Homeಕರ್ನಾಟಕಮಂಗಳೂರು | ಮುಸ್ಲಿಂ ನಾಯಕರು ರಾಜೀನಾಮೆ ವಾಪಸ್ ಪಡೆಯಲು ಬಿ.ಕೆ. ಹರಿಪ್ರಸಾದ್ ವಿನಂತಿ

ಮಂಗಳೂರು | ಮುಸ್ಲಿಂ ನಾಯಕರು ರಾಜೀನಾಮೆ ವಾಪಸ್ ಪಡೆಯಲು ಬಿ.ಕೆ. ಹರಿಪ್ರಸಾದ್ ವಿನಂತಿ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನಾಯಕರ ಸಾಮೂಹಿಕ ರಾಜೀನಾಮೆಗೆ ಗುರುವಾರ ಪ್ರತಿಕ್ರಿಯಿಸಿರುವ ವಿಧಾನಪರಿಷತ್ ನಾಯಕ ಬಿ.ಕೆ. ಹರಿಪ್ರಸಾದ್, ಕಾಂಗ್ರೆಸ್ ಪಕ್ಷ ಅವರನ್ನು ಕಳೆದುಕೊಳ್ಳುವುದಿಲ್ಲ, ನಾಯಕರು ತಮ್ಮ ರಾಜೀನಾಮೆಯನ್ನು ಹಿಂಪಡೆಯುವಂತೆ ವಿನಂತಿಸುವುದಾಗಿ ಹೇಳಿದ್ದಾರೆ. ಸರ್ಕಾರವನ್ನು ಬೆಂಬಲಿಸಿದರೂ ತಮ್ಮ ನಾಯಕರು ಕೆಲಸ ಮಾಡದಿದ್ದಾಗ ಅವರು ರಾಜೀನಾಮೆ ನೀಡಿದ್ದು ಸರಿಯಾಗಿಯೆ ಇದೆ ಎಂದು ಅವರು ಅಲ್ಪಸಂಖ್ಯಾತ ನಾಯಕರನ್ನು ಸಮರ್ಥಿಸಿಕೊಂಡಿದ್ದಾರೆ. ಮಂಗಳೂರು | ಮುಸ್ಲಿಂ ನಾಯಕರು

ಗುರುವಾರ ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ರಾಜ್ಯ ಶಾಂತಿಯಿಂದ ಬದುಕುತ್ತಿದ್ದರೂ, ಕರಾವಳಿ ಜಿಲ್ಲೆಗಳಿಂದ ಅಹಿತಕರ ಘಟನೆಗಳ ವರದಿಗಳು ಹೊರಬರುತ್ತಿವೆ. ನಗರವು ರಾಜ್ಯದಲ್ಲಿ ಉತ್ತಮ ಖ್ಯಾತಿಯನ್ನು ಹೊಂದಿದೆ ಮತ್ತು ಅದನ್ನು ಮತ್ತೊಂದು ಮಣಿಪುರವನ್ನಾಗಿ ಮಾಡಲು ಬಿಡಬಾರದು ಎಂದು ಒತ್ತಿ ಹೇಳಿದ್ದಾರೆ.

“ಕರಾವಳಿ ಪ್ರದೇಶವು ಕೋಮು ಸೂಕ್ಷ್ಮವಾಗಿರುವುದರಿಂದ, ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಇಬ್ಬರೂ ಜಾಣ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ” ಎಂದು ಬಿ ಕೆ ಹರಿಪ್ರಸಾದ್ ತಮ್ಮ ಸರ್ಕಾರಕ್ಕೆ ನಿರ್ಧಾರಕ್ಕೆ ಬದ್ಧರಾಗಿರುವುದಾಗಿ ಮತ್ತು ‘ಎಲ್ಲವೂ ಸರಿಯಾಗುತ್ತದೆ ಎಂದು ಆಶಿಸುತ್ತೇನೆ’ ಎಂದು ಹೇಳಿದ್ದಾರೆ. ಗಲಭೆಯಲ್ಲಿ ಭಾಗಿಯಾಗಿರುವ ಜನರು ಮತ್ತು ಅವರ ಕುಟುಂಬ ಸದಸ್ಯರು ಬಡ ಬಲಿಪಶುಗಳು ಎಂದು ಅವರು ಹೇಳಿದ್ದಾರೆ.

“ನಿಜವಾದ ಕಿಂಗ್‌ಪಿನ್‌ಗಳು ಮುಕ್ತವಾಗಿ ತಿರುಗಾಡುತ್ತಿದ್ದಾರೆ. ಅವರ ಗುರುತುಗಳು ಶೀಘ್ರದಲ್ಲೇ ಬಹಿರಂಗಗೊಳ್ಳಲಿವೆ. ಪ್ರಾಮಾಣಿಕ ಮತ್ತು ಸಮರ್ಥ ಪೊಲೀಸ್ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳುತ್ತಾರೆ”: ಅವರು ಹೇಳಿದ್ದಾರೆ.

