Homeಕರ್ನಾಟಕಮಂಗಳೂರು ವಿಶ್ವವಿದ್ಯಾಲಯ | 7 ಕೋಟಿ ರೂ. ಖರ್ಚು ಮಾಡಿ ಕಟ್ಟಿದ 2 ಹಾಸ್ಟೆಲ್ ನಾಪತ್ತೆ!

ಮಂಗಳೂರು ವಿಶ್ವವಿದ್ಯಾಲಯ | 7 ಕೋಟಿ ರೂ. ಖರ್ಚು ಮಾಡಿ ಕಟ್ಟಿದ 2 ಹಾಸ್ಟೆಲ್ ನಾಪತ್ತೆ!

- Advertisement -
- Advertisement -

ಸುಮಾರು 7 ಕೋಟಿ ರೂ. ಖರ್ಚು ಮಾಡಿ ನಿರ್ಮಿಸಿದ ಎರಡು ಹಾಸ್ಟೆಲ್‌ಗಳು ನಾಪತ್ತೆಯಾಗಿರುವ ಘಟನೆ ಮಂಗಳೂರು ವಿಶ್ವವಿದ್ಯಾಲಯದಲ್ಲಿ ನಡೆದಿದೆ. ತಜ್ಞರ ಸಮಿತಿ ಪರಿಶೀಲನೆಗೆ ತೆರಳಿದ್ದ ವೇಳೆ ಈ ಘಟನೆ ಬಹಿರಂಗವಾಗಿದ್ದು, ತೀವ್ರ ವಿವಾದಕ್ಕೆ ಕಾರಣವಾಗಿದೆ. ವಿಶ್ವಿವಿದ್ಯಾಲಯವು ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಡೆಕ್ಕನ್ ಹೆರಾಲ್ಡ್ (DH) ವರದಿ ಮಾಡಿದೆ. ಮಂಗಳೂರು ವಿಶ್ವವಿದ್ಯಾಲಯ

ರಾಷ್ಟ್ರೀಯ ಉಚ್ಛತರ್ ಶಿಕ್ಷಾ ಅಭಿಯಾನ (RUSA-1) ಅಡಿಯಲ್ಲಿ ಬಾಲಕ ಮತ್ತು ಬಾಲಕಿಯರ ಹಾಸ್ಟೆಲ್‌ಗಳ ನಿರ್ಮಾಣಕ್ಕಾಗಿ ಪಡೆದ 7 ಕೋಟಿ ರೂ.ಗಳನ್ನು ಮಂಗಳೂರು ವಿಶ್ವವಿದ್ಯಾಲಯ ದುರುಪಯೋಗಪಡಿಸಿಕೊಂಡಿದೆ ಎಂದು ಪತ್ರಿಕೆ ವರದಿ ಮಾಡಿದೆ. ನಿಧಿ ಬಳಕೆಯ ಪರಿಶೀಲನೆಗಾಗಿ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿಯು ರಚಿಸಿದ ತಜ್ಞರ ಸಮಿತಿಯ ಭೇಟಿಯ ವೇಳೆ ಇದು ಬಹಿರಂಗವಾಗಿದೆ.

ವಿಶ್ವವಿದ್ಯಾಲಯ ಆವರಣದಲ್ಲಿ ಯಾವುದೇ ಹಾಸ್ಟೆಲ್ ಕಟ್ಟಡಗಳು ಕಾಣಿಸದಿದ್ದರಿಂದ ಪರಿಶೀಲನೆಗಾಗಿ ತೆರಳಿದ್ದ ತಜ್ಞರ ಸಮಿತಿ ಆಘಾತಕ್ಕೊಳಗಾಯಿತು ಎಂದು ವರದಿ ಉಲ್ಲೇಖಿಸಿದೆ. ಈ ವೇಳೆ ಸಮಿತಿಯು ಅಧಿಕಾರಿಗಳನ್ನು ದಾಖಲೆಗಳನ್ನು ನೀಡುವಂತೆ ಒತ್ತಾಯಿಸಿದಾಗ, ಅಧಿಕಾರಿಗಳು “ಅಂತರರಾಷ್ಟ್ರೀಯ ಹಾಸ್ಟೆಲ್” ನಿರ್ಮಾಣಕ್ಕಾಗಿ ಹಣವನ್ನು ಬೇರೆಡೆಗೆ ತಿರುಗಿಸಲಾಗಿದೆ ಎಂದು ಹೇಳುವ ಮೂಲಕ ಸಮಿತಿಯನ್ನು “ತಪ್ಪುದಾರಿಗೆಳೆಯಲು” ಪ್ರಯತ್ನಿಸಿದರು ಎಂದು ಡೆಕ್ಕನ್ ಹೆರಾಲ್ಡ್‌ ವರದಿ ತಿಳಿಸಿದೆ.

ಕುತೂಹಲಕಾರಿ ವಿಚಾರ ಏನೆಂದರೆ, ಉನ್ನತ ಶಿಕ್ಷಣ ಇಲಾಖೆಗೆ ಸಲ್ಲಿಸಿದ ಬಳಕೆಯ ಪ್ರಮಾಣಪತ್ರದಲ್ಲಿ, ವಿಶ್ವವಿದ್ಯಾಲಯವು ಎರಡು ಹಾಸ್ಟೆಲ್‌ಗಳನ್ನು ನಿರ್ಮಿಸಿದೆ ಎಂದು ಹೇಳಿಕೊಂಡಿದೆ.

