Homeಕರ್ನಾಟಕಮಂಗಳೂರು | ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಖಾಝಿಗಳ ಸಭೆ

ಮಂಗಳೂರು | ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಖಾಝಿಗಳ ಸಭೆ

ಸುನ್ನಿ ಸಂಘಟನೆಗಳಾದ ಎಸ್ಸೆಸ್ಸೆಫ್ ಮತ್ತು ಎಸ್ಕೆಎಸ್ಸೆಸ್ಸೆಫ್‌ ಮಹತ್ವದ ಜಂಟಿ ಪತ್ರಿಕಾಗೋಷ್ಠಿ

- Advertisement -
- Advertisement -

ದೇಶದ ಅತಿದೊಡ್ಡ ಅಲ್ಪಸಂಖ್ಯಾತ ಸಮುದಾಯವಾದ ಮುಸ್ಲಿಮರಲ್ಲಿ ಅಸುರಕ್ಷತೆಯನ್ನು ಮೂಡಿಸುವ ಮತ್ತು ಅವರಿಗೆ ಧಾರ್ಮಿಕ ಸ್ವಾತಂತ್ರ್ಯವನ್ನು ಒದಗಿಸಿರುವ ಸಂವಿಧಾನದ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿದ ವಕ್ಫ್ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರವು ಕೂಡಲೇ ಹಿಂದೆಗೆಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿ ಶನಿವಾರ ಒತ್ತಾಯಿಸಿದೆ. ಮಂಗಳೂರು

ರಾಜ್ಯದ ಖಾಝಿಗಳು ಹಾಗೂ ಮುಸ್ಲಿಂ ಧಾರ್ಮಿಕ ವಿಧ್ವಾಂಸರು ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧೀನದಲ್ಲಿ ಮಂಗಳೂರಿನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಮಸೂದೆ 2024ನ್ನು ಹಿಂಪಡೆಯಲು ಆಗ್ರಹ ಕೇಳಿಬಂದಿದೆ. ಮಂಗಳೂರು

“ಮುಸ್ಲಿಮರ ಧಾರ್ಮಿಕ ಸ್ವಾತಂತ್ರ್ಯದ ಮೇಲಿನ ದಾಳಿಯ ಭಾಗವಾಗಿ 2024ರ ಆಗಸ್ಟ್‌ನಲ್ಲಿ ಸಂಸತ್ತಿನಲ್ಲಿ ಮಂಡಿಸಿದ ವಕ್ಫ್ ತಿದ್ದುಪಡಿ ಮಸೂದೆಯನ್ನು ತೀವ್ರ ವಿರೋಧದ ಹಿನ್ನೆಲೆಯಲ್ಲಿ ಜಂಟಿ ಸಂಸದೀಯ ಸಮಿತಿಯ ಪರಿಶೀಲನೆಗೆ ನೀಡಲಾಗಿತ್ತು. ಆದರೆ ಪ್ರಸ್ತುತ ಸಮಿತಿಯು ವಿರೋಧ ಪಕ್ಷಗಳ ಪ್ರತಿನಿಧಿಗಳು ಸೂಚಿಸಿದ ತಿದ್ದುಪಡಿಗಳನ್ನು ಸಾರಾಸಗಟಾಗಿ ತಿರಸ್ಕರಿಸಿ, ಮೊದಲಿಗಿಂತಲೂ ಅಪಾಯಕಾರಿ ಅಂಶಗಳನ್ನು ಸೇರಿಸಿ ಮಂಡಿಸಿದೆ” ಎಂದು ಸಮಿತಿ ಹೇಳಿದೆ.

