Homeಕರ್ನಾಟಕಮಂಗಳೂರು ವಿಶ್ವವಿದ್ಯಾಲಯ | 7 ಕೋಟಿ ರೂ. ಖರ್ಚು ಮಾಡಿ ಕಟ್ಟಿದ 2 ಹಾಸ್ಟೆಲ್ ನಾಪತ್ತೆ!

ಮಂಗಳೂರು ವಿಶ್ವವಿದ್ಯಾಲಯ | 7 ಕೋಟಿ ರೂ. ಖರ್ಚು ಮಾಡಿ ಕಟ್ಟಿದ 2 ಹಾಸ್ಟೆಲ್ ನಾಪತ್ತೆ!

- Advertisement -
- Advertisement -

ಸುಮಾರು 7 ಕೋಟಿ ರೂ. ಖರ್ಚು ಮಾಡಿ ನಿರ್ಮಿಸಿದ ಎರಡು ಹಾಸ್ಟೆಲ್‌ಗಳು ನಾಪತ್ತೆಯಾಗಿರುವ ಘಟನೆ ಮಂಗಳೂರು ವಿಶ್ವವಿದ್ಯಾಲಯದಲ್ಲಿ ನಡೆದಿದೆ. ತಜ್ಞರ ಸಮಿತಿ ಪರಿಶೀಲನೆಗೆ ತೆರಳಿದ್ದ ವೇಳೆ ಈ ಘಟನೆ ಬಹಿರಂಗವಾಗಿದ್ದು, ತೀವ್ರ ವಿವಾದಕ್ಕೆ ಕಾರಣವಾಗಿದೆ. ವಿಶ್ವಿವಿದ್ಯಾಲಯವು ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಡೆಕ್ಕನ್ ಹೆರಾಲ್ಡ್ (DH) ವರದಿ ಮಾಡಿದೆ. ಮಂಗಳೂರು ವಿಶ್ವವಿದ್ಯಾಲಯ

ರಾಷ್ಟ್ರೀಯ ಉಚ್ಛತರ್ ಶಿಕ್ಷಾ ಅಭಿಯಾನ (RUSA-1) ಅಡಿಯಲ್ಲಿ ಬಾಲಕ ಮತ್ತು ಬಾಲಕಿಯರ ಹಾಸ್ಟೆಲ್‌ಗಳ ನಿರ್ಮಾಣಕ್ಕಾಗಿ ಪಡೆದ 7 ಕೋಟಿ ರೂ.ಗಳನ್ನು ಮಂಗಳೂರು ವಿಶ್ವವಿದ್ಯಾಲಯ ದುರುಪಯೋಗಪಡಿಸಿಕೊಂಡಿದೆ ಎಂದು ಪತ್ರಿಕೆ ವರದಿ ಮಾಡಿದೆ. ನಿಧಿ ಬಳಕೆಯ ಪರಿಶೀಲನೆಗಾಗಿ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿಯು ರಚಿಸಿದ ತಜ್ಞರ ಸಮಿತಿಯ ಭೇಟಿಯ ವೇಳೆ ಇದು ಬಹಿರಂಗವಾಗಿದೆ.

ವಿಶ್ವವಿದ್ಯಾಲಯ ಆವರಣದಲ್ಲಿ ಯಾವುದೇ ಹಾಸ್ಟೆಲ್ ಕಟ್ಟಡಗಳು ಕಾಣಿಸದಿದ್ದರಿಂದ ಪರಿಶೀಲನೆಗಾಗಿ ತೆರಳಿದ್ದ ತಜ್ಞರ ಸಮಿತಿ ಆಘಾತಕ್ಕೊಳಗಾಯಿತು ಎಂದು ವರದಿ ಉಲ್ಲೇಖಿಸಿದೆ. ಈ ವೇಳೆ ಸಮಿತಿಯು ಅಧಿಕಾರಿಗಳನ್ನು ದಾಖಲೆಗಳನ್ನು ನೀಡುವಂತೆ ಒತ್ತಾಯಿಸಿದಾಗ, ಅಧಿಕಾರಿಗಳು “ಅಂತರರಾಷ್ಟ್ರೀಯ ಹಾಸ್ಟೆಲ್” ನಿರ್ಮಾಣಕ್ಕಾಗಿ ಹಣವನ್ನು ಬೇರೆಡೆಗೆ ತಿರುಗಿಸಲಾಗಿದೆ ಎಂದು ಹೇಳುವ ಮೂಲಕ ಸಮಿತಿಯನ್ನು “ತಪ್ಪುದಾರಿಗೆಳೆಯಲು” ಪ್ರಯತ್ನಿಸಿದರು ಎಂದು ಡೆಕ್ಕನ್ ಹೆರಾಲ್ಡ್‌ ವರದಿ ತಿಳಿಸಿದೆ.

ಕುತೂಹಲಕಾರಿ ವಿಚಾರ ಏನೆಂದರೆ, ಉನ್ನತ ಶಿಕ್ಷಣ ಇಲಾಖೆಗೆ ಸಲ್ಲಿಸಿದ ಬಳಕೆಯ ಪ್ರಮಾಣಪತ್ರದಲ್ಲಿ, ವಿಶ್ವವಿದ್ಯಾಲಯವು ಎರಡು ಹಾಸ್ಟೆಲ್‌ಗಳನ್ನು ನಿರ್ಮಿಸಿದೆ ಎಂದು ಹೇಳಿಕೊಂಡಿದೆ.

