Homeಕರ್ನಾಟಕಮಂಗಳೂರು: ಮೀನು ಸಂಸ್ಕರಣಾ ಘಟಕದಲ್ಲಿ ದುರಂತ; 5 ಕಾರ್ಮಿಕರ ಸಾವು

ಮಂಗಳೂರು: ಮೀನು ಸಂಸ್ಕರಣಾ ಘಟಕದಲ್ಲಿ ದುರಂತ; 5 ಕಾರ್ಮಿಕರ ಸಾವು

ಜಿಲ್ಲೆಯಲ್ಲಿ ಹೆಣ ಬಿದ್ದಕೂಡಲೇ ಬರುತ್ತಿದ್ದ ಯಾವುದೆ ಜನಪ್ರತಿನಿಧಿಗಳು, ಇಷ್ಟು ದೊಡ್ಡ ದುರ್ಘಟನೆ ನಡೆದರೂ ಸಂತ್ರಸ್ತರ ಕುಟುಂಬಕ್ಕೆ ಕನಿಷ್ಠ ಸಾಂತ್ವನ ಕೂಡಾ ಹೇಳಿಲ್ಲ ಎಂದು ಸ್ಥಳೀಯ ಕಾರ್ಮಿಕ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ಮಂಗಳೂರು ಹೊರವಲಯದ ಬಜ್ಪೆಯಲ್ಲಿರುವ ಮೀನು ಸಂಸ್ಕರಣಾ ಘಟಕದ ತ್ಯಾಜ್ಯ ಸಂಗ್ರಹದ ತೊಟ್ಟಿಯನ್ನು ಸ್ವಚ್ಛ ಮಾಡುತ್ತಿದ್ದಾಗ ದುರಂತ ಸಂಭವಿಸಿ ಐವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಸೋಮವಾರ ವರದಿಯಾಗಿದೆ. ಪ್ರಕರಣದ ಸಂಬಂಧ ಸಂಸ್ಥೆಯ ನಾಲ್ವರನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಕಮಿಷನರ್ ಎನ್. ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

“ಮೀನು ಸಂಸ್ಕರಣಾ ಘಟಕದ ಮಾಲೀಕರು ಸೇರಿದಂತೆ ನಾಲ್ವರ ಮೇಲೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸದ್ಯಕ್ಕೆ ಕಂಪೆನಿಯ ಪ್ರೊಡಕ್ಷನ್ ಮ್ಯಾನೇಜರ್ ರೂಬಿ ಜೋಸೆಫ್, ಏರಿಯಾ ಮ್ಯಾನೇಜರ್ ಕುಬೇರ್, ಸೂಪರ್ ವೈಸರ್ ಮುಹಮ್ಮದ್ ಅನ್ವರ್, ಫಾರೂಕ್ ಸೇರಿ ಒಟ್ಟು ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ” ಎಂದು ಶಶಿಕುಮಾರ್‌ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳದೇ ಕೆಲಸ ಮಾಡಿಸಿರುವ ಹಿನ್ನೆಲೆಯಲ್ಲಿ ಈ ದುರಂತ ಸಂಭವಿಸಿದೆ. ಈ ಬಗ್ಗೆ ಐಪಿಸಿ ಕಲಂ 337, 338, 304 ಹಾಗೂ 34ರಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ” ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಸಂಘ ಕಟ್ಟಿ ಹಕ್ಕು ಕೇಳಿದ್ದಕ್ಕೆ ಕೆಲಸದಿಂದ ವಜಾ: ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ ಕಾರ್ಮಿಕರು

