Homeಕರ್ನಾಟಕಮಂಗಳೂರು: ತೆರವುಗೊಳಿಸಲು ಬಂದ ಅಧಿಕಾರಿಗಳಿಗೆ ಕಾನೂನು ಪಾಠ ಮಾಡಿದ ಬೀದಿಬದಿ ವ್ಯಾಪಾರಿಗಳು!

ಮಂಗಳೂರು: ತೆರವುಗೊಳಿಸಲು ಬಂದ ಅಧಿಕಾರಿಗಳಿಗೆ ಕಾನೂನು ಪಾಠ ಮಾಡಿದ ಬೀದಿಬದಿ ವ್ಯಾಪಾರಿಗಳು!

- Advertisement -
- Advertisement -

ತಮ್ಮನ್ನು ತೆರವುಗೊಳಿಸುವುದರ ವಿರುದ್ದ ಮಂಗಳೂರು ಬೀದಿಬದಿ ವ್ಯಾಪಾರಿಗಳು ಸಿಡಿದೆದ್ದಿದ್ದು, ಮಹಾನಗರ ಪಾಲಿಕೆ ಸತತ ಮೂರನೇ ದಿನವೂ ನಗರದ ಬೀದಿಬದಿ ವ್ಯಾಪಾರಿಗಳನ್ನು ತೆರವು ಮಾಡಲು ಬಂದಾಗ ವಾಗ್ವಾದ ನಡೆಸಿದ ಘಟನೆ ಶನಿವಾರ ನಡೆದಿದೆ. ಪಾಲಿಕೆಯ ಅಧಿಕಾರಿಗಳು ಕಾನೂನು ಮೀರಿ ಬೀದಿಬದಿ ವ್ಯಪಾರಿಗಳ ವಸ್ತುಗಳು ಮತ್ತು ತಳ್ಳುಗಾಡಿಗಳನ್ನು ನಾಶ ಮಾಡುವುದರ ವಿರುದ್ದ ವ್ಯಾಪಾರಿಗಳು ಬೀದಿಯಲ್ಲೇ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಅನಧಿಕೃತ ಗೂಡಂಗಡಿ ಮತ್ತು ಪುಟ್‌ಪಾತ್ ತೆರವು ಕಾರ್ಯಾಚರಣೆ ಮಾಡಲು ಕಳೆದ ಬುಧವಾರದಂದು ಪಾಲಿಕೆಯ ಮೇಯರ್ ಮತ್ತು ಕಮೀಷನರ್‌‌‌‌ ಆದೇಶ ಹೊರಡಿಸಿದ್ದರು ಎನ್ನಲಾಗಿದ್ದು, ಅದರಂತೆ ಗುರುವಾರದಿಂದ ತೆರವು ಕಾರ್ಯಾಚರಣೆ ಪ್ರಾರಂಭವಾಗಿದೆ. ಆದರೆ ಬೀದಿಬದಿ ವ್ಯಾಪಾರಿಗಳಿಗೆ ಸರಕಾರವೇ ನೀಡಿದ್ದ ಗುರುತಿನ ಚೀಟಿಯಿದ್ದರೂ ಅಂತಹ ವ್ಯಾಪಾರಿಗಳನ್ನು ಕೂಡಾ ಅಧಿಕಾರಿಗಳು ತೆರವುಗೊಳಿಸಿದ್ದು, ಹಲವು ವ್ಯಾಪಾರಿಗಳ ಗಾಡಿ ಮತ್ತಿತರ ವಸ್ತುಗಳನ್ನು ಅಧಿಕಾರಿಗಳ ಸಮ್ಮುಖದಲ್ಲಿ ನಿಯಮಬಾಹಿರವಾಗಿ ಜಜ್ಜಿ ನಾಶಪಡಿಸಲಾಗಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ:‘ತೆರವು’ ಹೆಸರಿನಲ್ಲಿ ಬೀದಿಬದಿ ವ್ಯಾಪಾರಿಗಳ ವಸ್ತುಗಳನ್ನು ಜಜ್ಜಿ ಪುಡಿಮಾಡಿ ದರ್ಪ ಮೆರೆದ ಅಧಿಕಾರಿಗಳು

ತೆರವು ಕಾರ್ಯಾಚರಣೆ ಮಾಡಲು ಶನಿವಾರ ಕೂಡಾ ಪಾಲಿಕೆ ಅಧಿಕಾರಿಗಳು ನಗರದ ಬೀದಿಗೆ ಬಂದಾಗ ಬೀದಿಬದಿ ವ್ಯಾಪಾರಿಗಳು ತಡೆದಿದ್ದು, ತೆರವು ಕಾರ್ಯಾಚರಣೆ ಮಾಡುವ ಆದೇಶ ಪತ್ರವನ್ನು ಕೇಳಿದ್ದಾರೆ. ಜೊತಗೆ ಸರ್ಕಾರ ನೀಡಿದ ಗುರುತಿನ ಚೀಟಿವ ಇರುವ ವ್ಯಾಪಾರಿಗಳ ತೆರವು ಮಾಡಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾನೂನು ಪಾಠ ಮಾಡಿ, ಅಧಿಕಾರಿಗಳನ್ನು ತರಾಟೆಗೆ ಪಡೆದ ವ್ಯಾಪಾರಿಗಳು

ಕಾನೂನಿನ ಪ್ರಕಾರ ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸಬೇಕೆಂದರೆ ಅವರಿಗೆ ಪರ್ಯಾಯ ವ್ಯವಸ್ಥೆಯನ್ನು ಸ್ಥಳೀಯ ಸಂಸ್ಥೆಯೂ ಮಾಡಿರಬೇಕು. ಜೊತೆಗೆ ತೆರವುಗೊಳಿಸಿದ ವಸ್ತುಗಳನ್ನು ದಂಡ ಕಟ್ಟಿಸಿ ಅದನ್ನು ಅವರಿಗೆ ವಾಪಾಸು ಕೊಡಬೇಕು.

