Homeಕರ್ನಾಟಕಮಂಗಳೂರು ವಿಡಿಯೋ ಬಿಡುಗಡೆ ಮಾಡಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದೇನು?

ಮಂಗಳೂರು ವಿಡಿಯೋ ಬಿಡುಗಡೆ ಮಾಡಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದೇನು?

ಮ್ಯಾಜಿಸ್ಟ್ರೇಟ್‌ ತನಿಖೆ ಅಗತ್ಯವಿಲ್ಲ. ಈ ಬಗ್ಗೆ ಎಲ್ಲಾ ಪಕ್ಷದವರೂ ಸೇರಿದ ಸದನ ಸಮಿತಿ ರಚನೆಯಾಗಬೇಕು. ಈ ಕುರಿತು ಅಸೆಂಬ್ಲಿಯೊಳಗೆ ಒತ್ತಾಯಿಸುತ್ತೇನೆ - ಎಚ್‌.ಡಿ.ಕೆ

- Advertisement -
- Advertisement -

ಕಳೆದ ಡಿಸೆಂಬರ್‌ 19ರಂದು ನಡೆದ ಮಂಗಳೂರು ಗಲಭೆ ಪ್ರಕರಣಕ್ಕೆ ಸಂಭಂದಿಸಿದಂತೆ, ಇಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸುದ್ದಿಗೋಷ್ಠಿ ಕರೆದು ಸುಮಾರು 35 ದೃಶ್ಯಗಳ ವಿಡಿಯೋ ಸಿಡಿಗಳನ್ನು ಬಿಡುಗಡೆ ಮಾಡಿದ್ದಾರೆ. ರಾಜ್ಯಸರ್ಕಾರ ಮತ್ತು ಮಂಗಳೂರು ಪೊಲೀಸರ ವಿರುದ್ಧ ಹರಿಹಾಯ್ದ ಅವರು ಮಂಗಳೂರು ಕಮಿಷನರ್ ಪಿ.ಎಸ್ ಹರ್ಷರವರ ನಡೆ ಅನುಮಾನಾಸ್ಪದವಾಗಿದೆ, ಪೋಲಿಸರಿಗೆ ಈ ಅಧಿಕಾರ ನೀಡಿದವರು ಯಾರು ಎಂದು ಪ್ರಶ್ನಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡುವ ಮೂಲಕ ಪೊಲೀಸರಿಂದಲೇ ಈ ಘಟನೆ ಹಿಂಸೆರೂಪಕ್ಕೆ ತಿರುಗಿದ್ದು, ಕಾರಣರಾದ ಪೊಲೀಸ್ ಆಯುಕ್ತ ಪಿ.ಎಸ್.ಹರ್ಷರವರ ಅಮಾನತ್ತಿಗೆ ಆಗ್ರಹಿಸಿದ್ದಾರೆ.

ವಿಡಿಯೋ ನೋಡಿ

ಮಂಗಳೂರು ಹಿಂಸಾಚಾರ

ಮಂಗಳೂರು ಹಿಂಸಾಚಾರಕ್ಕೆ ಪೊಲೀಸರೇ ಕಾರಣವೇ? ಎಚ್‌.ಡಿ ಕುಮಾರಸ್ವಾಮಿ ಬಿಡುಗಡೆ ಮಾಡಿದ ವಿಡಿಯೋದಲ್ಲೇನಿದೆ? ನೋಡಿಬಿಡಿ

Posted by Naanu Gauri on Friday, January 10, 2020

ಜನಸಾಮಾನ್ಯರು, ಬಿದಿವ್ಯಾಪಾರಿಗಳ ಮೇಲೆನಡೆದ ದಾಳಿ ಅಮಾನವೀಯ ಎಂದ ಅವರು, ಈ ಹಿಂದೆ ಪೊಲೀಸ್ ಠಾಣೆಯ ಮೇಲೆ ಗಲಭೆಕೋರರ ದಾಳಿ ನಡೆಸಿ, ಶತ್ರಾಸ್ತ್ರಗಳನ್ನು ಕದ್ದೊಯ್ಯಲು ಯತ್ನಿಸಿದ್ದರಿಂದ ಪೊಲೀಸರಿಂದ ಗುಂಡು ಹಾರಿಸಬೇಕಾಯಿತು ಎಂಬ ಕಾರಣ ನೀಡಿದ್ದಾರೆ. ಸರ್ಕಾರ ಅಂಗಡಿಗೆ ದಾಳಿ ಮಾಡಿದರು ಅದಕ್ಕೆ ಗುಂಡು ಹಾರಿಸಬೇಕಾಯಿತು ಅನ್ನುತ್ತಿದೆ? ಯಾರನ್ನು ನಂಬುವುದು?

ಪೊಲೀಸರ್‌ ಠಾಣೆಯ ಹೊರಗೆ 360ಡಿಗ್ರಿ ಕವರ್‌ ಮಾಡುವ ಸಿಸಿ ಕ್ಯಾಮರ ಇದೆ. ಅದರ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿದರೆ ಪ್ರಕರಣದ ನೈಜತೆ ತಿಳಿಯುತ್ತದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಗಲಭೆಯಲ್ಲಿ ಹಲವು ಪೊಲೀಸರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಆದರೆ ಇಲ್ಲಿಯವರೆಗೆ ಒಬ್ಬ ಅಧಿಕಾರಿಯನ್ನು ಸಹ ನಾನು ಆಸ್ಪತ್ರೆಯಲ್ಲಿ ನೋಡಿಲ್ಲ.

