Homeಕರ್ನಾಟಕಮಂಗಳೂರು: ಮೀನು ಸಂಸ್ಕರಣಾ ಘಟಕದಲ್ಲಿ ದುರಂತ; 5 ಕಾರ್ಮಿಕರ ಸಾವು

ಮಂಗಳೂರು: ಮೀನು ಸಂಸ್ಕರಣಾ ಘಟಕದಲ್ಲಿ ದುರಂತ; 5 ಕಾರ್ಮಿಕರ ಸಾವು

ಜಿಲ್ಲೆಯಲ್ಲಿ ಹೆಣ ಬಿದ್ದಕೂಡಲೇ ಬರುತ್ತಿದ್ದ ಯಾವುದೆ ಜನಪ್ರತಿನಿಧಿಗಳು, ಇಷ್ಟು ದೊಡ್ಡ ದುರ್ಘಟನೆ ನಡೆದರೂ ಸಂತ್ರಸ್ತರ ಕುಟುಂಬಕ್ಕೆ ಕನಿಷ್ಠ ಸಾಂತ್ವನ ಕೂಡಾ ಹೇಳಿಲ್ಲ ಎಂದು ಸ್ಥಳೀಯ ಕಾರ್ಮಿಕ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ಮಂಗಳೂರು ಹೊರವಲಯದ ಬಜ್ಪೆಯಲ್ಲಿರುವ ಮೀನು ಸಂಸ್ಕರಣಾ ಘಟಕದ ತ್ಯಾಜ್ಯ ಸಂಗ್ರಹದ ತೊಟ್ಟಿಯನ್ನು ಸ್ವಚ್ಛ ಮಾಡುತ್ತಿದ್ದಾಗ ದುರಂತ ಸಂಭವಿಸಿ ಐವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಸೋಮವಾರ ವರದಿಯಾಗಿದೆ. ಪ್ರಕರಣದ ಸಂಬಂಧ ಸಂಸ್ಥೆಯ ನಾಲ್ವರನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಕಮಿಷನರ್ ಎನ್. ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

“ಮೀನು ಸಂಸ್ಕರಣಾ ಘಟಕದ ಮಾಲೀಕರು ಸೇರಿದಂತೆ ನಾಲ್ವರ ಮೇಲೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸದ್ಯಕ್ಕೆ ಕಂಪೆನಿಯ ಪ್ರೊಡಕ್ಷನ್ ಮ್ಯಾನೇಜರ್ ರೂಬಿ ಜೋಸೆಫ್, ಏರಿಯಾ ಮ್ಯಾನೇಜರ್ ಕುಬೇರ್, ಸೂಪರ್ ವೈಸರ್ ಮುಹಮ್ಮದ್ ಅನ್ವರ್, ಫಾರೂಕ್ ಸೇರಿ ಒಟ್ಟು ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ” ಎಂದು ಶಶಿಕುಮಾರ್‌ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳದೇ ಕೆಲಸ ಮಾಡಿಸಿರುವ ಹಿನ್ನೆಲೆಯಲ್ಲಿ ಈ ದುರಂತ ಸಂಭವಿಸಿದೆ. ಈ ಬಗ್ಗೆ ಐಪಿಸಿ ಕಲಂ 337, 338, 304 ಹಾಗೂ 34ರಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ” ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಸಂಘ ಕಟ್ಟಿ ಹಕ್ಕು ಕೇಳಿದ್ದಕ್ಕೆ ಕೆಲಸದಿಂದ ವಜಾ: ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ ಕಾರ್ಮಿಕರು

