Homeಕರ್ನಾಟಕಮಂಗಳೂರು ವಿಡಿಯೋ ಬಿಡುಗಡೆ ಮಾಡಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದೇನು?

ಮಂಗಳೂರು ವಿಡಿಯೋ ಬಿಡುಗಡೆ ಮಾಡಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದೇನು?

ಮ್ಯಾಜಿಸ್ಟ್ರೇಟ್‌ ತನಿಖೆ ಅಗತ್ಯವಿಲ್ಲ. ಈ ಬಗ್ಗೆ ಎಲ್ಲಾ ಪಕ್ಷದವರೂ ಸೇರಿದ ಸದನ ಸಮಿತಿ ರಚನೆಯಾಗಬೇಕು. ಈ ಕುರಿತು ಅಸೆಂಬ್ಲಿಯೊಳಗೆ ಒತ್ತಾಯಿಸುತ್ತೇನೆ - ಎಚ್‌.ಡಿ.ಕೆ

- Advertisement -
- Advertisement -

ಕಳೆದ ಡಿಸೆಂಬರ್‌ 19ರಂದು ನಡೆದ ಮಂಗಳೂರು ಗಲಭೆ ಪ್ರಕರಣಕ್ಕೆ ಸಂಭಂದಿಸಿದಂತೆ, ಇಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸುದ್ದಿಗೋಷ್ಠಿ ಕರೆದು ಸುಮಾರು 35 ದೃಶ್ಯಗಳ ವಿಡಿಯೋ ಸಿಡಿಗಳನ್ನು ಬಿಡುಗಡೆ ಮಾಡಿದ್ದಾರೆ. ರಾಜ್ಯಸರ್ಕಾರ ಮತ್ತು ಮಂಗಳೂರು ಪೊಲೀಸರ ವಿರುದ್ಧ ಹರಿಹಾಯ್ದ ಅವರು ಮಂಗಳೂರು ಕಮಿಷನರ್ ಪಿ.ಎಸ್ ಹರ್ಷರವರ ನಡೆ ಅನುಮಾನಾಸ್ಪದವಾಗಿದೆ, ಪೋಲಿಸರಿಗೆ ಈ ಅಧಿಕಾರ ನೀಡಿದವರು ಯಾರು ಎಂದು ಪ್ರಶ್ನಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡುವ ಮೂಲಕ ಪೊಲೀಸರಿಂದಲೇ ಈ ಘಟನೆ ಹಿಂಸೆರೂಪಕ್ಕೆ ತಿರುಗಿದ್ದು, ಕಾರಣರಾದ ಪೊಲೀಸ್ ಆಯುಕ್ತ ಪಿ.ಎಸ್.ಹರ್ಷರವರ ಅಮಾನತ್ತಿಗೆ ಆಗ್ರಹಿಸಿದ್ದಾರೆ.

ವಿಡಿಯೋ ನೋಡಿ

ಮಂಗಳೂರು ಹಿಂಸಾಚಾರ

ಮಂಗಳೂರು ಹಿಂಸಾಚಾರಕ್ಕೆ ಪೊಲೀಸರೇ ಕಾರಣವೇ? ಎಚ್‌.ಡಿ ಕುಮಾರಸ್ವಾಮಿ ಬಿಡುಗಡೆ ಮಾಡಿದ ವಿಡಿಯೋದಲ್ಲೇನಿದೆ? ನೋಡಿಬಿಡಿ

Posted by Naanu Gauri on Friday, January 10, 2020

ಜನಸಾಮಾನ್ಯರು, ಬಿದಿವ್ಯಾಪಾರಿಗಳ ಮೇಲೆನಡೆದ ದಾಳಿ ಅಮಾನವೀಯ ಎಂದ ಅವರು, ಈ ಹಿಂದೆ ಪೊಲೀಸ್ ಠಾಣೆಯ ಮೇಲೆ ಗಲಭೆಕೋರರ ದಾಳಿ ನಡೆಸಿ, ಶತ್ರಾಸ್ತ್ರಗಳನ್ನು ಕದ್ದೊಯ್ಯಲು ಯತ್ನಿಸಿದ್ದರಿಂದ ಪೊಲೀಸರಿಂದ ಗುಂಡು ಹಾರಿಸಬೇಕಾಯಿತು ಎಂಬ ಕಾರಣ ನೀಡಿದ್ದಾರೆ. ಸರ್ಕಾರ ಅಂಗಡಿಗೆ ದಾಳಿ ಮಾಡಿದರು ಅದಕ್ಕೆ ಗುಂಡು ಹಾರಿಸಬೇಕಾಯಿತು ಅನ್ನುತ್ತಿದೆ? ಯಾರನ್ನು ನಂಬುವುದು?

ಪೊಲೀಸರ್‌ ಠಾಣೆಯ ಹೊರಗೆ 360ಡಿಗ್ರಿ ಕವರ್‌ ಮಾಡುವ ಸಿಸಿ ಕ್ಯಾಮರ ಇದೆ. ಅದರ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿದರೆ ಪ್ರಕರಣದ ನೈಜತೆ ತಿಳಿಯುತ್ತದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಗಲಭೆಯಲ್ಲಿ ಹಲವು ಪೊಲೀಸರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಆದರೆ ಇಲ್ಲಿಯವರೆಗೆ ಒಬ್ಬ ಅಧಿಕಾರಿಯನ್ನು ಸಹ ನಾನು ಆಸ್ಪತ್ರೆಯಲ್ಲಿ ನೋಡಿಲ್ಲ.