“ಭಾನುವಾರ ಸಂಜೆಯ ವೇಳೆ ಮೀನು ಸಂಸ್ಕರಣಾ ಘಟಕದ ತ್ಯಾಜ್ಯ ಸಂಗ್ರಹ ತೊಟ್ಟಿಯನ್ನು ಸ್ವಚ್ಛ ಗೊಳಿಸುತ್ತಿದ್ದ ವೇಳೆ ಕಾರ್ಮಿಕನೊಬ್ಬ ಕುಸಿದು ಬಿದ್ದ ಕಾರಣ ಅಲ್ಲೇ ಇದ್ದ ಇತರ ಏಳು ಮಂದಿ ಕಾರ್ಮಿಕರು ಆತನ ರಕ್ಷಣೆಗೆ ಧಾವಿಸಿದ್ದಾರೆ. ದುರಂತದಲ್ಲಿ ಮೂರು ಮಂದಿ ಭಾನುವಾರ ತಡ ರಾತ್ರಿಯೇ ಸಾವನ್ನಪ್ಪಿದ್ದರೆ, ಇಬ್ಬರು ಸೋಮವಾರ ಬೆಳಗ್ಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮತ್ತೆ ಮೂರು ಮಂದಿ ಪ್ರಾಣಾಪಾಯದಿಂದ ಪಾರಾಗಿರುವುದಾಗಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಇದೊಂದು ಗಂಭೀರ ಪ್ರಕರಣವಾಗಿ ಪರಿಗಣಿಸಲಾಗಿದೆ” ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಸೋಮವಾರ ಆಸ್ಪತ್ರೆ ಹಾಗೂ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮಂಗಳೂರು ಕಮಿಷನರ್, ಕಂಪೆನಿಯ ಅಧಿಕಾರಿಗಳನ್ನು ತರಾಟೆಗೈದು ಕಾರ್ಖಾನೆಗೆ ಬೀಗ ಜಡಿಯುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಈದಿನ.ಕಾಂ ವರದಿ ಮಾಡಿದೆ.

ಮೃತಪಟ್ಟ ಕಾರ್ಮಿಕರನ್ನು ಪಶ್ಚಿಮ ಬಂಗಾಳದ ಮುಹಮ್ಮದ್‌ ಸಮೀಯಲ್ಲಾ ಇಸ್ಲಾಂ, ಉಮರ್‌ ಫಾರೂಕ್‌, ನಿಝಾಮುದ್ದೀನ್‌ ಆಲಿಸ್, ಮಿರಾಜುಲ್ ಇಸ್ಲಾಂ ಮತ್ತು ಶರಾಫತ್‌ ಅಲಿ ಎಂದು ಗುರುತಿಸಲಾಗಿದೆ. ಮೃತರಲ್ಲಿ ಒಬ್ಬ ಕಾರ್ಮಿಕ ಅಪ್ರಾಪ್ತ ಎಂದು ಹೇಳಲಾಗುತ್ತಿದೆ ಎಂದು ವಾರ್ತಭಾರತಿ ವರದಿ ಮಾಡಿದೆ. ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

“ಕಂಪೆನಿಯಲ್ಲಿ ಕೆಲಸ ಮಾಡುವವರೆಲ್ಲ ಬಹುತೇಕರು ಯುವಕರಾಗಿದ್ದಾರೆ. ಮುಂಬೈ ಮೂಲದ ರಾಜು ಗೋರಕ್ ಎಂಬವರ ಒಡೆತನದ ಕಾರ್ಖಾನೆಯಲ್ಲಿ ಕಾರ್ಮಿಕರಿಗೆ ಯಾವುದೇ ರೀತಿಯ ರಕ್ಷಣಾತ್ಮಕ ಉಪಕರಣಗಳನ್ನು ಒದಗಿಸಲಾಗಿಲ್ಲ. ಮೃತದೇಹದ ಮೂಗು ಬಾಯಿಯಲ್ಲೂ ಮೀನಿನ ತ್ಯಾಜ್ಯ ಕಂಡು ಬಂದಿರುವುದಾಗಿ ವೈದ್ಯರು ತಿಳಿಸಿದ್ದಾರೆ” ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು: ಕಾರ್ಖಾನೆಯಲ್ಲಿ ಅಮೋನಿಯಂ ಸೋರಿಕೆ 

ಶ್ರೀ ಉಲ್ಕಾ ಎಲ್‌ಎಲ್‌ಪಿ ಕಾರ್ಖಾನೆಯು ಮುಂಬೈ ಮೂಲದ ಮೀನು ಸಂಸ್ಕರಣಾ ಕಾರ್ಖಾನೆಯಾಗಿದ್ದು, ಇಲ್ಲಿಂದ ಮೀನು ಸಂಸ್ಕರಣೆಗೊಂಡು ಏಷ್ಯಾದ ವಿವಿಧ ರಾಷ್ಟ್ರಗಳು, ರಷ್ಯಾ ಸೇರಿದಂತೆ ವಿದೇಶ ಹಾಗೂ ದೇಶದ ಇತರ ರಾಜ್ಯಗಳಿಗೆ ರಫ್ತು ಮಾಡಲಾಗುತ್ತದೆ. ಕಳೆದ ಮೂರು ವರ್ಷಗಳಿಂದ ಈ ಕಾರ್ಖಾನೆ ಕಾರ್ಯ ನಿರ್ವಹಿಸುತ್ತಿದೆ. ನೇರವಾಗಿ ಮತ್ತು ಪರೋಕ್ಷವಾಗಿ ಸುಮಾರು 100 ಮಂದಿ ಕಾರ್ಮಿಕರು ಕಾರ್ಖಾನೆಯಲ್ಲಿ ದುಡಿಯುತ್ತಿದ್ದಾರೆ ಎಂದು ಕಂಪೆನಿಯ ಆಡಳಿತ ವ್ಯವಸ್ಥಾಪಕಿ ಪ್ರಿಯಾ ಎಂಬವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಜನಪ್ರತಿನಿಧಿಗಳ ನಿರ್ಲಕ್ಷ್ಯ

