Homeಕರ್ನಾಟಕಮಂಗಳೂರು: ಮೀನು ಸಂಸ್ಕರಣಾ ಘಟಕದಲ್ಲಿ ದುರಂತ; 5 ಕಾರ್ಮಿಕರ ಸಾವು

ಮಂಗಳೂರು: ಮೀನು ಸಂಸ್ಕರಣಾ ಘಟಕದಲ್ಲಿ ದುರಂತ; 5 ಕಾರ್ಮಿಕರ ಸಾವು

ಜಿಲ್ಲೆಯಲ್ಲಿ ಹೆಣ ಬಿದ್ದಕೂಡಲೇ ಬರುತ್ತಿದ್ದ ಯಾವುದೆ ಜನಪ್ರತಿನಿಧಿಗಳು, ಇಷ್ಟು ದೊಡ್ಡ ದುರ್ಘಟನೆ ನಡೆದರೂ ಸಂತ್ರಸ್ತರ ಕುಟುಂಬಕ್ಕೆ ಕನಿಷ್ಠ ಸಾಂತ್ವನ ಕೂಡಾ ಹೇಳಿಲ್ಲ ಎಂದು ಸ್ಥಳೀಯ ಕಾರ್ಮಿಕ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ಮಂಗಳೂರು ಹೊರವಲಯದ ಬಜ್ಪೆಯಲ್ಲಿರುವ ಮೀನು ಸಂಸ್ಕರಣಾ ಘಟಕದ ತ್ಯಾಜ್ಯ ಸಂಗ್ರಹದ ತೊಟ್ಟಿಯನ್ನು ಸ್ವಚ್ಛ ಮಾಡುತ್ತಿದ್ದಾಗ ದುರಂತ ಸಂಭವಿಸಿ ಐವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಸೋಮವಾರ ವರದಿಯಾಗಿದೆ. ಪ್ರಕರಣದ ಸಂಬಂಧ ಸಂಸ್ಥೆಯ ನಾಲ್ವರನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಕಮಿಷನರ್ ಎನ್. ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

“ಮೀನು ಸಂಸ್ಕರಣಾ ಘಟಕದ ಮಾಲೀಕರು ಸೇರಿದಂತೆ ನಾಲ್ವರ ಮೇಲೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸದ್ಯಕ್ಕೆ ಕಂಪೆನಿಯ ಪ್ರೊಡಕ್ಷನ್ ಮ್ಯಾನೇಜರ್ ರೂಬಿ ಜೋಸೆಫ್, ಏರಿಯಾ ಮ್ಯಾನೇಜರ್ ಕುಬೇರ್, ಸೂಪರ್ ವೈಸರ್ ಮುಹಮ್ಮದ್ ಅನ್ವರ್, ಫಾರೂಕ್ ಸೇರಿ ಒಟ್ಟು ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ” ಎಂದು ಶಶಿಕುಮಾರ್‌ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳದೇ ಕೆಲಸ ಮಾಡಿಸಿರುವ ಹಿನ್ನೆಲೆಯಲ್ಲಿ ಈ ದುರಂತ ಸಂಭವಿಸಿದೆ. ಈ ಬಗ್ಗೆ ಐಪಿಸಿ ಕಲಂ 337, 338, 304 ಹಾಗೂ 34ರಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ” ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಸಂಘ ಕಟ್ಟಿ ಹಕ್ಕು ಕೇಳಿದ್ದಕ್ಕೆ ಕೆಲಸದಿಂದ ವಜಾ: ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ ಕಾರ್ಮಿಕರು