“ದೇಶದ ಅತಿದೊಡ್ಡ ಅಲ್ಪಸಂಖ್ಯಾತ ಸಮುದಾಯವಾದ ಮುಸ್ಲಿಮರಲ್ಲಿ ಅಸುರಕ್ಷತೆಯನ್ನು ಮೂಡಿಸುವ ಮತ್ತು ಅವರಿಗೆ ಧಾರ್ಮಿಕ ಸ್ವಾತಂತ್ರ್ಯವನ್ನು ಒದಗಿಸಿರುವ ಸಂವಿಧಾನದ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿದ ಈ ವಕ್ಫ್ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರವು ಕೂಡಲೇ ಹಿಂದೆಗೆಬೇಕು” ಎಂದು ಸಮಿತಿ ಒತ್ತಾಯಿಸಿದೆ.

ಈ ತಿದ್ದುಪಡಿಗಳು ವಕ್ಫ್ ಆಸ್ತಿಗಳನ್ನು ಕಬಳಿಸುವ ಮತ್ತು ಅಳಿದುಳಿದ ವಕ್ಫ್ ಆಸ್ತಿಗಳ ನಿರ್ವಹಣೆಯಲ್ಲೂ ಸಮುದಾಯದ ನಿಯಂತ್ರಣವನ್ನು ತಪ್ಪಿಸುವ ಉದ್ದೇಶವನ್ನೇ ಹೊಂದಿದೆ ಎಂದು ಸಮಿತಿ ಹೇಳಿದೆ.

“ವಕ್ಫ್ ಎಂಬುದು ದೇವರ ಹೆಸರಿನಲ್ಲಿ ಸಮರ್ಪಿಸಲಾದ ದಾನವಾಗಿದ್ದು, ಯಾರಿಗೂ ಯಾವತ್ತೂ ಪರಭಾರೆ ಮಾಡಲಾಗದ, ಸಮುದಾಯದ ಧಾರ್ಮಿಕ ಹಾಗೂ ಸಾಮಾಜಿಕ ಕೆಲಸಗಳಿಗೆ ಮಾತ್ರ ಬಳಸಬಹುದಾದ ಸೊತ್ತು. ಇವುಗಳ ನಿರ್ವಹಣೆಗೆ 1913 ರಲ್ಲಿ ವಕ್ಫ್ ಕಾಯಿದೆಯನ್ನು ರೂಪಿಸಲಾಗಿತ್ತು. 1955ರಲ್ಲಿ ವಕ್ಫ್ ಆಸ್ತಿಗಳ ನಿರ್ವಹಣೆಗಾಗಿ ವಕ್ಫ್ ಬೋರ್ಡ್ ಅನ್ನು ಅಂಗೀಕರಿಸಿ, 1995 ರಲ್ಲಿ ಹಾಗೂ 2013 ರಲ್ಲಿ ಅಗತ್ಯ ತಿದ್ದುಪಡಿಗಳನ್ನು ತಂದು ವಕ್ಫ್ ಸ್ವತ್ತುಗಳನ್ನು ಸಂರಕ್ಷಿಸಲು ಪ್ರಯತ್ನಿಸಲಾಗಿತ್ತು.

ಭಾರತದ ಸಂವಿಧಾನದಲ್ಲಿ ಆರ್ಟಿಕಲ್ 25, 26, 27 ಮತ್ತು 28 ಜನರ ಧಾರ್ಮಿಕ ಸ್ವಾತಂತ್ರ್ಯವನ್ನು ಮೂಲಭೂತ ಹಕ್ಕು ಎಂದಿದ್ದು, ಆರ್ಟಿಕಲ್ 26 ರ ಎ,ಬಿ,ಸಿ,ಡಿ ಕಲಮುಗಳು ಧಾರ್ಮಿಕ ಆಚರಣೆಯ ಭಾಗವಾಗಿ ಧಾರ್ಮಿಕ ಹಾಗೂ ಸಾಮಾಜಿಕ ಉದ್ದೇಶಗಳಿಗೆ ಸಂಸ್ಥೆಗಳನ್ನು ಕಟ್ಟಿಕೊಳ್ಳುವ, ಧಾರ್ಮಿಕ ವಿಷಯದಲ್ಲಿ ಅದನ್ನು ತಮ್ಮ ಧರ್ಮಾನುಸಾರ ಪಾಲನೆಮಾಡುವ, ಸ್ಥಿರ ಹಾಗೂ ಚರಾಸ್ತಿಗಳನ್ನು ಹೊಂದುವ ಮತ್ತು ಅವನ್ನು ಕಾನೂನು ರೀತ್ಯ ನಿರ್ವಹಣೆ ಮಾಡುವ ಹಕ್ಕನ್ನು ಕೊಡುತ್ತದೆ.

