Homeಕರ್ನಾಟಕಮಂಗಳೂರು | ಮುಸ್ಲಿಂ ನಾಯಕರು ರಾಜೀನಾಮೆ ವಾಪಸ್ ಪಡೆಯಲು ಬಿ.ಕೆ. ಹರಿಪ್ರಸಾದ್ ವಿನಂತಿ

ಮಂಗಳೂರು | ಮುಸ್ಲಿಂ ನಾಯಕರು ರಾಜೀನಾಮೆ ವಾಪಸ್ ಪಡೆಯಲು ಬಿ.ಕೆ. ಹರಿಪ್ರಸಾದ್ ವಿನಂತಿ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನಾಯಕರ ಸಾಮೂಹಿಕ ರಾಜೀನಾಮೆಗೆ ಗುರುವಾರ ಪ್ರತಿಕ್ರಿಯಿಸಿರುವ ವಿಧಾನಪರಿಷತ್ ನಾಯಕ ಬಿ.ಕೆ. ಹರಿಪ್ರಸಾದ್, ಕಾಂಗ್ರೆಸ್ ಪಕ್ಷ ಅವರನ್ನು ಕಳೆದುಕೊಳ್ಳುವುದಿಲ್ಲ, ನಾಯಕರು ತಮ್ಮ ರಾಜೀನಾಮೆಯನ್ನು ಹಿಂಪಡೆಯುವಂತೆ ವಿನಂತಿಸುವುದಾಗಿ ಹೇಳಿದ್ದಾರೆ. ಸರ್ಕಾರವನ್ನು ಬೆಂಬಲಿಸಿದರೂ ತಮ್ಮ ನಾಯಕರು ಕೆಲಸ ಮಾಡದಿದ್ದಾಗ ಅವರು ರಾಜೀನಾಮೆ ನೀಡಿದ್ದು ಸರಿಯಾಗಿಯೆ ಇದೆ ಎಂದು ಅವರು ಅಲ್ಪಸಂಖ್ಯಾತ ನಾಯಕರನ್ನು ಸಮರ್ಥಿಸಿಕೊಂಡಿದ್ದಾರೆ. ಮಂಗಳೂರು | ಮುಸ್ಲಿಂ ನಾಯಕರು

ಗುರುವಾರ ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ರಾಜ್ಯ ಶಾಂತಿಯಿಂದ ಬದುಕುತ್ತಿದ್ದರೂ, ಕರಾವಳಿ ಜಿಲ್ಲೆಗಳಿಂದ ಅಹಿತಕರ ಘಟನೆಗಳ ವರದಿಗಳು ಹೊರಬರುತ್ತಿವೆ. ನಗರವು ರಾಜ್ಯದಲ್ಲಿ ಉತ್ತಮ ಖ್ಯಾತಿಯನ್ನು ಹೊಂದಿದೆ ಮತ್ತು ಅದನ್ನು ಮತ್ತೊಂದು ಮಣಿಪುರವನ್ನಾಗಿ ಮಾಡಲು ಬಿಡಬಾರದು ಎಂದು ಒತ್ತಿ ಹೇಳಿದ್ದಾರೆ.

“ಕರಾವಳಿ ಪ್ರದೇಶವು ಕೋಮು ಸೂಕ್ಷ್ಮವಾಗಿರುವುದರಿಂದ, ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಇಬ್ಬರೂ ಜಾಣ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ” ಎಂದು ಬಿ ಕೆ ಹರಿಪ್ರಸಾದ್ ತಮ್ಮ ಸರ್ಕಾರಕ್ಕೆ ನಿರ್ಧಾರಕ್ಕೆ ಬದ್ಧರಾಗಿರುವುದಾಗಿ ಮತ್ತು ‘ಎಲ್ಲವೂ ಸರಿಯಾಗುತ್ತದೆ ಎಂದು ಆಶಿಸುತ್ತೇನೆ’ ಎಂದು ಹೇಳಿದ್ದಾರೆ. ಗಲಭೆಯಲ್ಲಿ ಭಾಗಿಯಾಗಿರುವ ಜನರು ಮತ್ತು ಅವರ ಕುಟುಂಬ ಸದಸ್ಯರು ಬಡ ಬಲಿಪಶುಗಳು ಎಂದು ಅವರು ಹೇಳಿದ್ದಾರೆ.

“ನಿಜವಾದ ಕಿಂಗ್‌ಪಿನ್‌ಗಳು ಮುಕ್ತವಾಗಿ ತಿರುಗಾಡುತ್ತಿದ್ದಾರೆ. ಅವರ ಗುರುತುಗಳು ಶೀಘ್ರದಲ್ಲೇ ಬಹಿರಂಗಗೊಳ್ಳಲಿವೆ. ಪ್ರಾಮಾಣಿಕ ಮತ್ತು ಸಮರ್ಥ ಪೊಲೀಸ್ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳುತ್ತಾರೆ”: ಅವರು ಹೇಳಿದ್ದಾರೆ.