ಜಿಲ್ಲೆಯಲ್ಲಿ ಇಷ್ಟೊಂದು ದೊಡ್ಡ ದುರ್ಘಟನೆ ನಡೆದಾಗ ಬಿಜೆಪಿ ಶಾಸಕರೊಬ್ಬರು ಸ್ಥಳಕ್ಕೆ ಭೇಟಿ ಕೊಟ್ಟು ಹೋಗಿದ್ದಾರೆ ಆದರೆ ಈ ಬಗ್ಗೆ ಯಾವುದೆ ಹೇಳಿಕೆ ನೀಡಿಲ್ಲ ಎಂದು ಕಾರ್ಮಿಕ ಸಂಘಟನೆಗಳ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಜಿಲ್ಲೆಯ ಸಂಸದರಾದ ನಳಿನ್ ಕುಮಾರ್‌ ಕಟೀಲ್‌ ಆಗಲಿ, ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್‌ ಆಗಲಿ ಘಟನಾ ಸ್ಥಳಕ್ಕೆ ಭೇಟಿ ನೀಡಿಲ್ಲ, ಮೃತಪಟ್ಟವರ ಕುಟುಂಬಕ್ಕೆ ಸಾಂತ್ವಾನ ಹೇಳಿಲ್ಲ.  ಜಿಲ್ಲೆಯಲ್ಲಿ ಹೆಣ ಬಿದ್ದಕೂಡಲೇ ಬರುತ್ತಿದ್ದ ಯಾವುದೆ ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ. ಚುನಾವಣೆಯಲ್ಲಿ ಲಾಭ ಇದ್ದರೆ ಮಾತ್ರ ಅವರು ಬರುತ್ತಾರೆ. ಬೇರೆ ರಾಜ್ಯದ ಕಾರ್ಮಿಕರು ಇಲ್ಲಿ ಬಂದು ಮೃತಪಟ್ಟರೆ ಅವರಿಗಾಗಿ ಅಳಲು ಕೂಡಾ ಜನರು ಇರುವುದಿಲ್ಲ” ಎಂದು ಕಾರ್ಮಿಕ ಸಂಘಟನೆಗಳ ಮುಖಂಡರು ನಾನುಗೌರಿ.ಕಾಂಗೆ ಹೇಳಿದ್ದಾರೆ.

ಈ ಮಧ್ಯೆ ಕಾರ್ಮಿಕ ಸಂಘಟನೆಗಳ ಮುಖಂಡರು ತಡರಾತ್ರಿಯವರೆಗೆ ಸತತ ಪ್ರಯತ್ನ ನಡೆಸಿ ಮೃತ ಪಟ್ಟ ಐದು ಬಂಗಾಳಿ ಕಾರ್ಮಿಕರ ಕುಟುಂಬಕ್ಕೆ ಕಂಪೆನಿ ಕಡೆಯಿಂದ ತಲಾ ಹದಿನೈದು ಲಕ್ಷ ರೂಪಾಯಿ ಮಧ್ಯಂತರ ಪರಿಹಾರ ಕೊಡಿಸಲು ಒಪ್ಪಿಸಿದ್ದಾರೆ. ಅಲ್ಲದೆ ಮೃತ ದೇಹಗಳನ್ನು ಬಂಗಾಳಕ್ಕೆ ತಲುಪಿಸುವುದರ ಜೊತೆಗೆ 25 ಕಾರ್ಮಿಕರು ಮೃತ ದೇಹದ ಜೊತೆಗೆ ಊರಿಗೆ ತಲುಪಲು ವಿಮಾನ ಟಿಕೇಟ್ ಒದಗಿಸಲು ಕಂಪೆನಿ ಒಪ್ಪಿಕೊಂಡಿದೆ ಎಂದು ಮಂಗಳೂರು ಸಿಪಿಐಎಂ ಪ್ರಧಾನ ಕಾರ್ಯರ್ಶಿ ಸುನಿಲ್ ಕುಮಾರ್‌ ಬಜಾಲ್‌ ಹೇಳಿದ್ದಾರೆ.