ವಕ್ಫ್‌ ರೀತಿಯಲ್ಲೆ ಹಿಂದೂ, ಮುಸ್ಲಿಂ, ಕ್ರೈಸ್ತ, ಸಿಖ್ ಸೇರಿದಂತೆ ಎಲ್ಲಾ ಧರ್ಮೀಯರು ಧಾರ್ಮಿಕ ಸಂಸ್ಥೆಗಳನ್ನು ಕಟ್ಟಿಕೊಂಡು ದೇಣಿಗೆಗಳನ್ನು ಸ್ವೀಕರಿಸುತ್ತಿದ್ದು, ಮುಸ್ಲಿಂ ಸಮುದಾಯದ ಧಾರ್ಮಿಕ ದಾನಗಳ ಆಚಾರಗಳನ್ನು ಮುನ್ನಡೆಸಲು ವಕ್ಫ್ ಬೋರ್ಡ್ ಕಾಯಿದೆಯನ್ನು ರೂಪಿಸಲಾಗಿದೆ. ಆದರೆ, ಕೇಂದ್ರದ ಬಿಜೆಪಿ ಸರ್ಕಾರವು ವಕ್ಫ್ ಕಾಯಿದೆಗೆ ಅಮೂಲಾಗ್ರ ತಿದ್ದುಪಡಿ ಮಾಡಲು ಮುಂದಾಗಿದ್ದು, ಅದಕ್ಕಾಗಿ United Wakf -Management, Empowerment, Efficiency, Development- Act- UMEED- ಮಸೂದೆಯನ್ನು ಜಾರಿಗೆ ತರುತ್ತಿದೆ.

ಬಹುತೇಕ ವಕ್ಫ್ ಆಸ್ತಿಗಳಿಗೆ ನೂರಾರು ವರ್ಷಗಳ ಇತಿಹಾಸವಿದ್ದು, ಹೆಚ್ಚಿನವು ಮೌಖಿಕ ಒಡಂಬಡಿಕೆಯ ಮೂಲಕ ನೀಡಲಾಗಿದೆ. ನೂತನ ತಿದ್ದುಪಡಿಯ ಪ್ರಕಾರ ಇನ್ನು ಮುಂದೆ ಆರು ತಿಂಗಳೊಳಗೆ ಕಾಗದ ಪತ್ರ ತೋರಿಸಿ ದಾಖಲಾಗದ ಯಾವುದೇ ವಕ್ಫ್ ಆಸ್ತಿಯನ್ನು ವಕ್ಫ್ ಎಂದು ಪರಿಗಣಿಸಲಾಗುವುದಿಲ್ಲ.

ಈವರೆಗೆ ವಕ್ಫ್ ಆಸ್ತಿಯನ್ನು ನಿಗದಿ ಪಡಿಸಲು ಸರ್ಕಾರವು ಇಸ್ಲಾಮಿಕ್ ಕಾನೂನು ಮತ್ತು ವಕ್ಫ್ ವಿಷಯಗಳಲ್ಲಿ ಪರಿಣಿತಿ ಇರುವ ಒಬ್ಬ ಸ್ವಾಯತ್ತ ಸರ್ವೆಯರ್ ಅನ್ನು ನೇಮಿಸುತ್ತಿತ್ತು. ಆದರೆ ನೂತನ ತಿದ್ದುಪಡಿ ಪ್ರಕಾರ ಆ ಎಲ್ಲಾ ಜವಾಬ್ದಾರಿಗಳನ್ನು ಒಬ್ಬ ಜಿಲಾಧಿಕಾರಿಗೆ ನೀಡಲಾಗಿದೆ.