ಘಟನೆ ಹಿನ್ನಲೆ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಯೋಜನಾ ನಿರ್ದೇಶಕರ (SPD) ಸಭೆಯ ಮುಂದೆಯೂ ಇಡಲಾಯಿತು. ಈ ಸಭೆಯಲ್ಲಿ ನಿರ್ಧಾರ ತೆಗೆದುಕೊಂಡ ನಂತರ ವಿಶ್ವವಿದ್ಯಾಲಯ ಅಧಿಕಾರಿಗಳಿಗೆ ಶೋ-ಕಾಸ್ ನೋಟಿಸ್ ನೀಡಲಾಗಿದ್ದು, ಆದಾಗ್ಯೂ, ನೀಡಲಾದ ವಿವರಣೆಯು ತೃಪ್ತಿಕರವಾಗಿಲ್ಲ ಎಂದು ಇಲಾಖೆಯ ಮೂಲಗಳು ತಿಳಿಸಿವೆ ಎಂದು DH ವರದಿ ಹೇಳಿದೆ.

“ವಿಶ್ವವಿದ್ಯಾನಿಲಯವು ದುರುಪಯೋಗಪಡಿಸಿಕೊಂಡ ಹಣವನ್ನು ವಸೂಲಿ ಮಾಡಲು ಮತ್ತು ದಂಡ ವಿಧಿಸಲು ಉನ್ನತ ಶಿಕ್ಷಣ ಮಂಡಳಿ ಶಿಫಾರಸು ಮಾಡಿದೆ. ಹೊಸ ಕಾರ್ಯದರ್ಶಿ ಈಗ ಇಲಾಖೆಯ ಜವಾಬ್ದಾರಿ ವಹಿಸಿಕೊಂಡಿದ್ದಾರೆ ಮತ್ತು ನಾವು ಈ ವಿಷಯವನ್ನು ಅವರ ಮುಂದೆ ಇಡುತ್ತೇವೆ” ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

ಇಲಾಖೆಯ ಅಧಿಕಾರಿಗಳು ವಿವರಿಸಿದಂತೆ, RUSA ಅಡಿಯಲ್ಲಿ ಬಿಡುಗಡೆಯಾದ ಹಣವನ್ನು ಅವುಗಳನ್ನು ಹಂಚಿಕೆ ಮಾಡಿದ ಉದ್ದೇಶಕ್ಕಾಗಿ ಮಾತ್ರ ಬಳಸಬೇಕು. RUSA ನಿಧಿಯ ಶೇಕಡಾ 60 ರಷ್ಟು ಕೇಂದ್ರದಿಂದ ಬಂದಿದ್ದರೆ, ರಾಜ್ಯವು ಉಳಿದ ಶೇಕಡಾ 40 ರಷ್ಟು ಕೊಡುಗೆ ನೀಡುತ್ತದೆ.

RUSA-1 ಅನ್ನು 2013 ಮತ್ತು 2017 ರ ನಡುವೆ ಜಾರಿಗೆ ತರಲಾಯಿತು. ಹಣವನ್ನು ಹಂಚಿಕೆ ಮಾಡಿದ ಯೋಜನೆಗಳು ಪೂರ್ಣಗೊಂಡ ನಂತರ ಉನ್ನತ ಶಿಕ್ಷಣ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳು ಬಳಕೆಯ ಪ್ರಮಾಣಪತ್ರವನ್ನು ಸಲ್ಲಿಸಲು ಕೇಳಲಾಯಿತು. ಮಂಗಳೂರು ವಿಶ್ವವಿದ್ಯಾಲಯಕ್ಕೆ ಮಂಜೂರು ಮಾಡಲಾದ 7 ಕೋಟಿ ರೂ.ಗಳಲ್ಲಿ, 3.5 ಕೋಟಿ ರೂ. ಬಾಲಕರ ಹಾಸ್ಟೆಲ್ ನಿರ್ಮಾಣಕ್ಕಾಗಿ ಮತ್ತು 3.5 ಕೋಟಿ ರೂ. ಬಾಲಕಿಯರ ಹಾಸ್ಟೆಲ್‌ಗಾಗಿ ಖರ್ಚು ಮಾಡಬೇಕಿತ್ತು. ಮಂಗಳೂರು ವಿಶ್ವವಿದ್ಯಾಲಯ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಹಿಳಾ ಬ್ಯೂಟಿ ಪಾರ್ಲರ್‌ಗಳಲ್ಲಿ ‘ಲವ್ ಜಿಹಾದ್’? ಮುಸ್ಲಿಂ ಪುರುಷರ ನೇಮಕ ನಿಷೇಧಿಸಲು ಬಲಪಂಥೀಯ ಸಂಘಟನೆ ಒತ್ತಾಯ

ಮಹಿಳಾ ಬ್ಯೂಟಿ ಪಾರ್ಲರ್‌ಗಳಲ್ಲಿ ‘ಲವ್ ಜಿಹಾದ್’? ಮುಸ್ಲಿಂ ಪುರುಷರ ನೇಮಕ ನಿಷೇಧಿಸಲು ಬಲಪಂಥೀಯ ಸಂಘಟನೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...