ಶನಿವಾರ ತೆರವು ಕಾರ್ಯಾಚರಣೆ ಮಾಡಲು ಬಂದ ಅಧಿಕಾರಿಗಳನ್ನು ತಡೆದ ವ್ಯಾಪಾರಿಗಳು, ತಮ್ಮ ವಸ್ತುಗಳನ್ನು ನಾಶ ಪಡಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಅಧಿಕಾರಿಗಳಿಗೆ ಬೀದಿಯಲ್ಲೇ ಕಾನೂನು ಪಾಠ ಮಾಡಿದ್ದಾರೆ.

ಇದನ್ನೂ ಓದಿ:ಬೀದಿಬದಿ ವ್ಯಾಪಾರಿಗಳ ಮೇಲೆ ಮಂಗಳೂರು ಪಾಲಿಕೆ ದಾಳಿ: ನಾವು ಆತ್ಮಹತ್ಯೆ ಮಾಡಿಕೊಳ್ಳಬೇಕೆ ಎಂದು ವ್ಯಾಪಾರಿಗಳ ಅಳಲು

“ಅನಧೀಕೃತ ಮತ್ತು ಗುರುತಿನ ಚೀಟಿ ಇಲ್ಲದ ಬೀದಿಬದಿ ವ್ಯಾಪಾರಿಗಳ ವಸ್ತುಗಳನ್ನು ಅಧಿಕಾರಿಲು ವಶಕ್ಕೆ ಪಡೆಯಬಹುದು. ಆದರೆ ಅವುಗಳನ್ನು ನಾಶ ಪಡಿಸುವ ಅಧಿಕಾರ ಯಾರು ನೀಡಿದ್ದು. ಇದು ಸರಿಯಾದ ಕ್ರಮವಲ್ಲ. ಅಲ್ಲದೆ, ಇತ್ತೀಚೆಗೆ ಬೀದಿಬದಿ ವ್ಯಾಪಾರಿಗಳ ಸರ್ವೇ ಮಾಡಲಾಗಿತ್ತು. ಅವರಿಗೆ ಪಾಲಿಕೆ ಗುರುತಿನ ಚೀಟಿ ಮುಂದಿನ ದಿನದಲ್ಲಿ ನೀಡುತ್ತದೆ. ಆದರೆ ಈಗ ಸರ್ವೇ ಮಾಡಿರುವ ಬೀದಿಬದಿ ವ್ಯಾಪಾರಿಗಳನ್ನು ಕೂಡಾ ತೆರವುಗೊಳಿಸಲು ಮುಂದಾಗಿದ್ದಾರೆ” ಎಂದು ‘ದ.ಕ.ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಶ್ರೇಯೋಭಿವೃಧಿ ಸಂಘ’ದ ಅಧ್ಯಕ್ಷ ಮುಸ್ತಫಾ ಕಿಡಿಕಾರಿದ್ದಾರೆ.

ಗುರುವಾರ ಮತ್ತು ಶುಕ್ರವಾರದಂದು ದರ್ಪ ಮೆರೆದ ಅಧಿಕಾರಿಗಳು

ತೆರವಿನ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಬೀದಿಬದಿ ವ್ಯಾಪಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ, “ಮಹಾನಗರ ಪಾಲಿಕೆಯ ತೆರವು ಕಾರ್ಯಾಚರಣೆಯು ಸತತ ಮೂರನೇ ದಿನವೂ ನಡೆಯುತ್ತಿದೆ. ಆದರೆ ಈ ರೀತಿ ಕಾರ್ಯಾಚರಣೆ ನಡೆಸಲು ಪಟ್ಟಣ ವ್ಯಾಪಾರಿ ಸಮಿತಿಯಲ್ಲಿ ನಿರ್ಧಾರ ಮಾಡಿಲ್ಲ. ಕಾನೂನಿನ ಪ್ರಕಾರ ಪಟ್ಟಣ ವ್ಯಾಪಾರಿ ಸಮಿತಿಯಲ್ಲಿ ನಿರ್ಧಾರ ತೆಗೆದುಕೊಳ್ಳಬೇಕು. ಆದರೆ ಪಾಲಿಕೆಯು ಏಕಾಏಕಿ ವ್ಯಾಪಾರಿಗಳಿಗೆ ತೊಂದರೆ ನೀಡಿ, ಅವರ ವಸ್ತುಗಳು ಮತ್ತು ತಳ್ಳುವ ಗಾಡಿಗಳನ್ನು ನಾಶ ಮಾಡುತ್ತಿದೆ” ಎಂದು ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಸರ್ಕಾರದ ಸಹಾಯಧನ ಕೇಂದ್ರ ಸರ್ಕಾರದ ಸಾಲಕ್ಕೆ ವಜಾ: ಬೀದಿ ಬದಿ ವ್ಯಾಪಾರಿಗಳನ್ನು ತಲುಪದ ಸರ್ಕಾರದ ನೆರವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...