Homeಕರ್ನಾಟಕಮಂಗಳೂರು ವಿಡಿಯೋ ಬಿಡುಗಡೆ ಮಾಡಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದೇನು?

ಮಂಗಳೂರು ವಿಡಿಯೋ ಬಿಡುಗಡೆ ಮಾಡಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದೇನು?

ಮ್ಯಾಜಿಸ್ಟ್ರೇಟ್‌ ತನಿಖೆ ಅಗತ್ಯವಿಲ್ಲ. ಈ ಬಗ್ಗೆ ಎಲ್ಲಾ ಪಕ್ಷದವರೂ ಸೇರಿದ ಸದನ ಸಮಿತಿ ರಚನೆಯಾಗಬೇಕು. ಈ ಕುರಿತು ಅಸೆಂಬ್ಲಿಯೊಳಗೆ ಒತ್ತಾಯಿಸುತ್ತೇನೆ - ಎಚ್‌.ಡಿ.ಕೆ

- Advertisement -
- Advertisement -

ಕಳೆದ ಡಿಸೆಂಬರ್‌ 19ರಂದು ನಡೆದ ಮಂಗಳೂರು ಗಲಭೆ ಪ್ರಕರಣಕ್ಕೆ ಸಂಭಂದಿಸಿದಂತೆ, ಇಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸುದ್ದಿಗೋಷ್ಠಿ ಕರೆದು ಸುಮಾರು 35 ದೃಶ್ಯಗಳ ವಿಡಿಯೋ ಸಿಡಿಗಳನ್ನು ಬಿಡುಗಡೆ ಮಾಡಿದ್ದಾರೆ. ರಾಜ್ಯಸರ್ಕಾರ ಮತ್ತು ಮಂಗಳೂರು ಪೊಲೀಸರ ವಿರುದ್ಧ ಹರಿಹಾಯ್ದ ಅವರು ಮಂಗಳೂರು ಕಮಿಷನರ್ ಪಿ.ಎಸ್ ಹರ್ಷರವರ ನಡೆ ಅನುಮಾನಾಸ್ಪದವಾಗಿದೆ, ಪೋಲಿಸರಿಗೆ ಈ ಅಧಿಕಾರ ನೀಡಿದವರು ಯಾರು ಎಂದು ಪ್ರಶ್ನಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡುವ ಮೂಲಕ ಪೊಲೀಸರಿಂದಲೇ ಈ ಘಟನೆ ಹಿಂಸೆರೂಪಕ್ಕೆ ತಿರುಗಿದ್ದು, ಕಾರಣರಾದ ಪೊಲೀಸ್ ಆಯುಕ್ತ ಪಿ.ಎಸ್.ಹರ್ಷರವರ ಅಮಾನತ್ತಿಗೆ ಆಗ್ರಹಿಸಿದ್ದಾರೆ.

ವಿಡಿಯೋ ನೋಡಿ

ಮಂಗಳೂರು ಹಿಂಸಾಚಾರ

ಮಂಗಳೂರು ಹಿಂಸಾಚಾರಕ್ಕೆ ಪೊಲೀಸರೇ ಕಾರಣವೇ? ಎಚ್‌.ಡಿ ಕುಮಾರಸ್ವಾಮಿ ಬಿಡುಗಡೆ ಮಾಡಿದ ವಿಡಿಯೋದಲ್ಲೇನಿದೆ? ನೋಡಿಬಿಡಿ

Posted by Naanu Gauri on Friday, January 10, 2020

ಜನಸಾಮಾನ್ಯರು, ಬಿದಿವ್ಯಾಪಾರಿಗಳ ಮೇಲೆನಡೆದ ದಾಳಿ ಅಮಾನವೀಯ ಎಂದ ಅವರು, ಈ ಹಿಂದೆ ಪೊಲೀಸ್ ಠಾಣೆಯ ಮೇಲೆ ಗಲಭೆಕೋರರ ದಾಳಿ ನಡೆಸಿ, ಶತ್ರಾಸ್ತ್ರಗಳನ್ನು ಕದ್ದೊಯ್ಯಲು ಯತ್ನಿಸಿದ್ದರಿಂದ ಪೊಲೀಸರಿಂದ ಗುಂಡು ಹಾರಿಸಬೇಕಾಯಿತು ಎಂಬ ಕಾರಣ ನೀಡಿದ್ದಾರೆ. ಸರ್ಕಾರ ಅಂಗಡಿಗೆ ದಾಳಿ ಮಾಡಿದರು ಅದಕ್ಕೆ ಗುಂಡು ಹಾರಿಸಬೇಕಾಯಿತು ಅನ್ನುತ್ತಿದೆ? ಯಾರನ್ನು ನಂಬುವುದು?

ಪೊಲೀಸರ್‌ ಠಾಣೆಯ ಹೊರಗೆ 360ಡಿಗ್ರಿ ಕವರ್‌ ಮಾಡುವ ಸಿಸಿ ಕ್ಯಾಮರ ಇದೆ. ಅದರ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿದರೆ ಪ್ರಕರಣದ ನೈಜತೆ ತಿಳಿಯುತ್ತದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಗಲಭೆಯಲ್ಲಿ ಹಲವು ಪೊಲೀಸರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಆದರೆ ಇಲ್ಲಿಯವರೆಗೆ ಒಬ್ಬ ಅಧಿಕಾರಿಯನ್ನು ಸಹ ನಾನು ಆಸ್ಪತ್ರೆಯಲ್ಲಿ ನೋಡಿಲ್ಲ.