ವಕ್ಫ್ ತಗಾದೆಗಳನ್ನು ಇತ್ಯರ್ಥ ಮಾಡುವ ವಕ್ಫ್ ಟ್ರಿಬ್ಯುನಲ್‌ಗೆ ನೇಮಕವಾಗುವ ಸರ್ಕಾರಿ ಅಧಿಕಾರಿ ಮುಸ್ಲಿಮನಾಗಿರಬೇಕೆಂಬ ಷರತ್ತನ್ನೂ ಹೊಸ ಮಸೂದೆ ತೆಗೆದು ಹಾಕಿದೆ. ಅಲ್ಲದೆ ವಕ್ಫ್ ಬೋರ್ಡಿನಲ್ಲಿ ಕಡ್ಡಾಯವಾಗಿ ಇಬ್ಬರು ಮುಸ್ಲಿಮೇತರರನ್ನು ನೇಮಿಸಬೇಕೆಂದು ಬದಲಿಸಲಾಗಿದೆ.

ಹಿಂದೂ ಅಥವಾ ಸಿಖ್ ದೇವಸ್ಥಾನಗಳ ನೇಮಕವಾಗುವ ಸರ್ಕಾರಿ ಅಧಿಕಾರಿಯು ಆಯಾ ಧರ್ಮೀಯರೇ ಅಗಿರಬೇಕೆಂಬ ಕಾನೂನು ಜಾರಿಯಲ್ಲಿದ್ದು, ವಕ್ಫ್ ನಿಂದ ಮಾತ್ರ ಈ ಕಾನೂನನ್ನು ಕೈ ಬಿಡುವ ಉದ್ದೇಶವೇನು? ಎಂದು ಸಮಿತಿ ಪ್ರಶ್ನಸಿದ್ದು, ಹೀಗೆ ತಿದ್ದುಪಡಿ ಮಸೂದೆಯು ಹಲವಾರು ಅನ್ಯಾಯಕಾರಿ ಅಂಶಗಳನ್ನು ಒಳಗೊಂಡಿದ್ದು, ಮುಸ್ಲಿಮರನ್ನು ದಮನಿಸುವ ಕೋಮುವಾದಿ ಉದ್ದೇಶವನ್ನಷ್ಟೇ ಹೊಂದಿದೆ ಎಂದು ಅದು ಹೇಳಿದೆ.

ಜಂಟಿ ಸಂಸದೀಯ ಸಮಿತಿಯ ಮುಂದೆ 98 ಲಕ್ಷದಷ್ಜು ಲಿಖಿತ ಮನವಿಗಳು ಬಂದಿದ್ದು, ಅದರಲ್ಲಿ ಬಹುಪಾಲು ಈ ತಿದ್ದುಪಡಿಗಳನ್ನು ವಿರೋಧಿಸುವುವೇ ಆಗಿತ್ತು. ಆದಾಗ್ಯೂ ಸರ್ಕಾರವು ವಿರೋಧ ಪಕ್ಷಗಳು ಸಲ್ಲಿಸಿದ್ದ ಆಕ್ಷೇಪಣೆಗಳನ್ನೂ ಅವಗಣಿಸಿ, ಸರ್ವಾಧಿಕಾರಿ ಪ್ರವೃತ್ತಿ ತೋರಿ ಮಸೂದೆಯನ್ನು ಉಭಯ ಸದನಗಳಲ್ಲಿ ಮಂಡಿಸಿದೆ ಎಂದು ಸಮಿತಿ ಹೇಳಿದೆ.

