Homeಕರ್ನಾಟಕಮಂಗಳೂರು ವಿಡಿಯೋ ಬಿಡುಗಡೆ ಮಾಡಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದೇನು?

ಮಂಗಳೂರು ವಿಡಿಯೋ ಬಿಡುಗಡೆ ಮಾಡಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದೇನು?

ಮ್ಯಾಜಿಸ್ಟ್ರೇಟ್‌ ತನಿಖೆ ಅಗತ್ಯವಿಲ್ಲ. ಈ ಬಗ್ಗೆ ಎಲ್ಲಾ ಪಕ್ಷದವರೂ ಸೇರಿದ ಸದನ ಸಮಿತಿ ರಚನೆಯಾಗಬೇಕು. ಈ ಕುರಿತು ಅಸೆಂಬ್ಲಿಯೊಳಗೆ ಒತ್ತಾಯಿಸುತ್ತೇನೆ - ಎಚ್‌.ಡಿ.ಕೆ

- Advertisement -
- Advertisement -

ಕಳೆದ ಡಿಸೆಂಬರ್‌ 19ರಂದು ನಡೆದ ಮಂಗಳೂರು ಗಲಭೆ ಪ್ರಕರಣಕ್ಕೆ ಸಂಭಂದಿಸಿದಂತೆ, ಇಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸುದ್ದಿಗೋಷ್ಠಿ ಕರೆದು ಸುಮಾರು 35 ದೃಶ್ಯಗಳ ವಿಡಿಯೋ ಸಿಡಿಗಳನ್ನು ಬಿಡುಗಡೆ ಮಾಡಿದ್ದಾರೆ. ರಾಜ್ಯಸರ್ಕಾರ ಮತ್ತು ಮಂಗಳೂರು ಪೊಲೀಸರ ವಿರುದ್ಧ ಹರಿಹಾಯ್ದ ಅವರು ಮಂಗಳೂರು ಕಮಿಷನರ್ ಪಿ.ಎಸ್ ಹರ್ಷರವರ ನಡೆ ಅನುಮಾನಾಸ್ಪದವಾಗಿದೆ, ಪೋಲಿಸರಿಗೆ ಈ ಅಧಿಕಾರ ನೀಡಿದವರು ಯಾರು ಎಂದು ಪ್ರಶ್ನಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡುವ ಮೂಲಕ ಪೊಲೀಸರಿಂದಲೇ ಈ ಘಟನೆ ಹಿಂಸೆರೂಪಕ್ಕೆ ತಿರುಗಿದ್ದು, ಕಾರಣರಾದ ಪೊಲೀಸ್ ಆಯುಕ್ತ ಪಿ.ಎಸ್.ಹರ್ಷರವರ ಅಮಾನತ್ತಿಗೆ ಆಗ್ರಹಿಸಿದ್ದಾರೆ.

ವಿಡಿಯೋ ನೋಡಿ

ಮಂಗಳೂರು ಹಿಂಸಾಚಾರ

ಮಂಗಳೂರು ಹಿಂಸಾಚಾರಕ್ಕೆ ಪೊಲೀಸರೇ ಕಾರಣವೇ? ಎಚ್‌.ಡಿ ಕುಮಾರಸ್ವಾಮಿ ಬಿಡುಗಡೆ ಮಾಡಿದ ವಿಡಿಯೋದಲ್ಲೇನಿದೆ? ನೋಡಿಬಿಡಿ

Posted by Naanu Gauri on Friday, January 10, 2020

ಜನಸಾಮಾನ್ಯರು, ಬಿದಿವ್ಯಾಪಾರಿಗಳ ಮೇಲೆನಡೆದ ದಾಳಿ ಅಮಾನವೀಯ ಎಂದ ಅವರು, ಈ ಹಿಂದೆ ಪೊಲೀಸ್ ಠಾಣೆಯ ಮೇಲೆ ಗಲಭೆಕೋರರ ದಾಳಿ ನಡೆಸಿ, ಶತ್ರಾಸ್ತ್ರಗಳನ್ನು ಕದ್ದೊಯ್ಯಲು ಯತ್ನಿಸಿದ್ದರಿಂದ ಪೊಲೀಸರಿಂದ ಗುಂಡು ಹಾರಿಸಬೇಕಾಯಿತು ಎಂಬ ಕಾರಣ ನೀಡಿದ್ದಾರೆ. ಸರ್ಕಾರ ಅಂಗಡಿಗೆ ದಾಳಿ ಮಾಡಿದರು ಅದಕ್ಕೆ ಗುಂಡು ಹಾರಿಸಬೇಕಾಯಿತು ಅನ್ನುತ್ತಿದೆ? ಯಾರನ್ನು ನಂಬುವುದು?

ಪೊಲೀಸರ್‌ ಠಾಣೆಯ ಹೊರಗೆ 360ಡಿಗ್ರಿ ಕವರ್‌ ಮಾಡುವ ಸಿಸಿ ಕ್ಯಾಮರ ಇದೆ. ಅದರ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿದರೆ ಪ್ರಕರಣದ ನೈಜತೆ ತಿಳಿಯುತ್ತದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಗಲಭೆಯಲ್ಲಿ ಹಲವು ಪೊಲೀಸರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಆದರೆ ಇಲ್ಲಿಯವರೆಗೆ ಒಬ್ಬ ಅಧಿಕಾರಿಯನ್ನು ಸಹ ನಾನು ಆಸ್ಪತ್ರೆಯಲ್ಲಿ ನೋಡಿಲ್ಲ.

