Homeಕರ್ನಾಟಕಮಂಗಳೂರು: ತೆರವುಗೊಳಿಸಲು ಬಂದ ಅಧಿಕಾರಿಗಳಿಗೆ ಕಾನೂನು ಪಾಠ ಮಾಡಿದ ಬೀದಿಬದಿ ವ್ಯಾಪಾರಿಗಳು!

ಮಂಗಳೂರು: ತೆರವುಗೊಳಿಸಲು ಬಂದ ಅಧಿಕಾರಿಗಳಿಗೆ ಕಾನೂನು ಪಾಠ ಮಾಡಿದ ಬೀದಿಬದಿ ವ್ಯಾಪಾರಿಗಳು!

- Advertisement -
- Advertisement -

ತಮ್ಮನ್ನು ತೆರವುಗೊಳಿಸುವುದರ ವಿರುದ್ದ ಮಂಗಳೂರು ಬೀದಿಬದಿ ವ್ಯಾಪಾರಿಗಳು ಸಿಡಿದೆದ್ದಿದ್ದು, ಮಹಾನಗರ ಪಾಲಿಕೆ ಸತತ ಮೂರನೇ ದಿನವೂ ನಗರದ ಬೀದಿಬದಿ ವ್ಯಾಪಾರಿಗಳನ್ನು ತೆರವು ಮಾಡಲು ಬಂದಾಗ ವಾಗ್ವಾದ ನಡೆಸಿದ ಘಟನೆ ಶನಿವಾರ ನಡೆದಿದೆ. ಪಾಲಿಕೆಯ ಅಧಿಕಾರಿಗಳು ಕಾನೂನು ಮೀರಿ ಬೀದಿಬದಿ ವ್ಯಪಾರಿಗಳ ವಸ್ತುಗಳು ಮತ್ತು ತಳ್ಳುಗಾಡಿಗಳನ್ನು ನಾಶ ಮಾಡುವುದರ ವಿರುದ್ದ ವ್ಯಾಪಾರಿಗಳು ಬೀದಿಯಲ್ಲೇ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಅನಧಿಕೃತ ಗೂಡಂಗಡಿ ಮತ್ತು ಪುಟ್‌ಪಾತ್ ತೆರವು ಕಾರ್ಯಾಚರಣೆ ಮಾಡಲು ಕಳೆದ ಬುಧವಾರದಂದು ಪಾಲಿಕೆಯ ಮೇಯರ್ ಮತ್ತು ಕಮೀಷನರ್‌‌‌‌ ಆದೇಶ ಹೊರಡಿಸಿದ್ದರು ಎನ್ನಲಾಗಿದ್ದು, ಅದರಂತೆ ಗುರುವಾರದಿಂದ ತೆರವು ಕಾರ್ಯಾಚರಣೆ ಪ್ರಾರಂಭವಾಗಿದೆ. ಆದರೆ ಬೀದಿಬದಿ ವ್ಯಾಪಾರಿಗಳಿಗೆ ಸರಕಾರವೇ ನೀಡಿದ್ದ ಗುರುತಿನ ಚೀಟಿಯಿದ್ದರೂ ಅಂತಹ ವ್ಯಾಪಾರಿಗಳನ್ನು ಕೂಡಾ ಅಧಿಕಾರಿಗಳು ತೆರವುಗೊಳಿಸಿದ್ದು, ಹಲವು ವ್ಯಾಪಾರಿಗಳ ಗಾಡಿ ಮತ್ತಿತರ ವಸ್ತುಗಳನ್ನು ಅಧಿಕಾರಿಗಳ ಸಮ್ಮುಖದಲ್ಲಿ ನಿಯಮಬಾಹಿರವಾಗಿ ಜಜ್ಜಿ ನಾಶಪಡಿಸಲಾಗಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ:‘ತೆರವು’ ಹೆಸರಿನಲ್ಲಿ ಬೀದಿಬದಿ ವ್ಯಾಪಾರಿಗಳ ವಸ್ತುಗಳನ್ನು ಜಜ್ಜಿ ಪುಡಿಮಾಡಿ ದರ್ಪ ಮೆರೆದ ಅಧಿಕಾರಿಗಳು

ತೆರವು ಕಾರ್ಯಾಚರಣೆ ಮಾಡಲು ಶನಿವಾರ ಕೂಡಾ ಪಾಲಿಕೆ ಅಧಿಕಾರಿಗಳು ನಗರದ ಬೀದಿಗೆ ಬಂದಾಗ ಬೀದಿಬದಿ ವ್ಯಾಪಾರಿಗಳು ತಡೆದಿದ್ದು, ತೆರವು ಕಾರ್ಯಾಚರಣೆ ಮಾಡುವ ಆದೇಶ ಪತ್ರವನ್ನು ಕೇಳಿದ್ದಾರೆ. ಜೊತಗೆ ಸರ್ಕಾರ ನೀಡಿದ ಗುರುತಿನ ಚೀಟಿವ ಇರುವ ವ್ಯಾಪಾರಿಗಳ ತೆರವು ಮಾಡಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾನೂನು ಪಾಠ ಮಾಡಿ, ಅಧಿಕಾರಿಗಳನ್ನು ತರಾಟೆಗೆ ಪಡೆದ ವ್ಯಾಪಾರಿಗಳು

ಕಾನೂನಿನ ಪ್ರಕಾರ ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸಬೇಕೆಂದರೆ ಅವರಿಗೆ ಪರ್ಯಾಯ ವ್ಯವಸ್ಥೆಯನ್ನು ಸ್ಥಳೀಯ ಸಂಸ್ಥೆಯೂ ಮಾಡಿರಬೇಕು. ಜೊತೆಗೆ ತೆರವುಗೊಳಿಸಿದ ವಸ್ತುಗಳನ್ನು ದಂಡ ಕಟ್ಟಿಸಿ ಅದನ್ನು ಅವರಿಗೆ ವಾಪಾಸು ಕೊಡಬೇಕು.