“ಈ ತಿದ್ದುಪಡಿಯು ವಕ್ಫ್ ಆಸ್ತಿಗಳನ್ನು ಸರ್ಕಾರ ಒತ್ತುವರಿ ಮಾಡುವ ಮತ್ತು ವಕ್ಫಿನ ಇಸ್ಲಾಮಿಕ್ ಧಾರ್ಮಿಕತೆಯನ್ನು ನಾಶಮಾಡುವ ದುರುದ್ದೇಶ ಪೂರಿತ ನಡೆಯಾಗಿದ್ದು, ಮುಸ್ಲಿಮರ ಅಸ್ತಿತ್ವ ಮತ್ತು ಅಸ್ಮಿತೆಯನ್ನು ನಾಶ ಮಾಡುವ ಉಗ್ರ ಕೋಮುವಾದಿತ್ವದ ಭಾಗವಾಗಿದೆ. ದೇಶದ ಅಲ್ಪಸಂಖ್ಯಾತ ಸಮಾಜಕ್ಕೆ ಸಂರಕ್ಷಣೆ ಒದಗಿಸುವುದು ಯಾವುದೇ ಸರ್ಕಾರದ ಜವಾಬ್ದಾರಿಯಾಗಿದ್ದು, ಅವರಿಗೆ ಸಂವಿಧಾನದಲ್ಲಿ ನೀಡಲಾಗಿರುವ ಧಾರ್ಮಿಕ ಹಕ್ಕಿನ ಮೇಲಿನ ದಾಳಿಯು ಸಂವಿಧಾನದ ಮೇಲಿನ ದಾಳಿಯೇ ಆಗಿದೆ. ಆದ್ದರಿಂದ ಸರ್ಕಾರವು ಪ್ರಸ್ತಾವಿತ ಮಸೂದೆಯನ್ನು ಹಿಂದೆಗೆಯಲೇ ಬೇಕು” ಎಂದು ಸಮಿತಿ ಒತ್ತಾಯಿಸಿದೆ.

ದೇಶದ ಸಂವಿಧಾನ, ಜಾತ್ಯತೀತ ಸಿದ್ಧಾಂತ ಮತ್ತು ಬಹುತ್ವ ಸಂಸ್ಕೃತಿಯಲ್ಲಿ ನಂಬಿಕೆ ಇರುವ ಎಲ್ಲ ಪ್ರಜ್ಞಾವಂತ ಭಾರತೀಯರು ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಧ್ವನಿ ಎತ್ತಬೇಕು ಎಂದು ಕೂಡಾ ಸಮಿತಿ ಒತ್ತಾಯಿಸಿದೆ.

ಪತ್ರಿಕಾಗೋಷ್ಠಿಯಲ್ಲಿ, ಖಾಝಿ ಅಹ್ಮದ್ ಮುಸ್ಲಿಯಾರ್ ತಾಖಾ ಉಸ್ತಾದ್, ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್, ಸಯ್ಯಿದ್ ಇಸ್ಮಾಯಿಲ್ ತಂಙಳ್ ಉಜಿರೆ, ಉಸ್ಮಾನುಲ್ ಫೈಝಿ ತೋಡಾರು, ಯು.ಕೆ. ಮುಹಮ್ಮದ್ ಸ ಅದಿ ವಳವೂರು, ಯು.ಕೆ. ಅಬ್ದುಲ್ ಅಝೀಝ್ ದಾರಿಮಿ ಚೊಕ್ಕಬೆಟ್ಟು, ಎಸ್.ಪಿ. ಹಂಝ ಸಖಾಫಿ ಬಂಟ್ವಾಳ, ಎನ್.ಕೆ.ಎಂ. ಶಾಫಿ ಸಾದಿ ಬೆಂಗಳೂರು, ಅಬ್ದುಲ್ ಹಮೀದ್ ದಾರಿಮಿ ಸಂಪ್ಯ, ಪಿ.ಪಿ. ಅಹ್ಮದ್ ಸಖಾಫಿ ಕಾಶಿಪಟ್ನ, ಕೆ.ಐ. ಅಬ್ದುಲ್ ಖಾದಿರ್ ದಾರಿಮಿ ಕುಕ್ಕಿಲ, ಪಿ.ಎಂ. ಉಸ್ಮಾನ್ ಸ ಅದಿ ಪಟ್ಟೋರಿ, ಕೆ.ಎಲ್. ಉಮರ್ ದಾರಿಮಿ ಪಟ್ಟೋರಿ, ಟಿ.ಎಂ. ಮುಹಿಯ್ಯುದ್ದೀನ್ ಕಾಮಿಲ್ ಸಖಾಫಿ ತೋಕೆ, ಡಾ. ಎಮ್ಮೆಸ್ಸೆಂ ಝೈನೀ ಕಾಮಿಲ್, ಅನೀಸ್ ಕೌಸರಿ, ಉಮರ್ ದಾರಿಮಿ‌ ಸಾಲ್ಮಾರ, ಖಾಸಿಂ ದಾರಿಮಿ ಸವಣೂರು,