“ಭಾನುವಾರ ಸಂಜೆಯ ವೇಳೆ ಮೀನು ಸಂಸ್ಕರಣಾ ಘಟಕದ ತ್ಯಾಜ್ಯ ಸಂಗ್ರಹ ತೊಟ್ಟಿಯನ್ನು ಸ್ವಚ್ಛ ಗೊಳಿಸುತ್ತಿದ್ದ ವೇಳೆ ಕಾರ್ಮಿಕನೊಬ್ಬ ಕುಸಿದು ಬಿದ್ದ ಕಾರಣ ಅಲ್ಲೇ ಇದ್ದ ಇತರ ಏಳು ಮಂದಿ ಕಾರ್ಮಿಕರು ಆತನ ರಕ್ಷಣೆಗೆ ಧಾವಿಸಿದ್ದಾರೆ. ದುರಂತದಲ್ಲಿ ಮೂರು ಮಂದಿ ಭಾನುವಾರ ತಡ ರಾತ್ರಿಯೇ ಸಾವನ್ನಪ್ಪಿದ್ದರೆ, ಇಬ್ಬರು ಸೋಮವಾರ ಬೆಳಗ್ಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮತ್ತೆ ಮೂರು ಮಂದಿ ಪ್ರಾಣಾಪಾಯದಿಂದ ಪಾರಾಗಿರುವುದಾಗಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಇದೊಂದು ಗಂಭೀರ ಪ್ರಕರಣವಾಗಿ ಪರಿಗಣಿಸಲಾಗಿದೆ” ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಸೋಮವಾರ ಆಸ್ಪತ್ರೆ ಹಾಗೂ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮಂಗಳೂರು ಕಮಿಷನರ್, ಕಂಪೆನಿಯ ಅಧಿಕಾರಿಗಳನ್ನು ತರಾಟೆಗೈದು ಕಾರ್ಖಾನೆಗೆ ಬೀಗ ಜಡಿಯುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಈದಿನ.ಕಾಂ ವರದಿ ಮಾಡಿದೆ.

ಮೃತಪಟ್ಟ ಕಾರ್ಮಿಕರನ್ನು ಪಶ್ಚಿಮ ಬಂಗಾಳದ ಮುಹಮ್ಮದ್‌ ಸಮೀಯಲ್ಲಾ ಇಸ್ಲಾಂ, ಉಮರ್‌ ಫಾರೂಕ್‌, ನಿಝಾಮುದ್ದೀನ್‌ ಆಲಿಸ್, ಮಿರಾಜುಲ್ ಇಸ್ಲಾಂ ಮತ್ತು ಶರಾಫತ್‌ ಅಲಿ ಎಂದು ಗುರುತಿಸಲಾಗಿದೆ. ಮೃತರಲ್ಲಿ ಒಬ್ಬ ಕಾರ್ಮಿಕ ಅಪ್ರಾಪ್ತ ಎಂದು ಹೇಳಲಾಗುತ್ತಿದೆ ಎಂದು ವಾರ್ತಭಾರತಿ ವರದಿ ಮಾಡಿದೆ. ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

“ಕಂಪೆನಿಯಲ್ಲಿ ಕೆಲಸ ಮಾಡುವವರೆಲ್ಲ ಬಹುತೇಕರು ಯುವಕರಾಗಿದ್ದಾರೆ. ಮುಂಬೈ ಮೂಲದ ರಾಜು ಗೋರಕ್ ಎಂಬವರ ಒಡೆತನದ ಕಾರ್ಖಾನೆಯಲ್ಲಿ ಕಾರ್ಮಿಕರಿಗೆ ಯಾವುದೇ ರೀತಿಯ ರಕ್ಷಣಾತ್ಮಕ ಉಪಕರಣಗಳನ್ನು ಒದಗಿಸಲಾಗಿಲ್ಲ. ಮೃತದೇಹದ ಮೂಗು ಬಾಯಿಯಲ್ಲೂ ಮೀನಿನ ತ್ಯಾಜ್ಯ ಕಂಡು ಬಂದಿರುವುದಾಗಿ ವೈದ್ಯರು ತಿಳಿಸಿದ್ದಾರೆ” ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು: ಕಾರ್ಖಾನೆಯಲ್ಲಿ ಅಮೋನಿಯಂ ಸೋರಿಕೆ 

ಶ್ರೀ ಉಲ್ಕಾ ಎಲ್‌ಎಲ್‌ಪಿ ಕಾರ್ಖಾನೆಯು ಮುಂಬೈ ಮೂಲದ ಮೀನು ಸಂಸ್ಕರಣಾ ಕಾರ್ಖಾನೆಯಾಗಿದ್ದು, ಇಲ್ಲಿಂದ ಮೀನು ಸಂಸ್ಕರಣೆಗೊಂಡು ಏಷ್ಯಾದ ವಿವಿಧ ರಾಷ್ಟ್ರಗಳು, ರಷ್ಯಾ ಸೇರಿದಂತೆ ವಿದೇಶ ಹಾಗೂ ದೇಶದ ಇತರ ರಾಜ್ಯಗಳಿಗೆ ರಫ್ತು ಮಾಡಲಾಗುತ್ತದೆ. ಕಳೆದ ಮೂರು ವರ್ಷಗಳಿಂದ ಈ ಕಾರ್ಖಾನೆ ಕಾರ್ಯ ನಿರ್ವಹಿಸುತ್ತಿದೆ. ನೇರವಾಗಿ ಮತ್ತು ಪರೋಕ್ಷವಾಗಿ ಸುಮಾರು 100 ಮಂದಿ ಕಾರ್ಮಿಕರು ಕಾರ್ಖಾನೆಯಲ್ಲಿ ದುಡಿಯುತ್ತಿದ್ದಾರೆ ಎಂದು ಕಂಪೆನಿಯ ಆಡಳಿತ ವ್ಯವಸ್ಥಾಪಕಿ ಪ್ರಿಯಾ ಎಂಬವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಜನಪ್ರತಿನಿಧಿಗಳ ನಿರ್ಲಕ್ಷ್ಯ