ಘಟನೆ ಹಿನ್ನಲೆ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಯೋಜನಾ ನಿರ್ದೇಶಕರ (SPD) ಸಭೆಯ ಮುಂದೆಯೂ ಇಡಲಾಯಿತು. ಈ ಸಭೆಯಲ್ಲಿ ನಿರ್ಧಾರ ತೆಗೆದುಕೊಂಡ ನಂತರ ವಿಶ್ವವಿದ್ಯಾಲಯ ಅಧಿಕಾರಿಗಳಿಗೆ ಶೋ-ಕಾಸ್ ನೋಟಿಸ್ ನೀಡಲಾಗಿದ್ದು, ಆದಾಗ್ಯೂ, ನೀಡಲಾದ ವಿವರಣೆಯು ತೃಪ್ತಿಕರವಾಗಿಲ್ಲ ಎಂದು ಇಲಾಖೆಯ ಮೂಲಗಳು ತಿಳಿಸಿವೆ ಎಂದು DH ವರದಿ ಹೇಳಿದೆ.

“ವಿಶ್ವವಿದ್ಯಾನಿಲಯವು ದುರುಪಯೋಗಪಡಿಸಿಕೊಂಡ ಹಣವನ್ನು ವಸೂಲಿ ಮಾಡಲು ಮತ್ತು ದಂಡ ವಿಧಿಸಲು ಉನ್ನತ ಶಿಕ್ಷಣ ಮಂಡಳಿ ಶಿಫಾರಸು ಮಾಡಿದೆ. ಹೊಸ ಕಾರ್ಯದರ್ಶಿ ಈಗ ಇಲಾಖೆಯ ಜವಾಬ್ದಾರಿ ವಹಿಸಿಕೊಂಡಿದ್ದಾರೆ ಮತ್ತು ನಾವು ಈ ವಿಷಯವನ್ನು ಅವರ ಮುಂದೆ ಇಡುತ್ತೇವೆ” ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

ಇಲಾಖೆಯ ಅಧಿಕಾರಿಗಳು ವಿವರಿಸಿದಂತೆ, RUSA ಅಡಿಯಲ್ಲಿ ಬಿಡುಗಡೆಯಾದ ಹಣವನ್ನು ಅವುಗಳನ್ನು ಹಂಚಿಕೆ ಮಾಡಿದ ಉದ್ದೇಶಕ್ಕಾಗಿ ಮಾತ್ರ ಬಳಸಬೇಕು. RUSA ನಿಧಿಯ ಶೇಕಡಾ 60 ರಷ್ಟು ಕೇಂದ್ರದಿಂದ ಬಂದಿದ್ದರೆ, ರಾಜ್ಯವು ಉಳಿದ ಶೇಕಡಾ 40 ರಷ್ಟು ಕೊಡುಗೆ ನೀಡುತ್ತದೆ.

RUSA-1 ಅನ್ನು 2013 ಮತ್ತು 2017 ರ ನಡುವೆ ಜಾರಿಗೆ ತರಲಾಯಿತು. ಹಣವನ್ನು ಹಂಚಿಕೆ ಮಾಡಿದ ಯೋಜನೆಗಳು ಪೂರ್ಣಗೊಂಡ ನಂತರ ಉನ್ನತ ಶಿಕ್ಷಣ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳು ಬಳಕೆಯ ಪ್ರಮಾಣಪತ್ರವನ್ನು ಸಲ್ಲಿಸಲು ಕೇಳಲಾಯಿತು. ಮಂಗಳೂರು ವಿಶ್ವವಿದ್ಯಾಲಯಕ್ಕೆ ಮಂಜೂರು ಮಾಡಲಾದ 7 ಕೋಟಿ ರೂ.ಗಳಲ್ಲಿ, 3.5 ಕೋಟಿ ರೂ. ಬಾಲಕರ ಹಾಸ್ಟೆಲ್ ನಿರ್ಮಾಣಕ್ಕಾಗಿ ಮತ್ತು 3.5 ಕೋಟಿ ರೂ. ಬಾಲಕಿಯರ ಹಾಸ್ಟೆಲ್‌ಗಾಗಿ ಖರ್ಚು ಮಾಡಬೇಕಿತ್ತು. ಮಂಗಳೂರು ವಿಶ್ವವಿದ್ಯಾಲಯ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಹಿಳಾ ಬ್ಯೂಟಿ ಪಾರ್ಲರ್‌ಗಳಲ್ಲಿ ‘ಲವ್ ಜಿಹಾದ್’? ಮುಸ್ಲಿಂ ಪುರುಷರ ನೇಮಕ ನಿಷೇಧಿಸಲು ಬಲಪಂಥೀಯ ಸಂಘಟನೆ ಒತ್ತಾಯ

ಮಹಿಳಾ ಬ್ಯೂಟಿ ಪಾರ್ಲರ್‌ಗಳಲ್ಲಿ ‘ಲವ್ ಜಿಹಾದ್’? ಮುಸ್ಲಿಂ ಪುರುಷರ ನೇಮಕ ನಿಷೇಧಿಸಲು ಬಲಪಂಥೀಯ ಸಂಘಟನೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...