ಎಂ.ವೈ. ಅಬ್ದುಲ್ ಹಫೀಳ್ ಸಅದಿ ಕೊಡಗು, ಅಬೂಬಕ್ಕರ್ ಸಿದ್ದೀಖ್ ದಾರಿಮಿ ಕಡಬ, ಕೆ.ಕೆ.ಎಂ. ಕಾಮಿಲ್ ಸಖಾಫಿ ಸುರಿಬೈಲ್, ರಫೀಕ್ ಹುದವಿ ಕೋಲಾರ, ಕೆ.ಎಂ. ಅಬೂಬಕರ್ ಸಿದ್ದೀಖ್ ಮೊಂಟುಗೋಳಿ, ಹುಸೈನ್ ದಾರಿಮಿ‌ ರೆಂಜಲಾಡಿ, ಎಂಪಿಎಂ ಅಶ್ರಫ್ ಸ ಅದಿ ಮಲ್ಲೂರು, ಅಬೂಸಾಲಿಹ್ ಫೈಝಿ ತುಂಬೆ, ಮುಹಮ್ಮದ್ ಅಲಿ ತುರ್ಕಲಿಕೆ, ಮುಹಮ್ಮದ್ ಮುಸ್ಲಿಯಾರ್ ಮುಂಡೋಲ ಭಾಗವಹಿಸಿದ್ದರು. ಗೋಷ್ಠಿಯಯನ್ನು ದ.ಕ. ವಕ್ಫ್ ಸಲಹಾ ಸಮಿತಿ ಅಧ್ಯಕ್ಷರಾದ ಬಿ.ಎ. ಅಬ್ದುಲ್ ನಾಸಿರ್ ಲಕ್ಕಿಸ್ಟಾರ್, ದ. ಕ. ಜಿಲ್ಲಾ ವಕ್ಫ್ ಸಲಹಾ‌ ಸಮಿತಿ ಉಪಾಧ್ಯಕ್ಷರಾದ ಅಶ್ರಫ್ ಕಿನಾರ ಮಂಗಳೂರು ನಡೆಸಿಕೊಟ್ಟರು. ಮಂಗಳೂರು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಎಸ್ಸಿಎಸ್‌ಪಿ/ಟಿಎಸ್‌ಪಿ ಹಣದ ದುರ್ಬಳಕೆ ಯಾವುದೆ ಕಾರಣಕ್ಕೂ ಒಪ್ಪಲ್ಲ – ದಲಿತ ಹಕ್ಕುಗಳ ಹೋರಾಟಗಾರ ಎ. ನರಸಿಂಹ ಮೂರ್ತಿ

ಎಸ್ಸಿಎಸ್‌ಪಿ/ಟಿಎಸ್‌ಪಿ ಹಣದ ದುರ್ಬಳಕೆ ಯಾವುದೆ ಕಾರಣಕ್ಕೂ ಒಪ್ಪಲ್ಲ – ದಲಿತ ಹಕ್ಕುಗಳ ಹೋರಾಟಗಾರ ಎ. ನರಸಿಂಹ ಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...