ಮ್ಯಾಜಿಸ್ಟ್ರೇಟ್‌ ತನಿಖೆ ಅಗತ್ಯವಿಲ್ಲ. ಈ ಬಗ್ಗೆ ಎಲ್ಲಾ ಪಕ್ಷದವರೂ ಸೇರಿದ ಸದನ ಸಮಿತಿ ರಚನೆಯಾಗಬೇಕು. ಈ ಕುರಿತು ಅಸೆಂಬ್ಲಿಯೊಳಗೆ ಒತ್ತಾಯಿಸುತ್ತೇನೆ ಎಂದರು.

ಈ ಎಲ್ಲಾ ದೃಶ್ಯಗಳನ್ನು ನಾನು ಸದನದಲ್ಲಿ ಬಿಡುಗಡೆ ಮಾಡಬೇಕೆಂದಿದ್ದೆ. ಆದರೆ ಮಂಗಳೂರಿನಲ್ಲಿ ನಿವೃತ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಯಾದ ಗೋಪಾಲಗೌಡರ ನತೃತ್ವದಲ್ಲಿ ನಡೆಯಬೆಕ್ಕಿದ್ದ “ಪೀಪಲ್ಸ್ ಕೋರ್ಟ್” ಎಂಬ ಚರ್ಚಾ ಕಾರ್ಯಕ್ರಮಕ್ಕೆ ಸರ್ಕಾರ ಅನುಮತಿ ನಿರಾಕರಿಸಿದ ಹಿನ್ನಲ್ಲೆಯಲ್ಲಿ, ಆ ಕ್ರಮವನ್ನು ಪ್ರಬಲವಾಗಿ ಖಂಡಿಸಿ ಬಿಡುಗಡೆ ಮಾಡಿರುವುದಾಗಿ ತಿಳಿಸಿದರು.

ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟು ಸಮಸ್ಯೆ ಉಂಟು ಮಾಡುತ್ತಿದ್ದೀರಿ, ಬಿಜೆಪಿಯವರು ಮೂಲಭೂತ ಹಕ್ಕುಗಳನ್ನು ಮೊಟಕುಗೊಳಿಸಲು ಹೊರಟಿದ್ದೀರಿ. ಜನತೆಯಲ್ಲಿ ವಿಶ್ವಾಸ ಮೂಡಿಸದ್ದೇ ಇದ್ದರೆ ಎಷ್ಟು ದಿನ ಸರ್ಕಾರ ನಡೆಸುತ್ತೀರಿ? ಒಂದು ದಿನ ಜನರ ಆಕ್ರೋಶ ಚಿಮ್ಮುವುದಿಲ್ಲವೇ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಬಿಹಾರದಿಂದ ಕೂಲಿಕೆಲಸ ಮಾಡಲು ಬಂದಿದ್ದ ಕಾರ್ಮಿಕನಿಗೆ ಗುಂಡು ಹಾರಿಸಿದ್ದಾರೆ. ಇನ್ನೊಬ್ಬ ಪಿ.ಎಚ್‌.ಡಿ ಓದುತ್ತಿರುವ ಹುಡುಗನಿಗೂ ಗುಂಡು ಬಿದ್ದಿದೆ. ಅವರ ಆಸ್ಪತ್ರೆ ಖರ್ಚು 26 ಲಕ್ಷ ಬಿಲ್‌ ಆಗಿದೆ. ಯಾರು ಕಟ್ಟುತ್ತಾರೆ? ಎಂದು ಪ್ರಶ್ನಿಸಿದ್ದಾರೆ.

ನಂತರ ಮಾಧ್ಯಮಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಮಾಧ್ಯಮಗಳು ಸಂವಿಧಾನದ ನಾಲ್ಕನೇ ಅಂಗ.. ಸಿಎಎ, ಎನ್‌ಆರ್‌ಸಿ ವಿಷಯದಲ್ಲಿ ಜನರಿಗೆ ಸತ್ಯ ತಿಳಿಸಲು ಮುಂದಾಗಿ. ನನ್ನ ಮೇಲೆ ಲಘುವಾಗಿ ಮಾತಾಡುವುದುನ್ನು ಬಿಡಿ. ನಾನು ಬಿಡುವ ದಾಖಲೆಗಳಿಗೆ ಇತಿಹಾಸವಿದೆ. ಮಾಹಿತಿ ಸಂಗ್ರಹವಿಲ್ಲದೇ ದಾಖಲೆ ಬಿಡುಗಡೆ ಮಾಡುವುದಿಲ್ಲ ಎಂದರು.

ಸರ್ಕಾರ ಸಿಎಎ ಬದಿಗಿರಿಸಿ, ನಿರುದ್ಯೋಗದ ಬಗ್ಗೆ ಗಮನಕೊಡಬೇಕು. ಇಂದು ಮೋದಿಯವರು ಆರ್ಥಿಕ ಸಚಿವರನ್ನು ಬಿಟ್ಟು ಸಭೆ ನಡೆಸಿದ್ದಾರೆ ಅಂದರೆ ಏನು ಅರ್ಥ? ಇದು ಈ ದೇಶದ ಪರಿಸ್ಥಿತಿ. ಎಲ್ಲಾ ಮಾಧ್ಯಮಗಳಲ್ಲಿ ಆರ್ಥಿಕತೆ ಹಳ್ಳ ಹಿಡಿಯುತ್ತಿರುವುದು ವರದಿಯಾಗುತ್ತಿದೆ ಎಂದರು.

ನಮ್ಮ ರಾಜ್ಯ ಸರ್ವಜನಾಂಗದ ಶಾಂತಿಯ ತೋಟ. ಇದಕ್ಕೆ ಬಿಜೆಪಿ ಸ್ನೇಹಿತರು ಬೆಂಕಿಯಿಡಲು ಹೊರಟಿದ್ದಾರೆ. ಇದು ನಾಗರಿಕ ಸರ್ಕಾರವೇ? ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...