ಜಿಲ್ಲೆಯಲ್ಲಿ ಇಷ್ಟೊಂದು ದೊಡ್ಡ ದುರ್ಘಟನೆ ನಡೆದಾಗ ಬಿಜೆಪಿ ಶಾಸಕರೊಬ್ಬರು ಸ್ಥಳಕ್ಕೆ ಭೇಟಿ ಕೊಟ್ಟು ಹೋಗಿದ್ದಾರೆ ಆದರೆ ಈ ಬಗ್ಗೆ ಯಾವುದೆ ಹೇಳಿಕೆ ನೀಡಿಲ್ಲ ಎಂದು ಕಾರ್ಮಿಕ ಸಂಘಟನೆಗಳ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಜಿಲ್ಲೆಯ ಸಂಸದರಾದ ನಳಿನ್ ಕುಮಾರ್‌ ಕಟೀಲ್‌ ಆಗಲಿ, ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್‌ ಆಗಲಿ ಘಟನಾ ಸ್ಥಳಕ್ಕೆ ಭೇಟಿ ನೀಡಿಲ್ಲ, ಮೃತಪಟ್ಟವರ ಕುಟುಂಬಕ್ಕೆ ಸಾಂತ್ವಾನ ಹೇಳಿಲ್ಲ.  ಜಿಲ್ಲೆಯಲ್ಲಿ ಹೆಣ ಬಿದ್ದಕೂಡಲೇ ಬರುತ್ತಿದ್ದ ಯಾವುದೆ ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ. ಚುನಾವಣೆಯಲ್ಲಿ ಲಾಭ ಇದ್ದರೆ ಮಾತ್ರ ಅವರು ಬರುತ್ತಾರೆ. ಬೇರೆ ರಾಜ್ಯದ ಕಾರ್ಮಿಕರು ಇಲ್ಲಿ ಬಂದು ಮೃತಪಟ್ಟರೆ ಅವರಿಗಾಗಿ ಅಳಲು ಕೂಡಾ ಜನರು ಇರುವುದಿಲ್ಲ” ಎಂದು ಕಾರ್ಮಿಕ ಸಂಘಟನೆಗಳ ಮುಖಂಡರು ನಾನುಗೌರಿ.ಕಾಂಗೆ ಹೇಳಿದ್ದಾರೆ.

ಈ ಮಧ್ಯೆ ಕಾರ್ಮಿಕ ಸಂಘಟನೆಗಳ ಮುಖಂಡರು ತಡರಾತ್ರಿಯವರೆಗೆ ಸತತ ಪ್ರಯತ್ನ ನಡೆಸಿ ಮೃತ ಪಟ್ಟ ಐದು ಬಂಗಾಳಿ ಕಾರ್ಮಿಕರ ಕುಟುಂಬಕ್ಕೆ ಕಂಪೆನಿ ಕಡೆಯಿಂದ ತಲಾ ಹದಿನೈದು ಲಕ್ಷ ರೂಪಾಯಿ ಮಧ್ಯಂತರ ಪರಿಹಾರ ಕೊಡಿಸಲು ಒಪ್ಪಿಸಿದ್ದಾರೆ. ಅಲ್ಲದೆ ಮೃತ ದೇಹಗಳನ್ನು ಬಂಗಾಳಕ್ಕೆ ತಲುಪಿಸುವುದರ ಜೊತೆಗೆ 25 ಕಾರ್ಮಿಕರು ಮೃತ ದೇಹದ ಜೊತೆಗೆ ಊರಿಗೆ ತಲುಪಲು ವಿಮಾನ ಟಿಕೇಟ್ ಒದಗಿಸಲು ಕಂಪೆನಿ ಒಪ್ಪಿಕೊಂಡಿದೆ ಎಂದು ಮಂಗಳೂರು ಸಿಪಿಐಎಂ ಪ್ರಧಾನ ಕಾರ್ಯರ್ಶಿ ಸುನಿಲ್ ಕುಮಾರ್‌ ಬಜಾಲ್‌ ಹೇಳಿದ್ದಾರೆ.