“ಭಾನುವಾರ ಸಂಜೆಯ ವೇಳೆ ಮೀನು ಸಂಸ್ಕರಣಾ ಘಟಕದ ತ್ಯಾಜ್ಯ ಸಂಗ್ರಹ ತೊಟ್ಟಿಯನ್ನು ಸ್ವಚ್ಛ ಗೊಳಿಸುತ್ತಿದ್ದ ವೇಳೆ ಕಾರ್ಮಿಕನೊಬ್ಬ ಕುಸಿದು ಬಿದ್ದ ಕಾರಣ ಅಲ್ಲೇ ಇದ್ದ ಇತರ ಏಳು ಮಂದಿ ಕಾರ್ಮಿಕರು ಆತನ ರಕ್ಷಣೆಗೆ ಧಾವಿಸಿದ್ದಾರೆ. ದುರಂತದಲ್ಲಿ ಮೂರು ಮಂದಿ ಭಾನುವಾರ ತಡ ರಾತ್ರಿಯೇ ಸಾವನ್ನಪ್ಪಿದ್ದರೆ, ಇಬ್ಬರು ಸೋಮವಾರ ಬೆಳಗ್ಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮತ್ತೆ ಮೂರು ಮಂದಿ ಪ್ರಾಣಾಪಾಯದಿಂದ ಪಾರಾಗಿರುವುದಾಗಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಇದೊಂದು ಗಂಭೀರ ಪ್ರಕರಣವಾಗಿ ಪರಿಗಣಿಸಲಾಗಿದೆ” ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಸೋಮವಾರ ಆಸ್ಪತ್ರೆ ಹಾಗೂ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮಂಗಳೂರು ಕಮಿಷನರ್, ಕಂಪೆನಿಯ ಅಧಿಕಾರಿಗಳನ್ನು ತರಾಟೆಗೈದು ಕಾರ್ಖಾನೆಗೆ ಬೀಗ ಜಡಿಯುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಈದಿನ.ಕಾಂ ವರದಿ ಮಾಡಿದೆ.

ಮೃತಪಟ್ಟ ಕಾರ್ಮಿಕರನ್ನು ಪಶ್ಚಿಮ ಬಂಗಾಳದ ಮುಹಮ್ಮದ್‌ ಸಮೀಯಲ್ಲಾ ಇಸ್ಲಾಂ, ಉಮರ್‌ ಫಾರೂಕ್‌, ನಿಝಾಮುದ್ದೀನ್‌ ಆಲಿಸ್, ಮಿರಾಜುಲ್ ಇಸ್ಲಾಂ ಮತ್ತು ಶರಾಫತ್‌ ಅಲಿ ಎಂದು ಗುರುತಿಸಲಾಗಿದೆ. ಮೃತರಲ್ಲಿ ಒಬ್ಬ ಕಾರ್ಮಿಕ ಅಪ್ರಾಪ್ತ ಎಂದು ಹೇಳಲಾಗುತ್ತಿದೆ ಎಂದು ವಾರ್ತಭಾರತಿ ವರದಿ ಮಾಡಿದೆ. ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

“ಕಂಪೆನಿಯಲ್ಲಿ ಕೆಲಸ ಮಾಡುವವರೆಲ್ಲ ಬಹುತೇಕರು ಯುವಕರಾಗಿದ್ದಾರೆ. ಮುಂಬೈ ಮೂಲದ ರಾಜು ಗೋರಕ್ ಎಂಬವರ ಒಡೆತನದ ಕಾರ್ಖಾನೆಯಲ್ಲಿ ಕಾರ್ಮಿಕರಿಗೆ ಯಾವುದೇ ರೀತಿಯ ರಕ್ಷಣಾತ್ಮಕ ಉಪಕರಣಗಳನ್ನು ಒದಗಿಸಲಾಗಿಲ್ಲ. ಮೃತದೇಹದ ಮೂಗು ಬಾಯಿಯಲ್ಲೂ ಮೀನಿನ ತ್ಯಾಜ್ಯ ಕಂಡು ಬಂದಿರುವುದಾಗಿ ವೈದ್ಯರು ತಿಳಿಸಿದ್ದಾರೆ” ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು: ಕಾರ್ಖಾನೆಯಲ್ಲಿ ಅಮೋನಿಯಂ ಸೋರಿಕೆ 

ಶ್ರೀ ಉಲ್ಕಾ ಎಲ್‌ಎಲ್‌ಪಿ ಕಾರ್ಖಾನೆಯು ಮುಂಬೈ ಮೂಲದ ಮೀನು ಸಂಸ್ಕರಣಾ ಕಾರ್ಖಾನೆಯಾಗಿದ್ದು, ಇಲ್ಲಿಂದ ಮೀನು ಸಂಸ್ಕರಣೆಗೊಂಡು ಏಷ್ಯಾದ ವಿವಿಧ ರಾಷ್ಟ್ರಗಳು, ರಷ್ಯಾ ಸೇರಿದಂತೆ ವಿದೇಶ ಹಾಗೂ ದೇಶದ ಇತರ ರಾಜ್ಯಗಳಿಗೆ ರಫ್ತು ಮಾಡಲಾಗುತ್ತದೆ. ಕಳೆದ ಮೂರು ವರ್ಷಗಳಿಂದ ಈ ಕಾರ್ಖಾನೆ ಕಾರ್ಯ ನಿರ್ವಹಿಸುತ್ತಿದೆ. ನೇರವಾಗಿ ಮತ್ತು ಪರೋಕ್ಷವಾಗಿ ಸುಮಾರು 100 ಮಂದಿ ಕಾರ್ಮಿಕರು ಕಾರ್ಖಾನೆಯಲ್ಲಿ ದುಡಿಯುತ್ತಿದ್ದಾರೆ ಎಂದು ಕಂಪೆನಿಯ ಆಡಳಿತ ವ್ಯವಸ್ಥಾಪಕಿ ಪ್ರಿಯಾ ಎಂಬವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಜನಪ್ರತಿನಿಧಿಗಳ ನಿರ್ಲಕ್ಷ್ಯ

