Homeಕರ್ನಾಟಕಮಂಗಳೂರು: ತೆರವುಗೊಳಿಸಲು ಬಂದ ಅಧಿಕಾರಿಗಳಿಗೆ ಕಾನೂನು ಪಾಠ ಮಾಡಿದ ಬೀದಿಬದಿ ವ್ಯಾಪಾರಿಗಳು!

ಮಂಗಳೂರು: ತೆರವುಗೊಳಿಸಲು ಬಂದ ಅಧಿಕಾರಿಗಳಿಗೆ ಕಾನೂನು ಪಾಠ ಮಾಡಿದ ಬೀದಿಬದಿ ವ್ಯಾಪಾರಿಗಳು!

- Advertisement -
- Advertisement -

ತಮ್ಮನ್ನು ತೆರವುಗೊಳಿಸುವುದರ ವಿರುದ್ದ ಮಂಗಳೂರು ಬೀದಿಬದಿ ವ್ಯಾಪಾರಿಗಳು ಸಿಡಿದೆದ್ದಿದ್ದು, ಮಹಾನಗರ ಪಾಲಿಕೆ ಸತತ ಮೂರನೇ ದಿನವೂ ನಗರದ ಬೀದಿಬದಿ ವ್ಯಾಪಾರಿಗಳನ್ನು ತೆರವು ಮಾಡಲು ಬಂದಾಗ ವಾಗ್ವಾದ ನಡೆಸಿದ ಘಟನೆ ಶನಿವಾರ ನಡೆದಿದೆ. ಪಾಲಿಕೆಯ ಅಧಿಕಾರಿಗಳು ಕಾನೂನು ಮೀರಿ ಬೀದಿಬದಿ ವ್ಯಪಾರಿಗಳ ವಸ್ತುಗಳು ಮತ್ತು ತಳ್ಳುಗಾಡಿಗಳನ್ನು ನಾಶ ಮಾಡುವುದರ ವಿರುದ್ದ ವ್ಯಾಪಾರಿಗಳು ಬೀದಿಯಲ್ಲೇ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಅನಧಿಕೃತ ಗೂಡಂಗಡಿ ಮತ್ತು ಪುಟ್‌ಪಾತ್ ತೆರವು ಕಾರ್ಯಾಚರಣೆ ಮಾಡಲು ಕಳೆದ ಬುಧವಾರದಂದು ಪಾಲಿಕೆಯ ಮೇಯರ್ ಮತ್ತು ಕಮೀಷನರ್‌‌‌‌ ಆದೇಶ ಹೊರಡಿಸಿದ್ದರು ಎನ್ನಲಾಗಿದ್ದು, ಅದರಂತೆ ಗುರುವಾರದಿಂದ ತೆರವು ಕಾರ್ಯಾಚರಣೆ ಪ್ರಾರಂಭವಾಗಿದೆ. ಆದರೆ ಬೀದಿಬದಿ ವ್ಯಾಪಾರಿಗಳಿಗೆ ಸರಕಾರವೇ ನೀಡಿದ್ದ ಗುರುತಿನ ಚೀಟಿಯಿದ್ದರೂ ಅಂತಹ ವ್ಯಾಪಾರಿಗಳನ್ನು ಕೂಡಾ ಅಧಿಕಾರಿಗಳು ತೆರವುಗೊಳಿಸಿದ್ದು, ಹಲವು ವ್ಯಾಪಾರಿಗಳ ಗಾಡಿ ಮತ್ತಿತರ ವಸ್ತುಗಳನ್ನು ಅಧಿಕಾರಿಗಳ ಸಮ್ಮುಖದಲ್ಲಿ ನಿಯಮಬಾಹಿರವಾಗಿ ಜಜ್ಜಿ ನಾಶಪಡಿಸಲಾಗಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ:‘ತೆರವು’ ಹೆಸರಿನಲ್ಲಿ ಬೀದಿಬದಿ ವ್ಯಾಪಾರಿಗಳ ವಸ್ತುಗಳನ್ನು ಜಜ್ಜಿ ಪುಡಿಮಾಡಿ ದರ್ಪ ಮೆರೆದ ಅಧಿಕಾರಿಗಳು

ತೆರವು ಕಾರ್ಯಾಚರಣೆ ಮಾಡಲು ಶನಿವಾರ ಕೂಡಾ ಪಾಲಿಕೆ ಅಧಿಕಾರಿಗಳು ನಗರದ ಬೀದಿಗೆ ಬಂದಾಗ ಬೀದಿಬದಿ ವ್ಯಾಪಾರಿಗಳು ತಡೆದಿದ್ದು, ತೆರವು ಕಾರ್ಯಾಚರಣೆ ಮಾಡುವ ಆದೇಶ ಪತ್ರವನ್ನು ಕೇಳಿದ್ದಾರೆ. ಜೊತಗೆ ಸರ್ಕಾರ ನೀಡಿದ ಗುರುತಿನ ಚೀಟಿವ ಇರುವ ವ್ಯಾಪಾರಿಗಳ ತೆರವು ಮಾಡಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾನೂನು ಪಾಠ ಮಾಡಿ, ಅಧಿಕಾರಿಗಳನ್ನು ತರಾಟೆಗೆ ಪಡೆದ ವ್ಯಾಪಾರಿಗಳು

ಕಾನೂನಿನ ಪ್ರಕಾರ ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸಬೇಕೆಂದರೆ ಅವರಿಗೆ ಪರ್ಯಾಯ ವ್ಯವಸ್ಥೆಯನ್ನು ಸ್ಥಳೀಯ ಸಂಸ್ಥೆಯೂ ಮಾಡಿರಬೇಕು. ಜೊತೆಗೆ ತೆರವುಗೊಳಿಸಿದ ವಸ್ತುಗಳನ್ನು ದಂಡ ಕಟ್ಟಿಸಿ ಅದನ್ನು ಅವರಿಗೆ ವಾಪಾಸು ಕೊಡಬೇಕು.