ಮ್ಯಾಜಿಸ್ಟ್ರೇಟ್‌ ತನಿಖೆ ಅಗತ್ಯವಿಲ್ಲ. ಈ ಬಗ್ಗೆ ಎಲ್ಲಾ ಪಕ್ಷದವರೂ ಸೇರಿದ ಸದನ ಸಮಿತಿ ರಚನೆಯಾಗಬೇಕು. ಈ ಕುರಿತು ಅಸೆಂಬ್ಲಿಯೊಳಗೆ ಒತ್ತಾಯಿಸುತ್ತೇನೆ ಎಂದರು.

ಈ ಎಲ್ಲಾ ದೃಶ್ಯಗಳನ್ನು ನಾನು ಸದನದಲ್ಲಿ ಬಿಡುಗಡೆ ಮಾಡಬೇಕೆಂದಿದ್ದೆ. ಆದರೆ ಮಂಗಳೂರಿನಲ್ಲಿ ನಿವೃತ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಯಾದ ಗೋಪಾಲಗೌಡರ ನತೃತ್ವದಲ್ಲಿ ನಡೆಯಬೆಕ್ಕಿದ್ದ “ಪೀಪಲ್ಸ್ ಕೋರ್ಟ್” ಎಂಬ ಚರ್ಚಾ ಕಾರ್ಯಕ್ರಮಕ್ಕೆ ಸರ್ಕಾರ ಅನುಮತಿ ನಿರಾಕರಿಸಿದ ಹಿನ್ನಲ್ಲೆಯಲ್ಲಿ, ಆ ಕ್ರಮವನ್ನು ಪ್ರಬಲವಾಗಿ ಖಂಡಿಸಿ ಬಿಡುಗಡೆ ಮಾಡಿರುವುದಾಗಿ ತಿಳಿಸಿದರು.

ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟು ಸಮಸ್ಯೆ ಉಂಟು ಮಾಡುತ್ತಿದ್ದೀರಿ, ಬಿಜೆಪಿಯವರು ಮೂಲಭೂತ ಹಕ್ಕುಗಳನ್ನು ಮೊಟಕುಗೊಳಿಸಲು ಹೊರಟಿದ್ದೀರಿ. ಜನತೆಯಲ್ಲಿ ವಿಶ್ವಾಸ ಮೂಡಿಸದ್ದೇ ಇದ್ದರೆ ಎಷ್ಟು ದಿನ ಸರ್ಕಾರ ನಡೆಸುತ್ತೀರಿ? ಒಂದು ದಿನ ಜನರ ಆಕ್ರೋಶ ಚಿಮ್ಮುವುದಿಲ್ಲವೇ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಬಿಹಾರದಿಂದ ಕೂಲಿಕೆಲಸ ಮಾಡಲು ಬಂದಿದ್ದ ಕಾರ್ಮಿಕನಿಗೆ ಗುಂಡು ಹಾರಿಸಿದ್ದಾರೆ. ಇನ್ನೊಬ್ಬ ಪಿ.ಎಚ್‌.ಡಿ ಓದುತ್ತಿರುವ ಹುಡುಗನಿಗೂ ಗುಂಡು ಬಿದ್ದಿದೆ. ಅವರ ಆಸ್ಪತ್ರೆ ಖರ್ಚು 26 ಲಕ್ಷ ಬಿಲ್‌ ಆಗಿದೆ. ಯಾರು ಕಟ್ಟುತ್ತಾರೆ? ಎಂದು ಪ್ರಶ್ನಿಸಿದ್ದಾರೆ.

ನಂತರ ಮಾಧ್ಯಮಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಮಾಧ್ಯಮಗಳು ಸಂವಿಧಾನದ ನಾಲ್ಕನೇ ಅಂಗ.. ಸಿಎಎ, ಎನ್‌ಆರ್‌ಸಿ ವಿಷಯದಲ್ಲಿ ಜನರಿಗೆ ಸತ್ಯ ತಿಳಿಸಲು ಮುಂದಾಗಿ. ನನ್ನ ಮೇಲೆ ಲಘುವಾಗಿ ಮಾತಾಡುವುದುನ್ನು ಬಿಡಿ. ನಾನು ಬಿಡುವ ದಾಖಲೆಗಳಿಗೆ ಇತಿಹಾಸವಿದೆ. ಮಾಹಿತಿ ಸಂಗ್ರಹವಿಲ್ಲದೇ ದಾಖಲೆ ಬಿಡುಗಡೆ ಮಾಡುವುದಿಲ್ಲ ಎಂದರು.

ಸರ್ಕಾರ ಸಿಎಎ ಬದಿಗಿರಿಸಿ, ನಿರುದ್ಯೋಗದ ಬಗ್ಗೆ ಗಮನಕೊಡಬೇಕು. ಇಂದು ಮೋದಿಯವರು ಆರ್ಥಿಕ ಸಚಿವರನ್ನು ಬಿಟ್ಟು ಸಭೆ ನಡೆಸಿದ್ದಾರೆ ಅಂದರೆ ಏನು ಅರ್ಥ? ಇದು ಈ ದೇಶದ ಪರಿಸ್ಥಿತಿ. ಎಲ್ಲಾ ಮಾಧ್ಯಮಗಳಲ್ಲಿ ಆರ್ಥಿಕತೆ ಹಳ್ಳ ಹಿಡಿಯುತ್ತಿರುವುದು ವರದಿಯಾಗುತ್ತಿದೆ ಎಂದರು.

ನಮ್ಮ ರಾಜ್ಯ ಸರ್ವಜನಾಂಗದ ಶಾಂತಿಯ ತೋಟ. ಇದಕ್ಕೆ ಬಿಜೆಪಿ ಸ್ನೇಹಿತರು ಬೆಂಕಿಯಿಡಲು ಹೊರಟಿದ್ದಾರೆ. ಇದು ನಾಗರಿಕ ಸರ್ಕಾರವೇ? ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...