Homeಕರ್ನಾಟಕಮಂಗಳೂರು ವಿಡಿಯೋ ಬಿಡುಗಡೆ ಮಾಡಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದೇನು?

ಮಂಗಳೂರು ವಿಡಿಯೋ ಬಿಡುಗಡೆ ಮಾಡಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದೇನು?

ಮ್ಯಾಜಿಸ್ಟ್ರೇಟ್‌ ತನಿಖೆ ಅಗತ್ಯವಿಲ್ಲ. ಈ ಬಗ್ಗೆ ಎಲ್ಲಾ ಪಕ್ಷದವರೂ ಸೇರಿದ ಸದನ ಸಮಿತಿ ರಚನೆಯಾಗಬೇಕು. ಈ ಕುರಿತು ಅಸೆಂಬ್ಲಿಯೊಳಗೆ ಒತ್ತಾಯಿಸುತ್ತೇನೆ - ಎಚ್‌.ಡಿ.ಕೆ

- Advertisement -
- Advertisement -

ಕಳೆದ ಡಿಸೆಂಬರ್‌ 19ರಂದು ನಡೆದ ಮಂಗಳೂರು ಗಲಭೆ ಪ್ರಕರಣಕ್ಕೆ ಸಂಭಂದಿಸಿದಂತೆ, ಇಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸುದ್ದಿಗೋಷ್ಠಿ ಕರೆದು ಸುಮಾರು 35 ದೃಶ್ಯಗಳ ವಿಡಿಯೋ ಸಿಡಿಗಳನ್ನು ಬಿಡುಗಡೆ ಮಾಡಿದ್ದಾರೆ. ರಾಜ್ಯಸರ್ಕಾರ ಮತ್ತು ಮಂಗಳೂರು ಪೊಲೀಸರ ವಿರುದ್ಧ ಹರಿಹಾಯ್ದ ಅವರು ಮಂಗಳೂರು ಕಮಿಷನರ್ ಪಿ.ಎಸ್ ಹರ್ಷರವರ ನಡೆ ಅನುಮಾನಾಸ್ಪದವಾಗಿದೆ, ಪೋಲಿಸರಿಗೆ ಈ ಅಧಿಕಾರ ನೀಡಿದವರು ಯಾರು ಎಂದು ಪ್ರಶ್ನಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡುವ ಮೂಲಕ ಪೊಲೀಸರಿಂದಲೇ ಈ ಘಟನೆ ಹಿಂಸೆರೂಪಕ್ಕೆ ತಿರುಗಿದ್ದು, ಕಾರಣರಾದ ಪೊಲೀಸ್ ಆಯುಕ್ತ ಪಿ.ಎಸ್.ಹರ್ಷರವರ ಅಮಾನತ್ತಿಗೆ ಆಗ್ರಹಿಸಿದ್ದಾರೆ.

ವಿಡಿಯೋ ನೋಡಿ

ಮಂಗಳೂರು ಹಿಂಸಾಚಾರ

ಮಂಗಳೂರು ಹಿಂಸಾಚಾರಕ್ಕೆ ಪೊಲೀಸರೇ ಕಾರಣವೇ? ಎಚ್‌.ಡಿ ಕುಮಾರಸ್ವಾಮಿ ಬಿಡುಗಡೆ ಮಾಡಿದ ವಿಡಿಯೋದಲ್ಲೇನಿದೆ? ನೋಡಿಬಿಡಿ

Posted by Naanu Gauri on Friday, January 10, 2020

ಜನಸಾಮಾನ್ಯರು, ಬಿದಿವ್ಯಾಪಾರಿಗಳ ಮೇಲೆನಡೆದ ದಾಳಿ ಅಮಾನವೀಯ ಎಂದ ಅವರು, ಈ ಹಿಂದೆ ಪೊಲೀಸ್ ಠಾಣೆಯ ಮೇಲೆ ಗಲಭೆಕೋರರ ದಾಳಿ ನಡೆಸಿ, ಶತ್ರಾಸ್ತ್ರಗಳನ್ನು ಕದ್ದೊಯ್ಯಲು ಯತ್ನಿಸಿದ್ದರಿಂದ ಪೊಲೀಸರಿಂದ ಗುಂಡು ಹಾರಿಸಬೇಕಾಯಿತು ಎಂಬ ಕಾರಣ ನೀಡಿದ್ದಾರೆ. ಸರ್ಕಾರ ಅಂಗಡಿಗೆ ದಾಳಿ ಮಾಡಿದರು ಅದಕ್ಕೆ ಗುಂಡು ಹಾರಿಸಬೇಕಾಯಿತು ಅನ್ನುತ್ತಿದೆ? ಯಾರನ್ನು ನಂಬುವುದು?

ಪೊಲೀಸರ್‌ ಠಾಣೆಯ ಹೊರಗೆ 360ಡಿಗ್ರಿ ಕವರ್‌ ಮಾಡುವ ಸಿಸಿ ಕ್ಯಾಮರ ಇದೆ. ಅದರ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿದರೆ ಪ್ರಕರಣದ ನೈಜತೆ ತಿಳಿಯುತ್ತದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಗಲಭೆಯಲ್ಲಿ ಹಲವು ಪೊಲೀಸರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಆದರೆ ಇಲ್ಲಿಯವರೆಗೆ ಒಬ್ಬ ಅಧಿಕಾರಿಯನ್ನು ಸಹ ನಾನು ಆಸ್ಪತ್ರೆಯಲ್ಲಿ ನೋಡಿಲ್ಲ.

