Homeಕರ್ನಾಟಕಮಂಗಳೂರು: ಮೀನು ಸಂಸ್ಕರಣಾ ಘಟಕದಲ್ಲಿ ದುರಂತ; 5 ಕಾರ್ಮಿಕರ ಸಾವು

ಮಂಗಳೂರು: ಮೀನು ಸಂಸ್ಕರಣಾ ಘಟಕದಲ್ಲಿ ದುರಂತ; 5 ಕಾರ್ಮಿಕರ ಸಾವು

ಜಿಲ್ಲೆಯಲ್ಲಿ ಹೆಣ ಬಿದ್ದಕೂಡಲೇ ಬರುತ್ತಿದ್ದ ಯಾವುದೆ ಜನಪ್ರತಿನಿಧಿಗಳು, ಇಷ್ಟು ದೊಡ್ಡ ದುರ್ಘಟನೆ ನಡೆದರೂ ಸಂತ್ರಸ್ತರ ಕುಟುಂಬಕ್ಕೆ ಕನಿಷ್ಠ ಸಾಂತ್ವನ ಕೂಡಾ ಹೇಳಿಲ್ಲ ಎಂದು ಸ್ಥಳೀಯ ಕಾರ್ಮಿಕ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ಮಂಗಳೂರು ಹೊರವಲಯದ ಬಜ್ಪೆಯಲ್ಲಿರುವ ಮೀನು ಸಂಸ್ಕರಣಾ ಘಟಕದ ತ್ಯಾಜ್ಯ ಸಂಗ್ರಹದ ತೊಟ್ಟಿಯನ್ನು ಸ್ವಚ್ಛ ಮಾಡುತ್ತಿದ್ದಾಗ ದುರಂತ ಸಂಭವಿಸಿ ಐವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಸೋಮವಾರ ವರದಿಯಾಗಿದೆ. ಪ್ರಕರಣದ ಸಂಬಂಧ ಸಂಸ್ಥೆಯ ನಾಲ್ವರನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಕಮಿಷನರ್ ಎನ್. ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

“ಮೀನು ಸಂಸ್ಕರಣಾ ಘಟಕದ ಮಾಲೀಕರು ಸೇರಿದಂತೆ ನಾಲ್ವರ ಮೇಲೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸದ್ಯಕ್ಕೆ ಕಂಪೆನಿಯ ಪ್ರೊಡಕ್ಷನ್ ಮ್ಯಾನೇಜರ್ ರೂಬಿ ಜೋಸೆಫ್, ಏರಿಯಾ ಮ್ಯಾನೇಜರ್ ಕುಬೇರ್, ಸೂಪರ್ ವೈಸರ್ ಮುಹಮ್ಮದ್ ಅನ್ವರ್, ಫಾರೂಕ್ ಸೇರಿ ಒಟ್ಟು ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ” ಎಂದು ಶಶಿಕುಮಾರ್‌ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳದೇ ಕೆಲಸ ಮಾಡಿಸಿರುವ ಹಿನ್ನೆಲೆಯಲ್ಲಿ ಈ ದುರಂತ ಸಂಭವಿಸಿದೆ. ಈ ಬಗ್ಗೆ ಐಪಿಸಿ ಕಲಂ 337, 338, 304 ಹಾಗೂ 34ರಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ” ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಸಂಘ ಕಟ್ಟಿ ಹಕ್ಕು ಕೇಳಿದ್ದಕ್ಕೆ ಕೆಲಸದಿಂದ ವಜಾ: ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ ಕಾರ್ಮಿಕರು

