದ್ದಾರೆ” ಎಂದು ‘ದ.ಕ.ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಶ್ರೇಯೋಭಿವೃಧಿ ಸಂಘ’ದ ಅಧ್ಯಕ್ಷ ಮುಸ್ತಫಾ ಕಿಡಿಕಾರಿದ್ದಾರೆ.

ಗುರುವಾರ ಮತ್ತು ಶುಕ್ರವಾರದಂದು ದರ್ಪ ಮೆರೆದ ಅಧಿಕಾರಿಗಳು

ತೆರವಿನ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಬೀದಿಬದಿ ವ್ಯಾಪಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ, “ಮಹಾನಗರ ಪಾಲಿಕೆಯ ತೆರವು ಕಾರ್ಯಾಚರಣೆಯು ಸತತ ಮೂರನೇ ದಿನವೂ ನಡೆಯುತ್ತಿದೆ. ಆದರೆ ಈ ರೀತಿ ಕಾರ್ಯಾಚರಣೆ ನಡೆಸಲು ಪಟ್ಟಣ ವ್ಯಾಪಾರಿ ಸಮಿತಿಯಲ್ಲಿ ನಿರ್ಧಾರ ಮಾಡಿಲ್ಲ. ಕಾನೂನಿನ ಪ್ರಕಾರ ಪಟ್ಟಣ ವ್ಯಾಪಾರಿ ಸಮಿತಿಯಲ್ಲಿ ನಿರ್ಧಾರ ತೆಗೆದುಕೊಳ್ಳಬೇಕು. ಆದರೆ ಪಾಲಿಕೆಯು ಏಕಾಏಕಿ ವ್ಯಾಪಾರಿಗಳಿಗೆ ತೊಂದರೆ ನೀಡಿ, ಅವರ ವಸ್ತುಗಳು ಮತ್ತು ತಳ್ಳುವ ಗಾಡಿಗಳನ್ನು ನಾಶ ಮಾಡುತ್ತಿದೆ” ಎಂದು ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಸರ್ಕಾರದ ಸಹಾಯಧನ ಕೇಂದ್ರ ಸರ್ಕಾರದ ಸಾಲಕ್ಕೆ ವಜಾ: ಬೀದಿ ಬದಿ ವ್ಯಾಪಾರಿಗಳನ್ನು ತಲುಪದ ಸರ್ಕಾರದ ನೆರವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...