ಮ್ಯಾಜಿಸ್ಟ್ರೇಟ್‌ ತನಿಖೆ ಅಗತ್ಯವಿಲ್ಲ. ಈ ಬಗ್ಗೆ ಎಲ್ಲಾ ಪಕ್ಷದವರೂ ಸೇರಿದ ಸದನ ಸಮಿತಿ ರಚನೆಯಾಗಬೇಕು. ಈ ಕುರಿತು ಅಸೆಂಬ್ಲಿಯೊಳಗೆ ಒತ್ತಾಯಿಸುತ್ತೇನೆ ಎಂದರು.

ಈ ಎಲ್ಲಾ ದೃಶ್ಯಗಳನ್ನು ನಾನು ಸದನದಲ್ಲಿ ಬಿಡುಗಡೆ ಮಾಡಬೇಕೆಂದಿದ್ದೆ. ಆದರೆ ಮಂಗಳೂರಿನಲ್ಲಿ ನಿವೃತ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಯಾದ ಗೋಪಾಲಗೌಡರ ನತೃತ್ವದಲ್ಲಿ ನಡೆಯಬೆಕ್ಕಿದ್ದ “ಪೀಪಲ್ಸ್ ಕೋರ್ಟ್” ಎಂಬ ಚರ್ಚಾ ಕಾರ್ಯಕ್ರಮಕ್ಕೆ ಸರ್ಕಾರ ಅನುಮತಿ ನಿರಾಕರಿಸಿದ ಹಿನ್ನಲ್ಲೆಯಲ್ಲಿ, ಆ ಕ್ರಮವನ್ನು ಪ್ರಬಲವಾಗಿ ಖಂಡಿಸಿ ಬಿಡುಗಡೆ ಮಾಡಿರುವುದಾಗಿ ತಿಳಿಸಿದರು.

ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟು ಸಮಸ್ಯೆ ಉಂಟು ಮಾಡುತ್ತಿದ್ದೀರಿ, ಬಿಜೆಪಿಯವರು ಮೂಲಭೂತ ಹಕ್ಕುಗಳನ್ನು ಮೊಟಕುಗೊಳಿಸಲು ಹೊರಟಿದ್ದೀರಿ. ಜನತೆಯಲ್ಲಿ ವಿಶ್ವಾಸ ಮೂಡಿಸದ್ದೇ ಇದ್ದರೆ ಎಷ್ಟು ದಿನ ಸರ್ಕಾರ ನಡೆಸುತ್ತೀರಿ? ಒಂದು ದಿನ ಜನರ ಆಕ್ರೋಶ ಚಿಮ್ಮುವುದಿಲ್ಲವೇ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಬಿಹಾರದಿಂದ ಕೂಲಿಕೆಲಸ ಮಾಡಲು ಬಂದಿದ್ದ ಕಾರ್ಮಿಕನಿಗೆ ಗುಂಡು ಹಾರಿಸಿದ್ದಾರೆ. ಇನ್ನೊಬ್ಬ ಪಿ.ಎಚ್‌.ಡಿ ಓದುತ್ತಿರುವ ಹುಡುಗನಿಗೂ ಗುಂಡು ಬಿದ್ದಿದೆ. ಅವರ ಆಸ್ಪತ್ರೆ ಖರ್ಚು 26 ಲಕ್ಷ ಬಿಲ್‌ ಆಗಿದೆ. ಯಾರು ಕಟ್ಟುತ್ತಾರೆ? ಎಂದು ಪ್ರಶ್ನಿಸಿದ್ದಾರೆ.

ನಂತರ ಮಾಧ್ಯಮಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಮಾಧ್ಯಮಗಳು ಸಂವಿಧಾನದ ನಾಲ್ಕನೇ ಅಂಗ.. ಸಿಎಎ, ಎನ್‌ಆರ್‌ಸಿ ವಿಷಯದಲ್ಲಿ ಜನರಿಗೆ ಸತ್ಯ ತಿಳಿಸಲು ಮುಂದಾಗಿ. ನನ್ನ ಮೇಲೆ ಲಘುವಾಗಿ ಮಾತಾಡುವುದುನ್ನು ಬಿಡಿ. ನಾನು ಬಿಡುವ ದಾಖಲೆಗಳಿಗೆ ಇತಿಹಾಸವಿದೆ. ಮಾಹಿತಿ ಸಂಗ್ರಹವಿಲ್ಲದೇ ದಾಖಲೆ ಬಿಡುಗಡೆ ಮಾಡುವುದಿಲ್ಲ ಎಂದರು.

ಸರ್ಕಾರ ಸಿಎಎ ಬದಿಗಿರಿಸಿ, ನಿರುದ್ಯೋಗದ ಬಗ್ಗೆ ಗಮನಕೊಡಬೇಕು. ಇಂದು ಮೋದಿಯವರು ಆರ್ಥಿಕ ಸಚಿವರನ್ನು ಬಿಟ್ಟು ಸಭೆ ನಡೆಸಿದ್ದಾರೆ ಅಂದರೆ ಏನು ಅರ್ಥ? ಇದು ಈ ದೇಶದ ಪರಿಸ್ಥಿತಿ. ಎಲ್ಲಾ ಮಾಧ್ಯಮಗಳಲ್ಲಿ ಆರ್ಥಿಕತೆ ಹಳ್ಳ ಹಿಡಿಯುತ್ತಿರುವುದು ವರದಿಯಾಗುತ್ತಿದೆ ಎಂದರು.

ನಮ್ಮ ರಾಜ್ಯ ಸರ್ವಜನಾಂಗದ ಶಾಂತಿಯ ತೋಟ. ಇದಕ್ಕೆ ಬಿಜೆಪಿ ಸ್ನೇಹಿತರು ಬೆಂಕಿಯಿಡಲು ಹೊರಟಿದ್ದಾರೆ. ಇದು ನಾಗರಿಕ ಸರ್ಕಾರವೇ? ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...