“ಭಾನುವಾರ ಸಂಜೆಯ ವೇಳೆ ಮೀನು ಸಂಸ್ಕರಣಾ ಘಟಕದ ತ್ಯಾಜ್ಯ ಸಂಗ್ರಹ ತೊಟ್ಟಿಯನ್ನು ಸ್ವಚ್ಛ ಗೊಳಿಸುತ್ತಿದ್ದ ವೇಳೆ ಕಾರ್ಮಿಕನೊಬ್ಬ ಕುಸಿದು ಬಿದ್ದ ಕಾರಣ ಅಲ್ಲೇ ಇದ್ದ ಇತರ ಏಳು ಮಂದಿ ಕಾರ್ಮಿಕರು ಆತನ ರಕ್ಷಣೆಗೆ ಧಾವಿಸಿದ್ದಾರೆ. ದುರಂತದಲ್ಲಿ ಮೂರು ಮಂದಿ ಭಾನುವಾರ ತಡ ರಾತ್ರಿಯೇ ಸಾವನ್ನಪ್ಪಿದ್ದರೆ, ಇಬ್ಬರು ಸೋಮವಾರ ಬೆಳಗ್ಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮತ್ತೆ ಮೂರು ಮಂದಿ ಪ್ರಾಣಾಪಾಯದಿಂದ ಪಾರಾಗಿರುವುದಾಗಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಇದೊಂದು ಗಂಭೀರ ಪ್ರಕರಣವಾಗಿ ಪರಿಗಣಿಸಲಾಗಿದೆ” ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಸೋಮವಾರ ಆಸ್ಪತ್ರೆ ಹಾಗೂ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮಂಗಳೂರು ಕಮಿಷನರ್, ಕಂಪೆನಿಯ ಅಧಿಕಾರಿಗಳನ್ನು ತರಾಟೆಗೈದು ಕಾರ್ಖಾನೆಗೆ ಬೀಗ ಜಡಿಯುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಈದಿನ.ಕಾಂ ವರದಿ ಮಾಡಿದೆ.

ಮೃತಪಟ್ಟ ಕಾರ್ಮಿಕರನ್ನು ಪಶ್ಚಿಮ ಬಂಗಾಳದ ಮುಹಮ್ಮದ್‌ ಸಮೀಯಲ್ಲಾ ಇಸ್ಲಾಂ, ಉಮರ್‌ ಫಾರೂಕ್‌, ನಿಝಾಮುದ್ದೀನ್‌ ಆಲಿಸ್, ಮಿರಾಜುಲ್ ಇಸ್ಲಾಂ ಮತ್ತು ಶರಾಫತ್‌ ಅಲಿ ಎಂದು ಗುರುತಿಸಲಾಗಿದೆ. ಮೃತರಲ್ಲಿ ಒಬ್ಬ ಕಾರ್ಮಿಕ ಅಪ್ರಾಪ್ತ ಎಂದು ಹೇಳಲಾಗುತ್ತಿದೆ ಎಂದು ವಾರ್ತಭಾರತಿ ವರದಿ ಮಾಡಿದೆ. ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

“ಕಂಪೆನಿಯಲ್ಲಿ ಕೆಲಸ ಮಾಡುವವರೆಲ್ಲ ಬಹುತೇಕರು ಯುವಕರಾಗಿದ್ದಾರೆ. ಮುಂಬೈ ಮೂಲದ ರಾಜು ಗೋರಕ್ ಎಂಬವರ ಒಡೆತನದ ಕಾರ್ಖಾನೆಯಲ್ಲಿ ಕಾರ್ಮಿಕರಿಗೆ ಯಾವುದೇ ರೀತಿಯ ರಕ್ಷಣಾತ್ಮಕ ಉಪಕರಣಗಳನ್ನು ಒದಗಿಸಲಾಗಿಲ್ಲ. ಮೃತದೇಹದ ಮೂಗು ಬಾಯಿಯಲ್ಲೂ ಮೀನಿನ ತ್ಯಾಜ್ಯ ಕಂಡು ಬಂದಿರುವುದಾಗಿ ವೈದ್ಯರು ತಿಳಿಸಿದ್ದಾರೆ” ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು: ಕಾರ್ಖಾನೆಯಲ್ಲಿ ಅಮೋನಿಯಂ ಸೋರಿಕೆ 

ಶ್ರೀ ಉಲ್ಕಾ ಎಲ್‌ಎಲ್‌ಪಿ ಕಾರ್ಖಾನೆಯು ಮುಂಬೈ ಮೂಲದ ಮೀನು ಸಂಸ್ಕರಣಾ ಕಾರ್ಖಾನೆಯಾಗಿದ್ದು, ಇಲ್ಲಿಂದ ಮೀನು ಸಂಸ್ಕರಣೆಗೊಂಡು ಏಷ್ಯಾದ ವಿವಿಧ ರಾಷ್ಟ್ರಗಳು, ರಷ್ಯಾ ಸೇರಿದಂತೆ ವಿದೇಶ ಹಾಗೂ ದೇಶದ ಇತರ ರಾಜ್ಯಗಳಿಗೆ ರಫ್ತು ಮಾಡಲಾಗುತ್ತದೆ. ಕಳೆದ ಮೂರು ವರ್ಷಗಳಿಂದ ಈ ಕಾರ್ಖಾನೆ ಕಾರ್ಯ ನಿರ್ವಹಿಸುತ್ತಿದೆ. ನೇರವಾಗಿ ಮತ್ತು ಪರೋಕ್ಷವಾಗಿ ಸುಮಾರು 100 ಮಂದಿ ಕಾರ್ಮಿಕರು ಕಾರ್ಖಾನೆಯಲ್ಲಿ ದುಡಿಯುತ್ತಿದ್ದಾರೆ ಎಂದು ಕಂಪೆನಿಯ ಆಡಳಿತ ವ್ಯವಸ್ಥಾಪಕಿ ಪ್ರಿಯಾ ಎಂಬವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಜನಪ್ರತಿನಿಧಿಗಳ ನಿರ್ಲಕ್ಷ್ಯ

