Homeಕರ್ನಾಟಕಮಂಗಳೂರು ವಿಡಿಯೋ ಬಿಡುಗಡೆ ಮಾಡಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದೇನು?

ಮಂಗಳೂರು ವಿಡಿಯೋ ಬಿಡುಗಡೆ ಮಾಡಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದೇನು?

ಮ್ಯಾಜಿಸ್ಟ್ರೇಟ್‌ ತನಿಖೆ ಅಗತ್ಯವಿಲ್ಲ. ಈ ಬಗ್ಗೆ ಎಲ್ಲಾ ಪಕ್ಷದವರೂ ಸೇರಿದ ಸದನ ಸಮಿತಿ ರಚನೆಯಾಗಬೇಕು. ಈ ಕುರಿತು ಅಸೆಂಬ್ಲಿಯೊಳಗೆ ಒತ್ತಾಯಿಸುತ್ತೇನೆ - ಎಚ್‌.ಡಿ.ಕೆ

- Advertisement -
- Advertisement -

ಕಳೆದ ಡಿಸೆಂಬರ್‌ 19ರಂದು ನಡೆದ ಮಂಗಳೂರು ಗಲಭೆ ಪ್ರಕರಣಕ್ಕೆ ಸಂಭಂದಿಸಿದಂತೆ, ಇಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸುದ್ದಿಗೋಷ್ಠಿ ಕರೆದು ಸುಮಾರು 35 ದೃಶ್ಯಗಳ ವಿಡಿಯೋ ಸಿಡಿಗಳನ್ನು ಬಿಡುಗಡೆ ಮಾಡಿದ್ದಾರೆ. ರಾಜ್ಯಸರ್ಕಾರ ಮತ್ತು ಮಂಗಳೂರು ಪೊಲೀಸರ ವಿರುದ್ಧ ಹರಿಹಾಯ್ದ ಅವರು ಮಂಗಳೂರು ಕಮಿಷನರ್ ಪಿ.ಎಸ್ ಹರ್ಷರವರ ನಡೆ ಅನುಮಾನಾಸ್ಪದವಾಗಿದೆ, ಪೋಲಿಸರಿಗೆ ಈ ಅಧಿಕಾರ ನೀಡಿದವರು ಯಾರು ಎಂದು ಪ್ರಶ್ನಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡುವ ಮೂಲಕ ಪೊಲೀಸರಿಂದಲೇ ಈ ಘಟನೆ ಹಿಂಸೆರೂಪಕ್ಕೆ ತಿರುಗಿದ್ದು, ಕಾರಣರಾದ ಪೊಲೀಸ್ ಆಯುಕ್ತ ಪಿ.ಎಸ್.ಹರ್ಷರವರ ಅಮಾನತ್ತಿಗೆ ಆಗ್ರಹಿಸಿದ್ದಾರೆ.

ವಿಡಿಯೋ ನೋಡಿ

ಮಂಗಳೂರು ಹಿಂಸಾಚಾರ

ಮಂಗಳೂರು ಹಿಂಸಾಚಾರಕ್ಕೆ ಪೊಲೀಸರೇ ಕಾರಣವೇ? ಎಚ್‌.ಡಿ ಕುಮಾರಸ್ವಾಮಿ ಬಿಡುಗಡೆ ಮಾಡಿದ ವಿಡಿಯೋದಲ್ಲೇನಿದೆ? ನೋಡಿಬಿಡಿ

Posted by Naanu Gauri on Friday, January 10, 2020

ಜನಸಾಮಾನ್ಯರು, ಬಿದಿವ್ಯಾಪಾರಿಗಳ ಮೇಲೆನಡೆದ ದಾಳಿ ಅಮಾನವೀಯ ಎಂದ ಅವರು, ಈ ಹಿಂದೆ ಪೊಲೀಸ್ ಠಾಣೆಯ ಮೇಲೆ ಗಲಭೆಕೋರರ ದಾಳಿ ನಡೆಸಿ, ಶತ್ರಾಸ್ತ್ರಗಳನ್ನು ಕದ್ದೊಯ್ಯಲು ಯತ್ನಿಸಿದ್ದರಿಂದ ಪೊಲೀಸರಿಂದ ಗುಂಡು ಹಾರಿಸಬೇಕಾಯಿತು ಎಂಬ ಕಾರಣ ನೀಡಿದ್ದಾರೆ. ಸರ್ಕಾರ ಅಂಗಡಿಗೆ ದಾಳಿ ಮಾಡಿದರು ಅದಕ್ಕೆ ಗುಂಡು ಹಾರಿಸಬೇಕಾಯಿತು ಅನ್ನುತ್ತಿದೆ? ಯಾರನ್ನು ನಂಬುವುದು?

ಪೊಲೀಸರ್‌ ಠಾಣೆಯ ಹೊರಗೆ 360ಡಿಗ್ರಿ ಕವರ್‌ ಮಾಡುವ ಸಿಸಿ ಕ್ಯಾಮರ ಇದೆ. ಅದರ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿದರೆ ಪ್ರಕರಣದ ನೈಜತೆ ತಿಳಿಯುತ್ತದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಗಲಭೆಯಲ್ಲಿ ಹಲವು ಪೊಲೀಸರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಆದರೆ ಇಲ್ಲಿಯವರೆಗೆ ಒಬ್ಬ ಅಧಿಕಾರಿಯನ್ನು ಸಹ ನಾನು ಆಸ್ಪತ್ರೆಯಲ್ಲಿ ನೋಡಿಲ್ಲ.