ಮುಖ್ಯಮಂತ್ರಿಯೊಂದಿಗಿನ ಅವರ ಇತ್ತೀಚಿನ ಭೇಟಿಯ ಕುರಿತಾದ ಪ್ರಶ್ನೆಗೆ ಉತ್ತರಿಸಿದ ಅವರು, “ಇದು ಸೌಜನ್ಯದ ಭೇಟಿ. ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನನ್ನನ್ನು ನಿಯೋಜಿಸುವ ವದಂತಿ ಆಧಾರರಹಿತ. ಕರಾವಳಿ ಪ್ರದೇಶದಲ್ಲಿ ಅಹಿತಕರ ಘಟನೆಗಳನ್ನು ತಡೆಯಲು ಕ್ರಮ ಕೈಗೊಳ್ಳುವಂತೆ ನಾನು ಸಿಎಂ ಅವರನ್ನು ವಿನಂತಿಸಿದ್ದೆ ಮತ್ತು ಅವರು ಅಗತ್ಯವಿರುವದನ್ನು ಮಾಡುವುದಾಗಿ ನನಗೆ ಭರವಸೆ ನೀಡಿದರು. ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಮಾತನಾಡಲು ಸಿಎಂ ನನಗೆ ನಿರ್ದೇಶನ ನೀಡಿದ್ದಾರೆ.” ಎಂದು ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನಾಯಕರ ಸಾಮೂಹಿಕ ರಾಜೀನಾಮೆಗೆ ಪ್ರತಿಕ್ರಿಯಿಸಿದ ಅವರು, ಕೆಲವು ದುರದೃಷ್ಟಕರ ಘಟನೆಗಳನ್ನು ಅನುಭವಿಸಿದ ಕಾರಣಕ್ಕೆ ನಾಯಕರು ರಾಜೀನಾಮೆ ನೀಡಿದ್ದಾರೆ. ಆದಾಗ್ಯೂ, ನಾಯಕರು ತಮ್ಮ ರಾಜೀನಾಮೆಯನ್ನು ಹಿಂಪಡೆಯುವಂತೆ ವಿನಂತಿಸುತ್ತೇನೆ. ಕಾಂಗ್ರೆಸ್ ಪಕ್ಷ ಅವರನ್ನು ಕಳೆದುಕೊಳ್ಳುವುದಿಲ್ಲ. ರಾಜೀನಾಮೆ ನೀಡುವ ಅಗತ್ಯವಿಲ್ಲ” ಎಂದು ಹೇಳಿದ್ದಾರೆ.

“ಇಂತಹ ಘಟನೆಗಳು ವ್ಯಕ್ತಿಗಳ ಮನೋಭಾವವನ್ನು ಮುರಿಯಬಾರದು. ಸರ್ಕಾರ ಬೆಂಬಲಿಸಿದರೂ ನಾಯಕರು ಕೆಲಸ ಮಾಡದಿದ್ದಾಗ ಅವರು ರಾಜೀನಾಮೆ ನೀಡಿದ್ದ ಪ್ರಸ್ತುತವಾಗಿದೆ. ಕಾಂಗ್ರೆಸ್ ಸಂವಿಧಾನದ ಪರವಾಗಿದೆ ಮತ್ತು ಸೈದ್ಧಾಂತಿಕವಾಗಿ ಗಟ್ಟಿಯಿರುವ ಪಕ್ಷವಾಗಿದೆ. ಈ ನಿಟ್ಟಿನಲ್ಲಿ ಕಾರ್ಯಕರ್ತರೊಂದಿಗೆ ಮಾತನಾಡುತ್ತೇನೆ” ಎಂದು ಹೇಳಿದ್ದಾರೆ. ಮಂಗಳೂರು | ಮುಸ್ಲಿಂ ನಾಯಕರು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  #AllEyesOnDeck | 6ನೇ ದಿನಕ್ಕೆ ಕಾಲಿಟ್ಟ ಗಾಝಾಗೆ ಹೊರಟ ‘ಮದ್ಲೀನ್‌’ ಪ್ರಯಾಣ; ಇಸ್ರೇಲ್‌ನಿಂದ ಬಂಧನಕ್ಕೆ ಸಿದ್ಧತೆ!

#AllEyesOnDeck | 6ನೇ ದಿನಕ್ಕೆ ಕಾಲಿಟ್ಟ ಗಾಝಾಗೆ ಹೊರಟ ‘ಮದ್ಲೀನ್‌’ ಪ್ರಯಾಣ; ಇಸ್ರೇಲ್‌ನಿಂದ ಬಂಧನಕ್ಕೆ ಸಿದ್ಧತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್‌ಐಆರ್: ತಡವಾಗಿ ತಲುಪಿದ ನೋಟಿಸ್‌ಗಳಿಂದ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ; ಮತದಾರರಲ್ಲಿ ಗೊಂದಲ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗಳನ್ನು ಮತದಾರರಿಗೆ ತಲುಪಿಸುವಲ್ಲಿ ಉಂಟಾಗುತ್ತಿರುವ ವಿಳಂಬವು ಹಲವು ಕಡೆ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗುತ್ತಿದೆ. ‘ನೋ-ಮ್ಯಾಪಿಂಗ್’...

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...