ಜಿಲ್ಲೆಯಲ್ಲಿ ಇಷ್ಟೊಂದು ದೊಡ್ಡ ದುರ್ಘಟನೆ ನಡೆದಾಗ ಬಿಜೆಪಿ ಶಾಸಕರೊಬ್ಬರು ಸ್ಥಳಕ್ಕೆ ಭೇಟಿ ಕೊಟ್ಟು ಹೋಗಿದ್ದಾರೆ ಆದರೆ ಈ ಬಗ್ಗೆ ಯಾವುದೆ ಹೇಳಿಕೆ ನೀಡಿಲ್ಲ ಎಂದು ಕಾರ್ಮಿಕ ಸಂಘಟನೆಗಳ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಜಿಲ್ಲೆಯ ಸಂಸದರಾದ ನಳಿನ್ ಕುಮಾರ್‌ ಕಟೀಲ್‌ ಆಗಲಿ, ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್‌ ಆಗಲಿ ಘಟನಾ ಸ್ಥಳಕ್ಕೆ ಭೇಟಿ ನೀಡಿಲ್ಲ, ಮೃತಪಟ್ಟವರ ಕುಟುಂಬಕ್ಕೆ ಸಾಂತ್ವಾನ ಹೇಳಿಲ್ಲ.  ಜಿಲ್ಲೆಯಲ್ಲಿ ಹೆಣ ಬಿದ್ದಕೂಡಲೇ ಬರುತ್ತಿದ್ದ ಯಾವುದೆ ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ. ಚುನಾವಣೆಯಲ್ಲಿ ಲಾಭ ಇದ್ದರೆ ಮಾತ್ರ ಅವರು ಬರುತ್ತಾರೆ. ಬೇರೆ ರಾಜ್ಯದ ಕಾರ್ಮಿಕರು ಇಲ್ಲಿ ಬಂದು ಮೃತಪಟ್ಟರೆ ಅವರಿಗಾಗಿ ಅಳಲು ಕೂಡಾ ಜನರು ಇರುವುದಿಲ್ಲ” ಎಂದು ಕಾರ್ಮಿಕ ಸಂಘಟನೆಗಳ ಮುಖಂಡರು ನಾನುಗೌರಿ.ಕಾಂಗೆ ಹೇಳಿದ್ದಾರೆ.

ಈ ಮಧ್ಯೆ ಕಾರ್ಮಿಕ ಸಂಘಟನೆಗಳ ಮುಖಂಡರು ತಡರಾತ್ರಿಯವರೆಗೆ ಸತತ ಪ್ರಯತ್ನ ನಡೆಸಿ ಮೃತ ಪಟ್ಟ ಐದು ಬಂಗಾಳಿ ಕಾರ್ಮಿಕರ ಕುಟುಂಬಕ್ಕೆ ಕಂಪೆನಿ ಕಡೆಯಿಂದ ತಲಾ ಹದಿನೈದು ಲಕ್ಷ ರೂಪಾಯಿ ಮಧ್ಯಂತರ ಪರಿಹಾರ ಕೊಡಿಸಲು ಒಪ್ಪಿಸಿದ್ದಾರೆ. ಅಲ್ಲದೆ ಮೃತ ದೇಹಗಳನ್ನು ಬಂಗಾಳಕ್ಕೆ ತಲುಪಿಸುವುದರ ಜೊತೆಗೆ 25 ಕಾರ್ಮಿಕರು ಮೃತ ದೇಹದ ಜೊತೆಗೆ ಊರಿಗೆ ತಲುಪಲು ವಿಮಾನ ಟಿಕೇಟ್ ಒದಗಿಸಲು ಕಂಪೆನಿ ಒಪ್ಪಿಕೊಂಡಿದೆ ಎಂದು ಮಂಗಳೂರು ಸಿಪಿಐಎಂ ಪ್ರಧಾನ ಕಾರ್ಯರ್ಶಿ ಸುನಿಲ್ ಕುಮಾರ್‌ ಬಜಾಲ್‌ ಹೇಳಿದ್ದಾರೆ.