ಶನಿವಾರ ತೆರವು ಕಾರ್ಯಾಚರಣೆ ಮಾಡಲು ಬಂದ ಅಧಿಕಾರಿಗಳನ್ನು ತಡೆದ ವ್ಯಾಪಾರಿಗಳು, ತಮ್ಮ ವಸ್ತುಗಳನ್ನು ನಾಶ ಪಡಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಅಧಿಕಾರಿಗಳಿಗೆ ಬೀದಿಯಲ್ಲೇ ಕಾನೂನು ಪಾಠ ಮಾಡಿದ್ದಾರೆ.

ಇದನ್ನೂ ಓದಿ:ಬೀದಿಬದಿ ವ್ಯಾಪಾರಿಗಳ ಮೇಲೆ ಮಂಗಳೂರು ಪಾಲಿಕೆ ದಾಳಿ: ನಾವು ಆತ್ಮಹತ್ಯೆ ಮಾಡಿಕೊಳ್ಳಬೇಕೆ ಎಂದು ವ್ಯಾಪಾರಿಗಳ ಅಳಲು

“ಅನಧೀಕೃತ ಮತ್ತು ಗುರುತಿನ ಚೀಟಿ ಇಲ್ಲದ ಬೀದಿಬದಿ ವ್ಯಾಪಾರಿಗಳ ವಸ್ತುಗಳನ್ನು ಅಧಿಕಾರಿಲು ವಶಕ್ಕೆ ಪಡೆಯಬಹುದು. ಆದರೆ ಅವುಗಳನ್ನು ನಾಶ ಪಡಿಸುವ ಅಧಿಕಾರ ಯಾರು ನೀಡಿದ್ದು. ಇದು ಸರಿಯಾದ ಕ್ರಮವಲ್ಲ. ಅಲ್ಲದೆ, ಇತ್ತೀಚೆಗೆ ಬೀದಿಬದಿ ವ್ಯಾಪಾರಿಗಳ ಸರ್ವೇ ಮಾಡಲಾಗಿತ್ತು. ಅವರಿಗೆ ಪಾಲಿಕೆ ಗುರುತಿನ ಚೀಟಿ ಮುಂದಿನ ದಿನದಲ್ಲಿ ನೀಡುತ್ತದೆ. ಆದರೆ ಈಗ ಸರ್ವೇ ಮಾಡಿರುವ ಬೀದಿಬದಿ ವ್ಯಾಪಾರಿಗಳನ್ನು ಕೂಡಾ ತೆರವುಗೊಳಿಸಲು ಮುಂದಾಗಿದ್ದಾರೆ” ಎಂದು ‘ದ.ಕ.ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಶ್ರೇಯೋಭಿವೃಧಿ ಸಂಘ’ದ ಅಧ್ಯಕ್ಷ ಮುಸ್ತಫಾ ಕಿಡಿಕಾರಿದ್ದಾರೆ.

ಗುರುವಾರ ಮತ್ತು ಶುಕ್ರವಾರದಂದು ದರ್ಪ ಮೆರೆದ ಅಧಿಕಾರಿಗಳು

ತೆರವಿನ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಬೀದಿಬದಿ ವ್ಯಾಪಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ, “ಮಹಾನಗರ ಪಾಲಿಕೆಯ ತೆರವು ಕಾರ್ಯಾಚರಣೆಯು ಸತತ ಮೂರನೇ ದಿನವೂ ನಡೆಯುತ್ತಿದೆ. ಆದರೆ ಈ ರೀತಿ ಕಾರ್ಯಾಚರಣೆ ನಡೆಸಲು ಪಟ್ಟಣ ವ್ಯಾಪಾರಿ ಸಮಿತಿಯಲ್ಲಿ ನಿರ್ಧಾರ ಮಾಡಿಲ್ಲ. ಕಾನೂನಿನ ಪ್ರಕಾರ ಪಟ್ಟಣ ವ್ಯಾಪಾರಿ ಸಮಿತಿಯಲ್ಲಿ ನಿರ್ಧಾರ ತೆಗೆದುಕೊಳ್ಳಬೇಕು. ಆದರೆ ಪಾಲಿಕೆಯು ಏಕಾಏಕಿ ವ್ಯಾಪಾರಿಗಳಿಗೆ ತೊಂದರೆ ನೀಡಿ, ಅವರ ವಸ್ತುಗಳು ಮತ್ತು ತಳ್ಳುವ ಗಾಡಿಗಳನ್ನು ನಾಶ ಮಾಡುತ್ತಿದೆ” ಎಂದು ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಸರ್ಕಾರದ ಸಹಾಯಧನ ಕೇಂದ್ರ ಸರ್ಕಾರದ ಸಾಲಕ್ಕೆ ವಜಾ: ಬೀದಿ ಬದಿ ವ್ಯಾಪಾರಿಗಳನ್ನು ತಲುಪದ ಸರ್ಕಾರದ ನೆರವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...