ಮ್ಯಾಜಿಸ್ಟ್ರೇಟ್‌ ತನಿಖೆ ಅಗತ್ಯವಿಲ್ಲ. ಈ ಬಗ್ಗೆ ಎಲ್ಲಾ ಪಕ್ಷದವರೂ ಸೇರಿದ ಸದನ ಸಮಿತಿ ರಚನೆಯಾಗಬೇಕು. ಈ ಕುರಿತು ಅಸೆಂಬ್ಲಿಯೊಳಗೆ ಒತ್ತಾಯಿಸುತ್ತೇನೆ ಎಂದರು.

ಈ ಎಲ್ಲಾ ದೃಶ್ಯಗಳನ್ನು ನಾನು ಸದನದಲ್ಲಿ ಬಿಡುಗಡೆ ಮಾಡಬೇಕೆಂದಿದ್ದೆ. ಆದರೆ ಮಂಗಳೂರಿನಲ್ಲಿ ನಿವೃತ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಯಾದ ಗೋಪಾಲಗೌಡರ ನತೃತ್ವದಲ್ಲಿ ನಡೆಯಬೆಕ್ಕಿದ್ದ “ಪೀಪಲ್ಸ್ ಕೋರ್ಟ್” ಎಂಬ ಚರ್ಚಾ ಕಾರ್ಯಕ್ರಮಕ್ಕೆ ಸರ್ಕಾರ ಅನುಮತಿ ನಿರಾಕರಿಸಿದ ಹಿನ್ನಲ್ಲೆಯಲ್ಲಿ, ಆ ಕ್ರಮವನ್ನು ಪ್ರಬಲವಾಗಿ ಖಂಡಿಸಿ ಬಿಡುಗಡೆ ಮಾಡಿರುವುದಾಗಿ ತಿಳಿಸಿದರು.

ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟು ಸಮಸ್ಯೆ ಉಂಟು ಮಾಡುತ್ತಿದ್ದೀರಿ, ಬಿಜೆಪಿಯವರು ಮೂಲಭೂತ ಹಕ್ಕುಗಳನ್ನು ಮೊಟಕುಗೊಳಿಸಲು ಹೊರಟಿದ್ದೀರಿ. ಜನತೆಯಲ್ಲಿ ವಿಶ್ವಾಸ ಮೂಡಿಸದ್ದೇ ಇದ್ದರೆ ಎಷ್ಟು ದಿನ ಸರ್ಕಾರ ನಡೆಸುತ್ತೀರಿ? ಒಂದು ದಿನ ಜನರ ಆಕ್ರೋಶ ಚಿಮ್ಮುವುದಿಲ್ಲವೇ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಬಿಹಾರದಿಂದ ಕೂಲಿಕೆಲಸ ಮಾಡಲು ಬಂದಿದ್ದ ಕಾರ್ಮಿಕನಿಗೆ ಗುಂಡು ಹಾರಿಸಿದ್ದಾರೆ. ಇನ್ನೊಬ್ಬ ಪಿ.ಎಚ್‌.ಡಿ ಓದುತ್ತಿರುವ ಹುಡುಗನಿಗೂ ಗುಂಡು ಬಿದ್ದಿದೆ. ಅವರ ಆಸ್ಪತ್ರೆ ಖರ್ಚು 26 ಲಕ್ಷ ಬಿಲ್‌ ಆಗಿದೆ. ಯಾರು ಕಟ್ಟುತ್ತಾರೆ? ಎಂದು ಪ್ರಶ್ನಿಸಿದ್ದಾರೆ.

ನಂತರ ಮಾಧ್ಯಮಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಮಾಧ್ಯಮಗಳು ಸಂವಿಧಾನದ ನಾಲ್ಕನೇ ಅಂಗ.. ಸಿಎಎ, ಎನ್‌ಆರ್‌ಸಿ ವಿಷಯದಲ್ಲಿ ಜನರಿಗೆ ಸತ್ಯ ತಿಳಿಸಲು ಮುಂದಾಗಿ. ನನ್ನ ಮೇಲೆ ಲಘುವಾಗಿ ಮಾತಾಡುವುದುನ್ನು ಬಿಡಿ. ನಾನು ಬಿಡುವ ದಾಖಲೆಗಳಿಗೆ ಇತಿಹಾಸವಿದೆ. ಮಾಹಿತಿ ಸಂಗ್ರಹವಿಲ್ಲದೇ ದಾಖಲೆ ಬಿಡುಗಡೆ ಮಾಡುವುದಿಲ್ಲ ಎಂದರು.

ಸರ್ಕಾರ ಸಿಎಎ ಬದಿಗಿರಿಸಿ, ನಿರುದ್ಯೋಗದ ಬಗ್ಗೆ ಗಮನಕೊಡಬೇಕು. ಇಂದು ಮೋದಿಯವರು ಆರ್ಥಿಕ ಸಚಿವರನ್ನು ಬಿಟ್ಟು ಸಭೆ ನಡೆಸಿದ್ದಾರೆ ಅಂದರೆ ಏನು ಅರ್ಥ? ಇದು ಈ ದೇಶದ ಪರಿಸ್ಥಿತಿ. ಎಲ್ಲಾ ಮಾಧ್ಯಮಗಳಲ್ಲಿ ಆರ್ಥಿಕತೆ ಹಳ್ಳ ಹಿಡಿಯುತ್ತಿರುವುದು ವರದಿಯಾಗುತ್ತಿದೆ ಎಂದರು.

ನಮ್ಮ ರಾಜ್ಯ ಸರ್ವಜನಾಂಗದ ಶಾಂತಿಯ ತೋಟ. ಇದಕ್ಕೆ ಬಿಜೆಪಿ ಸ್ನೇಹಿತರು ಬೆಂಕಿಯಿಡಲು ಹೊರಟಿದ್ದಾರೆ. ಇದು ನಾಗರಿಕ ಸರ್ಕಾರವೇ? ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...