ಇದನ್ನೂ ಓದಿ: ಕಂಪೆನಿಯ ಹೊಸ ನೀತಿಗಳ ವಿರುದ್ಧ ಸಿಡಿದೆದ್ದ ‘ಅರ್ಬನ್ ಕಂಪನಿ’ಯ ಮಹಿಳಾ ಕಾರ್ಮಿಕರು

ಅನ್ಯರಾಜ್ಯದ ಕಾರ್ಮಿಕರ ಜೀತಗಾರಿಕೆ ಮಾಡಲಾಗುತ್ತಿದೆ: ಮುನೀರ್ ಕಾಟಿಪಳ್ಳ ಆಕ್ರೋಶ

ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ, “ಸ್ಥಳೀಯ ಯುವಜನರಿಗೆ ಲಕ್ಷಗಟ್ಟಲೆ ಉದ್ಯೋಗ ಸೃಷ್ಟಿ ಎಂಬ ಭರವಸೆಯೊಂದಿಗೆ ಮಂಗಳೂರು ಎಸ್ಇಝೆಡ್ ಸ್ಥಾಪನೆ ಮಾಡಲಾಗಿತ್ತು. ಆದರೆ ಅಲ್ಲಿ ನಡೆಯುತ್ತಿರುವುದು ಅಸ್ಸಾಂ, ಜಾರ್ಖಂಡ್, ಪಶ್ಚಿಮ ಬಂಗಾಳ ರಾಜ್ಯಗಳ ಅಗ್ಗದ ಕಾರ್ಮಿಕರ ಜೀತಗಾರಿಕೆ” ಎಂದು ಕಿಡಿಕಾರಿದ್ದಾರೆ.

“ಸರಕಾರದ ಮೂಗಿನ ನೇರಕ್ಕೆ ನಡೆಯುವ ಇಂತಹ ಜೀತಗಾರಿಕೆಗೆ ಬಡಪಾಯಿಗಳಾದ ಬಂಗಾಳದ ಐದು ಕಾರ್ಮಿಕರ ಬಲಿಯಾಗಿದೆ. ಉಲ್ಕಾ ಎಂಬ ಮೀನು ಉದ್ಯಮದಲ್ಲಿ ನಡೆದ ಇಂತಹ ಕರುಳು ಹಿಂಡುವ ಅವಘಡಕ್ಕೆ ಕಂಪೆನಿಗೆ ತಾತ್ಕಾಲಿಕ ಬೀಗ ಜಡಿದು, ನಾಲ್ಕು ಸೂಪರ್ ವೈಸರ್ ಗಳನ್ನು ವಶಕ್ಕೆ ಪಡೆದರೆ ಸಾಕೇ..? ಕುಟುಂಬಕ್ಕೆ ನೀಡುವ ಜುಜುಬಿ ದುಡ್ಡು ಇದಕ್ಕೆ ಪರಿಹಾರವೇ..? ಸ್ಥಳೀಯರಿಗೆ ಉದ್ಯೋಗ ನೀಡುವ ಭರವಸೆ ನೀಡಿ ಈಶಾನ್ಯ ರಾಜ್ಯದ ಕಾರ್ಮಿಕರ ಜೀತಗಾರಿಕೆಗೆ ಅವಕಾಶ ಕೊಟ್ಟ ಜಿಲ್ಲೆಯ ಶಾಸಕ, ಸಂಸದರು, ಜಿಲ್ಲಾಡಳಿತದ ಚುಕ್ಕಾಣಿ ಹಿಡಿದಿರುವ ಅಧಿಕಾರಿಗಳು ಹೊಣೆ ಹೊರಬೇಡವೇ..? ಶಿಕ್ಷೆಗೆ ತಮ್ಮನ್ನು ಒಡ್ಡಿಕೊಳ್ಳಬೇಡವೇ..? ತುಳುನಾಡಿನ ಜನ ಸಮೂಹಕ್ಕೆ ಇದೆಲ್ಲಾ ಅರ್ಥ ಆಗುವುದು ಯಾವಾಗ?” ಎಂದು ಮುನೀರ್ ಕಾಟಿಪಳ್ಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...