ಮ್ಯಾಜಿಸ್ಟ್ರೇಟ್‌ ತನಿಖೆ ಅಗತ್ಯವಿಲ್ಲ. ಈ ಬಗ್ಗೆ ಎಲ್ಲಾ ಪಕ್ಷದವರೂ ಸೇರಿದ ಸದನ ಸಮಿತಿ ರಚನೆಯಾಗಬೇಕು. ಈ ಕುರಿತು ಅಸೆಂಬ್ಲಿಯೊಳಗೆ ಒತ್ತಾಯಿಸುತ್ತೇನೆ ಎಂದರು.

ಈ ಎಲ್ಲಾ ದೃಶ್ಯಗಳನ್ನು ನಾನು ಸದನದಲ್ಲಿ ಬಿಡುಗಡೆ ಮಾಡಬೇಕೆಂದಿದ್ದೆ. ಆದರೆ ಮಂಗಳೂರಿನಲ್ಲಿ ನಿವೃತ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಯಾದ ಗೋಪಾಲಗೌಡರ ನತೃತ್ವದಲ್ಲಿ ನಡೆಯಬೆಕ್ಕಿದ್ದ “ಪೀಪಲ್ಸ್ ಕೋರ್ಟ್” ಎಂಬ ಚರ್ಚಾ ಕಾರ್ಯಕ್ರಮಕ್ಕೆ ಸರ್ಕಾರ ಅನುಮತಿ ನಿರಾಕರಿಸಿದ ಹಿನ್ನಲ್ಲೆಯಲ್ಲಿ, ಆ ಕ್ರಮವನ್ನು ಪ್ರಬಲವಾಗಿ ಖಂಡಿಸಿ ಬಿಡುಗಡೆ ಮಾಡಿರುವುದಾಗಿ ತಿಳಿಸಿದರು.

ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟು ಸಮಸ್ಯೆ ಉಂಟು ಮಾಡುತ್ತಿದ್ದೀರಿ, ಬಿಜೆಪಿಯವರು ಮೂಲಭೂತ ಹಕ್ಕುಗಳನ್ನು ಮೊಟಕುಗೊಳಿಸಲು ಹೊರಟಿದ್ದೀರಿ. ಜನತೆಯಲ್ಲಿ ವಿಶ್ವಾಸ ಮೂಡಿಸದ್ದೇ ಇದ್ದರೆ ಎಷ್ಟು ದಿನ ಸರ್ಕಾರ ನಡೆಸುತ್ತೀರಿ? ಒಂದು ದಿನ ಜನರ ಆಕ್ರೋಶ ಚಿಮ್ಮುವುದಿಲ್ಲವೇ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಬಿಹಾರದಿಂದ ಕೂಲಿಕೆಲಸ ಮಾಡಲು ಬಂದಿದ್ದ ಕಾರ್ಮಿಕನಿಗೆ ಗುಂಡು ಹಾರಿಸಿದ್ದಾರೆ. ಇನ್ನೊಬ್ಬ ಪಿ.ಎಚ್‌.ಡಿ ಓದುತ್ತಿರುವ ಹುಡುಗನಿಗೂ ಗುಂಡು ಬಿದ್ದಿದೆ. ಅವರ ಆಸ್ಪತ್ರೆ ಖರ್ಚು 26 ಲಕ್ಷ ಬಿಲ್‌ ಆಗಿದೆ. ಯಾರು ಕಟ್ಟುತ್ತಾರೆ? ಎಂದು ಪ್ರಶ್ನಿಸಿದ್ದಾರೆ.

ನಂತರ ಮಾಧ್ಯಮಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಮಾಧ್ಯಮಗಳು ಸಂವಿಧಾನದ ನಾಲ್ಕನೇ ಅಂಗ.. ಸಿಎಎ, ಎನ್‌ಆರ್‌ಸಿ ವಿಷಯದಲ್ಲಿ ಜನರಿಗೆ ಸತ್ಯ ತಿಳಿಸಲು ಮುಂದಾಗಿ. ನನ್ನ ಮೇಲೆ ಲಘುವಾಗಿ ಮಾತಾಡುವುದುನ್ನು ಬಿಡಿ. ನಾನು ಬಿಡುವ ದಾಖಲೆಗಳಿಗೆ ಇತಿಹಾಸವಿದೆ. ಮಾಹಿತಿ ಸಂಗ್ರಹವಿಲ್ಲದೇ ದಾಖಲೆ ಬಿಡುಗಡೆ ಮಾಡುವುದಿಲ್ಲ ಎಂದರು.

ಸರ್ಕಾರ ಸಿಎಎ ಬದಿಗಿರಿಸಿ, ನಿರುದ್ಯೋಗದ ಬಗ್ಗೆ ಗಮನಕೊಡಬೇಕು. ಇಂದು ಮೋದಿಯವರು ಆರ್ಥಿಕ ಸಚಿವರನ್ನು ಬಿಟ್ಟು ಸಭೆ ನಡೆಸಿದ್ದಾರೆ ಅಂದರೆ ಏನು ಅರ್ಥ? ಇದು ಈ ದೇಶದ ಪರಿಸ್ಥಿತಿ. ಎಲ್ಲಾ ಮಾಧ್ಯಮಗಳಲ್ಲಿ ಆರ್ಥಿಕತೆ ಹಳ್ಳ ಹಿಡಿಯುತ್ತಿರುವುದು ವರದಿಯಾಗುತ್ತಿದೆ ಎಂದರು.

ನಮ್ಮ ರಾಜ್ಯ ಸರ್ವಜನಾಂಗದ ಶಾಂತಿಯ ತೋಟ. ಇದಕ್ಕೆ ಬಿಜೆಪಿ ಸ್ನೇಹಿತರು ಬೆಂಕಿಯಿಡಲು ಹೊರಟಿದ್ದಾರೆ. ಇದು ನಾಗರಿಕ ಸರ್ಕಾರವೇ? ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...