ಮುಖ್ಯಮಂತ್ರಿಯೊಂದಿಗಿನ ಅವರ ಇತ್ತೀಚಿನ ಭೇಟಿಯ ಕುರಿತಾದ ಪ್ರಶ್ನೆಗೆ ಉತ್ತರಿಸಿದ ಅವರು, “ಇದು ಸೌಜನ್ಯದ ಭೇಟಿ. ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನನ್ನನ್ನು ನಿಯೋಜಿಸುವ ವದಂತಿ ಆಧಾರರಹಿತ. ಕರಾವಳಿ ಪ್ರದೇಶದಲ್ಲಿ ಅಹಿತಕರ ಘಟನೆಗಳನ್ನು ತಡೆಯಲು ಕ್ರಮ ಕೈಗೊಳ್ಳುವಂತೆ ನಾನು ಸಿಎಂ ಅವರನ್ನು ವಿನಂತಿಸಿದ್ದೆ ಮತ್ತು ಅವರು ಅಗತ್ಯವಿರುವದನ್ನು ಮಾಡುವುದಾಗಿ ನನಗೆ ಭರವಸೆ ನೀಡಿದರು. ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಮಾತನಾಡಲು ಸಿಎಂ ನನಗೆ ನಿರ್ದೇಶನ ನೀಡಿದ್ದಾರೆ.” ಎಂದು ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನಾಯಕರ ಸಾಮೂಹಿಕ ರಾಜೀನಾಮೆಗೆ ಪ್ರತಿಕ್ರಿಯಿಸಿದ ಅವರು, ಕೆಲವು ದುರದೃಷ್ಟಕರ ಘಟನೆಗಳನ್ನು ಅನುಭವಿಸಿದ ಕಾರಣಕ್ಕೆ ನಾಯಕರು ರಾಜೀನಾಮೆ ನೀಡಿದ್ದಾರೆ. ಆದಾಗ್ಯೂ, ನಾಯಕರು ತಮ್ಮ ರಾಜೀನಾಮೆಯನ್ನು ಹಿಂಪಡೆಯುವಂತೆ ವಿನಂತಿಸುತ್ತೇನೆ. ಕಾಂಗ್ರೆಸ್ ಪಕ್ಷ ಅವರನ್ನು ಕಳೆದುಕೊಳ್ಳುವುದಿಲ್ಲ. ರಾಜೀನಾಮೆ ನೀಡುವ ಅಗತ್ಯವಿಲ್ಲ” ಎಂದು ಹೇಳಿದ್ದಾರೆ.

“ಇಂತಹ ಘಟನೆಗಳು ವ್ಯಕ್ತಿಗಳ ಮನೋಭಾವವನ್ನು ಮುರಿಯಬಾರದು. ಸರ್ಕಾರ ಬೆಂಬಲಿಸಿದರೂ ನಾಯಕರು ಕೆಲಸ ಮಾಡದಿದ್ದಾಗ ಅವರು ರಾಜೀನಾಮೆ ನೀಡಿದ್ದ ಪ್ರಸ್ತುತವಾಗಿದೆ. ಕಾಂಗ್ರೆಸ್ ಸಂವಿಧಾನದ ಪರವಾಗಿದೆ ಮತ್ತು ಸೈದ್ಧಾಂತಿಕವಾಗಿ ಗಟ್ಟಿಯಿರುವ ಪಕ್ಷವಾಗಿದೆ. ಈ ನಿಟ್ಟಿನಲ್ಲಿ ಕಾರ್ಯಕರ್ತರೊಂದಿಗೆ ಮಾತನಾಡುತ್ತೇನೆ” ಎಂದು ಹೇಳಿದ್ದಾರೆ. ಮಂಗಳೂರು | ಮುಸ್ಲಿಂ ನಾಯಕರು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  #AllEyesOnDeck | 6ನೇ ದಿನಕ್ಕೆ ಕಾಲಿಟ್ಟ ಗಾಝಾಗೆ ಹೊರಟ ‘ಮದ್ಲೀನ್‌’ ಪ್ರಯಾಣ; ಇಸ್ರೇಲ್‌ನಿಂದ ಬಂಧನಕ್ಕೆ ಸಿದ್ಧತೆ!

#AllEyesOnDeck | 6ನೇ ದಿನಕ್ಕೆ ಕಾಲಿಟ್ಟ ಗಾಝಾಗೆ ಹೊರಟ ‘ಮದ್ಲೀನ್‌’ ಪ್ರಯಾಣ; ಇಸ್ರೇಲ್‌ನಿಂದ ಬಂಧನಕ್ಕೆ ಸಿದ್ಧತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...