ಜಿಲ್ಲೆಯಲ್ಲಿ ಇಷ್ಟೊಂದು ದೊಡ್ಡ ದುರ್ಘಟನೆ ನಡೆದಾಗ ಬಿಜೆಪಿ ಶಾಸಕರೊಬ್ಬರು ಸ್ಥಳಕ್ಕೆ ಭೇಟಿ ಕೊಟ್ಟು ಹೋಗಿದ್ದಾರೆ ಆದರೆ ಈ ಬಗ್ಗೆ ಯಾವುದೆ ಹೇಳಿಕೆ ನೀಡಿಲ್ಲ ಎಂದು ಕಾರ್ಮಿಕ ಸಂಘಟನೆಗಳ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಜಿಲ್ಲೆಯ ಸಂಸದರಾದ ನಳಿನ್ ಕುಮಾರ್‌ ಕಟೀಲ್‌ ಆಗಲಿ, ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್‌ ಆಗಲಿ ಘಟನಾ ಸ್ಥಳಕ್ಕೆ ಭೇಟಿ ನೀಡಿಲ್ಲ, ಮೃತಪಟ್ಟವರ ಕುಟುಂಬಕ್ಕೆ ಸಾಂತ್ವಾನ ಹೇಳಿಲ್ಲ.  ಜಿಲ್ಲೆಯಲ್ಲಿ ಹೆಣ ಬಿದ್ದಕೂಡಲೇ ಬರುತ್ತಿದ್ದ ಯಾವುದೆ ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ. ಚುನಾವಣೆಯಲ್ಲಿ ಲಾಭ ಇದ್ದರೆ ಮಾತ್ರ ಅವರು ಬರುತ್ತಾರೆ. ಬೇರೆ ರಾಜ್ಯದ ಕಾರ್ಮಿಕರು ಇಲ್ಲಿ ಬಂದು ಮೃತಪಟ್ಟರೆ ಅವರಿಗಾಗಿ ಅಳಲು ಕೂಡಾ ಜನರು ಇರುವುದಿಲ್ಲ” ಎಂದು ಕಾರ್ಮಿಕ ಸಂಘಟನೆಗಳ ಮುಖಂಡರು ನಾನುಗೌರಿ.ಕಾಂಗೆ ಹೇಳಿದ್ದಾರೆ.

ಈ ಮಧ್ಯೆ ಕಾರ್ಮಿಕ ಸಂಘಟನೆಗಳ ಮುಖಂಡರು ತಡರಾತ್ರಿಯವರೆಗೆ ಸತತ ಪ್ರಯತ್ನ ನಡೆಸಿ ಮೃತ ಪಟ್ಟ ಐದು ಬಂಗಾಳಿ ಕಾರ್ಮಿಕರ ಕುಟುಂಬಕ್ಕೆ ಕಂಪೆನಿ ಕಡೆಯಿಂದ ತಲಾ ಹದಿನೈದು ಲಕ್ಷ ರೂಪಾಯಿ ಮಧ್ಯಂತರ ಪರಿಹಾರ ಕೊಡಿಸಲು ಒಪ್ಪಿಸಿದ್ದಾರೆ. ಅಲ್ಲದೆ ಮೃತ ದೇಹಗಳನ್ನು ಬಂಗಾಳಕ್ಕೆ ತಲುಪಿಸುವುದರ ಜೊತೆಗೆ 25 ಕಾರ್ಮಿಕರು ಮೃತ ದೇಹದ ಜೊತೆಗೆ ಊರಿಗೆ ತಲುಪಲು ವಿಮಾನ ಟಿಕೇಟ್ ಒದಗಿಸಲು ಕಂಪೆನಿ ಒಪ್ಪಿಕೊಂಡಿದೆ ಎಂದು ಮಂಗಳೂರು ಸಿಪಿಐಎಂ ಪ್ರಧಾನ ಕಾರ್ಯರ್ಶಿ ಸುನಿಲ್ ಕುಮಾರ್‌ ಬಜಾಲ್‌ ಹೇಳಿದ್ದಾರೆ.