ಇದನ್ನೂ ಓದಿ: ಕಂಪೆನಿಯ ಹೊಸ ನೀತಿಗಳ ವಿರುದ್ಧ ಸಿಡಿದೆದ್ದ ‘ಅರ್ಬನ್ ಕಂಪನಿ’ಯ ಮಹಿಳಾ ಕಾರ್ಮಿಕರು

ಅನ್ಯರಾಜ್ಯದ ಕಾರ್ಮಿಕರ ಜೀತಗಾರಿಕೆ ಮಾಡಲಾಗುತ್ತಿದೆ: ಮುನೀರ್ ಕಾಟಿಪಳ್ಳ ಆಕ್ರೋಶ

ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ, “ಸ್ಥಳೀಯ ಯುವಜನರಿಗೆ ಲಕ್ಷಗಟ್ಟಲೆ ಉದ್ಯೋಗ ಸೃಷ್ಟಿ ಎಂಬ ಭರವಸೆಯೊಂದಿಗೆ ಮಂಗಳೂರು ಎಸ್ಇಝೆಡ್ ಸ್ಥಾಪನೆ ಮಾಡಲಾಗಿತ್ತು. ಆದರೆ ಅಲ್ಲಿ ನಡೆಯುತ್ತಿರುವುದು ಅಸ್ಸಾಂ, ಜಾರ್ಖಂಡ್, ಪಶ್ಚಿಮ ಬಂಗಾಳ ರಾಜ್ಯಗಳ ಅಗ್ಗದ ಕಾರ್ಮಿಕರ ಜೀತಗಾರಿಕೆ” ಎಂದು ಕಿಡಿಕಾರಿದ್ದಾರೆ.

“ಸರಕಾರದ ಮೂಗಿನ ನೇರಕ್ಕೆ ನಡೆಯುವ ಇಂತಹ ಜೀತಗಾರಿಕೆಗೆ ಬಡಪಾಯಿಗಳಾದ ಬಂಗಾಳದ ಐದು ಕಾರ್ಮಿಕರ ಬಲಿಯಾಗಿದೆ. ಉಲ್ಕಾ ಎಂಬ ಮೀನು ಉದ್ಯಮದಲ್ಲಿ ನಡೆದ ಇಂತಹ ಕರುಳು ಹಿಂಡುವ ಅವಘಡಕ್ಕೆ ಕಂಪೆನಿಗೆ ತಾತ್ಕಾಲಿಕ ಬೀಗ ಜಡಿದು, ನಾಲ್ಕು ಸೂಪರ್ ವೈಸರ್ ಗಳನ್ನು ವಶಕ್ಕೆ ಪಡೆದರೆ ಸಾಕೇ..? ಕುಟುಂಬಕ್ಕೆ ನೀಡುವ ಜುಜುಬಿ ದುಡ್ಡು ಇದಕ್ಕೆ ಪರಿಹಾರವೇ..? ಸ್ಥಳೀಯರಿಗೆ ಉದ್ಯೋಗ ನೀಡುವ ಭರವಸೆ ನೀಡಿ ಈಶಾನ್ಯ ರಾಜ್ಯದ ಕಾರ್ಮಿಕರ ಜೀತಗಾರಿಕೆಗೆ ಅವಕಾಶ ಕೊಟ್ಟ ಜಿಲ್ಲೆಯ ಶಾಸಕ, ಸಂಸದರು, ಜಿಲ್ಲಾಡಳಿತದ ಚುಕ್ಕಾಣಿ ಹಿಡಿದಿರುವ ಅಧಿಕಾರಿಗಳು ಹೊಣೆ ಹೊರಬೇಡವೇ..? ಶಿಕ್ಷೆಗೆ ತಮ್ಮನ್ನು ಒಡ್ಡಿಕೊಳ್ಳಬೇಡವೇ..? ತುಳುನಾಡಿನ ಜನ ಸಮೂಹಕ್ಕೆ ಇದೆಲ್ಲಾ ಅರ್ಥ ಆಗುವುದು ಯಾವಾಗ?” ಎಂದು ಮುನೀರ್ ಕಾಟಿಪಳ್ಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...