ಇದನ್ನೂ ಓದಿ: ಕಂಪೆನಿಯ ಹೊಸ ನೀತಿಗಳ ವಿರುದ್ಧ ಸಿಡಿದೆದ್ದ ‘ಅರ್ಬನ್ ಕಂಪನಿ’ಯ ಮಹಿಳಾ ಕಾರ್ಮಿಕರು

ಅನ್ಯರಾಜ್ಯದ ಕಾರ್ಮಿಕರ ಜೀತಗಾರಿಕೆ ಮಾಡಲಾಗುತ್ತಿದೆ: ಮುನೀರ್ ಕಾಟಿಪಳ್ಳ ಆಕ್ರೋಶ

ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ, “ಸ್ಥಳೀಯ ಯುವಜನರಿಗೆ ಲಕ್ಷಗಟ್ಟಲೆ ಉದ್ಯೋಗ ಸೃಷ್ಟಿ ಎಂಬ ಭರವಸೆಯೊಂದಿಗೆ ಮಂಗಳೂರು ಎಸ್ಇಝೆಡ್ ಸ್ಥಾಪನೆ ಮಾಡಲಾಗಿತ್ತು. ಆದರೆ ಅಲ್ಲಿ ನಡೆಯುತ್ತಿರುವುದು ಅಸ್ಸಾಂ, ಜಾರ್ಖಂಡ್, ಪಶ್ಚಿಮ ಬಂಗಾಳ ರಾಜ್ಯಗಳ ಅಗ್ಗದ ಕಾರ್ಮಿಕರ ಜೀತಗಾರಿಕೆ” ಎಂದು ಕಿಡಿಕಾರಿದ್ದಾರೆ.

“ಸರಕಾರದ ಮೂಗಿನ ನೇರಕ್ಕೆ ನಡೆಯುವ ಇಂತಹ ಜೀತಗಾರಿಕೆಗೆ ಬಡಪಾಯಿಗಳಾದ ಬಂಗಾಳದ ಐದು ಕಾರ್ಮಿಕರ ಬಲಿಯಾಗಿದೆ. ಉಲ್ಕಾ ಎಂಬ ಮೀನು ಉದ್ಯಮದಲ್ಲಿ ನಡೆದ ಇಂತಹ ಕರುಳು ಹಿಂಡುವ ಅವಘಡಕ್ಕೆ ಕಂಪೆನಿಗೆ ತಾತ್ಕಾಲಿಕ ಬೀಗ ಜಡಿದು, ನಾಲ್ಕು ಸೂಪರ್ ವೈಸರ್ ಗಳನ್ನು ವಶಕ್ಕೆ ಪಡೆದರೆ ಸಾಕೇ..? ಕುಟುಂಬಕ್ಕೆ ನೀಡುವ ಜುಜುಬಿ ದುಡ್ಡು ಇದಕ್ಕೆ ಪರಿಹಾರವೇ..? ಸ್ಥಳೀಯರಿಗೆ ಉದ್ಯೋಗ ನೀಡುವ ಭರವಸೆ ನೀಡಿ ಈಶಾನ್ಯ ರಾಜ್ಯದ ಕಾರ್ಮಿಕರ ಜೀತಗಾರಿಕೆಗೆ ಅವಕಾಶ ಕೊಟ್ಟ ಜಿಲ್ಲೆಯ ಶಾಸಕ, ಸಂಸದರು, ಜಿಲ್ಲಾಡಳಿತದ ಚುಕ್ಕಾಣಿ ಹಿಡಿದಿರುವ ಅಧಿಕಾರಿಗಳು ಹೊಣೆ ಹೊರಬೇಡವೇ..? ಶಿಕ್ಷೆಗೆ ತಮ್ಮನ್ನು ಒಡ್ಡಿಕೊಳ್ಳಬೇಡವೇ..? ತುಳುನಾಡಿನ ಜನ ಸಮೂಹಕ್ಕೆ ಇದೆಲ್ಲಾ ಅರ್ಥ ಆಗುವುದು ಯಾವಾಗ?” ಎಂದು ಮುನೀರ್ ಕಾಟಿಪಳ್ಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....