ಇದನ್ನೂ ಓದಿ: ಕಂಪೆನಿಯ ಹೊಸ ನೀತಿಗಳ ವಿರುದ್ಧ ಸಿಡಿದೆದ್ದ ‘ಅರ್ಬನ್ ಕಂಪನಿ’ಯ ಮಹಿಳಾ ಕಾರ್ಮಿಕರು

ಅನ್ಯರಾಜ್ಯದ ಕಾರ್ಮಿಕರ ಜೀತಗಾರಿಕೆ ಮಾಡಲಾಗುತ್ತಿದೆ: ಮುನೀರ್ ಕಾಟಿಪಳ್ಳ ಆಕ್ರೋಶ

ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ, “ಸ್ಥಳೀಯ ಯುವಜನರಿಗೆ ಲಕ್ಷಗಟ್ಟಲೆ ಉದ್ಯೋಗ ಸೃಷ್ಟಿ ಎಂಬ ಭರವಸೆಯೊಂದಿಗೆ ಮಂಗಳೂರು ಎಸ್ಇಝೆಡ್ ಸ್ಥಾಪನೆ ಮಾಡಲಾಗಿತ್ತು. ಆದರೆ ಅಲ್ಲಿ ನಡೆಯುತ್ತಿರುವುದು ಅಸ್ಸಾಂ, ಜಾರ್ಖಂಡ್, ಪಶ್ಚಿಮ ಬಂಗಾಳ ರಾಜ್ಯಗಳ ಅಗ್ಗದ ಕಾರ್ಮಿಕರ ಜೀತಗಾರಿಕೆ” ಎಂದು ಕಿಡಿಕಾರಿದ್ದಾರೆ.

“ಸರಕಾರದ ಮೂಗಿನ ನೇರಕ್ಕೆ ನಡೆಯುವ ಇಂತಹ ಜೀತಗಾರಿಕೆಗೆ ಬಡಪಾಯಿಗಳಾದ ಬಂಗಾಳದ ಐದು ಕಾರ್ಮಿಕರ ಬಲಿಯಾಗಿದೆ. ಉಲ್ಕಾ ಎಂಬ ಮೀನು ಉದ್ಯಮದಲ್ಲಿ ನಡೆದ ಇಂತಹ ಕರುಳು ಹಿಂಡುವ ಅವಘಡಕ್ಕೆ ಕಂಪೆನಿಗೆ ತಾತ್ಕಾಲಿಕ ಬೀಗ ಜಡಿದು, ನಾಲ್ಕು ಸೂಪರ್ ವೈಸರ್ ಗಳನ್ನು ವಶಕ್ಕೆ ಪಡೆದರೆ ಸಾಕೇ..? ಕುಟುಂಬಕ್ಕೆ ನೀಡುವ ಜುಜುಬಿ ದುಡ್ಡು ಇದಕ್ಕೆ ಪರಿಹಾರವೇ..? ಸ್ಥಳೀಯರಿಗೆ ಉದ್ಯೋಗ ನೀಡುವ ಭರವಸೆ ನೀಡಿ ಈಶಾನ್ಯ ರಾಜ್ಯದ ಕಾರ್ಮಿಕರ ಜೀತಗಾರಿಕೆಗೆ ಅವಕಾಶ ಕೊಟ್ಟ ಜಿಲ್ಲೆಯ ಶಾಸಕ, ಸಂಸದರು, ಜಿಲ್ಲಾಡಳಿತದ ಚುಕ್ಕಾಣಿ ಹಿಡಿದಿರುವ ಅಧಿಕಾರಿಗಳು ಹೊಣೆ ಹೊರಬೇಡವೇ..? ಶಿಕ್ಷೆಗೆ ತಮ್ಮನ್ನು ಒಡ್ಡಿಕೊಳ್ಳಬೇಡವೇ..? ತುಳುನಾಡಿನ ಜನ ಸಮೂಹಕ್ಕೆ ಇದೆಲ್ಲಾ ಅರ್ಥ ಆಗುವುದು ಯಾವಾಗ?” ಎಂದು ಮುನೀರ್ ಕಾಟಿಪಳ್ಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...