ಶನಿವಾರ ತೆರವು ಕಾರ್ಯಾಚರಣೆ ಮಾಡಲು ಬಂದ ಅಧಿಕಾರಿಗಳನ್ನು ತಡೆದ ವ್ಯಾಪಾರಿಗಳು, ತಮ್ಮ ವಸ್ತುಗಳನ್ನು ನಾಶ ಪಡಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಅಧಿಕಾರಿಗಳಿಗೆ ಬೀದಿಯಲ್ಲೇ ಕಾನೂನು ಪಾಠ ಮಾಡಿದ್ದಾರೆ.

ಇದನ್ನೂ ಓದಿ:ಬೀದಿಬದಿ ವ್ಯಾಪಾರಿಗಳ ಮೇಲೆ ಮಂಗಳೂರು ಪಾಲಿಕೆ ದಾಳಿ: ನಾವು ಆತ್ಮಹತ್ಯೆ ಮಾಡಿಕೊಳ್ಳಬೇಕೆ ಎಂದು ವ್ಯಾಪಾರಿಗಳ ಅಳಲು

“ಅನಧೀಕೃತ ಮತ್ತು ಗುರುತಿನ ಚೀಟಿ ಇಲ್ಲದ ಬೀದಿಬದಿ ವ್ಯಾಪಾರಿಗಳ ವಸ್ತುಗಳನ್ನು ಅಧಿಕಾರಿಲು ವಶಕ್ಕೆ ಪಡೆಯಬಹುದು. ಆದರೆ ಅವುಗಳನ್ನು ನಾಶ ಪಡಿಸುವ ಅಧಿಕಾರ ಯಾರು ನೀಡಿದ್ದು. ಇದು ಸರಿಯಾದ ಕ್ರಮವಲ್ಲ. ಅಲ್ಲದೆ, ಇತ್ತೀಚೆಗೆ ಬೀದಿಬದಿ ವ್ಯಾಪಾರಿಗಳ ಸರ್ವೇ ಮಾಡಲಾಗಿತ್ತು. ಅವರಿಗೆ ಪಾಲಿಕೆ ಗುರುತಿನ ಚೀಟಿ ಮುಂದಿನ ದಿನದಲ್ಲಿ ನೀಡುತ್ತದೆ. ಆದರೆ ಈಗ ಸರ್ವೇ ಮಾಡಿರುವ ಬೀದಿಬದಿ ವ್ಯಾಪಾರಿಗಳನ್ನು ಕೂಡಾ ತೆರವುಗೊಳಿಸಲು ಮುಂದಾಗಿದ್ದಾರೆ” ಎಂದು ‘ದ.ಕ.ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಶ್ರೇಯೋಭಿವೃಧಿ ಸಂಘ’ದ ಅಧ್ಯಕ್ಷ ಮುಸ್ತಫಾ ಕಿಡಿಕಾರಿದ್ದಾರೆ.

ಗುರುವಾರ ಮತ್ತು ಶುಕ್ರವಾರದಂದು ದರ್ಪ ಮೆರೆದ ಅಧಿಕಾರಿಗಳು

ತೆರವಿನ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಬೀದಿಬದಿ ವ್ಯಾಪಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ, “ಮಹಾನಗರ ಪಾಲಿಕೆಯ ತೆರವು ಕಾರ್ಯಾಚರಣೆಯು ಸತತ ಮೂರನೇ ದಿನವೂ ನಡೆಯುತ್ತಿದೆ. ಆದರೆ ಈ ರೀತಿ ಕಾರ್ಯಾಚರಣೆ ನಡೆಸಲು ಪಟ್ಟಣ ವ್ಯಾಪಾರಿ ಸಮಿತಿಯಲ್ಲಿ ನಿರ್ಧಾರ ಮಾಡಿಲ್ಲ. ಕಾನೂನಿನ ಪ್ರಕಾರ ಪಟ್ಟಣ ವ್ಯಾಪಾರಿ ಸಮಿತಿಯಲ್ಲಿ ನಿರ್ಧಾರ ತೆಗೆದುಕೊಳ್ಳಬೇಕು. ಆದರೆ ಪಾಲಿಕೆಯು ಏಕಾಏಕಿ ವ್ಯಾಪಾರಿಗಳಿಗೆ ತೊಂದರೆ ನೀಡಿ, ಅವರ ವಸ್ತುಗಳು ಮತ್ತು ತಳ್ಳುವ ಗಾಡಿಗಳನ್ನು ನಾಶ ಮಾಡುತ್ತಿದೆ” ಎಂದು ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಸರ್ಕಾರದ ಸಹಾಯಧನ ಕೇಂದ್ರ ಸರ್ಕಾರದ ಸಾಲಕ್ಕೆ ವಜಾ: ಬೀದಿ ಬದಿ ವ್ಯಾಪಾರಿಗಳನ್ನು ತಲುಪದ ಸರ್ಕಾರದ ನೆರವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...