ಮ್ಯಾಜಿಸ್ಟ್ರೇಟ್‌ ತನಿಖೆ ಅಗತ್ಯವಿಲ್ಲ. ಈ ಬಗ್ಗೆ ಎಲ್ಲಾ ಪಕ್ಷದವರೂ ಸೇರಿದ ಸದನ ಸಮಿತಿ ರಚನೆಯಾಗಬೇಕು. ಈ ಕುರಿತು ಅಸೆಂಬ್ಲಿಯೊಳಗೆ ಒತ್ತಾಯಿಸುತ್ತೇನೆ ಎಂದರು.

ಈ ಎಲ್ಲಾ ದೃಶ್ಯಗಳನ್ನು ನಾನು ಸದನದಲ್ಲಿ ಬಿಡುಗಡೆ ಮಾಡಬೇಕೆಂದಿದ್ದೆ. ಆದರೆ ಮಂಗಳೂರಿನಲ್ಲಿ ನಿವೃತ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಯಾದ ಗೋಪಾಲಗೌಡರ ನತೃತ್ವದಲ್ಲಿ ನಡೆಯಬೆಕ್ಕಿದ್ದ “ಪೀಪಲ್ಸ್ ಕೋರ್ಟ್” ಎಂಬ ಚರ್ಚಾ ಕಾರ್ಯಕ್ರಮಕ್ಕೆ ಸರ್ಕಾರ ಅನುಮತಿ ನಿರಾಕರಿಸಿದ ಹಿನ್ನಲ್ಲೆಯಲ್ಲಿ, ಆ ಕ್ರಮವನ್ನು ಪ್ರಬಲವಾಗಿ ಖಂಡಿಸಿ ಬಿಡುಗಡೆ ಮಾಡಿರುವುದಾಗಿ ತಿಳಿಸಿದರು.

ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟು ಸಮಸ್ಯೆ ಉಂಟು ಮಾಡುತ್ತಿದ್ದೀರಿ, ಬಿಜೆಪಿಯವರು ಮೂಲಭೂತ ಹಕ್ಕುಗಳನ್ನು ಮೊಟಕುಗೊಳಿಸಲು ಹೊರಟಿದ್ದೀರಿ. ಜನತೆಯಲ್ಲಿ ವಿಶ್ವಾಸ ಮೂಡಿಸದ್ದೇ ಇದ್ದರೆ ಎಷ್ಟು ದಿನ ಸರ್ಕಾರ ನಡೆಸುತ್ತೀರಿ? ಒಂದು ದಿನ ಜನರ ಆಕ್ರೋಶ ಚಿಮ್ಮುವುದಿಲ್ಲವೇ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಬಿಹಾರದಿಂದ ಕೂಲಿಕೆಲಸ ಮಾಡಲು ಬಂದಿದ್ದ ಕಾರ್ಮಿಕನಿಗೆ ಗುಂಡು ಹಾರಿಸಿದ್ದಾರೆ. ಇನ್ನೊಬ್ಬ ಪಿ.ಎಚ್‌.ಡಿ ಓದುತ್ತಿರುವ ಹುಡುಗನಿಗೂ ಗುಂಡು ಬಿದ್ದಿದೆ. ಅವರ ಆಸ್ಪತ್ರೆ ಖರ್ಚು 26 ಲಕ್ಷ ಬಿಲ್‌ ಆಗಿದೆ. ಯಾರು ಕಟ್ಟುತ್ತಾರೆ? ಎಂದು ಪ್ರಶ್ನಿಸಿದ್ದಾರೆ.

ನಂತರ ಮಾಧ್ಯಮಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಮಾಧ್ಯಮಗಳು ಸಂವಿಧಾನದ ನಾಲ್ಕನೇ ಅಂಗ.. ಸಿಎಎ, ಎನ್‌ಆರ್‌ಸಿ ವಿಷಯದಲ್ಲಿ ಜನರಿಗೆ ಸತ್ಯ ತಿಳಿಸಲು ಮುಂದಾಗಿ. ನನ್ನ ಮೇಲೆ ಲಘುವಾಗಿ ಮಾತಾಡುವುದುನ್ನು ಬಿಡಿ. ನಾನು ಬಿಡುವ ದಾಖಲೆಗಳಿಗೆ ಇತಿಹಾಸವಿದೆ. ಮಾಹಿತಿ ಸಂಗ್ರಹವಿಲ್ಲದೇ ದಾಖಲೆ ಬಿಡುಗಡೆ ಮಾಡುವುದಿಲ್ಲ ಎಂದರು.

ಸರ್ಕಾರ ಸಿಎಎ ಬದಿಗಿರಿಸಿ, ನಿರುದ್ಯೋಗದ ಬಗ್ಗೆ ಗಮನಕೊಡಬೇಕು. ಇಂದು ಮೋದಿಯವರು ಆರ್ಥಿಕ ಸಚಿವರನ್ನು ಬಿಟ್ಟು ಸಭೆ ನಡೆಸಿದ್ದಾರೆ ಅಂದರೆ ಏನು ಅರ್ಥ? ಇದು ಈ ದೇಶದ ಪರಿಸ್ಥಿತಿ. ಎಲ್ಲಾ ಮಾಧ್ಯಮಗಳಲ್ಲಿ ಆರ್ಥಿಕತೆ ಹಳ್ಳ ಹಿಡಿಯುತ್ತಿರುವುದು ವರದಿಯಾಗುತ್ತಿದೆ ಎಂದರು.

ನಮ್ಮ ರಾಜ್ಯ ಸರ್ವಜನಾಂಗದ ಶಾಂತಿಯ ತೋಟ. ಇದಕ್ಕೆ ಬಿಜೆಪಿ ಸ್ನೇಹಿತರು ಬೆಂಕಿಯಿಡಲು ಹೊರಟಿದ್ದಾರೆ. ಇದು ನಾಗರಿಕ ಸರ್ಕಾರವೇ? ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...